AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡಕ್ಕೆ ಬರುವ ಮೊದಲೇ ಕಿರಿಕ್​ ಮಾಡಿಕೊಂಡ ನಟಿ ಪಾಯಲ್​ ರಜಪೂತ್​

ಜಯರಾಜ್​ ಗರ್ಲ್​ಫ್ರೆಂಡ್​ ಈಗಲೂ ಪಂಜಾಬ್​ನಲ್ಲಿ ಇಬ್ಬರು ಮಕ್ಕಳೊಂದಿಗೆ ಬದುಕಿದ್ದಾರೆ. ವಿಶೇಷ ಎಂದರೆ ಪಾಯಲ್​ ಅವರು ಭೇಟಿ ಮಾಡೋಕೆ ಉತ್ಸುಕರಾಗಿದ್ದಾರೆ.

ಕನ್ನಡಕ್ಕೆ ಬರುವ ಮೊದಲೇ ಕಿರಿಕ್​ ಮಾಡಿಕೊಂಡ ನಟಿ ಪಾಯಲ್​ ರಜಪೂತ್​
ಕನ್ನಡಕ್ಕೆ ಬರುವ ಮೊದಲೇ ಕಿರಿಕ್​ ಮಾಡಿಕೊಂಡ ನಟಿ ಪಾಯಲ್​ ರಜಪೂತ್​
TV9 Web
| Updated By: ರಾಜೇಶ್ ದುಗ್ಗುಮನೆ|

Updated on:Aug 21, 2021 | 9:24 PM

Share

ಅಂಡರ್​ವರ್ಲ್ಡ್​​ ಡಾನ್​ ಆಗಿದ್ದ ಜಯರಾಜ್​ ಜೀವನ ಕಥೆ ಆಧರಿಸಿ ಸ್ಯಾಂಡಲ್​ವುಡ್​ನಲ್ಲಿ ಸಿನಿಮಾ ಸಿದ್ಧಗೊಳ್ಳುತ್ತಿದೆ. ಇದಕ್ಕೆ ‘ಹೆಡ್​ ಬುಷ್​’ ಎಂದು ನಾಮಕರಣ ಮಾಡಲಾಗಿದ್ದು, ಧನಂಜಯ ನಾಯಕ. ಈ ಸಿನಿಮಾದಲ್ಲಿ ಜಯರಾಜ್​ ಗರ್ಲ್​​ಫ್ರೆಂಡ್​ ಆಗಿ ಪಾಯಲ್​ ಕಾಣಿಸಿಕೊಳ್ಳುತ್ತಿದ್ದಾರೆ. ಇವರು ಸ್ಯಾಂಡಲ್​ವುಡ್​ಗೆ ಕಾಲಿಡುವುದಕ್ಕೂ ಮೊದಲೇ ಕಿರಿಕ್​ ಮಾಡಿಕೊಂಡಿದ್ದಾರೆ. ಹಾಗಂತ ಇದು ಭಾಷಾ ವಿಚಾರಕ್ಕೆ ಅಲ್ಲ. ಅವರು ವೈಯಕ್ತಿಕ ವಿಚಾರಕ್ಕೆ.

ಪಾಯಲ್​ ರಜಪೂತ್​ ತೆಲಂಗಾಣದ ಪೆಡ್ಡಪಲ್ಲಿಗೆ ತೆರಳಿದ್ದರು. ಅಲ್ಲಿ ಅವರು ದೊಡ್ಡ ಮಾಲ್​ ಒಂದನ್ನು ಉದ್ಘಾಟನೆ ಮಾಡಿದ್ದರು. ಈ ವೇಳೆ ಅವರು ಮಾಸ್ಕ್​ ಧರಿಸಿರಲಿಲ್ಲ. ಈ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿತ್ತು.

ಈ ಘಟನೆ ನಡೆದಿದ್ದು ಜುಲೈ 11ರಂದು. ಪಾಯಲ್ ನೋಡೋಕೆ ದೊಡ್ಡ ಅಭಿಮಾನಿ ಬಳಗ ಸೇರಿತ್ತು. ಆದರೆ ಪಾಯಲ್​ ಸೆಲೆಬ್ರಿಟಿ ಆಗಿದ್ದರೂ ಮಾಸ್ಕ್​ ಧರಿಸಿರಲಿಲ್ಲ.  ಸೆಲೆಬ್ರಿಟಿಗಳನ್ನು ಸಾಕಷ್ಟು ಜನರು ಫಾಲೋ ಮಾಡುತ್ತಿರುತ್ತಾರೆ. ಆದರೆ, ಇದನ್ನು ಪಾಯಲ್​ ಮರೆತಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬರು ಕೋರ್ಟ್​ನಲ್ಲಿ ದೂರು ದಾಖಲು ಮಾಡಿದ್ದರು. ಪೊಲೀಸರಿಗೆ ಪ್ರಕರಣ ದಾಖಲು ಮಾಡಿಕೊಳ್ಳುವಂತೆ ಕೋರ್ಟ್​ ಆದೇಶಿಸಿದೆ.

ಜಯರಾಜ್​ ಗರ್ಲ್​ಫ್ರೆಂಡ್​ ಈಗಲೂ ಪಂಜಾಬ್​ನಲ್ಲಿ ಇಬ್ಬರು ಮಕ್ಕಳೊಂದಿಗೆ ಬದುಕಿದ್ದಾರೆ. ವಿಶೇಷ ಎಂದರೆ ಪಾಯಲ್​ ಅವರು ಭೇಟಿ ಮಾಡೋಕೆ ಉತ್ಸುಕರಾಗಿದ್ದಾರೆ. 70-80ರ  ಅವಧಿಯಲ್ಲಿ ಈ ಕಥೆ ಸಾಗಲಿದೆ. ಶೂನ್ಯ ಈ ಸಿನಿಮಾವನ್ನು ನಿರ್ದೇಶನ ಮಾಡುತ್ತಿದ್ದಾರೆ.

2017ರಲ್ಲಿ ತೆರೆಗೆ ಬಂದ ಪಂಜಾಬಿ ಸಿನಿಮಾ ‘ಚನ್ನ ಮೇರೆಯಾ’ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟರು ಪಾಯಲ್​. ಟಾಲಿವುಡ್​ನಲ್ಲಿ ದೊಡ್ಡ ಮಟ್ಟದಲ್ಲಿ ಹೆಸರು ಮಾಡಿದ ‘ಆರ್​ಎಕ್ಸ್​ 100’ ಸಿನಿಮಾದಲ್ಲಿ ಪಾಯಲ್​ ನಟಿಸಿದ್ದರು. ಇದು ಅವರ ಮೊದಲ ತೆಲುಗು ಸಿನಿಮಾ. ನಂತರ ‘ಆರ್​ಡಿಎಕ್ಸ್​ ಲವ್​’ ಸಿನಿಮಾ ಸೇರಿ ಸಾಕಷ್ಟು ತೆಲುಗು ಚಿತ್ರಗಳಲ್ಲಿ ನಟಿಸಿದ್ದಾರೆ. ಹೆಡ್​ ಬುಷ್​ ಅವರ ಮೊದಲ ಕನ್ನಡ ಸಿನಿಮಾ.

ಇದನ್ನೂ ಓದಿ: Raksha Bandhan: ‘ಡಾಲಿ’ ಧನಂಜಯ ಜೊತೆ ಮಂಗಳಮುಖಿಯರ ರಕ್ಷಾ ಬಂಧನ ಹಬ್ಬದ ಸಂಭ್ರಮ

ಡಾಲಿ ಧನಂಜಯ್​ ಹೊಸ ಗರ್ಲ್​ಫ್ರೆಂಡ್​ ಪಾಯಲ್​ ರಜಪೂತ್​

Published On - 9:23 pm, Sat, 21 August 21

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ