AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಗಿಣಿ, ಸಂಜನಾಗೆ NO ರಿಲೀಫ್​: ಮತ್ತೆ CCB ವಶಕ್ಕೇ ನೀಡಿದ ಕೋರ್ಟ್​, ಎಷ್ಟು ದಿನಕ್ಕೆ?

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಆರೋಪ ಕೇಸ್​ಗೆ ಸಂಬಂಧಿಸಿದಂತೆ ನಟಿಯರಾದ ರಾಗಿಣಿ ಮತ್ತು ಸಂಜನಾರನ್ನು ಮತ್ತೆ ಮೂರು ದಿನಗಳ ಕಾಲ ಸಿಸಿಬಿ ಕಸ್ಟಡಿಗೆ ಒಪ್ಪಿಸಲಾಗಿದೆ. ಜೊತೆಗೆ, ಉಳಿದ 6 ಆರೋಪಿಗಳನ್ನು ಸಹ 3 ದಿನಗಳ ಕಾಲ ಸಿಸಿಬಿ ವಶಕ್ಕೆ ನೀಡಲಾಗಿದೆ. ಬಂಧಿತ ಆರೋಪಿಗಳ ಪೊಲೀಸ್ ಕಸ್ಟಡಿ ಅವಧಿ ಅಂತ್ಯವಾದ ಹಿನ್ನೆಲೆಯಲ್ಲಿ ಅವರನ್ನು ಸಂಜೆ 4 ಗಂಟೆಗೆ ನ್ಯಾಯಾಧೀಶರ ಎದುರು ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರು ಪಡಿಸಲಾಯಿತು. ವಿಡಿಯೋ ಕಾನ್ಫರೆನ್ಸ್​ ಮೂಲಕ ಜಡ್ಜ್​ ಮುಂದೆ ನಟಿಗಳಾದ ರಾಗಿಣಿ […]

ರಾಗಿಣಿ, ಸಂಜನಾಗೆ NO ರಿಲೀಫ್​: ಮತ್ತೆ CCB ವಶಕ್ಕೇ ನೀಡಿದ ಕೋರ್ಟ್​, ಎಷ್ಟು ದಿನಕ್ಕೆ?
ರಾಗಿಣಿ ದ್ವಿವೇದಿ (ಎಡ); ಸಂಜನಾ ಗಲ್ರಾನಿ (ಬಲ)
KUSHAL V
| Edited By: ಸಾಧು ಶ್ರೀನಾಥ್​|

Updated on:Sep 11, 2020 | 6:23 PM

Share

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಆರೋಪ ಕೇಸ್​ಗೆ ಸಂಬಂಧಿಸಿದಂತೆ ನಟಿಯರಾದ ರಾಗಿಣಿ ಮತ್ತು ಸಂಜನಾರನ್ನು ಮತ್ತೆ ಮೂರು ದಿನಗಳ ಕಾಲ ಸಿಸಿಬಿ ಕಸ್ಟಡಿಗೆ ಒಪ್ಪಿಸಲಾಗಿದೆ. ಜೊತೆಗೆ, ಉಳಿದ 6 ಆರೋಪಿಗಳನ್ನು ಸಹ 3 ದಿನಗಳ ಕಾಲ ಸಿಸಿಬಿ ವಶಕ್ಕೆ ನೀಡಲಾಗಿದೆ.

ಬಂಧಿತ ಆರೋಪಿಗಳ ಪೊಲೀಸ್ ಕಸ್ಟಡಿ ಅವಧಿ ಅಂತ್ಯವಾದ ಹಿನ್ನೆಲೆಯಲ್ಲಿ ಅವರನ್ನು ಸಂಜೆ 4 ಗಂಟೆಗೆ ನ್ಯಾಯಾಧೀಶರ ಎದುರು ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರು ಪಡಿಸಲಾಯಿತು.

ವಿಡಿಯೋ ಕಾನ್ಫರೆನ್ಸ್​ ಮೂಲಕ ಜಡ್ಜ್​ ಮುಂದೆ ನಟಿಗಳಾದ ರಾಗಿಣಿ ಮತ್ತು ಸಂಜನಾ ಹಾಗೂ ಇತರೆ ಆರೋಪಿಗಳಾದ ವಿರೇನ್​ ಖನ್ನಾ, ಪ್ರಶಾಂತ್​ ರಂಕ, ಲೂಮ್​ ಪೆಪ್ಪರ್​​ ಮತ್ತು ರಾಹುಲ್​ನನ್ನ ಹಾಜರುಪಡಿಸಿದ CCB ಅಧಿಕಾರಿಗಳು ಮತ್ತೆ 5 ದಿನ ಕಸ್ಟಡಿಗೆ ನೀಡುವಂತೆ ಮನವಿ ಮಾಡಿದ್ದರು.

ಇಬ್ಬರು ನಟಿಯರು ನಮಗೆ ತನಿಖೆಗೆ ಸಹಕಾರ ನೀಡಿಲ್ಲ. ನಮಗೆ ಮತ್ತಷ್ಟು ದಿನಗಳ ಕಾಲ ವಿಚಾರಣೆ ಅಗತ್ಯವಿದೆ. ಡ್ರಗ್ಸ್​ ದಂಧೆ ಬಗ್ಗೆ ಅವರಿಬ್ಬರ ಬಳಿ ಸಾಕಷ್ಟು ಮಾಹಿತಿ ಇದೆ. ಅವರು ಡ್ರಗ್ಸ್​ ದಂಧೆಯಲ್ಲಿರುವ ಬಗ್ಗೆ ಸಾಕಷ್ಟು ಸಾಕ್ಷ್ಯವಿದೆ ಎಂದು ನ್ಯಾಯಾಧೀಶರ ಎದುರು ತನಿಖಾಧಿಕಾರಿ ಹೇಳಿದ್ದರು. ಈ ನಡುವೆ ಇಬ್ಬರು ನಟಿಯರ ಬಳಿ ಯಾವುದೇ ಮಾದಕ ವಸ್ತು ಸಿಕ್ಕಿಲ್ಲ. ಮಾದಕವಸ್ತು ಸೇವಿಸಿರುವ ಬಗ್ಗೆಯೂ ಯಾವುದೇ ಸಾಕ್ಷ್ಯಗಳಿಲ್ಲ. ಹೀಗಾಗಿ, ಮತ್ತೆ ಕಸ್ಟಡಿಗೆ ಪಡೆಯುವ ಯಾವುದೇ ಅಗತ್ಯ ಇರುವುದಿಲ್ಲ ಎಂದು ನಟಿ ರಾಗಿಣಿ ಮತ್ತು ಸಂಜನಾ ಪರ ವಕೀಲರಿಂದ ವಾದ ಮಂಡಿಸಲಾಯಿತು.

ಯಾರದ್ದೋ ಒಂದು ಹೇಳಿಕೆಯಿಂದ ಅವರನ್ನ ಬಂಧಿಸಲಾಗಿದೆ. ಬಂಧಿತರ ಬಳಿ ಯಾವುದೇ ರೀತಿ ಮಾದಕ ವಸ್ತು ದೊರೆತಿಲ್ಲ ಎಂದು ಸಹ ವಾದ ಮಾಡಿದ್ದರು.

Published On - 5:50 pm, Fri, 11 September 20

Follow Us
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್