AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಸಿಕೆ ಪ್ರಮಾಣಪತ್ರ ಕಡ್ಡಾಯವಲ್ಲ ಎಂದು ಸುಪ್ರೀಂಗೆ ತಿಳಿಸಿದ ಕೇಂದ್ರ; ಗೊಂದಲದಲ್ಲಿವೆ ಚಿತ್ರಮಂದಿರಗಳು

Vaccination Certificates: ಇತ್ತೀಚೆಗೆ ಕೇಂದ್ರ ಸರ್ಕಾರ ಲಸಿಕೆ ಪ್ರಮಾಣಪತ್ರ ಕಡ್ಡಾಯ ಎಂದು ತಿಳಿಸಿಲ್ಲ ಎಂದು ಸುಪ್ರೀಂಗೆ ಸ್ಪಷ್ಟಪಡಿಸಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ರೂಪಿಸಿದ್ದ ಲಸಿಕೆ ಪ್ರಮಾಣಪತ್ರ ಕಡ್ಡಾಯ ಎಂಬ ನಿಯಮ ಗೊಂದಲ ಹುಟ್ಟುಹಾಕಿದೆ.

ಲಸಿಕೆ ಪ್ರಮಾಣಪತ್ರ ಕಡ್ಡಾಯವಲ್ಲ ಎಂದು ಸುಪ್ರೀಂಗೆ ತಿಳಿಸಿದ ಕೇಂದ್ರ; ಗೊಂದಲದಲ್ಲಿವೆ ಚಿತ್ರಮಂದಿರಗಳು
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: shivaprasad.hs

Updated on: Jan 18, 2022 | 2:57 PM

ಕರ್ನಾಟಕದಲ್ಲಿ ಪ್ರಸ್ತುತ ಜನವರಿ 4ರಂದು ಸರ್ಕಾರ ಘೋಷಿಸಿದ್ದ ಕೊರೊನಾ ಮಾರ್ಗಸೂಚಿಗಳು ಮುಂದುವರಿಕೆಯಾಗುತ್ತಿವೆ. ಇದರ ಅನ್ವಯ ಮಾಲ್, ಚಿತ್ರಮಂದಿರಗಳು 50:50 ಪ್ರತಿಶತ ಸಾಮರ್ಥ್ಯದೊಂದಿಗೆ ಕಾರ್ಯ ನಿರ್ವಹಿಸಬಹುದಾಗಿದೆ. ಆದರೆ ಇಲ್ಲಿಗೆ ಭೇಟಿ ನೀಡುವವರು ಲಸಿಕೆ ಕಡ್ಡಾಯವಾಗಿ ಪಡೆದಿರಬೇಕು ಎಂದು ಸರ್ಕಾರ ತಿಳಿಸಿದೆ. ಆದರೆ ಸರ್ಕಾರದ ಈ ನಿಯಮ ಸದ್ಯ ಎಲ್ಲರಲ್ಲೂ ಗೊಂದಲ ಹುಟ್ಟುಹಾಕಿದೆ. ಕಾರಣ, ಕೇಂದ್ರ ಸರ್ಕಾರ ಇತ್ತೀಚೆಗೆ ಸುಪ್ರೀಂ ಕೋರ್ಟ್​ನಲ್ಲಿ ಕೊರೊನಾ ಲಸಿಕೆ ಪ್ರಮಾಣಪತ್ರ ಕಡ್ಡಾಯವಲ್ಲ ಎಂದು ಹೇಳಿಕೆ ನೀಡಿತ್ತು. ಸುಪ್ರೀಂನಲ್ಲಿ ಕೇಂದ್ರದ ಈ ಹೇಳಿಕೆ ಜನರನ್ನು ಗೊಂದಲಕ್ಕೆ ತಳ್ಳಿದೆ. ಅಲ್ಲದೇ ಚಿತ್ರ ಪ್ರದರ್ಶಕರನ್ನು ಇಕ್ಕಟ್ಟಿಗೆ ಸಿಲುಕುವಂತೆ ಮಾಡಿದೆ.

ಕೇಂದ್ರದ ಹೇಳಿಕೆಯಿಂದ ಆಗುವ ಸಮಸ್ಯೆಯೇನು? ಕೇಂದ್ರದ ಈ ಹೇಳಿಕೆಯಿಂದ ಜನರಿಗೆ ಹಾಗೂ ಚಿತ್ರ ಪ್ರದರ್ಶಕರಿಗೆ ಗೊಂದಲ ಉಂಟಾಗಿದೆ. ಕಾರಣ, ಜನರು ಪ್ರವೇಶ ಪಡೆಯಲು ಈಗ ಇರುವ ಮಾರ್ಗಸೂಚಿಗಳ ಪ್ರಕಾರ ಲಸಿಕೆ ಪಡೆದ ಪ್ರಮಾಣಪತ್ರ ತೋರಸಬೇಕು. ಆದರೆ ಅದನ್ನು ಕಡ್ಡಾಯಗೊಳಿಸಿಲ್ಲ ಎಂದು ಕೇಂದ್ರ ಸುಪ್ರೀಂನಲ್ಲಿ ತಿಳಿಸಿದೆ. ಇದರಿಂದ ಜನರು ಚಿತ್ರಮಂದಿರದ ಒಳಗೆ ತೆರಳುವಾಗ ಪ್ರಮಾಣಪತ್ರ ತೋರಿಸಲು ಹಿಂದೇಟು ಹಾಕಬಹುದು ಎನ್ನುವುದು ಪ್ರದರ್ಶಕರ ಅಭಿಪ್ರಾಯ.

ಈಗಾಗಲೇ ಲಸಿಕಾ ಪ್ರಮಾಣಪತ್ರದ ನಿಬಂಧನೆಗಳನ್ನು ಪಾಲಿಸುವಾಗ ಕಷ್ಟ ಆಗುತ್ತಿತ್ತು. ಪ್ರಸ್ತುತ, ಕೇಂದ್ರ ಸರ್ಕಾರದ ಈ ಹೇಳಿಕೆಯಿಂದ ಇನ್ನು ಮುಂದೆ ಪ್ರೇಕ್ಷಕರು ಪ್ರಮಾಣ ಪತ್ರ ತೋರಿಸಲು ಹಿಂದೇಟು ಹಾಕಿ ಪ್ರದರ್ಶಕರನ್ನೇ ಪ್ರಶ್ನಿಸಬಹುದು. ಆದ್ದರಿಂದ ಸರ್ಕಾರದ ಈ ಭಿನ್ನ ನಿಲುವಿನ ಬಗ್ಗೆ ಗೊಂದಲವುಂಟಾಗಿದೆ. ಈ ಬಗ್ಗೆ ರಾಜ್ಯ ಸರ್ಕಾರದ ಉನ್ನತ ಅಧಿಕಾರಿಗಳ ಸ್ಪಷ್ಟೀಕರಣ ಬೇಕಾಗಿದೆ ಎಂದು ಕರ್ನಾಟಕ ಚಿತ್ರ ಪ್ರದರ್ಶಕರ ಸಂಘ ಹೇಳಿದೆ.

ಇದನ್ನೂ ಓದಿ:

ಚಿತ್ರರಂಗಕ್ಕೆ ಕೊರೊನಾ ಹೊಡೆತ; ಕೇವಲ ಬಾಲಿವುಡ್​ಗೇ ಸಾವಿರಾರು ಕೋಟಿ ನಷ್ಟ: ಇಲ್ಲಿದೆ ಪೂರ್ಣ ಲೆಕ್ಕಾಚಾರ

ಚಿತ್ರಮಂದಿರ, ಮಾಲ್, ಬಾರ್, ಪಬ್​ಗಳಿಗೆ 50:50 ನಿಯಮ ಜಾರಿ; ಕೊರೊನಾ ಮಾರ್ಗಸೂಚಿಯ ವಿವರ ಇಲ್ಲಿದೆ

ವಿಧಾನಸೌಧದ ಎದುರು ಯೋಗ ಮಾಡಿದ ನಟಿ ಸಾನ್ಯಾ ಅಯ್ಯರ್
ವಿಧಾನಸೌಧದ ಎದುರು ಯೋಗ ಮಾಡಿದ ನಟಿ ಸಾನ್ಯಾ ಅಯ್ಯರ್
VIDEO: ರೂಟ್ ಅತ್ಯುತ್ತಮ ಫೀಲ್ಡಿಂಗ್: ಭಾರತಕ್ಕೆ ಬಿಟ್ಟಿಯಾಗಿ ಸಿಕ್ತು 5 ರನ್
VIDEO: ರೂಟ್ ಅತ್ಯುತ್ತಮ ಫೀಲ್ಡಿಂಗ್: ಭಾರತಕ್ಕೆ ಬಿಟ್ಟಿಯಾಗಿ ಸಿಕ್ತು 5 ರನ್
ಹೆಣ್ಮಕ್ಕಳಲ್ಲಿ ಕಾಡುವ ಈ ಎರಡು ರೋಗಕ್ಕೆ ಯೋಗವೇ ಮುಕ್ತಿ, ಅದು ಹೇಗೆ?
ಹೆಣ್ಮಕ್ಕಳಲ್ಲಿ ಕಾಡುವ ಈ ಎರಡು ರೋಗಕ್ಕೆ ಯೋಗವೇ ಮುಕ್ತಿ, ಅದು ಹೇಗೆ?
ಕಷ್ಟಗಳನ್ನ ದೇವರೇ ಕಲ್ಪಿಸುವುದಾ ಅಥವಾ ಸ್ವಯಂಕೃತ ತಪ್ಪಾ?
ಕಷ್ಟಗಳನ್ನ ದೇವರೇ ಕಲ್ಪಿಸುವುದಾ ಅಥವಾ ಸ್ವಯಂಕೃತ ತಪ್ಪಾ?
Daily horoscope: ಇಂದು ಯಾವೆಲ್ಲಾ ರಾಶಿಗಳ ‘ಯೋಗ’ಬಲ ಹೇಗಿದೆ ತಿಳಿಯಿರಿ
Daily horoscope: ಇಂದು ಯಾವೆಲ್ಲಾ ರಾಶಿಗಳ ‘ಯೋಗ’ಬಲ ಹೇಗಿದೆ ತಿಳಿಯಿರಿ
Yoga Live: ವಿಶಾಖಪಟ್ಟಣಂನಲ್ಲಿ ಯೋಗ ದಿನಾಚರಣೆ: ಪ್ರಧಾನಿ ಮೋದಿ ಭಾಗಿ
Yoga Live: ವಿಶಾಖಪಟ್ಟಣಂನಲ್ಲಿ ಯೋಗ ದಿನಾಚರಣೆ: ಪ್ರಧಾನಿ ಮೋದಿ ಭಾಗಿ
ದೃಷ್ಟಿಹೀನ ಮಕ್ಕಳು ಹುಟ್ಟುಹಬ್ಬದ ಶುಭಾಶಯ ಕೋರಿದಾಗ ಕಣ್ಣೀರಿಟ್ಟ ರಾಷ್ಟ್ರಪತಿ
ದೃಷ್ಟಿಹೀನ ಮಕ್ಕಳು ಹುಟ್ಟುಹಬ್ಬದ ಶುಭಾಶಯ ಕೋರಿದಾಗ ಕಣ್ಣೀರಿಟ್ಟ ರಾಷ್ಟ್ರಪತಿ
‘ಪಪ್ಪಿ’ ಸಿನಿಮಾಗೆ 50 ದಿನದ ಸಂಭ್ರಮ; ವೇದಿಕೆಯಲ್ಲಿ ಬಾಲ ನಟರ ಡೈಲಾಗ್
‘ಪಪ್ಪಿ’ ಸಿನಿಮಾಗೆ 50 ದಿನದ ಸಂಭ್ರಮ; ವೇದಿಕೆಯಲ್ಲಿ ಬಾಲ ನಟರ ಡೈಲಾಗ್
ಸಿಎಂ ಮತ್ತು ಡಿಸಿಎಂ ಜೊತೆ ಹಲವಾರು ಸಚಿವರು ನಾಳೆ ತುಮಕೂರು ಆಗಮನ
ಸಿಎಂ ಮತ್ತು ಡಿಸಿಎಂ ಜೊತೆ ಹಲವಾರು ಸಚಿವರು ನಾಳೆ ತುಮಕೂರು ಆಗಮನ
ಬೆನ್ನು ನೋವಿಗೆ ಕಾರಣವೇನು? ಯೋಗದ ಮೂಲಕ ಪರಿಹರಿಸಿಕೊಳ್ಳುವುದು ಹೇಗೆ?
ಬೆನ್ನು ನೋವಿಗೆ ಕಾರಣವೇನು? ಯೋಗದ ಮೂಲಕ ಪರಿಹರಿಸಿಕೊಳ್ಳುವುದು ಹೇಗೆ?