AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಸ್ಟರ್ ಆನಂದ್​ಗೆ ವಂಚನೆ; ನಿವೇಶನ ಪಡೆಯಲು ಹೋಗಿ 18 ಲಕ್ಷ ರೂಪಾಯಿ ಕಳೆದುಕೊಂಡ ನಟ

ರಾಮಸಂದ್ರದಲ್ಲಿ 200 ಅಡಿ ವಿಸ್ತೀರ್ಣದ ನಿವೇಶನವನ್ನು ಮಲ್ಟಿ ಲೀಪ್ ವೆಂಚರ್ಸ್ ತೋರಿಸಿತ್ತು. 70 ಲಕ್ಷ ರೂಪಾಯಿಗೆ ಇದನ್ನು ಖರೀದಿಸಲು ಮಾಸ್ಟರ್ ಆನಂದ್ ಒಪ್ಪಿದ್ದರು.

ಮಾಸ್ಟರ್ ಆನಂದ್​ಗೆ ವಂಚನೆ; ನಿವೇಶನ ಪಡೆಯಲು ಹೋಗಿ 18 ಲಕ್ಷ ರೂಪಾಯಿ ಕಳೆದುಕೊಂಡ ನಟ
ಮಾಸ್ಟರ್ ಆನಂದ್
ರಾಜೇಶ್ ದುಗ್ಗುಮನೆ
|

Updated on: Jun 26, 2023 | 10:31 AM

Share

ನಟ ಮಾಸ್ಟರ್ ಆನಂದ್ (Master Anand) ಅವರು ಬಾಲ ಕಲಾವಿದನಾಗಿ ಫೇಮಸ್ ಆದವರು. ಈಗ ಹೀರೋ ಆಗಿ, ಆ್ಯಂಕರ್ ಆಗಿ ಎಲ್ಲರ ಗಮನ ಸೆಳೆಯುತ್ತಿದ್ದಾರೆ. ಈಗ ಅವರಿಗೆ ಮಹಾ ಮೋಸ ಆಗಿದೆ. ನಿವೇಶನ ಕೊಡಿಸುವುದಾಗಿ ನಂಬಿಸಿ, 18.5 ಲಕ್ಷ ರೂಪಾಯಿ ವಂಚಿಸಲಾಗಿದೆ. ಈ ಘಟನೆಗೆ ಸಂಬಂಧಿಸಿ ಚಂದ್ರ ಲೇಔಟ್ ಠಾಣೆಯಲ್ಲಿ ಮಾಸ್ಟರ್ ಆನಂದ್ ದೂರು ನೀಡಿದ್ದರು. ಈ ದೂರನ್ನು ಆಧರಿಸಿ ಬಿಯುಡಿಎಸ್ ಕಾಯ್ದೆ 2019ರ ಅಡಿಯಲ್ಲಿ ಆರೋಪಿಗಳ ವಿರುದ್ಧ ಎಫ್​ಐಆರ್ ದಾಖಲು ಮಾಡಿಕೊಳ್ಳಲಾಗಿದೆ.

2020ರ ಸೆಪ್ಟೆಂಬರ್​​ನಿಂದ 2021ರ ಅಕ್ಟೋಬರ್ ಅವಧಿಯಲ್ಲಿ ಈ ವಂಚನೆ ನಡೆದಿದೆ. ಮಲ್ಟಿ ಲೀಪ್ ವೆಂಚರ್ಸ್ ಕಂಪೆನಿ ವಿರುದ್ಧ ಮಾಸ್ಟರ್ ಆನಂದ್ ದೂರು ಕೊಟ್ಟಿದ್ದಾರೆ. ಕೊಮ್ಮಘಟ್ಟದ ರಾಮಸಂದ್ರ ಗ್ರಾಮದದಲ್ಲಿ ಆನಂದ್ ನಿವೇಶನ ನೋಡಿದ್ದರು. ಶೂಟಿಂಗ್​ಗಾಗಿ ತೆರಳಿದ್ದ ವೇಳೆ ಇವುಗಳ ವೀಕ್ಷಣೆ ಮಾಡಿದ್ದರು. ನಿವೇಶನ ಖರೀದಿಸಲು ಸಾಲ ಸೌಲಭ್ಯ ಇರುವುದಾಗಿಯೂ ಕಂಪನಿಯವರು ಹೇಳಿದ್ದರು.

ಆ ಬಳಿಕ ರಾಮಸಂದ್ರದಲ್ಲಿ 200 ಅಡಿ ವಿಸ್ತೀರ್ಣದ ನಿವೇಶನವನ್ನು ಮಲ್ಟಿ ಲೀಪ್ ವೆಂಚರ್ಸ್ ತೋರಿಸಿತ್ತು. 70 ಲಕ್ಷ ರೂಪಾಯಿಗೆ ಇದನ್ನು ಖರೀದಿಸಲು ಮಾಸ್ಟರ್ ಆನಂದ್ ಒಪ್ಪಿದ್ದರು. ಮುಂಗಡ ಹಣದ ರೂಪದಲ್ಲಿ 18.5 ಲಕ್ಷ ರೂಪಾಯಿ ನೀಡಿದ್ದರು. ಕಂಪನಿಯವರು ಮಾಸ್ಟರ್ ಆನಂದ್ ಹಾಗು ಪತ್ನಿ ಯಶಸ್ವಿನಿ ಹೆಸರಲ್ಲಿ ಖರೀದಿ ಕರಾರು ಪತ್ರ ಮಾಡಿಕೊಟ್ಟಿದ್ದರು. ಆ ಬಳಿಕ ನಿವೇಶನವನ್ನು ಕಂಪನಿ ಬೇರೆಯವರಿಗೆ ಮಾರಾಟ ಮಾಡಿತ್ತು.

ಇದನ್ನೂ ಓದಿ: ಕಿರುತೆರೆಯಿಂದ ಹಿರಿತೆರೆಗೆ ಮಾಸ್ಟರ್ ಆನಂದ್ ಮಗಳು ವಂಶಿಕಾ; ಮಾತಿನ ಮಲ್ಲಿಗೆ ಸಿನಿಮಾ ಆಫರ್

ಈ ಬಗ್ಗೆ ಮಾಸ್ಟರ್ ಆನಂದ್ ವಿಚಾರಿಸಿದ್ದಾರೆ. ಆದರೆ ಆ ಬಳಿಕ ಯಾವುದೇ ಸ್ಪಂದನೆ ಸಹ ನೀಡದೆ ಮುಂಗಡ ಹಣ ಸಹ ವಾಪಸ್ ಮಾಡಲಿಲ್ಲ. ಈ ಹಿನ್ನೆಲೆಯಲ್ಲಿ ಮಾಸ್ಟರ್ ಆನಂದ್ ಅವರು ದೂರು ನೀಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಕಾಂಗ್ರೆಸ್‌ನವರು ನಿನ್ನೆ ರಾತ್ರಿ ಕೋಟ್ಯಂತರ ರೂಪಾಯಿ ಹಣ ಹಂಚಿಕೆ ಮಾಡಿದ್ದಾರೆ
ಕಾಂಗ್ರೆಸ್‌ನವರು ನಿನ್ನೆ ರಾತ್ರಿ ಕೋಟ್ಯಂತರ ರೂಪಾಯಿ ಹಣ ಹಂಚಿಕೆ ಮಾಡಿದ್ದಾರೆ
ಬೈಕ್​ನಲ್ಲಿ ಬಂದು ಮತ ಚಲಾಯಿಸಿದ ಪುದುಚೇರಿ ಸಿಎಂ ರಂಗಸ್ವಾಮಿ! ವಿಡಿಯೋ ವೈರಲ್
ಬೈಕ್​ನಲ್ಲಿ ಬಂದು ಮತ ಚಲಾಯಿಸಿದ ಪುದುಚೇರಿ ಸಿಎಂ ರಂಗಸ್ವಾಮಿ! ವಿಡಿಯೋ ವೈರಲ್
ಪುದುಚೇರಿಯಲ್ಲಿ ಸೀರೆಯುಟ್ಟು ಮತದಾರರನ್ನು ಸ್ವಾಗತಿಸಿದ ರೋಬೋಟ್ ನೀಲಾ
ಪುದುಚೇರಿಯಲ್ಲಿ ಸೀರೆಯುಟ್ಟು ಮತದಾರರನ್ನು ಸ್ವಾಗತಿಸಿದ ರೋಬೋಟ್ ನೀಲಾ
ಹಂಪಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ ಅವಘಡ: ತಪ್ಪಿದ ಭಾರಿ ಅನಾಹುತ
ಹಂಪಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ ಅವಘಡ: ತಪ್ಪಿದ ಭಾರಿ ಅನಾಹುತ
ವಿಜಯಪುರದಲ್ಲಿ ಮತ್ತೆ ಭೂಕಂಪನ ಅನುಭವ: ಆತಂಕಕ್ಕೊಳಗಾದ ಜನ
ವಿಜಯಪುರದಲ್ಲಿ ಮತ್ತೆ ಭೂಕಂಪನ ಅನುಭವ: ಆತಂಕಕ್ಕೊಳಗಾದ ಜನ
VIDEO: ನನ್ನಿಂದಾನೇ ಸೋತ್ವಿ... ಕಣ್ಣೀರಿಟ್ಟ ಮಿಲ್ಲರ್
VIDEO: ನನ್ನಿಂದಾನೇ ಸೋತ್ವಿ... ಕಣ್ಣೀರಿಟ್ಟ ಮಿಲ್ಲರ್
2009ರಿಂದ ನನ್ನ ಪ್ರೋತ್ಸಾಹಿಸಿದ್ದಕ್ಕೆ ಧನ್ಯವಾದ ಎಂದ ಜಯರಾಂ ಕಾರ್ತಿಕ್
2009ರಿಂದ ನನ್ನ ಪ್ರೋತ್ಸಾಹಿಸಿದ್ದಕ್ಕೆ ಧನ್ಯವಾದ ಎಂದ ಜಯರಾಂ ಕಾರ್ತಿಕ್
ಬೆಳಗ್ಗೆಯೇ ಹೆಚ್ಚಿನ ಸಂಖ್ಯೆಯಲ್ಲಿ ಮತಗಟ್ಟೆಗಳಿಗೆ ಆಗಮಿಸಿದ ಮತದಾರರು
ಬೆಳಗ್ಗೆಯೇ ಹೆಚ್ಚಿನ ಸಂಖ್ಯೆಯಲ್ಲಿ ಮತಗಟ್ಟೆಗಳಿಗೆ ಆಗಮಿಸಿದ ಮತದಾರರು
ವಿರುದ್ಧ ದಿಕ್ಕಿನಲ್ಲಿ ಬಂದು ಕಾರಿಗೆ ಡಿಕ್ಕಿ ಹೊಡೆದ ಕಲ್ಲಿದ್ದಲು ಟ್ರಕ್
ವಿರುದ್ಧ ದಿಕ್ಕಿನಲ್ಲಿ ಬಂದು ಕಾರಿಗೆ ಡಿಕ್ಕಿ ಹೊಡೆದ ಕಲ್ಲಿದ್ದಲು ಟ್ರಕ್
ಯಾವ ಸ್ಥಳಗಳಲ್ಲಿ ಏರು ಧ್ವನಿಯಲ್ಲಿ ಮಾತನಾಡುವುದು ಆಪತ್ತು ತರುತ್ತದೆ?
ಯಾವ ಸ್ಥಳಗಳಲ್ಲಿ ಏರು ಧ್ವನಿಯಲ್ಲಿ ಮಾತನಾಡುವುದು ಆಪತ್ತು ತರುತ್ತದೆ?