AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಗಿಣಿ, ಸಂಜನಾಗೆ NO ರಿಲೀಫ್​: ಮತ್ತೆ CCB ವಶಕ್ಕೇ ನೀಡಿದ ಕೋರ್ಟ್​, ಎಷ್ಟು ದಿನಕ್ಕೆ?

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಆರೋಪ ಕೇಸ್​ಗೆ ಸಂಬಂಧಿಸಿದಂತೆ ನಟಿಯರಾದ ರಾಗಿಣಿ ಮತ್ತು ಸಂಜನಾರನ್ನು ಮತ್ತೆ ಮೂರು ದಿನಗಳ ಕಾಲ ಸಿಸಿಬಿ ಕಸ್ಟಡಿಗೆ ಒಪ್ಪಿಸಲಾಗಿದೆ. ಜೊತೆಗೆ, ಉಳಿದ 6 ಆರೋಪಿಗಳನ್ನು ಸಹ 3 ದಿನಗಳ ಕಾಲ ಸಿಸಿಬಿ ವಶಕ್ಕೆ ನೀಡಲಾಗಿದೆ. ಬಂಧಿತ ಆರೋಪಿಗಳ ಪೊಲೀಸ್ ಕಸ್ಟಡಿ ಅವಧಿ ಅಂತ್ಯವಾದ ಹಿನ್ನೆಲೆಯಲ್ಲಿ ಅವರನ್ನು ಸಂಜೆ 4 ಗಂಟೆಗೆ ನ್ಯಾಯಾಧೀಶರ ಎದುರು ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರು ಪಡಿಸಲಾಯಿತು. ವಿಡಿಯೋ ಕಾನ್ಫರೆನ್ಸ್​ ಮೂಲಕ ಜಡ್ಜ್​ ಮುಂದೆ ನಟಿಗಳಾದ ರಾಗಿಣಿ […]

ರಾಗಿಣಿ, ಸಂಜನಾಗೆ NO ರಿಲೀಫ್​: ಮತ್ತೆ CCB ವಶಕ್ಕೇ ನೀಡಿದ ಕೋರ್ಟ್​, ಎಷ್ಟು ದಿನಕ್ಕೆ?
ರಾಗಿಣಿ ದ್ವಿವೇದಿ (ಎಡ); ಸಂಜನಾ ಗಲ್ರಾನಿ (ಬಲ)
KUSHAL V
| Edited By: |

Updated on:Sep 11, 2020 | 6:23 PM

Share

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಆರೋಪ ಕೇಸ್​ಗೆ ಸಂಬಂಧಿಸಿದಂತೆ ನಟಿಯರಾದ ರಾಗಿಣಿ ಮತ್ತು ಸಂಜನಾರನ್ನು ಮತ್ತೆ ಮೂರು ದಿನಗಳ ಕಾಲ ಸಿಸಿಬಿ ಕಸ್ಟಡಿಗೆ ಒಪ್ಪಿಸಲಾಗಿದೆ. ಜೊತೆಗೆ, ಉಳಿದ 6 ಆರೋಪಿಗಳನ್ನು ಸಹ 3 ದಿನಗಳ ಕಾಲ ಸಿಸಿಬಿ ವಶಕ್ಕೆ ನೀಡಲಾಗಿದೆ.

ಬಂಧಿತ ಆರೋಪಿಗಳ ಪೊಲೀಸ್ ಕಸ್ಟಡಿ ಅವಧಿ ಅಂತ್ಯವಾದ ಹಿನ್ನೆಲೆಯಲ್ಲಿ ಅವರನ್ನು ಸಂಜೆ 4 ಗಂಟೆಗೆ ನ್ಯಾಯಾಧೀಶರ ಎದುರು ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರು ಪಡಿಸಲಾಯಿತು.

ವಿಡಿಯೋ ಕಾನ್ಫರೆನ್ಸ್​ ಮೂಲಕ ಜಡ್ಜ್​ ಮುಂದೆ ನಟಿಗಳಾದ ರಾಗಿಣಿ ಮತ್ತು ಸಂಜನಾ ಹಾಗೂ ಇತರೆ ಆರೋಪಿಗಳಾದ ವಿರೇನ್​ ಖನ್ನಾ, ಪ್ರಶಾಂತ್​ ರಂಕ, ಲೂಮ್​ ಪೆಪ್ಪರ್​​ ಮತ್ತು ರಾಹುಲ್​ನನ್ನ ಹಾಜರುಪಡಿಸಿದ CCB ಅಧಿಕಾರಿಗಳು ಮತ್ತೆ 5 ದಿನ ಕಸ್ಟಡಿಗೆ ನೀಡುವಂತೆ ಮನವಿ ಮಾಡಿದ್ದರು.

ಇಬ್ಬರು ನಟಿಯರು ನಮಗೆ ತನಿಖೆಗೆ ಸಹಕಾರ ನೀಡಿಲ್ಲ. ನಮಗೆ ಮತ್ತಷ್ಟು ದಿನಗಳ ಕಾಲ ವಿಚಾರಣೆ ಅಗತ್ಯವಿದೆ. ಡ್ರಗ್ಸ್​ ದಂಧೆ ಬಗ್ಗೆ ಅವರಿಬ್ಬರ ಬಳಿ ಸಾಕಷ್ಟು ಮಾಹಿತಿ ಇದೆ. ಅವರು ಡ್ರಗ್ಸ್​ ದಂಧೆಯಲ್ಲಿರುವ ಬಗ್ಗೆ ಸಾಕಷ್ಟು ಸಾಕ್ಷ್ಯವಿದೆ ಎಂದು ನ್ಯಾಯಾಧೀಶರ ಎದುರು ತನಿಖಾಧಿಕಾರಿ ಹೇಳಿದ್ದರು. ಈ ನಡುವೆ ಇಬ್ಬರು ನಟಿಯರ ಬಳಿ ಯಾವುದೇ ಮಾದಕ ವಸ್ತು ಸಿಕ್ಕಿಲ್ಲ. ಮಾದಕವಸ್ತು ಸೇವಿಸಿರುವ ಬಗ್ಗೆಯೂ ಯಾವುದೇ ಸಾಕ್ಷ್ಯಗಳಿಲ್ಲ. ಹೀಗಾಗಿ, ಮತ್ತೆ ಕಸ್ಟಡಿಗೆ ಪಡೆಯುವ ಯಾವುದೇ ಅಗತ್ಯ ಇರುವುದಿಲ್ಲ ಎಂದು ನಟಿ ರಾಗಿಣಿ ಮತ್ತು ಸಂಜನಾ ಪರ ವಕೀಲರಿಂದ ವಾದ ಮಂಡಿಸಲಾಯಿತು.

ಯಾರದ್ದೋ ಒಂದು ಹೇಳಿಕೆಯಿಂದ ಅವರನ್ನ ಬಂಧಿಸಲಾಗಿದೆ. ಬಂಧಿತರ ಬಳಿ ಯಾವುದೇ ರೀತಿ ಮಾದಕ ವಸ್ತು ದೊರೆತಿಲ್ಲ ಎಂದು ಸಹ ವಾದ ಮಾಡಿದ್ದರು.

Published On - 5:50 pm, Fri, 11 September 20

ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?