AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗ್ಗೆ ಮದುವೆ, ಸಂಜೆ ಪೊಲೀಸ್​ ಸ್ಟೇಷನ್​ಗೆ ಹಾಜರ್​​; ವಿವಾದದಲ್ಲಿ ಚೈತ್ರಾ ಕೋಟೂರ್ ವಿವಾಹ ವಿಚಾರ!

ಚೈತ್ರಾ ಕೈ ಹಿಡಿದಿರುವ ಹುಡುಗ ನಾಗಾರ್ಜುನ್​ ಅವರು ಮಂಡ್ಯ ಮೂಲದವರು. ಕನ್​ಸ್ಟ್ರಕ್ಷನ್ ಮತ್ತು ರಿಯಲ್​ ಎಸ್ಟೇಟ್​​ ಕ್ಷೇತ್ರದಲ್ಲಿ ತೊಡಗಿಕೊಂಡಿದ್ದಾರೆ.

ಬೆಳಗ್ಗೆ ಮದುವೆ, ಸಂಜೆ ಪೊಲೀಸ್​ ಸ್ಟೇಷನ್​ಗೆ ಹಾಜರ್​​; ವಿವಾದದಲ್ಲಿ ಚೈತ್ರಾ ಕೋಟೂರ್ ವಿವಾಹ ವಿಚಾರ!
ಚೈತ್ರಾ ಕೋಟೂರ್​ -ನಾಗಾರ್ಜುನ್
ರಾಜೇಶ್ ದುಗ್ಗುಮನೆ
|

Updated on:Mar 28, 2021 | 10:55 PM

Share

ಕೋಲಾರ (ಮಾರ್ಚ್​ 28): ಬಿಗ್​ ಬಾಸ್ ಮಾಜಿ​ ಸ್ಪರ್ಧಿ ಚೈತ್ರಾ ಕೋಟೂರ್​ ಅವರು ಸದ್ದಿಲ್ಲದೇ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಉದ್ಯಮಿ ನಾಗಾರ್ಜುನ್​ ಎಂಬುವವರ ಜೊತೆ ಭಾನುವಾರ (ಮಾ.28) ಬೆಳಗ್ಗೆ ಸಿಂಪಲ್ ಆಗಿ ವಿವಾಹ ಆಗಿದ್ದರು. ಈ ವಿಚಾರ ಅವರ ಅಭಿಮಾನಿಗಳಿಗೂ ಖುಷಿ ನೀಡಿತ್ತು. ಆದರೆ, ಈಗ ಈ ಮದುವೆ ವಿಚಾರ ಪೊಲೀಸ್​ ಠಾಣೆ ಮೆಟ್ಟಿಲೇರಿದೆ. ಚೈತ್ರಾ ಕೈ ಹಿಡಿದಿರುವ ಹುಡುಗ ನಾಗಾರ್ಜುನ್​ ಅವರು ಮಂಡ್ಯ ಮೂಲದವರು. ಕನ್​ಸ್ಟ್ರಕ್ಷನ್ ಮತ್ತು ರಿಯಲ್​ ಎಸ್ಟೇಟ್​​ ಕ್ಷೇತ್ರದಲ್ಲಿ ತೊಡಗಿಕೊಂಡಿದ್ದಾರೆ. ಕಳೆದ ಒಂದು ವರ್ಷದಿಂದ, ಅಂದರೆ ಚೈತ್ರಾ ಬಿಗ್​ ಬಾಸ್​ ಕನ್ನಡ ಸೀಸನ್​ 7ರಲ್ಲಿ ಸ್ಪರ್ಧಿಸಿ ಹೊರಬಂದ ಬಳಿಕ ನಾಗಾರ್ಜುನ್​ ಪರಿಚಯ ಆಯಿತು. ನಂತರ ಅವರ ನಡುವೆ ಪ್ರೀತಿ ಚಿಗುರಿತ್ತು. ಈಗ ಆ ಪ್ರೀತಿಗೆ ಮದುವೆಯ ಮುದ್ರೆ ಬಿದ್ದಿತ್ತು. ಆದರೆ, ಈಗ ಈ ಪ್ರಕರಣ ಪೊಲೀಸ್​ ಠಾಣೆವರೆಗೆ ಹೋಗಿದೆ.

ಈ ಮದುವೆ ನಾಗಾರ್ಜುನ್ ಕುಟುಂಬಸ್ಥರಿಗೆ ಇಷ್ಟವಿಲ್ಲವಾಗಿತ್ತಂತೆ. ಹೀಗಾಗಿ, ಕೋಲಾರದ ಕುರುಬರಪೇಟೆಯ ಚೈತ್ರಾ ಮನೆಗೆ ಬಂದ ಮೇಲೆ ನಾಗಾರ್ಜುನ್ ಈ ಬಗ್ಗೆ ತಗಾದೆ ತಗೆದಿದ್ದಾರೆ. ಕೋಲಾರದ ಮಹಿಳಾ ಪೊಲೀಸ್ ಠಾಣೆಯಲ್ಲಿ ಇಬ್ಬರ ವಿಚಾರಣೆ ನಡೆಸಲಾಗಿದೆ. ಬುಧವಾರದವರೆಗೆ ಈ ಜೋಡಿಗೆ ಪೊಲೀಸರು ಸಮಯ ನೀಡಿದ್ದಾರೆ.

CHAITHRA KOTTUR

ಪೊಲೀಸ್​ ಠಾಣೆಯಲ್ಲಿ ಚೈತ್ರಾ

ಬೆಳಗ್ಗೆ ಮದುವೆ ಆಗಿತ್ತು..

ಬೆಂಗಳೂರಿನ ಬ್ಯಾಟರಾಯನಪುರದಲ್ಲಿ ಇರುವ ಗಣಪತಿ ದೇವಸ್ಥಾನದಲ್ಲಿ ತುಂಬ ಸರಳವಾಗಿ ಚೈತ್ರಾ ಮತ್ತು ನಾಗಾರ್ಜುನ್​ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ‘ಹೀಗೆ ಸಿಂಪಲ್​ ಆಗಿ ಮದುವೆ ಆಗಬೇಕು ಎಂಬುದೇ ನನ್ನ ಉದ್ದೇಶ ಆಗಿತ್ತು. ಅದ್ದೂರಿ ವಿವಾಹದ ಬಗ್ಗೆ ನನಗೆ ಮೊದಲಿನಿಂದಲೂ ಆಸಕ್ತಿ ಇರಲಿಲ್ಲ. ಹಾಗಾಗಿ ಈ ನಿರ್ಧಾರ ತೆಗೆದುಕೊಂಡೆವು. ನನ್ನ ವೃತ್ತಿಜೀವನಕ್ಕೆ ನಾಗಾರ್ಜುನ್ ಬೆಂಬಲವಾಗಿದ್ದಾರೆ’ ಎಂದು ಚೈತ್ರಾ ಕೋಟೂರ್​ ಅವರು ಟಿವಿ9 ಡಿಜಿಟಲ್​ಗೆ ಮಾಹಿತಿ ನೀಡಿದ್ದರು.ಚೈತ್ರಾ ಮತ್ತು ನಾಗಾರ್ಜುನ್​ ಹಾರ ಬದಲಾಯಿಸಿಕೊಂಡಿರುವ ಫೋಟೋಗಳು ಹೊರಬಂದಿತ್ತು. ಅದನ್ನು ಕಂಡು ಎಲ್ಲರೂ ನವ ಜೋಡಿಗೆ ಶುಭಾಶಯ ಕೋರುತ್ತಿದ್ದರು.

ಬಿಗ್​ ಮೂಲಕ ಖ್ಯಾತಿ ಹೆಚ್ಚಿಸಿಕೊಂಡಿದ್ದ ಚೈತ್ರಾ..

ರಂಗಭೂಮಿ ಕಲಾವಿದೆಯಾಗಿ, ಸಿನಿಮಾ ನಟಿಯಾಗಿ ಮಾತ್ರವಲ್ಲದೆ ಬರಹಗಾರ್ತಿಯಾಗಿಯೂ ಚೈತ್ರಾ ಗುರುತಿಸಿಕೊಂಡಿದ್ದಾರೆ. ‘ಸೂಜಿದಾರ’ ಸಿನಿಮಾದಲ್ಲಿ ಅವರೊಂದು ಗಮನಾರ್ಹ ಪಾತ್ರ ಮಾಡಿದ್ದರು. ಬಿಗ್​ ಬಾಸ್​ ಕನ್ನಡ ಸೀಸನ್​ 7ರಲ್ಲಿ ಸ್ಪರ್ಧಿಸಿದ ಬಳಿಕ ಅವರ ಖ್ಯಾತಿ ಹೆಚ್ಚಿತು. ನಂತರ ಜಾಹೀರಾತು ನಿರ್ದೇಶನದಲ್ಲಿ ಅವರು ತೊಡಗಿಕೊಂಡರು. ಸಿನಿಮಾ ನಿರ್ದೇಶನಕ್ಕೂ ತಯಾರಿ ಮಾಡಿಕೊಳ್ಳುತ್ತಿದ್ದಾರೆ. ಇತ್ತೀಚೆಗೆ ಒಂದು ಆಲ್ಬಂ ಹಾಡಿನಲ್ಲೂ ಚೈತ್ರಾ ನಟಿಸಿದ್ದು, ಅವರೇ ಸಾಹಿತ್ಯ ಬರೆದಿದ್ದಾರೆ. ಈ ನಡುವೆ ಅವರ ಮದುವೆ ಸುದ್ದಿ ಎಲ್ಲರಿಗೂ ಅಚ್ಚರಿ ಮೂಡಿಸಿದೆ.

ಇದನ್ನೂ ಓದಿ: ದಾಂಪತ್ಯ ಜೀವನಕ್ಕೆ ಕಾಲಿಟ್ಟ ಬಿಗ್​ ಬಾಸ್​ ಚೈತ್ರಾ ಕೋಟೂರ್​! ಉದ್ಯಮಿ ಜೊತೆ ಸಿಂಪಲ್​ ವಿವಾಹ

Published On - 10:43 pm, Sun, 28 March 21

Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ