AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಭಿಮಾನಿ ಮೇಲೆ ಹಲ್ಲೆ ಆರೋಪ; ನಟ ಧನ್ವೀರ್ ವಿರುದ್ಧ ದೂರು ದಾಖಲು  

ಬೆಂಗಳೂರಿನ ಎಸ್‌.ಸಿ. ರಸ್ತೆಯ ಅನುಪಮಾ ಥಿಯೇಟರ್ ಬಳಿ ಗುರುವಾರ (ಫೆಬ್ರವರಿ 17) ತಡರಾತ್ರಿ ಘಟನೆ ನಡೆದಿದೆ. ನಟ ಧನ್ವೀರ್ ವಿರುದ್ಧ ಚಂದ್ರಶೇಖರ್ ಎಂಬ ಯುವಕ ಥಳಿಸಿರುವ ಆರೋಪ ಮಾಡಿದ್ದಾರೆ.

ಅಭಿಮಾನಿ ಮೇಲೆ ಹಲ್ಲೆ ಆರೋಪ; ನಟ ಧನ್ವೀರ್ ವಿರುದ್ಧ ದೂರು ದಾಖಲು  
ಧನ್ವೀರ್​-ಚಂದ್ರಶೇಖರ್
TV9 Web
| Edited By: |

Updated on: Feb 18, 2022 | 4:33 PM

Share

ನಟ ಧನ್ವೀರ್ (Actor Dhanveer)​ ಅವರಿಗೆ ಸಿಹಿ ಹಾಗೂ ಕಹಿ ಘಟನೆ ಒಂದೇ ದಿನ ನಡೆದಿದೆ. ಅವರ ನಟನೆಯ ‘ಬೈ ಟೂ ಲವ್​’ ಸಿನಿಮಾ (By Two Love Movie) ಇಂದು (ಫೆಬ್ರವರಿ 18) ತೆರೆಗೆ ಬಂದಿದೆ. ಇದರ ಜತೆಗೆ ಅವರ ವಿರುದ್ಧ ದೂರು ಕೂಡ ದಾಖಲಾಗಿದೆ. ಬೌನ್ಸರ್​ ಜತೆ ಸೇರಿ ಅಭಿಮಾನಿ ಮೇಲೆ ಹಲ್ಲೆ ಮಾಡಿದ ಆರೋಪ ಧನ್ವೀರ್ ವಿರುದ್ಧ ಕೇಳಿ ಬಂದಿದೆ. ಹಲ್ಲೆಗೆ ಒಳಗಾದ ಅಭಿಮಾನಿ ದೂರು ದಾಖಲು ಮಾಡಿದ್ದಾರೆ. ಇದರಿಂದ ನಟನಿಗೆ ಸಂಕಷ್ಟ ಎದುರಾಗಿದೆ. ಈ ಘಟನೆ ಬಗ್ಗೆ ಧನ್ವೀರ್ ಅವರಿಂದ ಯಾವುದೇ ಪ್ರತಿಕ್ರಿಯೆ ಸಿಕ್ಕಿಲ್ಲ.

ಬೆಂಗಳೂರಿನ ಎಸ್‌.ಸಿ. ರಸ್ತೆಯ ಅನುಪಮಾ ಥಿಯೇಟರ್ ಬಳಿ ಗುರುವಾರ (ಫೆಬ್ರವರಿ 17) ತಡರಾತ್ರಿ ಘಟನೆ ನಡೆದಿದೆ. ನಟ ಧನ್ವೀರ್ ವಿರುದ್ಧ ಚಂದ್ರಶೇಖರ್ ಎಂಬ ಯುವಕ ಥಳಿಸಿರುವ ಆರೋಪ ಮಾಡಿದ್ದಾರೆ. ಸ್ನೇಹಿತನ ಜೊತೆ ಊಟ ಮುಗಿಸಿ ಚಂದ್ರಶೇಖರ್ ಮನೆಗೆ ತೆರಳುತ್ತಿದ್ದರು. ಸಾಮಾನ್ಯವಾಗಿ ಸೆಲೆಬ್ರಿಟಿಗಳು ಕಂಡಾಗ ಫೋಟೋ ತೆಗೆಸಿಕೊಳ್ಳಲು ಅಭಿಮಾನಿಗಳು ಮುಂದಾಗುತ್ತಾರೆ. ಅದೇ ರೀತಿ ಧನ್ವೀರ್ ಕಂಡಾಗ ಫೋಟೋ ತೆಗೆಸಿಕೊಳ್ಳೋಕೆ ಚಂದ್ರಶೇಖರ್ ಮುಂದಾಗಿದ್ದಾರೆ. ಅಭಿಮಾನಿಯ ಬೇಡಿಕೆಗೆ ಧನ್ವೀರ್ ಸ್ಪಂದಿಸಲಿಲ್ಲ.

ಇದು ಚಂದ್ರಶೇಖರ್​ಗೆ ಬೇಸರ ತರಿಸಿದೆ. ಆಗ ಚಂದ್ರಶೇಖರ್​ ಅಸಮಾಧಾನ ಹೊರಹಾಕಿದ್ದಾರೆ ಎನ್ನಲಾಗಿದೆ. ಇದರಿಂದ ಕೋಪಗೊಂಡ ಧನ್ವೀರ್ ಹಲ್ಲೆ ಮಾಡಿದ್ದಾರೆ ಎಂದು ಚಂದ್ರಶೇಖರ್ ಆರೋಪಿಸಿದ್ದಾರೆ. ಈ ವೇಳೆ ಧನ್ವೀರ್​ ಜತೆ ಬೌನ್ಸರ್ಸ್ ಕೂಡ ಸೇರಿದ್ದರು ಎನ್ನಲಾಗಿದೆ. ಹಲ್ಲೆಗೊಳಗಾದ ಚಂದ್ರಶೇಖರ್ ಉಪ್ಪಾರಪೇಟೆ ಠಾಣೆಗೆ ದೂರು ನೀಡಿದ್ದಾರೆ. ಚಂದ್ರಶೇಖರ್ ದೇಹಕ್ಕೆ ಗಾಯಗಳಾಗಿವೆ.

ದೂರಿನ ಪ್ರತಿ

ನಟ ಧನ್ವೀರ್ ಮತ್ತು ಶ್ರೀಲೀಲಾ ‘ಬೈ ಟೂ ಲವ್​’ ಸಿನಿಮಾದಲ್ಲಿ ಒಟ್ಟಾಗಿ ನಟಿಸಿದ್ದಾರೆ. ಪ್ರೀತಿ-ಪ್ರೇಮದ ಕಥೆ ಸಿನಿಮಾದ ಹೈಲೈಟ್​ ಎಂಬುದಕ್ಕೆ ಟ್ರೇಲರ್​ನಲ್ಲಿ ಸಾಕ್ಷ್ಯ ಸಿಕ್ಕಿದೆ. ‘ಬಜಾರ್​’ ಚಿತ್ರದ ಮೂಲಕ ಸ್ಯಾಂಡಲ್​ವುಡ್​ಗೆ ಕಾಲಿಟ್ಟವರು ಧನ್ವೀರ್. ‘ಕಿಸ್​’ ಚಿತ್ರದ ಮೂಲಕ ಶ್ರೀಲೀಲಾ ಬೇಡಿಕೆ ಹೆಚ್ಚಿಸಿಕೊಂಡರು. ಇಬ್ಬರೂ ‘ಬೈ ಟೂ ಲವ್​’ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರಕ್ಕೆ ಹರಿ ಸಂತೋಷ್​ ನಿರ್ದೇಶನವಿದೆ. ಸಾಧು ಕೋಕಿಲ, ರಂಗಾಯಣ ರಘು, ಅಚ್ಯುತ್​ ಕುಮಾರ್ ಮೊದಲಾದವರು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಇದನ್ನೂ ಓದಿ: ಧನ್ವೀರ್​-ಶ್ರೀಲೀಲಾ ಚಿತ್ರಕ್ಕೆ ‘ಬೈ ಟೂ ಲವ್​’ ಅಂತ ಟೈಟಲ್​ ಇಟ್ಟಿದ್ದು ಯಾಕೆ? ಡೈರೆಕ್ಟರ್​ ನೀಡಿದ ಉತ್ತರ ಇಲ್ಲಿದೆ..

ಬೆಂಗಳೂರು ಮೆಟ್ರೋದಲ್ಲಿ ‘ಬೈ ಟೂ ಲವ್’ ತಂಡ; ಶ್ರೀಲೀಲಾ-ಧನ್ವೀರ್ ಮಸ್ತಿ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ