Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡದ ಈ ನಟಿ ಈಗ ಪ್ಯಾನ್ ಇಂಡಿಯಾ ಸ್ಟಾರ್: ಯಾರು ಗುರುತಿಸಬಲ್ಲಿರಾ?

ಕನ್ನಡದ ಈ ನಟಿ ಈಗ ಪ್ಯಾನ್ ಇಂಡಿಯಾ ನಟಿ. ಬಿಡುಗಡೆ ಆಗಿರುವುದು ಎರಡೇ ಸಿನಿಮಾ ಆದರೂ ಭಾರಿ ಜನಪ್ರಿಯತೆ ಗಳಿಸಿದ್ದಾರೆ. ಈ ನಟಿ ಯಾರೆಂದು ಗುರುತಿಸಬಲ್ಲಿರಾ?

ಕನ್ನಡದ ಈ ನಟಿ ಈಗ ಪ್ಯಾನ್ ಇಂಡಿಯಾ ಸ್ಟಾರ್: ಯಾರು ಗುರುತಿಸಬಲ್ಲಿರಾ?
ಈ ನಟಿ ಯಾರು?
Follow us
ಮಂಜುನಾಥ ಸಿ.
|

Updated on: Mar 17, 2023 | 9:34 PM

ಸಿನಿಮಾ (Movie) ನಟ-ನಟಿಯರ ಬಾಲ್ಯದ ಫೋಟೊಗಳು ಸಾಮಾಜಿಕ ಜಾಲತಾಣದಲ್ಲಿ (Social Media) ವೈರಲ್ ಆಗುತ್ತಿರುತ್ತವೆ. ಆದರೆ ಇಲ್ಲಿ ನೀಡಲಾಗಿರುವುದು ನಟಿಯೊಬ್ಬರ ಕಾಲೇಜಿನ ಸಮಯದ ಚಿತ್ರಗಳು. ಕನ್ನಡದವರೇ ಆದ ಈ ನಟಿ ಈಗ ಪ್ಯಾನ್ ಇಂಡಿಯಾ ಸ್ಟಾರ್. ಈ ನಟಿ ನಟಿಸಿರುವ ಕೇವಲ ಎರಡು ಸಿನಿಮಾಗಳಷ್ಟೆ ಈವರೆಗೆ ಬಿಡುಗಡೆ ಆಗಿದೆ. ಆದರೂ ಕನ್ನಡದ ಮನೆ ಮಾತಾಗುವಷ್ಟು ಖ್ಯಾತಿ ಗಳಿಸಿದ್ದಾರೆ. ಕನ್ನಡ ಜೊತೆಗೆ ಇದೀಗ ಹಿಂದಿ ಭಾಷೆಯಲ್ಲಿಯೂ ನಟಿಸುತ್ತಿದ್ದಾರೆ. ತೆಲುಗು, ತಮಿಳಿಗೂ ಹಾರುವ ಸಾಧ್ಯತೆಗಳು ಇವೆ.

ಎರಡೇ ಸಿನಿಮಾಕ್ಕೆ ದೊಡ್ಡ ಮಟ್ಟದ ಖ್ಯಾತಿ ಗಳಿಸಿರುವ ನಟಿ ಸಪ್ತಮಿ ಗೌಡ ಅವರ ಕಾಲೇಜಿನ ಸಮಯದ ಚಿತ್ರಗಳಿವು. ಈಗಿರುವುದಕ್ಕಿಂತಲೂ ಬಹಳ ಭಿನ್ನವಾಗಿ ಸಪ್ತಮಿ ಗೌಡ ಆಗ ಕಾಣುತ್ತಿದ್ದರು. ಅವರ ಹಳೆಯ ಚಿತ್ರಗಳ ಮತ್ತೊಂದು ವಿಶೇಷವೆಂದರೆ ಸಪ್ತಮಿ ಗೌಡ ನಕ್ಕಾಗ ಒಂದು ರೀತಿ, ನಗದೇ ಇದ್ದಾಗ ಒಂದು ರೀತಿ ಕಾಣುತ್ತಾರೆ. ಕಾಲೇಜು ದಿನಗಳಲ್ಲಿ ಅತ್ಯುತ್ತಮ ಈಜುಪಟುವಾಗಿದ್ದ ಸಪ್ತಮಿ ಗೌಡ ಇಂದಿಗಿಂತಲೂ ಹೆಚ್ಚು ತೆಳ್ಳಗಿದ್ದರು ಸಹ.

ಸಪ್ತಮಿ ಗೌಡ ತಮ್ಮ ಹಲವು ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ತಮ್ಮ ಕಾಲೇಜು ದಿನಗಳಿಂದಲೂ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿರುವ ಸಪ್ತಮಿ ಗೌಡ ಆಗಿನಿಂದಲೂ ತಮ್ಮ ಚಿತ್ರಗಳನ್ನು ಹಂಚಿಕೊಳ್ಳುತ್ತಾ ಬಂದಿದ್ದಾರೆ. ಸ್ಟಾರ್ ಆದ ಮೇಲೆ ಆ ಚಿತ್ರಗಳನ್ನು ಡಿಲೀಟ್ ಮಾಡಿಲ್ಲ. ಸಪ್ತಮಿಯ ಇನ್​ಸ್ಟಾಗ್ರಾಂ ಖಾತೆಯನ್ನು ತುಸು ಡೀಪ್​ ಆಗಿ ಸ್ಕ್ರೋಲ್ ಮಾಡಿದರೆ ಅವರ ಕಾಲೇಜು ದಿನದ ಚಿತ್ರಗಳು ಸಿಗುತ್ತವೆ. ಕಾಲೇಜು ದಿನದ ಸೆಲ್ಫಿಗಳ ಜೊತೆಗೆ ಈಜು ಸ್ಪರ್ಧೆಯಲ್ಲಿ ಭಾಗವಹಿಸಿದ, ಪ್ರಶಸ್ತಿ ಗೆದ್ದ ಚಿತ್ರಗಳನ್ನು ಸಹ ಸಪ್ತಮಿ ಹಂಚಿಕೊಂಡಿದ್ದಾರೆ.

ದುನಿಯಾ ಸೂರಿ ನಿರ್ದೇಶನದ ಪಾಪ್​ಕಾರ್ನ್ ಮಂಕಿ ಟೈಗರ್ ಸಿನಿಮಾ ಮೂಲಕ ನಟನೆಗೆ ಕಾಲಿಟ್ಟ ಸಪ್ತಮಿ ಗೌಡ ದೊಡ್ಡ ಹೆಸರು ಗಳಿಸಿದ್ದು ಮಾತ್ರ ಕಾಂತಾರ ಸಿನಿಮಾದ ಮೂಲಕ. ಕಾಂತಾರ ಸಿನಿಮಾದಲ್ಲಿ ಸಪ್ತಮಿ ನಿರ್ವಹಿಸಿದ್ದ ಲೀಲಾ ಪಾತ್ರ ಭಾರಿ ದೊಡ್ಡ ಹಿಟ್ ಆಗಿದ್ದು, ಕಾಂತಾರ ಬಳಿಕ ಒಂದರ ಹಿಂದೊಂದು ಅವಕಾಶಗಳನ್ನು ಸಪ್ತಮಿ ಬಾಚಿಕೊಳ್ಳುತ್ತಿದ್ದಾರೆ. ಹಿಂದಿಯಲ್ಲಿ ವ್ಯಾಕ್ಸಿನ್ ವಾರ್ ಹೆಸರಿನ ಸಿನಿಮಾದಲ್ಲಿ ನಟಿಸಿ ಬಂದಿದ್ದಾರೆ ಸಪ್ತಮಿ ಈ ಸಿನಿಮಾವನ್ನು ದಿ ಕಾಶ್ಮೀರ್ ಫೈಲ್ಸ್ ಸಿನಿಮಾ ಖ್ಯಾತಿಯ ವಿವೇಕ್ ಅಗ್ನಿಹೋತ್ರಿ ನಿರ್ದೇಶನ ಮಾಡಿದ್ದಾರೆ. ಅಭಿಷೇಕ್ ಅಂಬರೀಶ್ ನಟನೆಯ ಸಿನಿಮಾದಲ್ಲಿಯೂ ಸಪ್ತಮಿ ನಾಯಕಿಯಾಗಿ ನಟಿಸಲಿದ್ದಾರೆ. ಯುವರಾಜ್ ಕುಮಾರ್ ನಟನೆಯ ಮೊದಲ ಸಿನಿಮಾ ಯುವನಲ್ಲಿಯೂ ಸಪ್ತಮಿಯೇ ನಾಯಕಿ. ಡಾಲಿ ಧನಂಜಯ್ ನಟನೆಯ ಉತ್ತರಕಾಂಡ ಸಿನಿಮಾದಲ್ಲಿಯೂ ಸಪ್ತಮಿ ಇರಲಿದ್ದಾರೆ ಎನ್ನಲಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಯತ್ನಾಳ್ ಉಚ್ಛಾಟನೆ: ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಕಾಳಿ ಪೂಜೆ
ಯತ್ನಾಳ್ ಉಚ್ಛಾಟನೆ: ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಕಾಳಿ ಪೂಜೆ
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ