AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೆಲೆಬ್ರಿಟಿ ಕ್ರಿಕೆಟ್ ಲೀಗ್​ನಲ್ಲಿ ಫಿನಾಲೆ ಪ್ರವೇಶಿಸಿದ ಕಿಚ್ಚನ ‘ಕರ್ನಾಟಕ ಬುಲ್ಡೋಜರ್ಸ್’

ಈ ಮೊದಲು 2013 ಹಾಗೂ 2014ರಲ್ಲಿ ಸುದೀಪ್ ನೇತೃತ್ವದ ಕರ್ನಾಟಕ ಬುಲ್ಡೋಜರ್ಸ್ ಟೀಂ ಸಿಸಿಎಲ್ ಟ್ರೋಫಿ ಗೆದ್ದಿತ್ತು. ಈಗ ಮತ್ತೊಮ್ಮೆ ಗೆಲ್ಲುವ ಕನಸು ಕಾಣುತ್ತಿದೆ. ಫಿನಾಲೆಯಲ್ಲಿ ಯಾವ ತಂಡ ಆಡಲಿದೆ ಎಂಬುದು ಇಂದು ಗೊತ್ತಾಗಲಿದೆ.

ಸೆಲೆಬ್ರಿಟಿ ಕ್ರಿಕೆಟ್ ಲೀಗ್​ನಲ್ಲಿ ಫಿನಾಲೆ ಪ್ರವೇಶಿಸಿದ ಕಿಚ್ಚನ ‘ಕರ್ನಾಟಕ ಬುಲ್ಡೋಜರ್ಸ್’
ಸುದೀಪ್
ರಾಜೇಶ್ ದುಗ್ಗುಮನೆ
|

Updated on:Mar 16, 2024 | 2:49 PM

Share

ಸಿಸಿಎಲ್​ (CCL)  2024ರ ಕ್ವಾಲಿಫೈಯರ್ 1 ಮ್ಯಾಚ್​ನಲ್ಲಿ ಕಿಚ್ಚ ಸುದೀಪ್ ಅವರ ‘ಕರ್ನಾಟಕ ಬುಲ್ಡೋಜರ್ಸ್’ ತಂಡ ಫಿನಾಲೆ ತಲುಪಿದೆ. ಬೆಂಗಾಲ್ ಟೈಗರ್ಸ್ ತಂಡವನ್ನು 8 ವಿಕೆಟ್​ಗಳಲ್ಲಿ ಮಣಿಸಿ ಫಿನಾಲೆಗೆ ಟಿಕೆಟ್ ಪಡೆದಿದೆ. ಮಾರ್ಚ್ 25ರಂದು ಫಿನಾಲೆ ನಡೆಯಲಿದೆ. ಎಲ್ಲರೂ ಸುದೀಪ್ ತಂಡಕ್ಕೆ ಆಲ್ ದಿ ಬೆಸ್ಟ್ ಹೇಳುತ್ತಿದ್ದಾರೆ. ಫಿನಾಲೆಯಲ್ಲಿ ಯಾವ ರೀತಿಯ ಸೆಣೆಸಾಟ ನಡೆಯಲಿದೆ ಎನ್ನುವ ಕುತೂಹಲ ಮೂಡಿದೆ.

ತಿರುವನಂತಪುರದ ಗ್ರೀನ್‌ಫೀಲ್ಡ್​ನಲ್ಲಿ ಕರ್ನಾಟಕ ಬುಲ್ಡೋಜರ್ಸ್ ಹಾಗೂ ಬೆಂಗಾಲ್ ಟೈಗರ್ಸ್ ಮಧ್ಯೆ ಪಂದ್ಯ ನಡೆಯಿತು. ಈ ಪಂದ್ಯದಲ್ಲಿ ನಮ್ಮ ಕರ್ನಾಟಕದ ತಂಡ 8 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಸಿಸಿಎಲ್​ನ ಫಾರ್ಮ್ಯಾಟ್ ಬೇರೆ ರೀತಿಯಲ್ಲಿ ಇದೆ. 10 ಓವರ್​ಗಳ ನಾಲ್ಕು ಇನ್ನಿಂಗ್ಸ್ ಇರುತ್ತದೆ. ಈ ಪೈಕಿ ಎರಡೂ ತಂಡಗಳು ಮೊದಲು 10 ಓವರ್ ಆಡಬೇಕು. ಎರಡನೇ ಇನ್ನಿಂಗ್ಸ್​​ನಲ್ಲಿ ಮತ್ತೆ ತಲಾ 10 ಓವರ್ ಆಡಬೇಕು.

ಮೊದಲು ಬ್ಯಾಟ್ ಮಾಡಿದ ಬೆಂಗಾಲ್ ಟೈಗರ್ಸ್ 86ರನ್​ಗೆ 3 ವಿಕೆಟ್ ಕಳೆದುಕೊಂಡಿತು. ಈ ಸಣ್ಣ ಮೊತ್ತವನ್ನು ಬೆನ್ನು ಹತ್ತಿದ ಸುದೀಪ್ ಪಡೆ 114ರನ್​ಗೆ 4 ವಿಕೆಟ್ ಕಳೆದುಕೊಂಡಿತು. ಈ ಮೂಲಕ 28ರನ್​ಗಳ ಮುನ್ನಡೆ ಸಾಧಿಸಿತು. ಎರಡನೇ ಇನ್ನಿಂಗ್ಸ್​ನಲ್ಲಿ ಬೆಂಗಾಲ್ ಟೈಗರ್ಸ್ ಒಳ್ಳೆಯ ಪ್ರದರ್ಶನ ನೀಡಿತು.

ಎರಡನೇ ಇನ್ನಿಂಗ್ಸ್ ಆಡಿದ ಬೆಂಗಾಲ್ ಟೈಗರ್ಸ್ 127ರನ್​ಗೆ 6 ವಿಕೆಟ್ ಕಳೆದುಕೊಂಡಿತು. ಈ ಮೂಲಕ 100 ರನ್​ಗಳ ಟಾರ್ಗೆಟ್​ನ ಕರ್ನಾಟಕ ಬುಲ್ಡೋಜರ್ಸ್ ತಂಡ ಬೆನ್ನು ಹತ್ತಿತು. ಉತ್ತಮ ಆರಂಭ ಕಂಡ ತಂಡ ಇನ್ನೂ ಎರಡು ಓವರ್ ಇರುವಾಗಲೇ ಎರಡು ವಿಕೆಟ್ ನಷ್ಟಕ್ಕೆ 100 ರನ್ ಗಳಿಸಿತು. ಈ ಮೂಲಕ ಫಿನಾಲೆ ಕನಸನ್ನು ನನಸಾಗಿಸಿಕೊಂಡಿತು .

ಇದನ್ನೂ ಓದಿ: CCL 2024: ಸಿಸಿಎಲ್​ನಲ್ಲಿ ಸತತ ಮೂರನೇ ಅರ್ಧಶತಕ ಸಿಡಿಸಿದ ಡಾರ್ಲಿಂಗ್ ಕೃಷ್ಣ..!

ಈ ಮೊದಲು 2013 ಹಾಗೂ 2014ರಲ್ಲಿ ಸುದೀಪ್ ನೇತೃತ್ವದ ಕರ್ನಾಟಕ ಬುಲ್ಡೋಜರ್ಸ್ ಟೀಂ ಸಿಸಿಎಲ್ ಟ್ರೋಫಿ ಗೆದ್ದಿತ್ತು. ಈಗ ಮತ್ತೊಮ್ಮೆ ಗೆಲ್ಲುವ ಕನಸು ಕಾಣುತ್ತಿದೆ. ಫಿನಾಲೆಯಲ್ಲಿ ಯಾವ ತಂಡ ಆಡಲಿದೆ ಎಂಬುದು ಇಂದು ಗೊತ್ತಾಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 9:51 am, Sat, 16 March 24

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ