AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Singri Gowda: ಸೆಂಚುರಿ ಗೌಡ ನಿಧನ; ‘ತಿಥಿ’ ನಟ ಗಡ್ಡಪ್ಪ ಸಾವಿನ ಬೆನ್ನಲ್ಲೇ ಸಿಂಗ್ರಿ ಗೌಡ ನಿಧನ

Century Gowda Death: 'ತಿಥಿ' ಸಿನಿಮಾ ಖ್ಯಾತಿಯ ಗಡ್ಡಪ್ಪ (ನವೆಂಬರ್ 12) ಮತ್ತು ಸೆಂಚುರಿ ಗೌಡ (ಜನವರಿ 4) ನಿಧನರಾಗಿದ್ದಾರೆ. 100 ವರ್ಷಕ್ಕೂ ಹೆಚ್ಚು ವಯಸ್ಸಿನವರಾಗಿದ್ದ ಸೆಂಚುರಿ ಗೌಡ ಅನಾರೋಗ್ಯದಿಂದ ಬಳಲುತ್ತಿದ್ದರು. ಗಡ್ಡಪ್ಪ ಅವರ ಸಾವಿನ ಕೇವಲ ಒಂದೂವರೆ ತಿಂಗಳ ನಂತರ ಸೆಂಚುರಿ ಗೌಡ ಅಗಲಿದ್ದಾರೆ.

Singri Gowda: ಸೆಂಚುರಿ ಗೌಡ ನಿಧನ; ‘ತಿಥಿ’ ನಟ ಗಡ್ಡಪ್ಪ ಸಾವಿನ ಬೆನ್ನಲ್ಲೇ ಸಿಂಗ್ರಿ ಗೌಡ ನಿಧನ
ಗಡ್ಡಪ್ಪ-ಸೆಂಚುರಿ ಗೌಡ
ರಾಜೇಶ್ ದುಗ್ಗುಮನೆ
| Edited By: |

Updated on:Jan 05, 2026 | 11:09 AM

Share

‘ತಿಥಿ’ ಸಿನಿಮಾ (Thithi Movie) ಖ್ಯಾತಿ ಗಡ್ಡಪ್ಪ ಪಾತ್ರಧಾರಿ ಚನ್ನೇಗೌಡ ಅವರು 2025r ನವೆಂಬರ್ 12ರಂದು ನಿಧನ ಹೊಂದಿದ್ದರು. ಈ ಸಿನಿಮಾದಲ್ಲಿ ಸೆಂಚುರಿ ಗೌಡ ಪಾತ್ರ ಮಾಡಿದ್ದ ಸಿಂಗ್ರಿ ಗೌಡ ಕೂಡ ಈಗ ನಿಧನರಾಗಿದ್ದಾರೆ. ಅವರಿಗೆ ನೂರು ವರ್ಷಕ್ಕೂ ಹೆಚ್ಚು ವಯಸ್ಸಾಗಿತ್ತು. ಅವರು ಹಲವು ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಜನವರಿ 4ರ ರಾತ್ರಿ ಅವರು ಕೊನೆಯುಸಿರು ಎಳೆದರು.

ಸೆಂಚುರಿ ಗೌಡರು ಪಾಂಡವಪುರ ತಾಲೂಕಿನ ಸಿಂಗ್ರೀಗೌಡನಕೊಪ್ಪಲಿನವರು. ‘ತಿಥಿ’ ಸಿನಿಮಾದಲ್ಲಿ ಅವರು ಮಾಡಿದ ಸೆಂಚುರಿ ಗೌಡ ಪಾತ್ರ ಗಮನ ಸೆಳೆದಿತ್ತು. ಈ ಸಿನಿಮಾ ಕೊಂಚ ಜನಪ್ರಿಯತೆ ನೀಡಿತ್ತು. ಇದರಿಂದ ಬೇರೆ ಸಿನಿಮಾ ಆಫರ್​​ಗಳು ಬಂದವು. ‘ತಿಥಿ’ ಸಿನಿಮಾ (2015) ರಿಲೀಸ್ ಆಗಿ ಹಿಟ್ ಆದಾಗ, ಆ ಊರಿಗೆ ಬರುತ್ತಿದ್ದ ಕೆಲವರು ಸಿಂಗ್ರಿಗೌಡ ಅವರನ್ನು ಭೇಟಿ ಆಗಿ, ಫೋಟೋ ತೆಗೆಸಿಕೊಂಡು ಹೋಗುತ್ತಿದ್ದರು.

‘ತಿಥಿ’ ಸಿನಿಮಾ ನಿರ್ದೇಶಕರು ಸಿಂಗ್ರಿಗೌಡ ಅವರನ್ನು ಆಯ್ಕೆ ಮಾಡಿದ್ದೇ ಒಂದು ಅಚ್ಚರಿಯ ಘಟನೆ. ಸಿಂಗ್ರಿಗೌಡ ಅಣ್ಣ ಸತ್ತು ಹೋಗಿದ್ದರಂತೆ. ಅವರ ತಿಥಿಗೆ ‘ತಿಥಿ’ ಸಿನಿಮಾ ನಿರ್ದೇಶಕರು ಬಂದಿದ್ದರು. ಈ ವೇಳೆ ಸಿನಿಮಾ ಸೆಂಚುರಿ ಗೌಡ ಇಷ್ಟ ಆಗಿ ಸಿನಿಮಾ ಆಫರ್ ಕೊಟ್ಟರು. ಸಿನಿಮಾದಲ್ಲಿ ಸೆಂಚುರಿ ಗೌಡ ಪಾತ್ರ ಮಾಡಿದ್ದರು. ಈ ಚಿತ್ರಕ್ಕಾಗಿ ಅವರಿಗೆ 20 ಸಾವಿರ ಸಂಭಾವನೆ ಸಿಕ್ಕಿತ್ತು ಎನ್ನಾಗಿದೆ. ಅನೇಕ ಚಿತ್ರಗಳಲ್ಲಿ ಸಿಂಗ್ರಿಗೌಡ ನಟಿಸಿದ್ದಾರೆ. ಕೆಲವು ಸಿನಿಮಾ ತಂಡದವರು ಹಣ ಕೊಡದೆ ಅವರಿಗೆ ಮೋಸ ಮಾಡಿದ್ದಾರಂತೆ.

ಇದನ್ನೂ ಓದಿ: ‘ತಿಥಿ’ ಸಿನಿಮಾ ಖ್ಯಾತಿಯ ಗಡ್ಡಪ್ಪ ನಿಧನ; 89ನೇ ವಯಸ್ಸಿಗೆ ಕೊನೆಯುಸಿರು

ಗಡ್ಡಪ್ಪ ನಿಧನ

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಗಡ್ಡಪ್ಪ ಅವರು ಕಳೆದ ವರ್ಷ ನವೆಂಬರ್ 12ರಂದು ನಿಧನ ಹೊಂದಿದ್ದರು. ಇವರು ಮಂಡ್ಯ ತಾಲೂಕಿನ ನೊದೆ ಕೊಪ್ಪಲು ಗ್ರಾಮದವರು. ಗಡ್ಡಪ್ಪ ಅವರಿಗೆ ಕೆಲ ವರ್ಷಗಳ ಹಿಂದೆ ಪಾರ್ಶ್ವ ವಾಯು ಆಗಿತ್ತು. ಇದರಿಂದ ಚೇತರಿಸಿಕೊಳ್ಳಲು ಅವರಿಗೆ ಸಾಧ್ಯವಾಗಿರಲಿಲ್ಲ. ಚಿಕಿತ್ಸೆಗೂ ಅವರ ಬಳಿ ಹಣ ಇರಲಿಲ್ಲ. ಇಷ್ಟೇ ಅಲ್ಲದೆ ಹೃದಯ ಕಾಯಿಲೆ, ಕೆಮ್ಮು ಮತ್ತು ಉಬ್ಬಸ, ಶ್ರವಣದೋಷ ಮತ್ತು ಇತರ ವಯಸ್ಸಿಗೆ ಸಂಬಂಧಿಸಿದ ಸಮಸ್ಯೆಗಳು ಇದ್ದವು. ಅವರು ನಿಧನ ಹೊಂದಿ ಕೇವಲ ಒಂದೂವರೆ ತಿಂಗಳಿಗೆ ಸೆಂಚುರಿ ಗೌಡ ನಿಧನ ಹೊಂದಿದ್ದು ನಿಜಕ್ಕೂ ಬೇಸರದ ವಿಷಯ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:10 am, Mon, 5 January 26

ಅರಸು ದಾಖಲೆ ಬ್ರೇಕ್ ಮಾಡಲಿರುವ ಸಿಎಂ ಸಿದ್ದರಾಮಯ್ಯಗೆ ​​ಜೋಶಿ ಟಕ್ಕರ್
ಅರಸು ದಾಖಲೆ ಬ್ರೇಕ್ ಮಾಡಲಿರುವ ಸಿಎಂ ಸಿದ್ದರಾಮಯ್ಯಗೆ ​​ಜೋಶಿ ಟಕ್ಕರ್
ಡ್ರ್ಯಾಗನ್ ಬೋಟಿಂಗ್​​: ಮೈಸೂರಿಗೆ ಬರುವವರು ಇದನ್ನು ಮಿಸ್ ಮಾಡ್ಬೇಡಿ
ಡ್ರ್ಯಾಗನ್ ಬೋಟಿಂಗ್​​: ಮೈಸೂರಿಗೆ ಬರುವವರು ಇದನ್ನು ಮಿಸ್ ಮಾಡ್ಬೇಡಿ
ಆಂಧ್ರದ ಶ್ರೀಕಾಕುಳಂನಲ್ಲಿ ರೈಲಿನ ಮೇಲೆ ಹತ್ತಿದ ಯುವಕನ ಹುಚ್ಚಾಟ
ಆಂಧ್ರದ ಶ್ರೀಕಾಕುಳಂನಲ್ಲಿ ರೈಲಿನ ಮೇಲೆ ಹತ್ತಿದ ಯುವಕನ ಹುಚ್ಚಾಟ
ಚಿಕ್ಕಮಗಳೂರು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: ವಿಡಿಯೋ ನೋಡಿ
ಚಿಕ್ಕಮಗಳೂರು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: ವಿಡಿಯೋ ನೋಡಿ
ಕುಡಿದ ಮತ್ತಿನಲ್ಲಿ ಮಗನನ್ನೇ ಕಡಿದ ಅಪ್ಪ, ಛಿದ್ರವಾದ ಕುಟುಂಬ
ಕುಡಿದ ಮತ್ತಿನಲ್ಲಿ ಮಗನನ್ನೇ ಕಡಿದ ಅಪ್ಪ, ಛಿದ್ರವಾದ ಕುಟುಂಬ
ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ
ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ