‘ಕಾಟೇರ’ ಸಿನಿಮಾ ನೋಡಿ ಮೆಚ್ಚಿಕೊಂಡ ಪ್ರಲ್ಹಾದ್​ ಜೋಶಿ; ಕೇಂದ್ರ ಸಚಿವರ ವಿಮರ್ಶೆ ಏನು?

ಹುಬ್ಬಳ್ಳಿಯಲ್ಲಿ ಪ್ರಲ್ಹಾದ್​ ಜೋಶಿ ಅವರು ‘ಕಾಟೇರ’ ಸಿನಿಮಾವನ್ನು ನೋಡಿದ್ದಾರೆ. ಅವರ ಜೊತೆ ಶಾಸಕ ಮಹೇಶ್​ ಟೆಂಗಿನಕಾಯಿ ಕೂಡ ಸಾಥ್​ ನೀಡಿದ್ದಾರೆ. ದರ್ಶನ್​ ನಟನೆ, ಸಿನಿಮಾದಲ್ಲಿನ ಸಂದೇಶ ಸೇರಿದಂತೆ ಅನೇಕ ವಿಚಾರಗಳನ್ನು ಪ್ರಲ್ಹಾದ್​ ಜೋಶಿ ಹೊಗಳಿದ್ದಾರೆ. ಕೇಂದ್ರ ಸಚಿವರಿಂದ ಮೆಚ್ಚುಗೆ ಸಿಕ್ಕಿದ್ದಕ್ಕೆ ದರ್ಶನ್​ ಫ್ಯಾನ್ಸ್​ ಖುಷಿ ಆಗಿದ್ದಾರೆ.

‘ಕಾಟೇರ’ ಸಿನಿಮಾ ನೋಡಿ ಮೆಚ್ಚಿಕೊಂಡ ಪ್ರಲ್ಹಾದ್​ ಜೋಶಿ; ಕೇಂದ್ರ ಸಚಿವರ ವಿಮರ್ಶೆ ಏನು?
ಮಹೇಶ್​ ಟೆಂಗಿನಕಾಯಿ, ಪ್ರಲ್ಹಾದ್​ ಜೋಶಿ
Follow us
|

Updated on: Dec 31, 2023 | 1:57 PM

ರಾಜ್ಯದ ನೂರಾರು ಚಿತ್ರಮಂದಿರಗಳಲ್ಲಿ ಕಾಟೇರ’ ಸಿನಿಮಾ (Kaatera Movie) ಸದ್ದು ಮಾಡುತ್ತಿದೆ. ನಟ ದರ್ಶನ್​ (Darshan) ಅವರ ಅಭಿನಯಕ್ಕೆ ಫ್ಯಾನ್ಸ್​ ಫಿದಾ ಆಗಿದ್ದಾರೆ. ನಿರ್ದೇಶಕ ತರುಣ್​ ಸುಧೀರ್​ ಅವರು ಈ ಸಿನಿಮಾದಲ್ಲಿ ಸಾಮಾಜಿಕ ಸಂದೇಶ ನೀಡಿದ್ದಾರೆ. ಜನ ಸಾಮಾನ್ಯರು ಮಾತ್ರವಲ್ಲದೇ ರಾಜಕಾರಣಿಗಳು ಕೂಡ ‘ಕಾಟೇರ’ ಸಿನಿಮಾ ಬಗ್ಗೆ ಮೆಚ್ಚುಗೆಯ ಮಾತುಗಳನ್ನು ಆಡುತ್ತಿದ್ದಾರೆ. ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್​ ಜೋಶಿ (Pralhad Joshi) ಕೂಡ ಇಂದು (ಡಿ.31) ‘ಕಾಟೇರ’ ಸಿನಿಮಾ ವೀಕ್ಷಿಸಿ ತಮ್ಮ ಅನಿಸಿಕೆ ತಿಳಿಸಿದ್ದಾರೆ. ಈ ಚಿತ್ರ ಅವರಿಗೆ ತುಂಬ ಇಷ್ಟವಾಗಿದೆ.

ಹುಬ್ಬಳ್ಳಿಯಲ್ಲಿ ಪ್ರಲ್ಹಾದ್​ ಜೋಶಿ ಅವರು ‘ಕಾಟೇರ’ ಸಿನಿಮಾವನ್ನು ನೋಡಿದ್ದಾರೆ. ಅವರ ಜೊತೆ ಶಾಸಕ ಮಹೇಶ್​ ಟೆಂಗಿನಕಾಯಿ ಕೂಡ ಸಾಥ್​ ನೀಡಿದ್ದಾರೆ. ದರ್ಶನ್​ ಅವರ ನಟನೆ, ಸಿನಿಮಾದಲ್ಲಿನ ಸಂದೇಶ ಸೇರಿದಂತೆ ಅನೇಕ ವಿಚಾರಗಳನ್ನು ಪ್ರಲ್ಹಾದ್​ ಜೋಶಿ ಅವರು ಹೊಗಳಿದ್ದಾರೆ. ಕೇಂದ್ರ ಸಚಿವರಿಂದ ಮೆಚ್ಚುಗೆ ಸಿಕ್ಕಿದ್ದಕ್ಕೆ ದರ್ಶನ್​ ಫ್ಯಾನ್ಸ್​ ಖುಷಿ ಆಗಿದ್ದಾರೆ.

‘ಚಂದನವನದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ, ರಾಕ್‌ಲೈನ್ ವೆಂಕಟೇಶ್​ ಅವರ ನಿರ್ಮಾಣದಲ್ಲಿ ತರುಣ್ ಸುಧೀರ್ ಅವರ ನಿರ್ದೇಶನದಲ್ಲಿ ಮೂಡಿಬಂದ ಕಾಟೇರ ಚಲನಚಿತ್ರವನ್ನು ಹುಬ್ಬಳ್ಳಿಯಲ್ಲಿ ವೀಕ್ಷಿಸಿದೆನು. ರೈತರಿಗೆ ಪ್ರತಿಯೊಬ್ಬರೂ ನೀಡಬೇಕಾದ ಪ್ರಾಮುಖ್ಯತೆ, ಸಮಾಜದಲ್ಲಿ ಸರ್ವರನ್ನೂ ಸಮಾನವಾಗಿ ಕಾಣಬೇಕೆನ್ನುವ ಸಂದೇಶವನ್ನು ಚಲನಚಿತ್ರದ ಮೂಲಕ ಅಚ್ಚುಕಟ್ಟಾಗಿ ಅದ್ಭುತವಾಗಿ ತೋರಿಸಲಾಗಿದೆ’ ಎಂದು ಪ್ರಲ್ಹಾದ್​ ಜೋಶಿ ವಿಮರ್ಶೆ ತಿಳಿಸಿದ್ದಾರೆ.

ಇದನ್ನೂ ಓದಿ: 2 ದಿನಕ್ಕೆ 37 ಕೋಟಿ ರೂಪಾಯಿ ಗಳಿಸಿದ ‘ಕಾಟೇರ’; ಜೋರಾಗಿದೆ ದರ್ಶನ್​ ಅಬ್ಬರ

‘ದರ್ಶನ್ ಅವರು ಅದ್ಭುತ ನಟನೆ ಮೂಲಕ ಅಭಿಮಾನಿಗಳನ್ನು, ಚಲನಚಿತ್ರ ಪ್ರಿಯರನ್ನು ಮತ್ತೊಮ್ಮೆ ರಂಜಿಸುವುದರ ಜೊತೆಗೆ ಹೊಸ ಸಂದೇಶವನ್ನು ಸಾರಿದ್ದಾರೆ. ಚಲನಚಿತ್ರ ಯಶಸ್ಸು ಕಾಣಲಿ ಎಂದು ಕಾಟೇರ ತಂಡಕ್ಕೆ ಶುಭ ಹಾರೈಸುತ್ತೇನೆ’ ಎಂದು ಪ್ರಲ್ಹಾದ್​ ಜೋಶಿ ಟ್ವೀಟ್ ಮಾಡಿದ್ದಾರೆ. ಈ ಸಿನಿಮಾದಲ್ಲಿ ಆರಾಧನಾ ರಾಮ್​, ಶ್ರುತಿ, ಜಗಪತಿ ಬಾಬು, ಅವಿನಾಶ್, ವಿನೋದ್​ ಆಳ್ವಾ, ವೈಜನಾಥ ಬೀರಾದರ ಮುಂತಾದ ಕಲಾವಿದರು ನಟಿಸಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ