AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೆಡಿ’ ಸಿನಿಮಾ ಅಶ್ಲೀಲ ಹಾಡು ಬ್ಯಾನ್ ಮಾಡಿದ ಕೇಂದ್ರ ಸರ್ಕಾರ; ಲೋಕಸಭೆಯಲ್ಲಿ ಘೋಷಣೆ

ನಿರ್ದೇಶಕ ಜೋಗಿ ಪ್ರೇಮ್ ಬರೆದ ‘ಸರ್ಸೆ ನಿನ್ನ ಸರೆಗ’ ಹಾಡನ್ನು ಕೇಂದ್ರ ಸರ್ಕಾರ ಬ್ಯಾನ್ ಮಾಡಿದೆ. ಲೋಕಸಭೆಯಲ್ಲಿ ಈ ಬಗ್ಗೆ ಚರ್ಚೆ ಆಗಿದ್ದು, ಅಧಿಕೃವಾಗಿ ಬ್ಯಾನ್ ಮಾಡುವಂತೆ ಸೂಚಿಸಲಾಗಿದೆ. ಇದರಿಂದಾಗಿ ‘ಕೆಡಿ’ ಸಿನಿಮಾಗೆ ತೀವ್ರ ಹಿನ್ನಡೆ ಆದಂತಾಗಿದೆ. ಆ ಕುರಿತು ಇಲ್ಲಿದೆ ಹೆಚ್ಚಿನ ಮಾಹಿತಿ..

‘ಕೆಡಿ’ ಸಿನಿಮಾ ಅಶ್ಲೀಲ ಹಾಡು ಬ್ಯಾನ್ ಮಾಡಿದ ಕೇಂದ್ರ ಸರ್ಕಾರ; ಲೋಕಸಭೆಯಲ್ಲಿ ಘೋಷಣೆ
Jogi Prem, Sanjay Dutt, Nora Fatehi
ಮದನ್​ ಕುಮಾರ್​
|

Updated on: Mar 18, 2026 | 5:48 PM

Share

ಸಂಜಯ್ ದತ್ ಮತ್ತು ನೋರಾ ಫತೇಹಿ ನಟಿಸಿದ ‘ಸರ್ಕೆ ಚುನರ್ ತೇರಿ’ (Sarke Chunar Teri Sarke) ಹಾಡಿನ ವಿರುದ್ಧ ದೇಶಾದ್ಯಂತ ವ್ಯಕ್ತವಾದ ತೀವ್ರ ಆಕ್ರೋಶದ ಬೆನ್ನಲ್ಲೇ, ಕೇಂದ್ರ ಸರ್ಕಾರ ಈ ಹಾಡನ್ನು ಅಧಿಕೃತವಾಗಿ ನಿಷೇಧಿಸಿದೆ. ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅಶ್ವಿನಿ ವೈಷ್ಣವ್ ಅವರು ಲೋಕಸಭೆಯಲ್ಲಿ ಈ ನಿರ್ಧಾರವನ್ನು ಪ್ರಕಟಿಸಿದ್ದಾರೆ. ಧ್ರುವ ಸರ್ಜಾ ನಟನೆಯ, ಜೋಗಿ ಪ್ರೇಮ್ ನಿರ್ದೇಶನದ ‘ಕೆಡಿ’ (KD) ಸಿನಿಮಾದ ಈ ಹಾಡಿನಿಂದ ಇಡೀ ಕನ್ನಡ ಚಿತ್ರರಂಗಕ್ಕೆ ಮುಜುಗರ ಆದಂತಾಗಿದೆ.

ಸಮಾಜವಾದಿ ಪಕ್ಷದ ಸಂಸದ ಆನಂದ್ ಬಡೋರಿಯಾ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವ ಅಶ್ವಿನಿ ವೈಷ್ಣವ್, ‘ಈ ಹಾಡನ್ನು ಈಗಾಗಲೇ ನಿಷೇಧಿಸಲಾಗಿದೆ. ಭಾರತದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯವು ಸಂಪೂರ್ಣ ಪ್ರಶ್ನಾತೀತವಲ್ಲ. ಸಂವಿಧಾನದ ರಚನೆಕಾರರು ವಿಧಿಸಿರುವ ಸಮಂಜಸವಾದ ನಿರ್ಬಂಧಗಳನ್ನು ಪ್ರತಿಯೊಬ್ಬರೂ ಪಾಲಿಸಬೇಕು’ ಎಂದು ತಿಳಿಸಿದರು. ಸಂವಿಧಾನದ ವಿಧಿ 19(2) ಉಲ್ಲೇಖಿಸಿದ ಸಚಿವರು, ಸಾರ್ವಜನಿಕ ಸುವ್ಯವಸ್ಥೆ, ಸಭ್ಯತೆ ಮತ್ತು ನೈತಿಕತೆಗೆ ಧಕ್ಕೆ ಬಂದಾಗ ಇಂತಹ ನಿರ್ಬಂಧಗಳನ್ನು ಹೇರಲು ಸರ್ಕಾರಕ್ಕೆ ಅಧಿಕಾರವಿದೆ ಎಂದು ಹೇಳಿದರು.

ಡಿಜಿಟಲ್ ಮಾಧ್ಯಮಗಳ ಮೂಲಕ ವಿಷಯಗಳು ವೇಗವಾಗಿ ಹರಡುತ್ತಿರುವ ಇಂದಿನ ದಿನಗಳಲ್ಲಿ ಸಮಾಜದ ಹಿತದೃಷ್ಟಿಯಿಂದ ಇಂತಹ ಕ್ರಮಗಳು ಅನಿವಾರ್ಯ ಎಂದು ಸರ್ಕಾರ ಅಭಿಪ್ರಾಯಪಟ್ಟಿದೆ. ‘ಸಮಾಜದ ರಕ್ಷಣೆಗಾಗಿ, ವಿಶೇಷವಾಗಿ ಮಹಿಳೆಯರು, ಮಕ್ಕಳು ಮತ್ತು ವಂಚಿತ ವರ್ಗಗಳ ಗೌರವ ಕಾಪಾಡಲು ಯಾವುದೇ ಕಠಿಣ ಕ್ರಮ ತೆಗೆದುಕೊಳ್ಳಲು ಸರ್ಕಾರ ಸಿದ್ಧವಿದೆ’ ಎಂದು ವೈಷ್ಣವ್ ಅವರು ಲೋಕಸಭೆಯಲ್ಲಿ ತಿಳಿಸಿದರು.

ಜೋಗಿ ಪ್ರೇಮ್ ನಿರ್ದೇಶನ ಮಾಡಿರುವ ‘ಕೆಡಿ’ ಸಿನಿಮಾದ ‘ಸರ್ಸೆ ನಿನ್ನ ಸೆರಗ ಸರ್ಸೆ’ ಹಾಡು ಬಿಡುಗಡೆಯಾದ ತಕ್ಷಣವೇ ಅದರ ಸಾಹಿತ್ಯ ಮತ್ತು ದೃಶ್ಯಗಳು ಅಶ್ಲೀಲತೆಯಿಂದ ಕೂಡಿವೆ ಎಂಬ ಆರೋಪ ಕೇಳಿಬಂದಿತ್ತು. ಇದು ಮಹಿಳೆಯರನ್ನು ಕೀಳಾಗಿ ಚಿತ್ರಿಸುತ್ತದೆ ಎಂದು ಹಲವರು ಆಕ್ಷೇಪ ವ್ಯಕ್ತಪಡಿಸಿದ್ದರು. ಕರ್ನಾಟಕ ಮತ್ತು ಹರಿಯಾಣ ಮಹಿಳಾ ಆಯೋಗಗಳು ಈ ಹಾಡಿನ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ದೂರು ನೀಡಿದ್ದವು.

ಇದನ್ನೂ ಓದಿ: ಪ್ರೇಮ್​​ಗೆ ಆ ದಿನವೇ ಎಚ್ಚರಿಕೆ ನೀಡಿದ್ದೆ: ಅಶ್ಲೀಲ ಹಾಡಿನ ವಿವಾದಕ್ಕೆ ನೋರಾ ಫತೇಹಿ ತಿರುಗೇಟು

ನಟ ರವಿ ಕಿಶನ್, ನಟಿ ಕಂಗನಾ ರಣಾವತ್, ಗಾಯಕ ಅರ್ಮಾನ್ ಮಲಿಕ್ ಸೇರಿದಂತೆ ಅನೇಕ ಸೆಲೆಬ್ರಿಟಿಗಳು ಕೂಡ ಹಾಡಿನ ಸಾಹಿತ್ಯ ಆಕ್ಷೇಪಾರ್ಹವಾಗಿದೆ ಎಂದು ಸಾರ್ವಜನಿಕವಾಗಿ ಖಂಡಿಸಿದ್ದರು. ಈ ಹಾಡಿನ ಬಗ್ಗೆ ಪ್ರತಿಕ್ರಿಯಿಸಿರುವ ನಟಿ ನೋರಾ ಫತೇಹಿ ಅವರು ಚಿತ್ರತಂಡವೇ ಇದಕ್ಕೆಲ್ಲ ಹೊಣೆ ಎಂದು ಹೇಳಿದ್ದಾರೆ. ಈ ಎಲ್ಲ ಬೆಳವಣಿಗೆಗಳು ‘ಕೆಡಿ’ ಸಿನಿಮಾಗೆ ಅಪಖ್ಯಾತಿ ತಂದಿವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಕೋಗಿಲು ನಿರಾಶ್ರಿತರಿಗೆ ಯುಗಾದಿ, ರಂಜಾನ್ ಗಿಫ್ಟ್: ಹಕ್ಕುಪತ್ರ ವಿತರಣೆ
ಕೋಗಿಲು ನಿರಾಶ್ರಿತರಿಗೆ ಯುಗಾದಿ, ರಂಜಾನ್ ಗಿಫ್ಟ್: ಹಕ್ಕುಪತ್ರ ವಿತರಣೆ
ಎಂಥಾ ಕಾಲ ಬಂತಪ್ಪ: ಪೊಲೀಸ್​​ ಭದ್ರತೆಯಲ್ಲಿ LPG ಸಿಲಿಂಡರ್​​ಗಳ ವಿತರಣೆ!
ಎಂಥಾ ಕಾಲ ಬಂತಪ್ಪ: ಪೊಲೀಸ್​​ ಭದ್ರತೆಯಲ್ಲಿ LPG ಸಿಲಿಂಡರ್​​ಗಳ ವಿತರಣೆ!
ಡಿಜೆ ನಿಷೇಧಿಸುವಂತೆ ಲಾಡ್ ಆಗ್ರಹ: ಆಝಾನ್ ಬ್ಯಾನ್ ಮಾಡಿ ಎಂದು ಬಿಜೆಪಿ ಶಾಸಕ!
ಡಿಜೆ ನಿಷೇಧಿಸುವಂತೆ ಲಾಡ್ ಆಗ್ರಹ: ಆಝಾನ್ ಬ್ಯಾನ್ ಮಾಡಿ ಎಂದು ಬಿಜೆಪಿ ಶಾಸಕ!
ಐಪಿಎಲ್ ಟಿಕೆಟ್ ವಂಚನೆ ನಡೆಯುತ್ತಿದೆ ಎಚ್ಚರ
ಐಪಿಎಲ್ ಟಿಕೆಟ್ ವಂಚನೆ ನಡೆಯುತ್ತಿದೆ ಎಚ್ಚರ
ಪ್ರಜ್ವಲ್ ರೇವಣ್ಣ ಪ್ರಕರಣ: ಪ್ರೀತಂ ಗೌಡ, ಶ್ರೇಯಸ್ ಪಟೇಲ್ ಆಪ್ತರಿಗೆ ರಿಲೀಫ್
ಪ್ರಜ್ವಲ್ ರೇವಣ್ಣ ಪ್ರಕರಣ: ಪ್ರೀತಂ ಗೌಡ, ಶ್ರೇಯಸ್ ಪಟೇಲ್ ಆಪ್ತರಿಗೆ ರಿಲೀಫ್
ಪ್ರಜ್ವಲ್ ಪ್ರಕರಣ: ಪ್ರಮುಖರ ಹೆಸರೇ ಚಾರ್ಜ್​​ಶೀಟ್​​ನಿಂದ ಮಿಸ್ಸಿಂಗ್​​?
ಪ್ರಜ್ವಲ್ ಪ್ರಕರಣ: ಪ್ರಮುಖರ ಹೆಸರೇ ಚಾರ್ಜ್​​ಶೀಟ್​​ನಿಂದ ಮಿಸ್ಸಿಂಗ್​​?
ರಾಯಚೂರು: ಭಾರೀ ಅಗ್ನಿ ಅವಘಡಕ್ಕೆ 300ಕ್ಕೂ ಹೆಚ್ಚು ಚೀಲ ಭತ್ತ ಭಸ್ಮ
ರಾಯಚೂರು: ಭಾರೀ ಅಗ್ನಿ ಅವಘಡಕ್ಕೆ 300ಕ್ಕೂ ಹೆಚ್ಚು ಚೀಲ ಭತ್ತ ಭಸ್ಮ
ವಿಡಿಯೋ: ಆಂಬ್ಯುಲೆನ್ಸ್‌ನಲ್ಲೇ ಬಂದು SSLC ಪರೀಕ್ಷೆ ಬರೆದ ವಿದ್ಯಾರ್ಥಿನಿ!
ವಿಡಿಯೋ: ಆಂಬ್ಯುಲೆನ್ಸ್‌ನಲ್ಲೇ ಬಂದು SSLC ಪರೀಕ್ಷೆ ಬರೆದ ವಿದ್ಯಾರ್ಥಿನಿ!
ಯುಗಾದಿ ವರ್ಷ ಭವಿಷ್ಯ;ಗ್ರಹಗಳ ಸಂಚಾರ ಮತ್ತು ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಯುಗಾದಿ ವರ್ಷ ಭವಿಷ್ಯ;ಗ್ರಹಗಳ ಸಂಚಾರ ಮತ್ತು ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಕರ್ನಾಟಕ-ತಮಿಳುನಾಡು ಗಡಿಯಲ್ಲಿ ಭರ್ಜರಿ ಕಾರ್ಯಾಚರಣೆ: 2 ಕೋಟಿ ರೂ. ಹಣ ಸೀಜ್
ಕರ್ನಾಟಕ-ತಮಿಳುನಾಡು ಗಡಿಯಲ್ಲಿ ಭರ್ಜರಿ ಕಾರ್ಯಾಚರಣೆ: 2 ಕೋಟಿ ರೂ. ಹಣ ಸೀಜ್