AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಯಾಂಡಲ್​ವುಡ್​ ನಿರ್ಮಾಪಕನ ಮಗನ ಪುಂಡಾಟ? ಕಸ ಗುಡಿಸುವಾಗ ಧೂಳು ಬಿದ್ದಿದ್ದಕ್ಕೆ ರಕ್ತಬರುವಂತೆ ಹಲ್ಲೆ

ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್​​ನಲ್ಲಿ ಈ ಘಟನೆ ನಡೆದಿದೆ.  ಈಸ್ಟ್ ವೆಸ್ಟ್ ಗ್ರೂಪ್ ಮಾಲೀಕ ರಜತ್ ಮನೆಗೆ ನುಗ್ಗಿ ಹಲ್ಲೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.

ಸ್ಯಾಂಡಲ್​ವುಡ್​ ನಿರ್ಮಾಪಕನ ಮಗನ ಪುಂಡಾಟ? ಕಸ ಗುಡಿಸುವಾಗ ಧೂಳು ಬಿದ್ದಿದ್ದಕ್ಕೆ ರಕ್ತಬರುವಂತೆ ಹಲ್ಲೆ
ಸ್ನೇಹಿತ್​ ವಿರುದ್ಧ ಹಲ್ಲೆ ಆರೋಪ
TV9 Web
| Edited By: |

Updated on:Oct 23, 2021 | 9:31 PM

Share

ಸೆಲೆಬ್ರಿಟಿ ಮಕ್ಕಳು ಆಗಾಗ ಸುದ್ದಿಯಾಗುತ್ತಲೇ ಇರುತ್ತಾರೆ. ಹಣ ಇದೆ ಎಂಬ ಕಾರಣಕ್ಕೆ ಧಿಮಾಕು ತೋರಿಸೋಕೆ ಹೋಗಿ ಯಾರ ಜತೆಗಾದರೂ ಕಿರಿಕ್​ ಮಾಡಿಕೊಂಡು ಸಾರ್ವಜನಿಕರಿಂದ ಛೀಮಾರಿ ಹಾಕಿಸಿಕೊಳ್ಳುತ್ತಾರೆ. ಈಗ ಅಂತುಹದೇ ಘಟನೆ ನಡೆದಿದೆ. ಕನ್ನಡ ಚಿತ್ರರಂಗದ ನಿರ್ಮಾಪಕ ಸೌಂದರ್ಯ ಜಗದೀಶ್ ಪುತ್ರ ಸ್ನೇಹಿತ್​ ವಿರುದ್ಧ ಹೀಗೊಂದು ಆರೋಪ ಕೇಳಿ ಬಂದಿದೆ. ಬೌನ್ಸರ್​ ಜತೆ ಸೇರಿಕೊಂಡು ಅವರು ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ. ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ಟಿವಿ9 ಕನ್ನಡಕ್ಕೆ ಲಭ್ಯವಾಗಿದೆ.

ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್​​ನಲ್ಲಿ ಈ ಘಟನೆ ನಡೆದಿದೆ.  ಈಸ್ಟ್ ವೆಸ್ಟ್ ಗ್ರೂಪ್ ಮಾಲೀಕ ರಜತ್ ಮನೆಗೆ ನುಗ್ಗಿ ಹಲ್ಲೆ ಮಾಡಲಾಗಿದೆ. 10 ಜನ ಬೌನ್ಸರ್​ಗಳನ್ನು ಕರೆದುಕೊಂಡು ಬಂದು ಗಲಾಟೆ ಮಾಡಲಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಮನೆಯ ಇಬ್ಬರು ಮಹಿಳಾ ಸಿಬ್ಬಂದಿಗೆ ಥಳಿಸಿದ ಆರೋಪ ಕೂಡ ಇದೆ. ಸದ್ಯ ಮಹಾಲಕ್ಷ್ಮೀ ಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಆಗಿದ್ದೇನು?

ಕೆಲಸದವರು ರಜತ್ ಮನೆಯಲ್ಲಿ ಕಸ ಗುಡಿಸುತ್ತಿದ್ದರು. ಈ ವೇಳೆ ತಮ್ಮ ದೇಹದಮೇಲೆ ಧೂಳು ಬಿದ್ದಿದೆ ಎಂದು ಸ್ನೇಹಿತ್​ ಆರೋಪಿಸಿದ್ದಾರೆ. ನಂತರ ಮನೆ ಕೆಲಸ ಮಾಡುವವರ ಮೇಲೆ ಹಲ್ಲೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಮಹಿಳಾ ಸಿಬ್ಬಂದಿಯ ಬಟ್ಟೆ ಹರಿದು ಹೋಗುವಂತೆ ಹಾಗೂ ಗಾಯವಾಗುವಂತೆ ಹಲ್ಲೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.

ಈ ಹಿಂದೆಯೂ ಹೀಗೇ ಆಗಿತ್ತು

ಸ್ನೇಹಿತ್​ ಹಾಗೂ ಅವರ ಗೆಳೆಯರು ಈ ರೀತಿ ಹಲ್ಲೆ ವಿಚಾರದಲ್ಲಿ ಸುದ್ದಿಯಾಗಿದ್ದು ಇದೇ ಮೊದಲೇನಲ್ಲ. ಈ ಹಿಂದೆಯೂ ಸ್ನೇಹಿತ್ ಮತ್ತು ಅವರ ಟೀಮ್ ಮೂರು ಬಾರಿ ಇದೇ ರೀತಿ ಹಲ್ಲೆ ಮಾಡಿತ್ತು. ಇದು ಸಣ್ಣ ವಿಚಾರ ಎಂದು ರಜತ್ ಕುಟುಂಬದವರು ಸುಮ್ಮನೆ ಇದ್ದರು. ಆದರೆ, ಇದು ಪದೇಪದೇ ಪುನರಾವರ್ತನೆ ಆಗುತ್ತಿರುವುದರಿಂದ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದೆ.

ಇದನ್ನೂ ಓದಿ: ಸ್ವಿಮ್ಮಿಂಗ್​​ಪೂಲ್​ನಲ್ಲಿ ಆಯ್ರಾ, ಯಥರ್ವ್​​; ಕ್ಯೂಟ್​ ಫೋಟೋ ಹಂಚಿಕೊಂಡ ರಾಧಿಕಾ ಪಂಡಿತ್​

‘777 ಚಾರ್ಲಿ’ ಸಿನಿಮಾ ಶೂಟಿಂಗ್​ ಮುಕ್ತಾಯ; ಕುಂಬಳಕಾಯಿ ಒಡೆದ ಸಂಭ್ರಮದಲ್ಲಿ ರಕ್ಷಿತ್​

Published On - 9:24 pm, Sat, 23 October 21

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್