ಮಾಸ್ಟರ್ ಆನಂದ್​ಗೆ ವಂಚನೆ; ನಿವೇಶನ ಪಡೆಯಲು ಹೋಗಿ 18 ಲಕ್ಷ ರೂಪಾಯಿ ಕಳೆದುಕೊಂಡ ನಟ

ರಾಮಸಂದ್ರದಲ್ಲಿ 200 ಅಡಿ ವಿಸ್ತೀರ್ಣದ ನಿವೇಶನವನ್ನು ಮಲ್ಟಿ ಲೀಪ್ ವೆಂಚರ್ಸ್ ತೋರಿಸಿತ್ತು. 70 ಲಕ್ಷ ರೂಪಾಯಿಗೆ ಇದನ್ನು ಖರೀದಿಸಲು ಮಾಸ್ಟರ್ ಆನಂದ್ ಒಪ್ಪಿದ್ದರು.

ಮಾಸ್ಟರ್ ಆನಂದ್​ಗೆ ವಂಚನೆ; ನಿವೇಶನ ಪಡೆಯಲು ಹೋಗಿ 18 ಲಕ್ಷ ರೂಪಾಯಿ ಕಳೆದುಕೊಂಡ ನಟ
ಮಾಸ್ಟರ್ ಆನಂದ್
Follow us
|

Updated on: Jun 26, 2023 | 10:31 AM

ನಟ ಮಾಸ್ಟರ್ ಆನಂದ್ (Master Anand) ಅವರು ಬಾಲ ಕಲಾವಿದನಾಗಿ ಫೇಮಸ್ ಆದವರು. ಈಗ ಹೀರೋ ಆಗಿ, ಆ್ಯಂಕರ್ ಆಗಿ ಎಲ್ಲರ ಗಮನ ಸೆಳೆಯುತ್ತಿದ್ದಾರೆ. ಈಗ ಅವರಿಗೆ ಮಹಾ ಮೋಸ ಆಗಿದೆ. ನಿವೇಶನ ಕೊಡಿಸುವುದಾಗಿ ನಂಬಿಸಿ, 18.5 ಲಕ್ಷ ರೂಪಾಯಿ ವಂಚಿಸಲಾಗಿದೆ. ಈ ಘಟನೆಗೆ ಸಂಬಂಧಿಸಿ ಚಂದ್ರ ಲೇಔಟ್ ಠಾಣೆಯಲ್ಲಿ ಮಾಸ್ಟರ್ ಆನಂದ್ ದೂರು ನೀಡಿದ್ದರು. ಈ ದೂರನ್ನು ಆಧರಿಸಿ ಬಿಯುಡಿಎಸ್ ಕಾಯ್ದೆ 2019ರ ಅಡಿಯಲ್ಲಿ ಆರೋಪಿಗಳ ವಿರುದ್ಧ ಎಫ್​ಐಆರ್ ದಾಖಲು ಮಾಡಿಕೊಳ್ಳಲಾಗಿದೆ.

2020ರ ಸೆಪ್ಟೆಂಬರ್​​ನಿಂದ 2021ರ ಅಕ್ಟೋಬರ್ ಅವಧಿಯಲ್ಲಿ ಈ ವಂಚನೆ ನಡೆದಿದೆ. ಮಲ್ಟಿ ಲೀಪ್ ವೆಂಚರ್ಸ್ ಕಂಪೆನಿ ವಿರುದ್ಧ ಮಾಸ್ಟರ್ ಆನಂದ್ ದೂರು ಕೊಟ್ಟಿದ್ದಾರೆ. ಕೊಮ್ಮಘಟ್ಟದ ರಾಮಸಂದ್ರ ಗ್ರಾಮದದಲ್ಲಿ ಆನಂದ್ ನಿವೇಶನ ನೋಡಿದ್ದರು. ಶೂಟಿಂಗ್​ಗಾಗಿ ತೆರಳಿದ್ದ ವೇಳೆ ಇವುಗಳ ವೀಕ್ಷಣೆ ಮಾಡಿದ್ದರು. ನಿವೇಶನ ಖರೀದಿಸಲು ಸಾಲ ಸೌಲಭ್ಯ ಇರುವುದಾಗಿಯೂ ಕಂಪನಿಯವರು ಹೇಳಿದ್ದರು.

ಆ ಬಳಿಕ ರಾಮಸಂದ್ರದಲ್ಲಿ 200 ಅಡಿ ವಿಸ್ತೀರ್ಣದ ನಿವೇಶನವನ್ನು ಮಲ್ಟಿ ಲೀಪ್ ವೆಂಚರ್ಸ್ ತೋರಿಸಿತ್ತು. 70 ಲಕ್ಷ ರೂಪಾಯಿಗೆ ಇದನ್ನು ಖರೀದಿಸಲು ಮಾಸ್ಟರ್ ಆನಂದ್ ಒಪ್ಪಿದ್ದರು. ಮುಂಗಡ ಹಣದ ರೂಪದಲ್ಲಿ 18.5 ಲಕ್ಷ ರೂಪಾಯಿ ನೀಡಿದ್ದರು. ಕಂಪನಿಯವರು ಮಾಸ್ಟರ್ ಆನಂದ್ ಹಾಗು ಪತ್ನಿ ಯಶಸ್ವಿನಿ ಹೆಸರಲ್ಲಿ ಖರೀದಿ ಕರಾರು ಪತ್ರ ಮಾಡಿಕೊಟ್ಟಿದ್ದರು. ಆ ಬಳಿಕ ನಿವೇಶನವನ್ನು ಕಂಪನಿ ಬೇರೆಯವರಿಗೆ ಮಾರಾಟ ಮಾಡಿತ್ತು.

ಇದನ್ನೂ ಓದಿ: ಕಿರುತೆರೆಯಿಂದ ಹಿರಿತೆರೆಗೆ ಮಾಸ್ಟರ್ ಆನಂದ್ ಮಗಳು ವಂಶಿಕಾ; ಮಾತಿನ ಮಲ್ಲಿಗೆ ಸಿನಿಮಾ ಆಫರ್

ಈ ಬಗ್ಗೆ ಮಾಸ್ಟರ್ ಆನಂದ್ ವಿಚಾರಿಸಿದ್ದಾರೆ. ಆದರೆ ಆ ಬಳಿಕ ಯಾವುದೇ ಸ್ಪಂದನೆ ಸಹ ನೀಡದೆ ಮುಂಗಡ ಹಣ ಸಹ ವಾಪಸ್ ಮಾಡಲಿಲ್ಲ. ಈ ಹಿನ್ನೆಲೆಯಲ್ಲಿ ಮಾಸ್ಟರ್ ಆನಂದ್ ಅವರು ದೂರು ನೀಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು