AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾವಿನ ದವಡೆಗೆ ನೂಕುವ ಕ್ರಿಮಿ ಬದುಕಿನ ಮಹತ್ವ ತಿಳಿಸುತ್ತದೆ; ಚೈತ್ರಾ ಕೋಟೂರ್​ ಕಂಬ್ಯಾಕ್​!

ನಿನ್ನನ್ನು ನಂಬಿ ದೊಡ್ಡ ತಪ್ಪು ಮಾಡಿದೆ ಎಂದು ನಾಗಾರ್ಜುನ್​ ಅವರ ಬಗ್ಗೆ ಅಸಮಾಧಾನ ಹೊರ ಹಾಕಿ, ಅಳುತ್ತಿರುವ ವಿಡಿಯೋ ಒಂದನ್ನು ಪೋಸ್ಟ್​ ಮಾಡಿದ್ದರು. ಈಗ ಈ ಎಲ್ಲ ನೋವುಗಳಿಂದ ಅವರು ಹೊರ ಬಂದಂತೆ ಕಾಣುತ್ತಿದೆ.

ಸಾವಿನ ದವಡೆಗೆ ನೂಕುವ ಕ್ರಿಮಿ ಬದುಕಿನ ಮಹತ್ವ ತಿಳಿಸುತ್ತದೆ; ಚೈತ್ರಾ ಕೋಟೂರ್​ ಕಂಬ್ಯಾಕ್​!
ಚೈತ್ರಾ ಕೋಟೂರ್​
ರಾಜೇಶ್ ದುಗ್ಗುಮನೆ
| Updated By: ಮದನ್​ ಕುಮಾರ್​|

Updated on: Apr 18, 2021 | 3:48 PM

Share

ಬಿಗ್ ಬಾಸ್ ಖ್ಯಾತಿಯ ಚೈತ್ರಾ ಕೋಟೂರ್ ಮದುವೆ ಆದ ದಿನವೇ ಪೊಲೀಸ್​ ಠಾಣೆ ಮೆಟ್ಟಿಲೇರಿದ್ದು. ಅವರ ವೈವಾಹಿಕ ಬದುಕಿನಲ್ಲಿ ಸುನಾಮಿಯೇ ಎದ್ದಿತ್ತು. ಇದರಿಂದ ಮನನೊಂದು ಕೋಲಾರ ನಗರದ ಕುರುಬರ ಪೇಟೆ ಮನೆಯಲ್ಲಿ ಅವರು ಆತ್ಮಹತ್ಯೆಗೆ ಕೂಡ ಯತ್ನಿಸಿದ್ದರು. ಈಗ ಚೈತ್ರಾ ಈ ನೋವನ್ನು ಮರೆತು ಕಂಬ್ಯಾಕ್​ ಮಾಡಿದಂತೆ ಕಾಣುತ್ತಿದೆ. ಅವರು ಹಾಕಿಕೊಂಡ ಹೊಸ ಸ್ಟೇಟಸ್​ ಇದಕ್ಕೆ ಸಾಕ್ಷಿ. ಬಿಗ್​ ಬಾಸ್ ಮಾಜಿ​ ಸ್ಪರ್ಧಿ ಚೈತ್ರಾ ಕೋಟೂರ್​ ಅವರು ಕನ್​ಸ್ಟ್ರಕ್ಷನ್ ಮತ್ತು ರಿಯಲ್​ ಎಸ್ಟೇಟ್​​ ಕ್ಷೇತ್ರದಲ್ಲಿ ತೊಡಗಿಕೊಂಡಿರುವ ನಾಗಾರ್ಜುನ್​ ಎಂಬುವವರ ಜೊತೆ ಮಾ.28ರ ಬೆಳಗ್ಗೆ ಸಿಂಪಲ್ ಆಗಿ ಮದುವೆ ಆಗಿದ್ದರು. ಆದರೆ ವಿವಾಹವಾಗಿ ಕೆಲವೇ ಗಂಟೆಗಳು ಕಳೆಯುವುದರೊಳಗೆ ನಾಗಾರ್ಜುನ್​ ಮನೆಯವರು ತಕರಾರು ತೆಗೆದಿದ್ದರು. ನಂತರ ಈ ಪ್ರಕರಣ ಪೊಲೀಸ್​ ಠಾಣೆ ಮೆಟ್ಟಿಲೇರಿತ್ತು.

ಈ ಘಟನೆಯಿಂದ ತುಂಬಾನೇ ನೊಂದಿದ್ದ ಚೈತ್ರಾ ಆತ್ಮಹತ್ಯೆಗೆ ಪ್ರಯತ್ನಿಸಿದ್ದರು. ನಂತರ ನಿನ್ನನ್ನು ನಂಬಿ ದೊಡ್ಡ ತಪ್ಪು ಮಾಡಿದೆ ಎಂದು ನಾಗಾರ್ಜುನ್​ ಅವರ ಬಗ್ಗೆ ಅಸಮಾಧಾನ ಹೊರ ಹಾಕಿ, ಅಳುತ್ತಿರುವ ವಿಡಿಯೋ ಒಂದನ್ನು ಪೋಸ್ಟ್​ ಮಾಡಿದ್ದರು. ಈಗ ಈ ಎಲ್ಲ ನೋವುಗಳಿಂದ ಅವರು ಹೊರ ಬಂದಂತೆ ಕಾಣುತ್ತಿದೆ.

ಚೈತ್ರಾ ನಗುತ್ತಿರುವ ಹೊಸ ಫೋಟೋ ಒಂದನ್ನು ಪೋಸ್ಟ್​ ಮಾಡಿದ್ದಾರೆ. ಈ ಫೋಟೋಗೆ, ಬದುಕು ಮತ್ತೆ ಕೈಬೀಸಿ ಕರೆದಾಗ, ಎರಡೆರಡು ಸ್ಯಾನಿಟೈಸರ್ ಬಾಟಲಿಗಳನ್ನು ಹೆಚ್ಚಾಗಿ ಇರಿಸಿಕೊಂಡು ಮುಂದೆ ಸಾಗಿ. ದೇಹ ಸೇರಿ ಸಾವಿನ ದವಡೆಗೆ ನೂಕುವ ಕ್ರಿಮಿಯು, ಬದುಕಿನ ಮಹತ್ವವನ್ನೂ ತಿಳಿಸುವಲ್ಲಿ ಯಶಸ್ವಿಯಾಗುತ್ತದೆ. ನಿಮ್ಮೆಲ್ಲರ ಪ್ರೀತಿ ಕಾಳಜಿಗೆ ಆಭಾರಿ ಎಂದು ಬರೆದುಕೊಂಡಿದ್ದಾರೆ. ಈ ಮೂಲಕ ಅವರು ಕಂಬ್ಯಾಕ್​ ಮಾಡಿದಂತೆ ಕಾಣುತ್ತಿದೆ.

ಇದನ್ನೂ ಓದಿ: Chaithra Kotoor: ಮದುವೆಯಾದ ಬೆನ್ನಲ್ಲೇ ಆತ್ಮಹತ್ಯೆಗೆ ಪ್ರಯತ್ನಿಸಿದ ಬಿಗ್ ಬಾಸ್ ಖ್ಯಾತಿಯ ಚೈತ್ರಾ ಕೋಟೂರ್

Chaithra Kotoor: ನಿನ್ನನ್ನು ನಂಬಿ ದೊಡ್ಡ ತಪ್ಪು ಮಾಡಿದೆ; ಚೈತ್ರಾ ಕೋಟೂರ್ ಕಣ್ಣೀರಿಟ್ಟ ವಿಡಿಯೋ ವೈರಲ್​

ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ
ಧ್ರುವಂತ್ ಮೇಲೆ ಬುಕ್ ಬರೆಯುತ್ತಾರಂತೆ ಗಿಲ್ಲಿ: ಸೀರಿಯಸ್ ಪ್ರಶ್ನೆಗೆ ಕಾಮಿಡಿ
ಧ್ರುವಂತ್ ಮೇಲೆ ಬುಕ್ ಬರೆಯುತ್ತಾರಂತೆ ಗಿಲ್ಲಿ: ಸೀರಿಯಸ್ ಪ್ರಶ್ನೆಗೆ ಕಾಮಿಡಿ
ರಷ್ಯಾ ಅಧ್ಯಕ್ಷ ಪುಟಿನ್​​ ಸ್ವಾಗತಕ್ಕೆ ವಿಮಾನ ನಿಲ್ದಾಣಕ್ಕೆ ತೆರಳಿದ ಮೋದಿ
ರಷ್ಯಾ ಅಧ್ಯಕ್ಷ ಪುಟಿನ್​​ ಸ್ವಾಗತಕ್ಕೆ ವಿಮಾನ ನಿಲ್ದಾಣಕ್ಕೆ ತೆರಳಿದ ಮೋದಿ