AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಸಿಬಿ ದಾಳಿ ಬಳಿಕ ಬಯಲಾಗುತ್ತಿದೆ ರೋಚಕ ಕಹಾನಿ, ರಾಗಿಣಿ ವಶಕ್ಕೆ ಪಡೆಯುವ ಸಾಧ್ಯತೆ

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಇದೆ ಎಂಬ ಆರೋಪ ಪ್ರಕರಣಕ್ಕೆ ಸಂಬಂಧಿಸಿ ರಾಗಿಣಿ ದ್ವಿವೇದಿಯವರ ಯಲಹಂಕದ ಅನನ್ಯ ಅಪಾರ್ಟ್‌ಮೆಂಟ್‌ನಲ್ಲಿರುವ ಫ್ಲ್ಯಾಟ್ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದಾಳಿ ಬಳಿಕ ಮನೆ ಜಾಲಾಡುತ್ತಿದ್ದಾರೆ. ನಿನ್ನೆ ಮನೆಯಲ್ಲೇ ಇರಲಿಲ್ಲ ರಾಗಿಣಿ: ನಿನ್ನೆ ದಿನ ಪೂರ್ತಿ ರಾಗಿಣಿ ತನ್ನ ಮನೆಯಲ್ಲಿ ಇರಲಿಲ್ಲ. ಪ್ಲಾಸ್ಮಾ ದಾನ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತೇನೆ ಎಂದು ನಟಿ ರಾಗಿಣಿ ಪೊಲೀಸರಿಗೆ ತಿಳಿಸಿದ್ರು. ಆದ್ರೆ ಅವರು ಯಾವ ಕಾರ್ಯಕ್ರಮದಲ್ಲೂ ಭಾಗಿಯಾಗಿಲ್ಲ ಎಂಬ ಸುಳಿವು ಪೊಲೀಸರಿಗೆ ಸಿಕ್ಕಿದೆ. ಅಲ್ಲದೆ […]

ಸಿಸಿಬಿ ದಾಳಿ ಬಳಿಕ ಬಯಲಾಗುತ್ತಿದೆ ರೋಚಕ ಕಹಾನಿ, ರಾಗಿಣಿ ವಶಕ್ಕೆ ಪಡೆಯುವ ಸಾಧ್ಯತೆ
ಆಯೇಷಾ ಬಾನು
|

Updated on: Sep 04, 2020 | 8:36 AM

Share

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಇದೆ ಎಂಬ ಆರೋಪ ಪ್ರಕರಣಕ್ಕೆ ಸಂಬಂಧಿಸಿ ರಾಗಿಣಿ ದ್ವಿವೇದಿಯವರ ಯಲಹಂಕದ ಅನನ್ಯ ಅಪಾರ್ಟ್‌ಮೆಂಟ್‌ನಲ್ಲಿರುವ ಫ್ಲ್ಯಾಟ್ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದಾಳಿ ಬಳಿಕ ಮನೆ ಜಾಲಾಡುತ್ತಿದ್ದಾರೆ.

ನಿನ್ನೆ ಮನೆಯಲ್ಲೇ ಇರಲಿಲ್ಲ ರಾಗಿಣಿ: ನಿನ್ನೆ ದಿನ ಪೂರ್ತಿ ರಾಗಿಣಿ ತನ್ನ ಮನೆಯಲ್ಲಿ ಇರಲಿಲ್ಲ. ಪ್ಲಾಸ್ಮಾ ದಾನ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತೇನೆ ಎಂದು ನಟಿ ರಾಗಿಣಿ ಪೊಲೀಸರಿಗೆ ತಿಳಿಸಿದ್ರು. ಆದ್ರೆ ಅವರು ಯಾವ ಕಾರ್ಯಕ್ರಮದಲ್ಲೂ ಭಾಗಿಯಾಗಿಲ್ಲ ಎಂಬ ಸುಳಿವು ಪೊಲೀಸರಿಗೆ ಸಿಕ್ಕಿದೆ. ಅಲ್ಲದೆ ವಾಟ್ಸಪ್ ಅನ್ ಇನ್ಸ್ಟಾಲ್ ಮಾಡಿ ಹೊಸ ಮೊಬೈಲ್​ಗೆ ಇನ್ಸ್ಟಾಲ್ ಮಾಡಿಕೊಂಡಿದ್ದಾರೆ. ಹೀಗಾಗಿ ಸಿಸಿಬಿ ಪೊಲೀಸರಿಗೆ ಅನುಮಾನ ಹೆಚ್ಚಾಗಿತ್ತು. ನಿನ್ನೆ ಸಂಜೆ ನ್ಯಾಯಾಲಯದ ಮೂಲಕ ಸರ್ಚ್ ವಾರೆಂಟ್ ಪಡೆದು ದಾಳಿ ನಡೆಸಿದ್ದಾರೆ.

ತಡರಾತ್ರಿ ಹನ್ನೆರಡು ಗಂಟೆಗೆ ರಾಗಿಣಿ ಮನೆಗೆ ವಾಪಸ್ ಆಗಿದ್ರು. ಈ ಬಗ್ಗೆ ಸಿಸಿಬಿ ಅಧಿಕಾರಿಗಳು ನಿಗಾ ಇಟ್ಟಿದ್ದರು. ಈ ಎಲ್ಲಾ ಮಾಹಿತಿ ಹಾಗೂ ಅನುಮಾನಗಳಿಂದಾಗಿ ಬೆಳಗ್ಗೆ ಸಿಸಿಬಿ ಮಹಿಳಾ ಇನ್ಸ್ಪೆಕ್ಟರ್ ಅಂಜುಮಾಲಾ ನಾಯಕ್ ನೇತ್ರತ್ವದಲ್ಲಿ ದಾಳಿ ನಡೆಸಲಾಗಿದೆ. ಒಟ್ಟು ಆರು ಸಿಸಿಬಿ ಪೊಲೀಸರ ಪೈಕಿ ನಾಲ್ವರು ಮಹಿಳಾ ಪೊಲೀಸರು ಇಬ್ಬರು ಪುರುಷರು ಭಾಗಿಯಾಗಿದ್ದಾರೆ. ಮನೆಯನ್ನ ಮಹಿಳಾ ಅಧಿಕಾರಿಗಳು ಸರ್ಚ್ ಮಾಡುತ್ತಿದ್ದಾರೆ. ಇಬ್ಬರು ಪುರುಷ ಪೊಲೀಸರು ಮನೆ ಬಾಗಿಲಲ್ಲೆ ಇದ್ದಾರೆ. ಮನೆಯಲ್ಲಿ ರಾಗಿಣಿ ಒಬ್ಬರೆ ಇದ್ದಾಗಲೇ ದಾಳಿ ಮಾಡಲಾಗಿದೆ. ನಟಿ ರಾಗಿಣಿ ಸಿಸಿಬಿ ಪೊಲೀಸರಿಗೆ ಅವರ ಕಾರ್ಯಾಚರಣೆಗೆ ಸಹಕಾರ ನೀಡುತ್ತಿದ್ದಾರೆ. ಕಾರ್ಯಾಚರಣೆ ಬಳಿಕ ರಾಗಿಣಿಯನ್ನ ಸಿಸಿಬಿಗೆ ಕರೆತರುವ ಸಾಧ್ಯತೆ ಇದೆ.

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು