AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಗಿಣಿ, ಸಂಜನಾಗೆ NO ರಿಲೀಫ್​: ಮತ್ತೆ CCB ವಶಕ್ಕೇ ನೀಡಿದ ಕೋರ್ಟ್​, ಎಷ್ಟು ದಿನಕ್ಕೆ?

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಆರೋಪ ಕೇಸ್​ಗೆ ಸಂಬಂಧಿಸಿದಂತೆ ನಟಿಯರಾದ ರಾಗಿಣಿ ಮತ್ತು ಸಂಜನಾರನ್ನು ಮತ್ತೆ ಮೂರು ದಿನಗಳ ಕಾಲ ಸಿಸಿಬಿ ಕಸ್ಟಡಿಗೆ ಒಪ್ಪಿಸಲಾಗಿದೆ. ಜೊತೆಗೆ, ಉಳಿದ 6 ಆರೋಪಿಗಳನ್ನು ಸಹ 3 ದಿನಗಳ ಕಾಲ ಸಿಸಿಬಿ ವಶಕ್ಕೆ ನೀಡಲಾಗಿದೆ. ಬಂಧಿತ ಆರೋಪಿಗಳ ಪೊಲೀಸ್ ಕಸ್ಟಡಿ ಅವಧಿ ಅಂತ್ಯವಾದ ಹಿನ್ನೆಲೆಯಲ್ಲಿ ಅವರನ್ನು ಸಂಜೆ 4 ಗಂಟೆಗೆ ನ್ಯಾಯಾಧೀಶರ ಎದುರು ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರು ಪಡಿಸಲಾಯಿತು. ವಿಡಿಯೋ ಕಾನ್ಫರೆನ್ಸ್​ ಮೂಲಕ ಜಡ್ಜ್​ ಮುಂದೆ ನಟಿಗಳಾದ ರಾಗಿಣಿ […]

ರಾಗಿಣಿ, ಸಂಜನಾಗೆ NO ರಿಲೀಫ್​: ಮತ್ತೆ CCB ವಶಕ್ಕೇ ನೀಡಿದ ಕೋರ್ಟ್​, ಎಷ್ಟು ದಿನಕ್ಕೆ?
ರಾಗಿಣಿ ದ್ವಿವೇದಿ (ಎಡ); ಸಂಜನಾ ಗಲ್ರಾನಿ (ಬಲ)
KUSHAL V
| Edited By: |

Updated on:Sep 11, 2020 | 6:23 PM

Share

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಆರೋಪ ಕೇಸ್​ಗೆ ಸಂಬಂಧಿಸಿದಂತೆ ನಟಿಯರಾದ ರಾಗಿಣಿ ಮತ್ತು ಸಂಜನಾರನ್ನು ಮತ್ತೆ ಮೂರು ದಿನಗಳ ಕಾಲ ಸಿಸಿಬಿ ಕಸ್ಟಡಿಗೆ ಒಪ್ಪಿಸಲಾಗಿದೆ. ಜೊತೆಗೆ, ಉಳಿದ 6 ಆರೋಪಿಗಳನ್ನು ಸಹ 3 ದಿನಗಳ ಕಾಲ ಸಿಸಿಬಿ ವಶಕ್ಕೆ ನೀಡಲಾಗಿದೆ.

ಬಂಧಿತ ಆರೋಪಿಗಳ ಪೊಲೀಸ್ ಕಸ್ಟಡಿ ಅವಧಿ ಅಂತ್ಯವಾದ ಹಿನ್ನೆಲೆಯಲ್ಲಿ ಅವರನ್ನು ಸಂಜೆ 4 ಗಂಟೆಗೆ ನ್ಯಾಯಾಧೀಶರ ಎದುರು ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರು ಪಡಿಸಲಾಯಿತು.

ವಿಡಿಯೋ ಕಾನ್ಫರೆನ್ಸ್​ ಮೂಲಕ ಜಡ್ಜ್​ ಮುಂದೆ ನಟಿಗಳಾದ ರಾಗಿಣಿ ಮತ್ತು ಸಂಜನಾ ಹಾಗೂ ಇತರೆ ಆರೋಪಿಗಳಾದ ವಿರೇನ್​ ಖನ್ನಾ, ಪ್ರಶಾಂತ್​ ರಂಕ, ಲೂಮ್​ ಪೆಪ್ಪರ್​​ ಮತ್ತು ರಾಹುಲ್​ನನ್ನ ಹಾಜರುಪಡಿಸಿದ CCB ಅಧಿಕಾರಿಗಳು ಮತ್ತೆ 5 ದಿನ ಕಸ್ಟಡಿಗೆ ನೀಡುವಂತೆ ಮನವಿ ಮಾಡಿದ್ದರು.

ಇಬ್ಬರು ನಟಿಯರು ನಮಗೆ ತನಿಖೆಗೆ ಸಹಕಾರ ನೀಡಿಲ್ಲ. ನಮಗೆ ಮತ್ತಷ್ಟು ದಿನಗಳ ಕಾಲ ವಿಚಾರಣೆ ಅಗತ್ಯವಿದೆ. ಡ್ರಗ್ಸ್​ ದಂಧೆ ಬಗ್ಗೆ ಅವರಿಬ್ಬರ ಬಳಿ ಸಾಕಷ್ಟು ಮಾಹಿತಿ ಇದೆ. ಅವರು ಡ್ರಗ್ಸ್​ ದಂಧೆಯಲ್ಲಿರುವ ಬಗ್ಗೆ ಸಾಕಷ್ಟು ಸಾಕ್ಷ್ಯವಿದೆ ಎಂದು ನ್ಯಾಯಾಧೀಶರ ಎದುರು ತನಿಖಾಧಿಕಾರಿ ಹೇಳಿದ್ದರು. ಈ ನಡುವೆ ಇಬ್ಬರು ನಟಿಯರ ಬಳಿ ಯಾವುದೇ ಮಾದಕ ವಸ್ತು ಸಿಕ್ಕಿಲ್ಲ. ಮಾದಕವಸ್ತು ಸೇವಿಸಿರುವ ಬಗ್ಗೆಯೂ ಯಾವುದೇ ಸಾಕ್ಷ್ಯಗಳಿಲ್ಲ. ಹೀಗಾಗಿ, ಮತ್ತೆ ಕಸ್ಟಡಿಗೆ ಪಡೆಯುವ ಯಾವುದೇ ಅಗತ್ಯ ಇರುವುದಿಲ್ಲ ಎಂದು ನಟಿ ರಾಗಿಣಿ ಮತ್ತು ಸಂಜನಾ ಪರ ವಕೀಲರಿಂದ ವಾದ ಮಂಡಿಸಲಾಯಿತು.

ಯಾರದ್ದೋ ಒಂದು ಹೇಳಿಕೆಯಿಂದ ಅವರನ್ನ ಬಂಧಿಸಲಾಗಿದೆ. ಬಂಧಿತರ ಬಳಿ ಯಾವುದೇ ರೀತಿ ಮಾದಕ ವಸ್ತು ದೊರೆತಿಲ್ಲ ಎಂದು ಸಹ ವಾದ ಮಾಡಿದ್ದರು.

Published On - 5:50 pm, Fri, 11 September 20

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್