AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅರ್ಧ ಪ್ರೇಕ್ಷಕರಿಗಾಗಿ’ ನನ್ನ ಸಿನಿಮಾ ಬಿಡುಗಡೆ ಮಾಡೋಲ್ಲ -ಕೆ.ಪಿ. ಶ್ರೀಕಾಂತ್

ಮೈಸೂರು: ಕೇಂದ್ರ ಸರ್ಕಾರ ಲಾಕ್​ಡೌನ್ 5.0 ಮಾರ್ಗಸೂಚಿಯಲ್ಲಿ ಚಿತ್ರಮಂದಿರಗಳನ್ನ ಓಪನ್‌ ಮಾಡಲು ಅನುಮತಿ ನೀಡಿದೆ. ಆದರೆ ಅರ್ಧ ಪ್ರೇಕ್ಷಕರಿಗಾಗಿ ನನ್ನ ‘ಸಲಗ’ ಚಿತ್ರ ಬಿಡುಗಡೆ ಮಾಡಲ್ಲ ಎಂದು ಮೈಸೂರಿನಲ್ಲಿ ಸಲಗ ಚಿತ್ರ ನಿರ್ಮಾಪಕ ಕೆ.ಪಿ. ಶ್ರೀಕಾಂತ್ ಹೇಳಿದ್ದಾರೆ. ಪೂರ್ಣ ಪ್ರಮಾಣದಲ್ಲಿ ಥಿಯೇಟರ್ ಓಪನ್ ಆದ ಮೇಲೆಯೇ ತೆರೆಗೆ ಈ ಬಗ್ಗೆ ಮಾತನಾಡಿದ ಅವರು ಚಿತ್ರಮಂದಿರ ತೆರೆಯಲು ಅವಕಾಶ ನೀಡಿದ್ದಾರೆ ಸರಿ. ಆದರೆ ಅರ್ಧ ಪ್ರೇಕ್ಷಕರಿಗೆ ಅವಕಾಶ ನೀಡಿರೋದಕ್ಕೆ ನಮಗೆ ಅಸಮಾಧಾನ ಇದೆ. ನಮ್ಮ ಸಿನಿಮಾ ದೊಡ್ಡ ಬಜೆಟ್‌ […]

‘ಅರ್ಧ ಪ್ರೇಕ್ಷಕರಿಗಾಗಿ’ ನನ್ನ ಸಿನಿಮಾ ಬಿಡುಗಡೆ ಮಾಡೋಲ್ಲ -ಕೆ.ಪಿ. ಶ್ರೀಕಾಂತ್
ಆಯೇಷಾ ಬಾನು
| Edited By: |

Updated on: Oct 01, 2020 | 4:31 PM

Share

ಮೈಸೂರು: ಕೇಂದ್ರ ಸರ್ಕಾರ ಲಾಕ್​ಡೌನ್ 5.0 ಮಾರ್ಗಸೂಚಿಯಲ್ಲಿ ಚಿತ್ರಮಂದಿರಗಳನ್ನ ಓಪನ್‌ ಮಾಡಲು ಅನುಮತಿ ನೀಡಿದೆ. ಆದರೆ ಅರ್ಧ ಪ್ರೇಕ್ಷಕರಿಗಾಗಿ ನನ್ನ ‘ಸಲಗ’ ಚಿತ್ರ ಬಿಡುಗಡೆ ಮಾಡಲ್ಲ ಎಂದು ಮೈಸೂರಿನಲ್ಲಿ ಸಲಗ ಚಿತ್ರ ನಿರ್ಮಾಪಕ ಕೆ.ಪಿ. ಶ್ರೀಕಾಂತ್ ಹೇಳಿದ್ದಾರೆ.

ಪೂರ್ಣ ಪ್ರಮಾಣದಲ್ಲಿ ಥಿಯೇಟರ್ ಓಪನ್ ಆದ ಮೇಲೆಯೇ ತೆರೆಗೆ ಈ ಬಗ್ಗೆ ಮಾತನಾಡಿದ ಅವರು ಚಿತ್ರಮಂದಿರ ತೆರೆಯಲು ಅವಕಾಶ ನೀಡಿದ್ದಾರೆ ಸರಿ. ಆದರೆ ಅರ್ಧ ಪ್ರೇಕ್ಷಕರಿಗೆ ಅವಕಾಶ ನೀಡಿರೋದಕ್ಕೆ ನಮಗೆ ಅಸಮಾಧಾನ ಇದೆ. ನಮ್ಮ ಸಿನಿಮಾ ದೊಡ್ಡ ಬಜೆಟ್‌ ಸಿನಿಮಾ ಆಗಿದೆ. ಇದಕ್ಕೆ ಅರ್ಧ ಪ್ರೇಕ್ಷಕರಿಗೆ ಚಿತ್ರ ನೋಡಲು ಅವಕಾಶ ನೀಡಿದ್ರೆ ನಷ್ಟವಾಗುತ್ತೆ. ಸಲಗ ಚಿತ್ರ ಪೂರ್ಣ ಪ್ರಮಾಣದಲ್ಲಿ ಥಿಯೇಟರ್ ಓಪನ್ ಆದ ಮೇಲೆಯೇ ತೆರೆಗೆ ಬರಲಿದೆ.

ದೊಡ್ಡ ಬಜೆಟ್‌ನ ಸಿನಿಮಾಗಳಿಗೆ ಅರ್ಧ ಪ್ರೇಕ್ಷಕರು ಸಾಕಾಗೋದಿಲ್ಲ ಆಕ್ಟಿವ್‌ ಪ್ರೊಡ್ಯೂಸರ್‌ ಟೀಂನಿಂದ ಸೋಮವಾರ ಸಭೆ ಕರೆದಿದ್ದೇವೆ. ಆ ಟೀಂನಲ್ಲಿ ರಾಬರ್ಟ್, ಕೋಟಿಗೊಬ್ಬ, ಕೆಜಿಎಫ್‌, ಯುವರತ್ನ ಸಲಗ ಚಿತ್ರ ನಿರ್ಮಾಪಕರಿರಲಿದ್ದಾರೆ. ಎಲ್ಲರೂ ಒಟ್ಟಾಗಿ ಕುಳಿತು ನಿರ್ಧಾರ ಮಾಡ್ತೀವಿ. ಯಾವ ಚಿತ್ರ ಬಿಡುಗಡೆ ಮಾಡಬೇಕು ಅನ್ನೋ ಬಗ್ಗೆಯೂ ನಿರ್ಧಾರ ಮಾಡ್ತೀವಿ. ಆದ್ರೆ ದೊಡ್ಡ ಬಜೆಟ್‌ನ ಸಿನಿಮಾಗಳಿಗೆ ಅರ್ಧ ಪ್ರೇಕ್ಷಕರು ಸಾಕಾಗೋದಿಲ್ಲ. ನಮಗೆ ಪೂರ್ತಿ ಅನುಮತಿ ಸಿಕ್ಕರಷ್ಟೇ ನಾವು ಚಿತ್ರ ಬಿಡುಗಡೆ ಮಾಡಲು ಆಗೋದು. ಓಟಿಟಿ ವೇದಿಕೆಗಳು ದೊಡ್ಡ ಬಜೆಟ್‌ ಸಿನಿಮಾಗಳಿಗೆ ಸರಿಹೊಂದುವುದಿಲ್ಲ ಎಂದೂ ಕೆ.ಪಿ. ಶ್ರೀಕಾಂತ್‌ ತಿಳಿಸಿದ್ದಾರೆ.

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ