AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಸಿಬಿ ದಾಳಿ ಬಳಿಕ ಬಯಲಾಗುತ್ತಿದೆ ರೋಚಕ ಕಹಾನಿ, ರಾಗಿಣಿ ವಶಕ್ಕೆ ಪಡೆಯುವ ಸಾಧ್ಯತೆ

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಇದೆ ಎಂಬ ಆರೋಪ ಪ್ರಕರಣಕ್ಕೆ ಸಂಬಂಧಿಸಿ ರಾಗಿಣಿ ದ್ವಿವೇದಿಯವರ ಯಲಹಂಕದ ಅನನ್ಯ ಅಪಾರ್ಟ್‌ಮೆಂಟ್‌ನಲ್ಲಿರುವ ಫ್ಲ್ಯಾಟ್ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದಾಳಿ ಬಳಿಕ ಮನೆ ಜಾಲಾಡುತ್ತಿದ್ದಾರೆ. ನಿನ್ನೆ ಮನೆಯಲ್ಲೇ ಇರಲಿಲ್ಲ ರಾಗಿಣಿ: ನಿನ್ನೆ ದಿನ ಪೂರ್ತಿ ರಾಗಿಣಿ ತನ್ನ ಮನೆಯಲ್ಲಿ ಇರಲಿಲ್ಲ. ಪ್ಲಾಸ್ಮಾ ದಾನ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತೇನೆ ಎಂದು ನಟಿ ರಾಗಿಣಿ ಪೊಲೀಸರಿಗೆ ತಿಳಿಸಿದ್ರು. ಆದ್ರೆ ಅವರು ಯಾವ ಕಾರ್ಯಕ್ರಮದಲ್ಲೂ ಭಾಗಿಯಾಗಿಲ್ಲ ಎಂಬ ಸುಳಿವು ಪೊಲೀಸರಿಗೆ ಸಿಕ್ಕಿದೆ. ಅಲ್ಲದೆ […]

ಸಿಸಿಬಿ ದಾಳಿ ಬಳಿಕ ಬಯಲಾಗುತ್ತಿದೆ ರೋಚಕ ಕಹಾನಿ, ರಾಗಿಣಿ ವಶಕ್ಕೆ ಪಡೆಯುವ ಸಾಧ್ಯತೆ
ಆಯೇಷಾ ಬಾನು
ಆಯೇಷಾ ಬಾನು|

Updated on: Sep 04, 2020 | 8:36 AM

Share

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಇದೆ ಎಂಬ ಆರೋಪ ಪ್ರಕರಣಕ್ಕೆ ಸಂಬಂಧಿಸಿ ರಾಗಿಣಿ ದ್ವಿವೇದಿಯವರ ಯಲಹಂಕದ ಅನನ್ಯ ಅಪಾರ್ಟ್‌ಮೆಂಟ್‌ನಲ್ಲಿರುವ ಫ್ಲ್ಯಾಟ್ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದಾಳಿ ಬಳಿಕ ಮನೆ ಜಾಲಾಡುತ್ತಿದ್ದಾರೆ.

ನಿನ್ನೆ ಮನೆಯಲ್ಲೇ ಇರಲಿಲ್ಲ ರಾಗಿಣಿ: ನಿನ್ನೆ ದಿನ ಪೂರ್ತಿ ರಾಗಿಣಿ ತನ್ನ ಮನೆಯಲ್ಲಿ ಇರಲಿಲ್ಲ. ಪ್ಲಾಸ್ಮಾ ದಾನ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತೇನೆ ಎಂದು ನಟಿ ರಾಗಿಣಿ ಪೊಲೀಸರಿಗೆ ತಿಳಿಸಿದ್ರು. ಆದ್ರೆ ಅವರು ಯಾವ ಕಾರ್ಯಕ್ರಮದಲ್ಲೂ ಭಾಗಿಯಾಗಿಲ್ಲ ಎಂಬ ಸುಳಿವು ಪೊಲೀಸರಿಗೆ ಸಿಕ್ಕಿದೆ. ಅಲ್ಲದೆ ವಾಟ್ಸಪ್ ಅನ್ ಇನ್ಸ್ಟಾಲ್ ಮಾಡಿ ಹೊಸ ಮೊಬೈಲ್​ಗೆ ಇನ್ಸ್ಟಾಲ್ ಮಾಡಿಕೊಂಡಿದ್ದಾರೆ. ಹೀಗಾಗಿ ಸಿಸಿಬಿ ಪೊಲೀಸರಿಗೆ ಅನುಮಾನ ಹೆಚ್ಚಾಗಿತ್ತು. ನಿನ್ನೆ ಸಂಜೆ ನ್ಯಾಯಾಲಯದ ಮೂಲಕ ಸರ್ಚ್ ವಾರೆಂಟ್ ಪಡೆದು ದಾಳಿ ನಡೆಸಿದ್ದಾರೆ.

ತಡರಾತ್ರಿ ಹನ್ನೆರಡು ಗಂಟೆಗೆ ರಾಗಿಣಿ ಮನೆಗೆ ವಾಪಸ್ ಆಗಿದ್ರು. ಈ ಬಗ್ಗೆ ಸಿಸಿಬಿ ಅಧಿಕಾರಿಗಳು ನಿಗಾ ಇಟ್ಟಿದ್ದರು. ಈ ಎಲ್ಲಾ ಮಾಹಿತಿ ಹಾಗೂ ಅನುಮಾನಗಳಿಂದಾಗಿ ಬೆಳಗ್ಗೆ ಸಿಸಿಬಿ ಮಹಿಳಾ ಇನ್ಸ್ಪೆಕ್ಟರ್ ಅಂಜುಮಾಲಾ ನಾಯಕ್ ನೇತ್ರತ್ವದಲ್ಲಿ ದಾಳಿ ನಡೆಸಲಾಗಿದೆ. ಒಟ್ಟು ಆರು ಸಿಸಿಬಿ ಪೊಲೀಸರ ಪೈಕಿ ನಾಲ್ವರು ಮಹಿಳಾ ಪೊಲೀಸರು ಇಬ್ಬರು ಪುರುಷರು ಭಾಗಿಯಾಗಿದ್ದಾರೆ. ಮನೆಯನ್ನ ಮಹಿಳಾ ಅಧಿಕಾರಿಗಳು ಸರ್ಚ್ ಮಾಡುತ್ತಿದ್ದಾರೆ. ಇಬ್ಬರು ಪುರುಷ ಪೊಲೀಸರು ಮನೆ ಬಾಗಿಲಲ್ಲೆ ಇದ್ದಾರೆ. ಮನೆಯಲ್ಲಿ ರಾಗಿಣಿ ಒಬ್ಬರೆ ಇದ್ದಾಗಲೇ ದಾಳಿ ಮಾಡಲಾಗಿದೆ. ನಟಿ ರಾಗಿಣಿ ಸಿಸಿಬಿ ಪೊಲೀಸರಿಗೆ ಅವರ ಕಾರ್ಯಾಚರಣೆಗೆ ಸಹಕಾರ ನೀಡುತ್ತಿದ್ದಾರೆ. ಕಾರ್ಯಾಚರಣೆ ಬಳಿಕ ರಾಗಿಣಿಯನ್ನ ಸಿಸಿಬಿಗೆ ಕರೆತರುವ ಸಾಧ್ಯತೆ ಇದೆ.

Follow Us
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ