AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಯಾಂಡಲ್‌ವುಡ್‌ ಡ್ರಗ್ಸ್ ಪ್ರಕರಣ: CCBಯಿಂದ ಅಕುಲ್ ಬಾಲಾಜಿಗೆ ಬುಲಾವ್

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರಿಂದ ಮತ್ತೆ ಮೂವರಿಗೆ ನೋಟಿಸ್ ನೀಡಲಾಗಿದೆ. R.V.ದೇವರಾಜ್ ಮಗ ಯುವರಾಜ್, ಸಂತೋಷ್‌ಕುಮಾರ್ ಹಾಗೂ ನಟ, ನಿರೂಪಕ ಅಕುಲ್ ಬಾಲಾಜಿಗೆ ಸಿಸಿಬಿ ಪೊಲೀಸರು ವಾಟ್ಸಾಪ್ ಮೂಲಕ ನೋಟಿಸ್ ನೀಡಿದ್ದಾರೆ. ಜೊತೆಗೆ ನಾಳೆ ಬೆಳಗ್ಗೆ 10ಕ್ಕೆ ಸಿಸಿಬಿ ಎದುರು ಹಾಜರಾಗುವಂತೆ ಸೂಚನೆ ನೀಡಿದ್ದಾರೆ. ನಾಳೆ ಬೆಳಗ್ಗೆ ಹಾಜರಾಗ್ತೀನಿ: ಅಕುಲ್​.. ಸಿಸಿಬಿ ಪೊಲೀಸರಿಂದ ನೋಟಿಸ್ ಬಂದಿರುವ ಬಗ್ಗೆ ಟಿವಿ9ಗೆ ಪ್ರತಿಕ್ರಿಯೆ ನೀಡಿದ ಸ್ಯಾಂಡಲ್​ವುಡ್ ನಟ, ನಿರೂಪಕ ಅಕುಲ್ ಬಾಲಾಜಿ, ನನಗೆ […]

ಸ್ಯಾಂಡಲ್‌ವುಡ್‌ ಡ್ರಗ್ಸ್ ಪ್ರಕರಣ: CCBಯಿಂದ ಅಕುಲ್ ಬಾಲಾಜಿಗೆ ಬುಲಾವ್
ಸಾಧು ಶ್ರೀನಾಥ್​
|

Updated on:Sep 18, 2020 | 2:40 PM

Share

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರಿಂದ ಮತ್ತೆ ಮೂವರಿಗೆ ನೋಟಿಸ್ ನೀಡಲಾಗಿದೆ.

R.V.ದೇವರಾಜ್ ಮಗ ಯುವರಾಜ್, ಸಂತೋಷ್‌ಕುಮಾರ್ ಹಾಗೂ ನಟ, ನಿರೂಪಕ ಅಕುಲ್ ಬಾಲಾಜಿಗೆ ಸಿಸಿಬಿ ಪೊಲೀಸರು ವಾಟ್ಸಾಪ್ ಮೂಲಕ ನೋಟಿಸ್ ನೀಡಿದ್ದಾರೆ. ಜೊತೆಗೆ ನಾಳೆ ಬೆಳಗ್ಗೆ 10ಕ್ಕೆ ಸಿಸಿಬಿ ಎದುರು ಹಾಜರಾಗುವಂತೆ ಸೂಚನೆ ನೀಡಿದ್ದಾರೆ.

ನಾಳೆ ಬೆಳಗ್ಗೆ ಹಾಜರಾಗ್ತೀನಿ: ಅಕುಲ್​.. ಸಿಸಿಬಿ ಪೊಲೀಸರಿಂದ ನೋಟಿಸ್ ಬಂದಿರುವ ಬಗ್ಗೆ ಟಿವಿ9ಗೆ ಪ್ರತಿಕ್ರಿಯೆ ನೀಡಿದ ಸ್ಯಾಂಡಲ್​ವುಡ್ ನಟ, ನಿರೂಪಕ ಅಕುಲ್ ಬಾಲಾಜಿ, ನನಗೆ ಸಿಸಿಬಿ ಪೊಲೀಸರಿಂದ ನೋಟಿಸ್ ‌ಬಂದಿದೆ. ನಾನು ಈಗ ಹೈದರಾಬಾದ್​ನಲ್ಲಿದ್ದೀನಿ, ಹೀಗಾಗಿ ನಾಳೆ ಬೆಳಗ್ಗೆ 10 ಗಂಟೆಗೆ ವಿಚಾರಣೆಗೆ ಹಾಜರಾಗ್ತೀನಿ ಎಂದಿದ್ದಾರೆ.

ಸಂಜನಾ ಬರ್ತ್ ಡೇ ಗೆ ಹೋಗಿದ್ದೆ ಅಷ್ಟೆ: ಸಂತೋಷ ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ನನಗೆ ಸಿಸಿಬಿ ಪೊಲೀಸರಿಂದ ನೋಟಿಸ್​ ಬಂದಿದೆ. ಸದ್ಯಕ್ಕೆ ನಾನೀಗ ಮೈಸೂರಿನಲ್ಲಿದ್ದೇನೆ. ಹೀಗಾಗಿ ನಾಳೆ ಸಿಸಿಬಿ ವಿಚಾರಣೆಗೆ ಹಾಜರಾಗುತ್ತೇನೆ ಎಂದಿದ್ದಾರೆ. ಜೊತೆಗೆ ಈಗಾಗಲೇ ಬಂಧನಕ್ಕೊಳಗಾಗಿರುವ ನಟಿ ಸಂಜನಾ ಬರ್ತ್ ಡೇ ಯಲ್ಲಿ ಭಾಗಿಯಾಗಿದ್ದೆ. ಹೀಗಾಗಿ ಸಿಸಿಬಿ ಪೊಲೀಸರಿಂದ ನನಗೆ ನೋಟಿಸ್​ ಬಂದಿರಬಹುದೆಂದು ನಟ ಸಂತೋಷ್ ಕುಮಾರ್ ಟಿವಿ9ಗೆ ಮಾಹಿತಿ ನೀಡಿದ್ದಾರೆ.

Published On - 1:49 pm, Fri, 18 September 20

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ