AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RRR ಮೊಬೈಲ್​ಗಳಿಂದ CCB ಅಧಿಕಾರಿಗಳಿಗೆ ಸಿಕ್ಕಿದ್ದಾದರು ಏನು?

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಪಟ್ಟಂತೆ CCBಯಿಂದ ಬಂಧನಕ್ಕೊಳಗಾಗಿರುವ ರವಿಶಂಕರ್, ರಾಗಿಣಿ, ಹಾಗೂ ರಾಹುಲ್ ಅವರ ಮೊಬೈಲ್​ಗಳಿಂದ ಸ್ಪೋಟಕ ಮಾಹಿತಿಗಳು CCB ಅಧಿಕಾರಿಗಳಿಗೆ ಲಭ್ಯವಾಗಿವೆ. CCB ಅಧಿಕಾರಿಗಳಿಗೆ ಯಾವುದೇ ಮಾಹಿತಿ ಸಿಗಬಾರದೆಂದು ತಮ್ಮ ಮೊಬೈಲ್​ಗಳಲಿದ್ದ ಮಾಹಿತಿಯನ್ನು ಡಿಲಿಟ್​ ಮಾಡಿದ್ದರು. ಈ ಹಿನ್ನೆಲೆಯಿಂದಾಗಿ CCB ಅಧಿಕಾರಿಗಳು ಈ ಮೂವರ ಮೊಬೈಲ್ ಡಾಟಾ ರಿಟ್ರೀವ್ ಮಾಡಿಸಲು ಲ್ಯಾಬ್​ಗೆ ಕಳಿಸಿದ್ದರು.ಈಗ ಮೊಬೈಲ್​ಗಳಿಂದ ರಿಟ್ರೀವ್ ಆಗಿರುವ ಡಾಟಾದಿಂದ CCB ಅಧಿಕಾರಿಗಳಿಗೆ ಸಾಕಷ್ಟು ಸಾಕ್ಷಿಗಳು ದೊರೆತಿವೆ. ಈ ಮೂವರು ಯಾವ ಯಾವ […]

RRR ಮೊಬೈಲ್​ಗಳಿಂದ CCB ಅಧಿಕಾರಿಗಳಿಗೆ ಸಿಕ್ಕಿದ್ದಾದರು ಏನು?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: ಆಯೇಷಾ ಬಾನು|

Updated on: Sep 09, 2020 | 3:23 PM

Share

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಪಟ್ಟಂತೆ CCBಯಿಂದ ಬಂಧನಕ್ಕೊಳಗಾಗಿರುವ ರವಿಶಂಕರ್, ರಾಗಿಣಿ, ಹಾಗೂ ರಾಹುಲ್ ಅವರ ಮೊಬೈಲ್​ಗಳಿಂದ ಸ್ಪೋಟಕ ಮಾಹಿತಿಗಳು CCB ಅಧಿಕಾರಿಗಳಿಗೆ ಲಭ್ಯವಾಗಿವೆ.

CCB ಅಧಿಕಾರಿಗಳಿಗೆ ಯಾವುದೇ ಮಾಹಿತಿ ಸಿಗಬಾರದೆಂದು ತಮ್ಮ ಮೊಬೈಲ್​ಗಳಲಿದ್ದ ಮಾಹಿತಿಯನ್ನು ಡಿಲಿಟ್​ ಮಾಡಿದ್ದರು. ಈ ಹಿನ್ನೆಲೆಯಿಂದಾಗಿ CCB ಅಧಿಕಾರಿಗಳು ಈ ಮೂವರ ಮೊಬೈಲ್ ಡಾಟಾ ರಿಟ್ರೀವ್ ಮಾಡಿಸಲು ಲ್ಯಾಬ್​ಗೆ ಕಳಿಸಿದ್ದರು.ಈಗ ಮೊಬೈಲ್​ಗಳಿಂದ ರಿಟ್ರೀವ್ ಆಗಿರುವ ಡಾಟಾದಿಂದ CCB ಅಧಿಕಾರಿಗಳಿಗೆ ಸಾಕಷ್ಟು ಸಾಕ್ಷಿಗಳು ದೊರೆತಿವೆ.

ಈ ಮೂವರು ಯಾವ ಯಾವ ಸಮಯದಲ್ಲಿ ಎಲ್ಲಿ ಹೋಗಿದ್ರು. ಯಾವ ಪಾರ್ಟಿ ಅರೆಂಜ್ ಮಾಡಿದ್ರು. ಹಾಗೂ ಪಾರ್ಟಿಯಲ್ಲಿ ಯಾರು ಯಾರು ಭಾಗಿಯಾಗಿದ್ದರು ಎಂಬುದರ ಸಂಪೂರ್ಣ ಮಾಹಿತಿ ದೊರೆತಿದೆ.ಡ್ರಗ್ಸ್ ಪೆಡ್ಲರ್ಸ್ ಜೊತೆ ನಿರಂತರ ಸಂಪರ್ಕ ಹೊಂದಿದ್ದ ರವಿಶಂಕರ್ ಮೊಬೈಲ್ ಡಾಟಾದಲ್ಲಿ ಎಲ್ಲವು ಬಹಿರಂಗವಾಗಿದೆ. ಪೆಡ್ಲರ್ಸ್ ಜೊತೆ ಮಾತನಾಡಿರುವುದು,ಚಾಟ್ ಮಾಡಿರುವುದು ಬಯಲಿಗೆ ಬಂದಿದೆ.

ರಾಗಿಣಿ ಮೊಬೈಲ್​ನಲ್ಲಿ ಪಾರ್ಟಿ ಫೋಟೋಗಳು ಪತ್ತೆ.. ಇನ್ನೂ ರಾಗಿಣಿ ಮೊಬೈಲ್​ನಲ್ಲಿ ಪಾರ್ಟಿ ಫೋಟೋಗಳು ಹಾಗೂ ಎಲ್ಲೆಲ್ಲಿ ಯಾವ ಯಾವ ದಿನದಲ್ಲಿ ಭೇಟಿ ನೀಡಿದ್ರು ಎಂಬುದು ಪತ್ತೆಯಾಗಿದೆ. ಇದುವರೆಗಿನ ರಾಗಿಣಿ ಹೇಳಿಕೆಗಳನ್ನು ಮುಂದಿಟ್ಟು ಈಗ ಇರುವ ಡಾಟಾವನ್ನು ಮುಂದಿಟ್ಟು ಸಿಸಿಬಿ ಪ್ರಶ್ನೆ ಮಾಡಲಿದೆ. ರಾಹುಲ್ ಮೊಬೈಲ್​ನಲ್ಲಿ ಸಮಾಜದ ಪ್ರಮುಖ ವ್ಯಕ್ತಿಗಳಿಗೆ ಸಂಭಂದಿಸಿದ ಡಾಟಾ ಪತ್ತೆಯಾಗಿದ್ದು, ಇನ್ನೂ ರಾಹುಲ್ ಹಲವಾರು ಜನರನ್ನು ಶ್ರೀಲಂಕಾಕ್ಕೆ ಕಳಿಸುತಿದ್ದ ಎನ್ನಲಾಗುತ್ತಿದೆ. ಸಮಾಜದ ಗಣ್ಯವ್ಯಕ್ತಿಗಳ ಮಾಹಿತಿ ರಾಹುಲ್ ಮೊಬೈಲ್​ನಲ್ಲಿದ್ದು, ಈ ಟೆಕ್ನಿಕಲ್ ಎವಿಡೆನ್ಸ್​ಗಳು ಸಂಪೂರ್ಣ ತನಿಖೆಯ ಸ್ಪೀಡ್ ಹೆಚ್ಚಿಸಲಿವೆ.

Follow Us
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿಗೆ ಜಿಲ್ಲಾಡಳಿತದಿಂದ ಟಫ್ ರೂಲ್ಸ್
ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿಗೆ ಜಿಲ್ಲಾಡಳಿತದಿಂದ ಟಫ್ ರೂಲ್ಸ್