AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಶಾಂತ್ ಸಿಂಗ್ ಸಾವು ಪ್ರಕರಣದ ತನಿಖೆ ಚುರುಕುಗೊಳಿಸಿದ ಸಿಬಿಐ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ನಿಗೂಢ ಸಾವಿನ ತನಿಖೆಯನ್ನು ಕೈಗೆತ್ತಿಕೊಂಡಿರುವ ಕೇಂದ್ರೀಯ ತನಿಖಾ ದಳ (ಸಿಬಿಐ) ಇಂದು ದಿವಂಗತ ನಟ ವಾಸವಾಗಿದ್ದ ಮುಂಬೈನ ಬಾಂದ್ರಾದಲ್ಲಿರುವ ನಿವಾಸಕ್ಕೆ ತೆರಳಿ ವಿಚಾರಣೆ ನಡೆಸಿತು.  ತನಿಖಾಧಿಕಾರಿಗಳು, ಪ್ಲ್ಯಾಟ್‌ನಲ್ಲಿ ಸುಶಾಂತ್​ನೊಂದಿಗೆ ವಾಸವಿದ್ದ ಸಿದ್ಧಾರ್ಥ ಪಿತಾನಿ, ನಟನ ಅಡಿಗೆಯವ ನೀರಜ್ ಹಾಗೂ ಅಪಾರ್ಟ್​ಮೆಂಟ್ ಹೌಸ್​ಕೀಪಿಂಗ್​ ವಿಭಾಗದಲ್ಲಿ ಕೆಲಸ ಮಾಡುವ ದೀಪೇಶ್ ಅವರ ವಿಚಾರಣೆ ನಡೆಸಿದರು. ಜೂನ್ 13 ಮತ್ತು 14 ರಂದು ಫ್ಲ್ಯಾಟ್​ನಲ್ಲಿ ಏನು ನಡೆಯಿತೆನ್ನುವ ಬಗ್ಗೆ ಅವರಿಂದ ಮಾಹಿತಿ ಸಂಗ್ರಹಿಸಿದರೆಂದು ತಿಳಿದು […]

ಸುಶಾಂತ್ ಸಿಂಗ್ ಸಾವು ಪ್ರಕರಣದ ತನಿಖೆ ಚುರುಕುಗೊಳಿಸಿದ ಸಿಬಿಐ
ಅರುಣ್​ ಕುಮಾರ್​ ಬೆಳ್ಳಿ
|

Updated on: Aug 22, 2020 | 4:26 PM

Share

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ನಿಗೂಢ ಸಾವಿನ ತನಿಖೆಯನ್ನು ಕೈಗೆತ್ತಿಕೊಂಡಿರುವ ಕೇಂದ್ರೀಯ ತನಿಖಾ ದಳ (ಸಿಬಿಐ) ಇಂದು ದಿವಂಗತ ನಟ ವಾಸವಾಗಿದ್ದ ಮುಂಬೈನ ಬಾಂದ್ರಾದಲ್ಲಿರುವ ನಿವಾಸಕ್ಕೆ ತೆರಳಿ ವಿಚಾರಣೆ ನಡೆಸಿತು. 

ತನಿಖಾಧಿಕಾರಿಗಳು, ಪ್ಲ್ಯಾಟ್‌ನಲ್ಲಿ ಸುಶಾಂತ್​ನೊಂದಿಗೆ ವಾಸವಿದ್ದ ಸಿದ್ಧಾರ್ಥ ಪಿತಾನಿ, ನಟನ ಅಡಿಗೆಯವ ನೀರಜ್ ಹಾಗೂ ಅಪಾರ್ಟ್​ಮೆಂಟ್ ಹೌಸ್​ಕೀಪಿಂಗ್​ ವಿಭಾಗದಲ್ಲಿ ಕೆಲಸ ಮಾಡುವ ದೀಪೇಶ್ ಅವರ ವಿಚಾರಣೆ ನಡೆಸಿದರು. ಜೂನ್ 13 ಮತ್ತು 14 ರಂದು ಫ್ಲ್ಯಾಟ್​ನಲ್ಲಿ ಏನು ನಡೆಯಿತೆನ್ನುವ ಬಗ್ಗೆ ಅವರಿಂದ ಮಾಹಿತಿ ಸಂಗ್ರಹಿಸಿದರೆಂದು ತಿಳಿದು ಬಂದಿದೆ.

ಏತನ್ಮಧ್ಯೆ, ಸುಶಾಂತ್ ಅವರ ಸಂಬಂಧಿಕ ಹಾಗೂ ಬಿಜೆಪಿ ಶಾಸಕರಾಗಿರುವ ನೀರಜ್ ಕುಮಾರ ಬಬ್ಲೂ, ‘‘ಸಿಬಿಐ ತನಿಖೆ ಸರಿಯಾದ ನಿಟ್ಟಿನಲ್ಲಿ ಸಾಗುತ್ತಿದೆ,’’ ಎಂದು ಟ್ವೀಟ್ ಮಾಡಿದ್ದಾರೆ.

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More