AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಗಿಣಿ, ಸಂಜನಾಗೆ NO ರಿಲೀಫ್​: ಮತ್ತೆ CCB ವಶಕ್ಕೇ ನೀಡಿದ ಕೋರ್ಟ್​, ಎಷ್ಟು ದಿನಕ್ಕೆ?

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಆರೋಪ ಕೇಸ್​ಗೆ ಸಂಬಂಧಿಸಿದಂತೆ ನಟಿಯರಾದ ರಾಗಿಣಿ ಮತ್ತು ಸಂಜನಾರನ್ನು ಮತ್ತೆ ಮೂರು ದಿನಗಳ ಕಾಲ ಸಿಸಿಬಿ ಕಸ್ಟಡಿಗೆ ಒಪ್ಪಿಸಲಾಗಿದೆ. ಜೊತೆಗೆ, ಉಳಿದ 6 ಆರೋಪಿಗಳನ್ನು ಸಹ 3 ದಿನಗಳ ಕಾಲ ಸಿಸಿಬಿ ವಶಕ್ಕೆ ನೀಡಲಾಗಿದೆ. ಬಂಧಿತ ಆರೋಪಿಗಳ ಪೊಲೀಸ್ ಕಸ್ಟಡಿ ಅವಧಿ ಅಂತ್ಯವಾದ ಹಿನ್ನೆಲೆಯಲ್ಲಿ ಅವರನ್ನು ಸಂಜೆ 4 ಗಂಟೆಗೆ ನ್ಯಾಯಾಧೀಶರ ಎದುರು ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರು ಪಡಿಸಲಾಯಿತು. ವಿಡಿಯೋ ಕಾನ್ಫರೆನ್ಸ್​ ಮೂಲಕ ಜಡ್ಜ್​ ಮುಂದೆ ನಟಿಗಳಾದ ರಾಗಿಣಿ […]

ರಾಗಿಣಿ, ಸಂಜನಾಗೆ NO ರಿಲೀಫ್​: ಮತ್ತೆ CCB ವಶಕ್ಕೇ ನೀಡಿದ ಕೋರ್ಟ್​, ಎಷ್ಟು ದಿನಕ್ಕೆ?
ರಾಗಿಣಿ ದ್ವಿವೇದಿ (ಎಡ); ಸಂಜನಾ ಗಲ್ರಾನಿ (ಬಲ)
KUSHAL V
| Edited By: |

Updated on:Sep 11, 2020 | 6:23 PM

Share

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಆರೋಪ ಕೇಸ್​ಗೆ ಸಂಬಂಧಿಸಿದಂತೆ ನಟಿಯರಾದ ರಾಗಿಣಿ ಮತ್ತು ಸಂಜನಾರನ್ನು ಮತ್ತೆ ಮೂರು ದಿನಗಳ ಕಾಲ ಸಿಸಿಬಿ ಕಸ್ಟಡಿಗೆ ಒಪ್ಪಿಸಲಾಗಿದೆ. ಜೊತೆಗೆ, ಉಳಿದ 6 ಆರೋಪಿಗಳನ್ನು ಸಹ 3 ದಿನಗಳ ಕಾಲ ಸಿಸಿಬಿ ವಶಕ್ಕೆ ನೀಡಲಾಗಿದೆ.

ಬಂಧಿತ ಆರೋಪಿಗಳ ಪೊಲೀಸ್ ಕಸ್ಟಡಿ ಅವಧಿ ಅಂತ್ಯವಾದ ಹಿನ್ನೆಲೆಯಲ್ಲಿ ಅವರನ್ನು ಸಂಜೆ 4 ಗಂಟೆಗೆ ನ್ಯಾಯಾಧೀಶರ ಎದುರು ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರು ಪಡಿಸಲಾಯಿತು.

ವಿಡಿಯೋ ಕಾನ್ಫರೆನ್ಸ್​ ಮೂಲಕ ಜಡ್ಜ್​ ಮುಂದೆ ನಟಿಗಳಾದ ರಾಗಿಣಿ ಮತ್ತು ಸಂಜನಾ ಹಾಗೂ ಇತರೆ ಆರೋಪಿಗಳಾದ ವಿರೇನ್​ ಖನ್ನಾ, ಪ್ರಶಾಂತ್​ ರಂಕ, ಲೂಮ್​ ಪೆಪ್ಪರ್​​ ಮತ್ತು ರಾಹುಲ್​ನನ್ನ ಹಾಜರುಪಡಿಸಿದ CCB ಅಧಿಕಾರಿಗಳು ಮತ್ತೆ 5 ದಿನ ಕಸ್ಟಡಿಗೆ ನೀಡುವಂತೆ ಮನವಿ ಮಾಡಿದ್ದರು.

ಇಬ್ಬರು ನಟಿಯರು ನಮಗೆ ತನಿಖೆಗೆ ಸಹಕಾರ ನೀಡಿಲ್ಲ. ನಮಗೆ ಮತ್ತಷ್ಟು ದಿನಗಳ ಕಾಲ ವಿಚಾರಣೆ ಅಗತ್ಯವಿದೆ. ಡ್ರಗ್ಸ್​ ದಂಧೆ ಬಗ್ಗೆ ಅವರಿಬ್ಬರ ಬಳಿ ಸಾಕಷ್ಟು ಮಾಹಿತಿ ಇದೆ. ಅವರು ಡ್ರಗ್ಸ್​ ದಂಧೆಯಲ್ಲಿರುವ ಬಗ್ಗೆ ಸಾಕಷ್ಟು ಸಾಕ್ಷ್ಯವಿದೆ ಎಂದು ನ್ಯಾಯಾಧೀಶರ ಎದುರು ತನಿಖಾಧಿಕಾರಿ ಹೇಳಿದ್ದರು. ಈ ನಡುವೆ ಇಬ್ಬರು ನಟಿಯರ ಬಳಿ ಯಾವುದೇ ಮಾದಕ ವಸ್ತು ಸಿಕ್ಕಿಲ್ಲ. ಮಾದಕವಸ್ತು ಸೇವಿಸಿರುವ ಬಗ್ಗೆಯೂ ಯಾವುದೇ ಸಾಕ್ಷ್ಯಗಳಿಲ್ಲ. ಹೀಗಾಗಿ, ಮತ್ತೆ ಕಸ್ಟಡಿಗೆ ಪಡೆಯುವ ಯಾವುದೇ ಅಗತ್ಯ ಇರುವುದಿಲ್ಲ ಎಂದು ನಟಿ ರಾಗಿಣಿ ಮತ್ತು ಸಂಜನಾ ಪರ ವಕೀಲರಿಂದ ವಾದ ಮಂಡಿಸಲಾಯಿತು.

ಯಾರದ್ದೋ ಒಂದು ಹೇಳಿಕೆಯಿಂದ ಅವರನ್ನ ಬಂಧಿಸಲಾಗಿದೆ. ಬಂಧಿತರ ಬಳಿ ಯಾವುದೇ ರೀತಿ ಮಾದಕ ವಸ್ತು ದೊರೆತಿಲ್ಲ ಎಂದು ಸಹ ವಾದ ಮಾಡಿದ್ದರು.

Published On - 5:50 pm, Fri, 11 September 20

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?