AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಸಿಕೆ ಪ್ರಮಾಣಪತ್ರ ಕಡ್ಡಾಯವಲ್ಲ ಎಂದು ಸುಪ್ರೀಂಗೆ ತಿಳಿಸಿದ ಕೇಂದ್ರ; ಗೊಂದಲದಲ್ಲಿವೆ ಚಿತ್ರಮಂದಿರಗಳು

Vaccination Certificates: ಇತ್ತೀಚೆಗೆ ಕೇಂದ್ರ ಸರ್ಕಾರ ಲಸಿಕೆ ಪ್ರಮಾಣಪತ್ರ ಕಡ್ಡಾಯ ಎಂದು ತಿಳಿಸಿಲ್ಲ ಎಂದು ಸುಪ್ರೀಂಗೆ ಸ್ಪಷ್ಟಪಡಿಸಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ರೂಪಿಸಿದ್ದ ಲಸಿಕೆ ಪ್ರಮಾಣಪತ್ರ ಕಡ್ಡಾಯ ಎಂಬ ನಿಯಮ ಗೊಂದಲ ಹುಟ್ಟುಹಾಕಿದೆ.

ಲಸಿಕೆ ಪ್ರಮಾಣಪತ್ರ ಕಡ್ಡಾಯವಲ್ಲ ಎಂದು ಸುಪ್ರೀಂಗೆ ತಿಳಿಸಿದ ಕೇಂದ್ರ; ಗೊಂದಲದಲ್ಲಿವೆ ಚಿತ್ರಮಂದಿರಗಳು
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Jan 18, 2022 | 2:57 PM

Share

ಕರ್ನಾಟಕದಲ್ಲಿ ಪ್ರಸ್ತುತ ಜನವರಿ 4ರಂದು ಸರ್ಕಾರ ಘೋಷಿಸಿದ್ದ ಕೊರೊನಾ ಮಾರ್ಗಸೂಚಿಗಳು ಮುಂದುವರಿಕೆಯಾಗುತ್ತಿವೆ. ಇದರ ಅನ್ವಯ ಮಾಲ್, ಚಿತ್ರಮಂದಿರಗಳು 50:50 ಪ್ರತಿಶತ ಸಾಮರ್ಥ್ಯದೊಂದಿಗೆ ಕಾರ್ಯ ನಿರ್ವಹಿಸಬಹುದಾಗಿದೆ. ಆದರೆ ಇಲ್ಲಿಗೆ ಭೇಟಿ ನೀಡುವವರು ಲಸಿಕೆ ಕಡ್ಡಾಯವಾಗಿ ಪಡೆದಿರಬೇಕು ಎಂದು ಸರ್ಕಾರ ತಿಳಿಸಿದೆ. ಆದರೆ ಸರ್ಕಾರದ ಈ ನಿಯಮ ಸದ್ಯ ಎಲ್ಲರಲ್ಲೂ ಗೊಂದಲ ಹುಟ್ಟುಹಾಕಿದೆ. ಕಾರಣ, ಕೇಂದ್ರ ಸರ್ಕಾರ ಇತ್ತೀಚೆಗೆ ಸುಪ್ರೀಂ ಕೋರ್ಟ್​ನಲ್ಲಿ ಕೊರೊನಾ ಲಸಿಕೆ ಪ್ರಮಾಣಪತ್ರ ಕಡ್ಡಾಯವಲ್ಲ ಎಂದು ಹೇಳಿಕೆ ನೀಡಿತ್ತು. ಸುಪ್ರೀಂನಲ್ಲಿ ಕೇಂದ್ರದ ಈ ಹೇಳಿಕೆ ಜನರನ್ನು ಗೊಂದಲಕ್ಕೆ ತಳ್ಳಿದೆ. ಅಲ್ಲದೇ ಚಿತ್ರ ಪ್ರದರ್ಶಕರನ್ನು ಇಕ್ಕಟ್ಟಿಗೆ ಸಿಲುಕುವಂತೆ ಮಾಡಿದೆ.

ಕೇಂದ್ರದ ಹೇಳಿಕೆಯಿಂದ ಆಗುವ ಸಮಸ್ಯೆಯೇನು? ಕೇಂದ್ರದ ಈ ಹೇಳಿಕೆಯಿಂದ ಜನರಿಗೆ ಹಾಗೂ ಚಿತ್ರ ಪ್ರದರ್ಶಕರಿಗೆ ಗೊಂದಲ ಉಂಟಾಗಿದೆ. ಕಾರಣ, ಜನರು ಪ್ರವೇಶ ಪಡೆಯಲು ಈಗ ಇರುವ ಮಾರ್ಗಸೂಚಿಗಳ ಪ್ರಕಾರ ಲಸಿಕೆ ಪಡೆದ ಪ್ರಮಾಣಪತ್ರ ತೋರಸಬೇಕು. ಆದರೆ ಅದನ್ನು ಕಡ್ಡಾಯಗೊಳಿಸಿಲ್ಲ ಎಂದು ಕೇಂದ್ರ ಸುಪ್ರೀಂನಲ್ಲಿ ತಿಳಿಸಿದೆ. ಇದರಿಂದ ಜನರು ಚಿತ್ರಮಂದಿರದ ಒಳಗೆ ತೆರಳುವಾಗ ಪ್ರಮಾಣಪತ್ರ ತೋರಿಸಲು ಹಿಂದೇಟು ಹಾಕಬಹುದು ಎನ್ನುವುದು ಪ್ರದರ್ಶಕರ ಅಭಿಪ್ರಾಯ.

ಈಗಾಗಲೇ ಲಸಿಕಾ ಪ್ರಮಾಣಪತ್ರದ ನಿಬಂಧನೆಗಳನ್ನು ಪಾಲಿಸುವಾಗ ಕಷ್ಟ ಆಗುತ್ತಿತ್ತು. ಪ್ರಸ್ತುತ, ಕೇಂದ್ರ ಸರ್ಕಾರದ ಈ ಹೇಳಿಕೆಯಿಂದ ಇನ್ನು ಮುಂದೆ ಪ್ರೇಕ್ಷಕರು ಪ್ರಮಾಣ ಪತ್ರ ತೋರಿಸಲು ಹಿಂದೇಟು ಹಾಕಿ ಪ್ರದರ್ಶಕರನ್ನೇ ಪ್ರಶ್ನಿಸಬಹುದು. ಆದ್ದರಿಂದ ಸರ್ಕಾರದ ಈ ಭಿನ್ನ ನಿಲುವಿನ ಬಗ್ಗೆ ಗೊಂದಲವುಂಟಾಗಿದೆ. ಈ ಬಗ್ಗೆ ರಾಜ್ಯ ಸರ್ಕಾರದ ಉನ್ನತ ಅಧಿಕಾರಿಗಳ ಸ್ಪಷ್ಟೀಕರಣ ಬೇಕಾಗಿದೆ ಎಂದು ಕರ್ನಾಟಕ ಚಿತ್ರ ಪ್ರದರ್ಶಕರ ಸಂಘ ಹೇಳಿದೆ.

ಇದನ್ನೂ ಓದಿ:

ಚಿತ್ರರಂಗಕ್ಕೆ ಕೊರೊನಾ ಹೊಡೆತ; ಕೇವಲ ಬಾಲಿವುಡ್​ಗೇ ಸಾವಿರಾರು ಕೋಟಿ ನಷ್ಟ: ಇಲ್ಲಿದೆ ಪೂರ್ಣ ಲೆಕ್ಕಾಚಾರ

ಚಿತ್ರಮಂದಿರ, ಮಾಲ್, ಬಾರ್, ಪಬ್​ಗಳಿಗೆ 50:50 ನಿಯಮ ಜಾರಿ; ಕೊರೊನಾ ಮಾರ್ಗಸೂಚಿಯ ವಿವರ ಇಲ್ಲಿದೆ

Follow Us
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!