AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chaithra Kotoor: ನಿನ್ನನ್ನು ನಂಬಿ ದೊಡ್ಡ ತಪ್ಪು ಮಾಡಿದೆ; ಚೈತ್ರಾ ಕೋಟೂರ್ ಕಣ್ಣೀರಿಟ್ಟ ವಿಡಿಯೋ ವೈರಲ್​

ನಿನ್ನ ಬಳಿ ಅನೇಕ ಬಾರಿ ಮದುವೆ ವಿಚಾರ ತೆಗೆದಿದ್ದೆ. ನಿನಗೆ ಮುದವೆ ಆಗುವ ಇಚ್ಛೆ ಇಲ್ಲದಿದ್ದರೆ ಅಂದೇ ಹೊರಟು ಹೋಗಿಬಿಡಬೇಕಿತ್ತು. ಮತ್ತೇಕೆ ನನ್ನ ಜೀವನದಲ್ಲಿ ಬಂದೆ ಎಂದು ಅರ್ಜುನ್​​ಗೆ ವಿಡಿಯೋದಲ್ಲಿ ಚೈತ್ರಾ ಪ್ರಶ್ನೆ ಮಾಡಿದ್ದಾರೆ.

Chaithra Kotoor: ನಿನ್ನನ್ನು ನಂಬಿ ದೊಡ್ಡ ತಪ್ಪು ಮಾಡಿದೆ; ಚೈತ್ರಾ ಕೋಟೂರ್ ಕಣ್ಣೀರಿಟ್ಟ ವಿಡಿಯೋ ವೈರಲ್​
ಚೈತ್ರಾ ಕೊಟೂರ್​
ರಾಜೇಶ್ ದುಗ್ಗುಮನೆ
|

Updated on:Apr 08, 2021 | 7:53 PM

Share

ನಟಿ ಹಾಗೂ ಬಿಗ್​ ಬಾಸ್​ ಸ್ಪರ್ಧಿ ಚೈತ್ರಾ ಕೋಟೂರ್​ ಅವರು ಇಂದು (ಏಪ್ರಿಲ್​ 8) ಆತ್ಮಹತ್ಯೆಗೆ ಪ್ರಯತ್ನಿಸಿದ್ದರು. ಇದಾದ ಬೆನ್ನಲ್ಲೇ ಅವರು ವಿಡಿಯೋ ಒಂದನ್ನು ಮಾಡಿ ಹರಿಬಿಟ್ಟಿದ್ದಾರೆ. ಈ ವಿಡಿಯೋದಲ್ಲಿ ಮದುವೆಯಾದ ಅರ್ಜುನ್​ ಬಳಿ ತಮ್ಮ ಕಷ್ಟ ತೋಡಿಕೊಂಡಿದ್ದಾರೆ. ನಮ್ಮಿಬ್ಬರ ವಿಷಯದಲ್ಲಿ ಎಲ್ಲರೂ ಆಟ ಆಡುತ್ತಾ ಇದ್ದಾರೆ. ನಾನು ಹೇಗೆ ಬದುಕಲಿ? ನಿನ್ನನ್ನು ನಂಬಿದ್ದು, ನಿನ್ನನ್ನು ಪ್ರೀತಿಸಿದ್ದು, ನಿನ್ನನ್ನು ಮದುವೆ ಆಗಿದ್ದು ನಾನು ಮಾಡಿದ ದೊಡ್ಡ ತಪ್ಪು. ನನ್ನ ಜೀವನವೇ ಹಾಳಾಗಿ ಹೋಯಿತಲ್ಲ ಅರ್ಜುನ್​. ನಿನ್ನ ಹತ್ತಿರ ಏನಿದೆ? ಎಷ್ಟು ದುಡ್ಡಿದೆ? ನಿನಗೆ ಹಣ ಎಲ್ಲಿಂದ ಬರುತ್ತದೆ ಎಂದು ಯಾವಗಲಾದರೂ ಕೇಳಿದ್ದೀನಾ? ನಿನಗೆ ಸಾಲ ಇದ್ದರೆ ತೀರಿಸೋಣ, ಜೊತೆಗಿರೋಣಎಂದು ಹೇಳಿದ್ದೆ ಅಲ್ಲವೇ ಎಂದು ಅವರು ಬಿಕ್ಕಿ ಬಿಕ್ಕಿ ಅತ್ತಿದ್ದಾರೆ.

ಮುಂದುವರಿದು, ನಿನ್ನ ಬಳಿ ಅನೇಕ ಬಾರಿ ಮದುವೆ ವಿಚಾರ ತೆಗೆದಿದ್ದೆ. ನಿನಗೆ ಮುದವೆ ಆಗುವ ಇಚ್ಛೆ ಇಲ್ಲದಿದ್ದರೆ ಅಂದೇ ಹೊರಟು ಹೋಗಿಬಿಡಬೇಕಿತ್ತು. ಮತ್ತೇಕೆ ನನ್ನ ಜೀವನದಲ್ಲಿ ಬಂದೆ ಎಂದು ಅರ್ಜುನ್​​ಗೆ ವಿಡಿಯೋದಲ್ಲಿ ಚೈತ್ರಾ ಪ್ರಶ್ನೆ ಮಾಡಿದ್ದಾರೆ.

ಬಿಗ್​ ಬಾಸ್ ಮಾಜಿ​ ಸ್ಪರ್ಧಿ ಚೈತ್ರಾ ಕೋಟೂರ್​ ಅವರು ಕನ್​ಸ್ಟ್ರಕ್ಷನ್ ಮತ್ತು ರಿಯಲ್​ ಎಸ್ಟೇಟ್​​ ಕ್ಷೇತ್ರದಲ್ಲಿ ತೊಡಗಿಕೊಂಡಿರುವ ನಾಗಾರ್ಜುನ್​ ಎಂಬುವವರ ಜೊತೆ ಮಾ.28ರ ಬೆಳಗ್ಗೆ ಸಿಂಪಲ್ ಆಗಿ ಮದುವೆ ಆಗಿದ್ದರು. ಆದರೆ ವಿವಾಹವಾಗಿ ಕೆಲವೇ ಗಂಟೆಗಳು ಕಳೆಯುವುದರೊಳಗೆ ನಾಗಾರ್ಜುನ್​ ಮನೆಯವರು ತಕರಾರು ತೆಗೆದಿದ್ದರು.  ಈ ವಿಚಾರ ಪೊಲೀಸ್​ ಠಾಣೆಯ ಮೆಟ್ಟಿಲು ಕೂಡ ಏರಿತ್ತು.

ಇಂದು ಆತ್ಮಹತ್ಯೆಗೆ ಯತ್ನ ಕೋಲಾರ ನಗರದ ಕುರುಬರ ಪೇಟೆ ಮನೆಯಲ್ಲಿ ಚೈತ್ರಾ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಮದುವೆ ವಿಚಾರದ ನಂತರ ಉಂಟಾದ ವಿವಾದದಿಂದ ‌ಮನನೊಂದು ಅವರು ಫಿನಾಯಿಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ. ಮಾರ್ಚ್ 28 ರಂದು ಮಂಡ್ಯ ಮೂಲದ ನಾಗಾರ್ಜುನ್ ಎಂಬುವರೊಂದಿಗೆ ಚೈತ್ರಾ ಕೋಟೂರ್ ಮದುವೆಯಾಗಿದ್ದರು. ಆದರೆ ಮದುವೆಯಾದ ದಿನವೇ ಈ ವಿಚಾರ ವಿವಾದಕ್ಕೀಡಾಗಿ ಪೊಲೀಸ್ ಠಾಣೆ ಮಟ್ಟಿಲೇರಿತ್ತು. ಇದೇ ಕಾರಣಕ್ಕೆ ನಟಿ, ಕವಯಿತ್ರಿ ಬಿಗ್ ಬಾಸ್ ಖ್ಯಾತಿಯ ಚೈತ್ರಾ ಕೋಟೂರ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಕೋಲಾರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಇದನ್ನೂ ಓದಿ: Chaithra Kotoor: ಮದುವೆಯಾದ ಬೆನ್ನಲ್ಲೇ ಆತ್ಮಹತ್ಯೆಗೆ ಪ್ರಯತ್ನಿಸಿದ ಬಿಗ್ ಬಾಸ್ ಖ್ಯಾತಿಯ ಚೈತ್ರಾ ಕೋಟೂರ್

Published On - 7:12 pm, Thu, 8 April 21

Follow Us
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ