AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಯಾಂಡಲ್​ವುಡ್​ ನಿರ್ಮಾಪಕನ ಮಗನ ಪುಂಡಾಟ? ಕಸ ಗುಡಿಸುವಾಗ ಧೂಳು ಬಿದ್ದಿದ್ದಕ್ಕೆ ರಕ್ತಬರುವಂತೆ ಹಲ್ಲೆ

ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್​​ನಲ್ಲಿ ಈ ಘಟನೆ ನಡೆದಿದೆ.  ಈಸ್ಟ್ ವೆಸ್ಟ್ ಗ್ರೂಪ್ ಮಾಲೀಕ ರಜತ್ ಮನೆಗೆ ನುಗ್ಗಿ ಹಲ್ಲೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.

ಸ್ಯಾಂಡಲ್​ವುಡ್​ ನಿರ್ಮಾಪಕನ ಮಗನ ಪುಂಡಾಟ? ಕಸ ಗುಡಿಸುವಾಗ ಧೂಳು ಬಿದ್ದಿದ್ದಕ್ಕೆ ರಕ್ತಬರುವಂತೆ ಹಲ್ಲೆ
ಸ್ನೇಹಿತ್​ ವಿರುದ್ಧ ಹಲ್ಲೆ ಆರೋಪ
TV9 Web
| Edited By: |

Updated on:Oct 23, 2021 | 9:31 PM

Share

ಸೆಲೆಬ್ರಿಟಿ ಮಕ್ಕಳು ಆಗಾಗ ಸುದ್ದಿಯಾಗುತ್ತಲೇ ಇರುತ್ತಾರೆ. ಹಣ ಇದೆ ಎಂಬ ಕಾರಣಕ್ಕೆ ಧಿಮಾಕು ತೋರಿಸೋಕೆ ಹೋಗಿ ಯಾರ ಜತೆಗಾದರೂ ಕಿರಿಕ್​ ಮಾಡಿಕೊಂಡು ಸಾರ್ವಜನಿಕರಿಂದ ಛೀಮಾರಿ ಹಾಕಿಸಿಕೊಳ್ಳುತ್ತಾರೆ. ಈಗ ಅಂತುಹದೇ ಘಟನೆ ನಡೆದಿದೆ. ಕನ್ನಡ ಚಿತ್ರರಂಗದ ನಿರ್ಮಾಪಕ ಸೌಂದರ್ಯ ಜಗದೀಶ್ ಪುತ್ರ ಸ್ನೇಹಿತ್​ ವಿರುದ್ಧ ಹೀಗೊಂದು ಆರೋಪ ಕೇಳಿ ಬಂದಿದೆ. ಬೌನ್ಸರ್​ ಜತೆ ಸೇರಿಕೊಂಡು ಅವರು ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ. ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ಟಿವಿ9 ಕನ್ನಡಕ್ಕೆ ಲಭ್ಯವಾಗಿದೆ.

ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್​​ನಲ್ಲಿ ಈ ಘಟನೆ ನಡೆದಿದೆ.  ಈಸ್ಟ್ ವೆಸ್ಟ್ ಗ್ರೂಪ್ ಮಾಲೀಕ ರಜತ್ ಮನೆಗೆ ನುಗ್ಗಿ ಹಲ್ಲೆ ಮಾಡಲಾಗಿದೆ. 10 ಜನ ಬೌನ್ಸರ್​ಗಳನ್ನು ಕರೆದುಕೊಂಡು ಬಂದು ಗಲಾಟೆ ಮಾಡಲಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಮನೆಯ ಇಬ್ಬರು ಮಹಿಳಾ ಸಿಬ್ಬಂದಿಗೆ ಥಳಿಸಿದ ಆರೋಪ ಕೂಡ ಇದೆ. ಸದ್ಯ ಮಹಾಲಕ್ಷ್ಮೀ ಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಆಗಿದ್ದೇನು?

ಕೆಲಸದವರು ರಜತ್ ಮನೆಯಲ್ಲಿ ಕಸ ಗುಡಿಸುತ್ತಿದ್ದರು. ಈ ವೇಳೆ ತಮ್ಮ ದೇಹದಮೇಲೆ ಧೂಳು ಬಿದ್ದಿದೆ ಎಂದು ಸ್ನೇಹಿತ್​ ಆರೋಪಿಸಿದ್ದಾರೆ. ನಂತರ ಮನೆ ಕೆಲಸ ಮಾಡುವವರ ಮೇಲೆ ಹಲ್ಲೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಮಹಿಳಾ ಸಿಬ್ಬಂದಿಯ ಬಟ್ಟೆ ಹರಿದು ಹೋಗುವಂತೆ ಹಾಗೂ ಗಾಯವಾಗುವಂತೆ ಹಲ್ಲೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.

ಈ ಹಿಂದೆಯೂ ಹೀಗೇ ಆಗಿತ್ತು

ಸ್ನೇಹಿತ್​ ಹಾಗೂ ಅವರ ಗೆಳೆಯರು ಈ ರೀತಿ ಹಲ್ಲೆ ವಿಚಾರದಲ್ಲಿ ಸುದ್ದಿಯಾಗಿದ್ದು ಇದೇ ಮೊದಲೇನಲ್ಲ. ಈ ಹಿಂದೆಯೂ ಸ್ನೇಹಿತ್ ಮತ್ತು ಅವರ ಟೀಮ್ ಮೂರು ಬಾರಿ ಇದೇ ರೀತಿ ಹಲ್ಲೆ ಮಾಡಿತ್ತು. ಇದು ಸಣ್ಣ ವಿಚಾರ ಎಂದು ರಜತ್ ಕುಟುಂಬದವರು ಸುಮ್ಮನೆ ಇದ್ದರು. ಆದರೆ, ಇದು ಪದೇಪದೇ ಪುನರಾವರ್ತನೆ ಆಗುತ್ತಿರುವುದರಿಂದ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದೆ.

ಇದನ್ನೂ ಓದಿ: ಸ್ವಿಮ್ಮಿಂಗ್​​ಪೂಲ್​ನಲ್ಲಿ ಆಯ್ರಾ, ಯಥರ್ವ್​​; ಕ್ಯೂಟ್​ ಫೋಟೋ ಹಂಚಿಕೊಂಡ ರಾಧಿಕಾ ಪಂಡಿತ್​

‘777 ಚಾರ್ಲಿ’ ಸಿನಿಮಾ ಶೂಟಿಂಗ್​ ಮುಕ್ತಾಯ; ಕುಂಬಳಕಾಯಿ ಒಡೆದ ಸಂಭ್ರಮದಲ್ಲಿ ರಕ್ಷಿತ್​

Published On - 9:24 pm, Sat, 23 October 21

Follow Us
ಕಾರ್ಮಿಕರ ಮಕ್ಕಳಿಗೆ ಉಚಿತ ಶಿಕ್ಷಣ: ರಾಜ್ಯಕ್ಕೆ ಮಾದರಿಯಾದ ರಾಮಪುರಂ ಕುಟುಂಬ
ಕಾರ್ಮಿಕರ ಮಕ್ಕಳಿಗೆ ಉಚಿತ ಶಿಕ್ಷಣ: ರಾಜ್ಯಕ್ಕೆ ಮಾದರಿಯಾದ ರಾಮಪುರಂ ಕುಟುಂಬ
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಟ್ರಾಲಿ ಬ್ಯಾಗ್​ನಲ್ಲಿ ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳು ವಶಕ್ಕೆ 
ಟ್ರಾಲಿ ಬ್ಯಾಗ್​ನಲ್ಲಿ ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳು ವಶಕ್ಕೆ 
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ
ಸಿಎಂ ಡಿಕೆಶಿ ಆರೋಗ್ಯದಲ್ಲಿ ಕೊಂಚ ಏರುಪೇರು: ವೈದ್ಯರು ದೌಡು, ಏನಾಯ್ತು?
ಸಿಎಂ ಡಿಕೆಶಿ ಆರೋಗ್ಯದಲ್ಲಿ ಕೊಂಚ ಏರುಪೇರು: ವೈದ್ಯರು ದೌಡು, ಏನಾಯ್ತು?
ಬಿಗ್​​ಬಾಸ್​: ತಾಂಡವ್ ‘ಖಾಲಿ ಪಲಾವ್, ಗಗನ್ ‘ಕೊಳೆತ ಟೊಮ್ಯಾಟೊ’
ಬಿಗ್​​ಬಾಸ್​: ತಾಂಡವ್ ‘ಖಾಲಿ ಪಲಾವ್, ಗಗನ್ ‘ಕೊಳೆತ ಟೊಮ್ಯಾಟೊ’
ರಸ್ತೆ ಕಾಮಗಾರಿ ಗುದ್ದಲಿ ಪೂಜೆ ವೇಳೆ MLC-MLA ನಡುವೆ ಮಾತಿನ ಚಕಮಕಿ
ರಸ್ತೆ ಕಾಮಗಾರಿ ಗುದ್ದಲಿ ಪೂಜೆ ವೇಳೆ MLC-MLA ನಡುವೆ ಮಾತಿನ ಚಕಮಕಿ
ಆ್ಯಕ್ಟಿವಿಟಿ ಮಾಡದ್ದಕ್ಕೆ ವಿದ್ಯಾರ್ಥಿ ಮೇಲೆ ಶಿಕ್ಷಕನಿಂದ ಅಮಾನವೀಯ ಹಲ್ಲೆ
ಆ್ಯಕ್ಟಿವಿಟಿ ಮಾಡದ್ದಕ್ಕೆ ವಿದ್ಯಾರ್ಥಿ ಮೇಲೆ ಶಿಕ್ಷಕನಿಂದ ಅಮಾನವೀಯ ಹಲ್ಲೆ
ಆರೋಪಗಳೆಲ್ಲ ಸುಳ್ಳು, ಹಣ ಕೂಡ ಅವರು ಕೊಟ್ಟದ್ದಲ್ಲ: ಪ್ರಜ್ವಲ್ ದೇವರಾಜ್
ಆರೋಪಗಳೆಲ್ಲ ಸುಳ್ಳು, ಹಣ ಕೂಡ ಅವರು ಕೊಟ್ಟದ್ದಲ್ಲ: ಪ್ರಜ್ವಲ್ ದೇವರಾಜ್
ಡಿಕೆಶಿ ಸರ್ಕಾರಕ್ಕೆ 100 ದಿನ: ದಿಲ್ಲಿಗೆ ಬರುವಂತೆ ಹೈಕಮಾಂಡ್ ಆಹ್ವಾನ
ಡಿಕೆಶಿ ಸರ್ಕಾರಕ್ಕೆ 100 ದಿನ: ದಿಲ್ಲಿಗೆ ಬರುವಂತೆ ಹೈಕಮಾಂಡ್ ಆಹ್ವಾನ