Chaithra Kotoor: ನಿನ್ನನ್ನು ನಂಬಿ ದೊಡ್ಡ ತಪ್ಪು ಮಾಡಿದೆ; ಚೈತ್ರಾ ಕೋಟೂರ್ ಕಣ್ಣೀರಿಟ್ಟ ವಿಡಿಯೋ ವೈರಲ್​

ನಿನ್ನ ಬಳಿ ಅನೇಕ ಬಾರಿ ಮದುವೆ ವಿಚಾರ ತೆಗೆದಿದ್ದೆ. ನಿನಗೆ ಮುದವೆ ಆಗುವ ಇಚ್ಛೆ ಇಲ್ಲದಿದ್ದರೆ ಅಂದೇ ಹೊರಟು ಹೋಗಿಬಿಡಬೇಕಿತ್ತು. ಮತ್ತೇಕೆ ನನ್ನ ಜೀವನದಲ್ಲಿ ಬಂದೆ ಎಂದು ಅರ್ಜುನ್​​ಗೆ ವಿಡಿಯೋದಲ್ಲಿ ಚೈತ್ರಾ ಪ್ರಶ್ನೆ ಮಾಡಿದ್ದಾರೆ.

Chaithra Kotoor: ನಿನ್ನನ್ನು ನಂಬಿ ದೊಡ್ಡ ತಪ್ಪು ಮಾಡಿದೆ; ಚೈತ್ರಾ ಕೋಟೂರ್ ಕಣ್ಣೀರಿಟ್ಟ ವಿಡಿಯೋ ವೈರಲ್​
ಚೈತ್ರಾ ಕೊಟೂರ್​

Updated on: Apr 08, 2021 | 7:53 PM

ನಟಿ ಹಾಗೂ ಬಿಗ್​ ಬಾಸ್​ ಸ್ಪರ್ಧಿ ಚೈತ್ರಾ ಕೋಟೂರ್​ ಅವರು ಇಂದು (ಏಪ್ರಿಲ್​ 8) ಆತ್ಮಹತ್ಯೆಗೆ ಪ್ರಯತ್ನಿಸಿದ್ದರು. ಇದಾದ ಬೆನ್ನಲ್ಲೇ ಅವರು ವಿಡಿಯೋ ಒಂದನ್ನು ಮಾಡಿ ಹರಿಬಿಟ್ಟಿದ್ದಾರೆ. ಈ ವಿಡಿಯೋದಲ್ಲಿ ಮದುವೆಯಾದ ಅರ್ಜುನ್​ ಬಳಿ ತಮ್ಮ ಕಷ್ಟ ತೋಡಿಕೊಂಡಿದ್ದಾರೆ.

ನಮ್ಮಿಬ್ಬರ ವಿಷಯದಲ್ಲಿ ಎಲ್ಲರೂ ಆಟ ಆಡುತ್ತಾ ಇದ್ದಾರೆ. ನಾನು ಹೇಗೆ ಬದುಕಲಿ? ನಿನ್ನನ್ನು ನಂಬಿದ್ದು, ನಿನ್ನನ್ನು ಪ್ರೀತಿಸಿದ್ದು, ನಿನ್ನನ್ನು ಮದುವೆ ಆಗಿದ್ದು ನಾನು ಮಾಡಿದ ದೊಡ್ಡ ತಪ್ಪು. ನನ್ನ ಜೀವನವೇ ಹಾಳಾಗಿ ಹೋಯಿತಲ್ಲ ಅರ್ಜುನ್​. ನಿನ್ನ ಹತ್ತಿರ ಏನಿದೆ? ಎಷ್ಟು ದುಡ್ಡಿದೆ? ನಿನಗೆ ಹಣ ಎಲ್ಲಿಂದ ಬರುತ್ತದೆ ಎಂದು ಯಾವಗಲಾದರೂ ಕೇಳಿದ್ದೀನಾ? ನಿನಗೆ ಸಾಲ ಇದ್ದರೆ ತೀರಿಸೋಣ, ಜೊತೆಗಿರೋಣಎಂದು ಹೇಳಿದ್ದೆ ಅಲ್ಲವೇ ಎಂದು ಅವರು ಬಿಕ್ಕಿ ಬಿಕ್ಕಿ ಅತ್ತಿದ್ದಾರೆ.

ಮುಂದುವರಿದು, ನಿನ್ನ ಬಳಿ ಅನೇಕ ಬಾರಿ ಮದುವೆ ವಿಚಾರ ತೆಗೆದಿದ್ದೆ. ನಿನಗೆ ಮುದವೆ ಆಗುವ ಇಚ್ಛೆ ಇಲ್ಲದಿದ್ದರೆ ಅಂದೇ ಹೊರಟು ಹೋಗಿಬಿಡಬೇಕಿತ್ತು. ಮತ್ತೇಕೆ ನನ್ನ ಜೀವನದಲ್ಲಿ ಬಂದೆ ಎಂದು ಅರ್ಜುನ್​​ಗೆ ವಿಡಿಯೋದಲ್ಲಿ ಚೈತ್ರಾ ಪ್ರಶ್ನೆ ಮಾಡಿದ್ದಾರೆ.

ಬಿಗ್​ ಬಾಸ್ ಮಾಜಿ​ ಸ್ಪರ್ಧಿ ಚೈತ್ರಾ ಕೋಟೂರ್​ ಅವರು ಕನ್​ಸ್ಟ್ರಕ್ಷನ್ ಮತ್ತು ರಿಯಲ್​ ಎಸ್ಟೇಟ್​​ ಕ್ಷೇತ್ರದಲ್ಲಿ ತೊಡಗಿಕೊಂಡಿರುವ ನಾಗಾರ್ಜುನ್​ ಎಂಬುವವರ ಜೊತೆ ಮಾ.28ರ ಬೆಳಗ್ಗೆ ಸಿಂಪಲ್ ಆಗಿ ಮದುವೆ ಆಗಿದ್ದರು. ಆದರೆ ವಿವಾಹವಾಗಿ ಕೆಲವೇ ಗಂಟೆಗಳು ಕಳೆಯುವುದರೊಳಗೆ ನಾಗಾರ್ಜುನ್​ ಮನೆಯವರು ತಕರಾರು ತೆಗೆದಿದ್ದರು.  ಈ ವಿಚಾರ ಪೊಲೀಸ್​ ಠಾಣೆಯ ಮೆಟ್ಟಿಲು ಕೂಡ ಏರಿತ್ತು.

ಇಂದು ಆತ್ಮಹತ್ಯೆಗೆ ಯತ್ನ
ಕೋಲಾರ ನಗರದ ಕುರುಬರ ಪೇಟೆ ಮನೆಯಲ್ಲಿ ಚೈತ್ರಾ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಮದುವೆ ವಿಚಾರದ ನಂತರ ಉಂಟಾದ ವಿವಾದದಿಂದ ‌ಮನನೊಂದು ಅವರು ಫಿನಾಯಿಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ. ಮಾರ್ಚ್ 28 ರಂದು ಮಂಡ್ಯ ಮೂಲದ ನಾಗಾರ್ಜುನ್ ಎಂಬುವರೊಂದಿಗೆ ಚೈತ್ರಾ ಕೋಟೂರ್ ಮದುವೆಯಾಗಿದ್ದರು. ಆದರೆ ಮದುವೆಯಾದ ದಿನವೇ ಈ ವಿಚಾರ ವಿವಾದಕ್ಕೀಡಾಗಿ ಪೊಲೀಸ್ ಠಾಣೆ ಮಟ್ಟಿಲೇರಿತ್ತು. ಇದೇ ಕಾರಣಕ್ಕೆ ನಟಿ, ಕವಯಿತ್ರಿ ಬಿಗ್ ಬಾಸ್ ಖ್ಯಾತಿಯ ಚೈತ್ರಾ ಕೋಟೂರ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಕೋಲಾರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಇದನ್ನೂ ಓದಿ: Chaithra Kotoor: ಮದುವೆಯಾದ ಬೆನ್ನಲ್ಲೇ ಆತ್ಮಹತ್ಯೆಗೆ ಪ್ರಯತ್ನಿಸಿದ ಬಿಗ್ ಬಾಸ್ ಖ್ಯಾತಿಯ ಚೈತ್ರಾ ಕೋಟೂರ್

Published On - 7:12 pm, Thu, 8 April 21

Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us