AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಿಮ್ಮ ಕ್ಷಮೆ ಯಾರಿಗೆ ಬೇಕು?’; ಕ್ಷಮೆಗೆ ಸ್ಪಂದಿಸದ ಚೈತ್ರಾಗೆ ಜೀವನ ಪರ್ಯಂತ ನೆನಪಿಟ್ಟುಕೊಳ್ಳುವ ಪಾಠ ಹೇಳಿದ ಸುದೀಪ್

ಸುದೀಪ್ ಅವರು ಪ್ರತಿ ಶನಿವಾರ ಒಂದಷ್ಟು ಜನರಿಗೆ ಕ್ಲಾಸ್ ತೆಗೆದುಕೊಳ್ಳುತ್ತಾರೆ. ಅವರು ಲಿಮಿಟ್ ದಾಟಿ ಹೋಗಿದ್ದು ಕಡಿಮೆ. ಆದರೆ, ಈ ವಾರ ಮಾತ್ರ ಅವರು ಮಿತಿ ಮೀರಿ ಕ್ಲಾಸ್ ತೆಗೆದುಕೊಂಡಿದ್ದಾರೆ. ಇದಕ್ಕೆ ಚೈತ್ರಾ ಶಾಕ್ ಆಗಿದ್ದಾರೆ. ಅವರಿಗೆ ಏನು ಹೇಳಬೇಕು ಎಂದೇ ಗೊತ್ತಾಗಲೇ ಇಲ್ಲ.

‘ನಿಮ್ಮ ಕ್ಷಮೆ ಯಾರಿಗೆ ಬೇಕು?’; ಕ್ಷಮೆಗೆ ಸ್ಪಂದಿಸದ ಚೈತ್ರಾಗೆ ಜೀವನ ಪರ್ಯಂತ ನೆನಪಿಟ್ಟುಕೊಳ್ಳುವ ಪಾಠ ಹೇಳಿದ ಸುದೀಪ್
ಬಿಗ್ ಬಾಸ್
 ಶ್ರೀಲಕ್ಷ್ಮೀ ಎಚ್
| Edited By: |

Updated on:Nov 28, 2024 | 1:33 PM

Share

ಚೈತ್ರಾ ಕುಂದಾಪುರ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಮಾತಿನ ಮೂಲಕ ಎಲ್ಲರ ಗಮನ ಸೆಳೆಯುವ ಪ್ರಯತ್ನ ಮಾಡಿದ್ದರು. ಇತ್ತೀಚೆಗೆ ಅವರಿಗೆ ಅನಾರೋಗ್ಯ ಆಗಿದ್ದರಿಂದ ಅವರು ಆಸ್ಪತ್ರೆಗೆ ಹೋಗಿ ಬಂದಿದ್ದರು. ಹೊರಹೋಗಿ ಬಂದ ಅವರು ಎಲ್ಲಾ ಸ್ಪರ್ಧಿಗಳಿಗೆ ಯಾವ ರೀತಿಯಲ್ಲಿ ಆಡಬೇಕು ಎಂಬುದರ ಹಿಂಟ್ ಕೊಟ್ಟಿದ್ದರು. ಇದು ಹೊರಗಿನ ಅಭಿಪ್ರಾಯ ಎಂದು ಕೂಡ ಹೇಳಿದ್ದರು. ಇದರಿಂದ ಸುದೀಪ್ ಸಖತ್ ಸಿಟ್ಟಾಗಿದ್ದಾರೆ. ಅಲ್ಲದೆ ಖಡಕ್ ಆಗಿ ಕ್ಲಾಸ್ ತೆಗೆದುಕೊಂಡಿದ್ದಾರೆ. ನಂತರ ಚೈತ್ರಾ ಕ್ಷಮೆ ಕೇಳಿದರು. ಈ ಕ್ಷಮೆಯನ್ನು ಸುದೀಪ್ ಅವರು ಒಪ್ಪಿಲ್ಲ. ‘ನಾನು ತಲೆಕೆಟ್​ ನನ್​ಮಗ’ ಎಂದಿದ್ದಾರೆ ಸುದೀಪ್.

ಸುದೀಪ್ ಅವರು ಪ್ರತಿ ಶನಿವಾರ ಒಂದಷ್ಟು ಜನರಿಗೆ ಕ್ಲಾಸ್ ತೆಗೆದುಕೊಳ್ಳುತ್ತಾರೆ. ಅವರು ಲಿಮಿಟ್ ದಾಟಿ ಹೋಗಿದ್ದು ಕಡಿಮೆ. ಆದರೆ, ಈ ವಾರ ಮಾತ್ರ ಅವರು ಮಿತಿ ಮೀರಿ ಕ್ಲಾಸ್ ತೆಗೆದುಕೊಂಡಿದ್ದಾರೆ. ಇದಕ್ಕೆ ಚೈತ್ರಾ ಶಾಕ್ ಆಗಿದ್ದಾರೆ. ಅವರಿಗೆ ಏನು ಹೇಳಬೇಕು ಎಂದೇ ಗೊತ್ತಾಗಲೇ ಇಲ್ಲ. ಕಣ್ಣಿನ ತುಂಬ ನೀರು ತುಂಬಿಕೊಂಡು ಮಾತನಾಡಲು ತಡಬಡಿಸಿದ್ದಾರೆ.

ತಾವು ಗಟ್ಟಿ ಧ್ವನಿಯಲ್ಲಿ ಮಾತನಾಡಿದ್ದಕ್ಕೆ ಸುದೀಪ್ ಅವರಿಗೇ ಬೇಸರ ಆಯಿತು. ಈ ಕಾರಣಕ್ಕೆ ಅವರು ಚೈತ್ರಾ ಬಳಿ ಕ್ಷಮೆ ಕೇಳಿದರು. ಆದರೆ, ಈ ಕ್ಷಮೆಗೆ ಚೈತ್ರಾ ಅವರು ಸ್ವಲ್ಪವೂ ಗಮನ ಕೊಡಲೇ ಇಲ್ಲ. ಇದಕ್ಕೆ ಸುದೀಪ್ ಬೇಸರ ಮಾಡಿಕೊಂಡರು. ಈ ಬಗ್ಗೆ ನೇರವಾಗಿ ಹೇಳಿದರು.

ತಪ್ಪಿನ ಅರಿವಾದ ಬಳಿಕ ಚೈತ್ರಾ ಅವರ ಕಡೆಯಿಂದಲೇ ಕ್ಷಮೆ ಬಂತು. ‘ನಾನು ಕ್ಷಮೆ ಕೇಳಿದಾಗ ನೀವು ಸ್ಪಂದಿಸಿಲ್ಲ. ಹೀಗಿರುವಾಗ ನಿಮ್ಮ ಕ್ಷಮೆಗೆ ನಾನೇಕೆ ಸ್ಪಂದಿಸಲಿ? ಅಯ್ಯೋ ನಾನು ತಲೆ ಕೆಟ್ ನನ್ನ ಮಗ. ಹುಚ್ಚ ಇಂದ ಕರಿಯರ್ ಶುರು ಮಾಡಿದವನು ನಾನು. 28 ವರ್ಷ ಅದರಲ್ಲೇ ಬದುಕಿದೀನಿ. ನಾನು ಕ್ಷಮೆ ಕೇಳಿದಾಗ ಸ್ಪಂದಿಸಿದರೆ ಒಳ್ಳೆ ಮನುಷ್ಯ. ಇಲ್ಲ ಎಂದರೆ ನನ್ನಂತ ತಲೆಕೆಟ್ಟವರು ಯಾರೂ ಇಲ್ಲ’ ಎಂದಿದ್ದಾರೆ ಸುದೀಪ್.

ಇದನ್ನೂ ಓದಿ:  ಸುದೀಪ್ ‘ಬಿಗ್ ಬಾಸ್’ ಕಂಬ್ಯಾಕ್​ಗೆ ಸಿಕ್ತು ಭರ್ಜರಿ ಟಿಆರ್​ಪಿ; ಎರಡಂಕಿ ದಾಟಿದ ‘ಪುಟ್ಟಕ್ಕನ ಮಕ್ಕಳು’ ಟಿವಿಆರ್

ನಂತರ ಚೈತ್ರಾ ಅವರು ಕ್ಯಾಮೆರಾ ಬಳಿ ಹೋಗಿ ‘ವಾತಾವರಣ ಉಸಿರುಗಟ್ಟಿಸುತ್ತಿದೆ. ನಾನು ಮನೆಯಿಂದ ಹೊರ ಹೋಗಬೇಕು. ನನ್ನ ಕಳುಹಿಸಿ’ ಎಂದು ಅವರು ಹೇಳಿದರು. ಇದಕ್ಕೆ ಬಿಗ್ ಬಾಸ್ ಯಾವ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ಕಾದು ನೋಡಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 11:01 pm, Sat, 16 November 24

Follow Us
IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ಕೇಸ್​ಗೆ ಟ್ವಿಸ್ಟ್
IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ಕೇಸ್​ಗೆ ಟ್ವಿಸ್ಟ್
ಬಾಗಲಕೋಟೆ ಶ್ರೀ ಬನಶಂಕರಿ ದೇವಾಲಯದ ಮಹತ್ವ ಮತ್ತು ಐತಿಹಾಸಿಕ ಹಿನ್ನೆಲೆ
ಬಾಗಲಕೋಟೆ ಶ್ರೀ ಬನಶಂಕರಿ ದೇವಾಲಯದ ಮಹತ್ವ ಮತ್ತು ಐತಿಹಾಸಿಕ ಹಿನ್ನೆಲೆ
ಗುಡ್ ನ್ಯೂಸ್: ಶಿವರಾಮ ಕಾರಂತ ಬಡಾವಣೆ ನಿವೇಶನ ಹಂಚಿಕೆಗೆ ಡೇಟ್ ಫಿಕ್ಸ್​​
ಗುಡ್ ನ್ಯೂಸ್: ಶಿವರಾಮ ಕಾರಂತ ಬಡಾವಣೆ ನಿವೇಶನ ಹಂಚಿಕೆಗೆ ಡೇಟ್ ಫಿಕ್ಸ್​​
ಗದಗದ ಕೆಂಚಲಾಪೂರದಲ್ಲಿ ಸದ್ದಿಲ್ಲದೆ ಸರ್ಕಾರಿ ಕನ್ನಡ ಶಾಲೆಗಳಿಗೆ ಬೀಗ?
ಗದಗದ ಕೆಂಚಲಾಪೂರದಲ್ಲಿ ಸದ್ದಿಲ್ಲದೆ ಸರ್ಕಾರಿ ಕನ್ನಡ ಶಾಲೆಗಳಿಗೆ ಬೀಗ?
ಪ್ರಶ್ನೆಪತ್ರಿಕೆ ಸೋರಿಕೆ, ನೇಮಕಾತಿ ವಿಳಂಬಕ್ಕೆ ವಿದ್ಯಾರ್ಥಿಗಳ ರಣಕಹಳೆ
ಪ್ರಶ್ನೆಪತ್ರಿಕೆ ಸೋರಿಕೆ, ನೇಮಕಾತಿ ವಿಳಂಬಕ್ಕೆ ವಿದ್ಯಾರ್ಥಿಗಳ ರಣಕಹಳೆ
KRS ಡ್ಯಾಂಗೆ ಮುತ್ತಿಗೆ: ವಾಟಾಳ್ ನಾಗರಾಜ್ ಘೋಷಣೆ
KRS ಡ್ಯಾಂಗೆ ಮುತ್ತಿಗೆ: ವಾಟಾಳ್ ನಾಗರಾಜ್ ಘೋಷಣೆ
ಎಬಿವಿಪಿ ಪ್ರತಿಭಟನೆ ವೇಳೆ ಮಾಧ್ಯಮದವರ ಮೇಲೆ ಪೊಲೀಸರ ದರ್ಪ
ಎಬಿವಿಪಿ ಪ್ರತಿಭಟನೆ ವೇಳೆ ಮಾಧ್ಯಮದವರ ಮೇಲೆ ಪೊಲೀಸರ ದರ್ಪ
ರಸ್ತೆ ಮಧ್ಯೆ ಕಬ್ಬಿನ ಲಾರಿ ಅಡ್ಡಗಟ್ಟಿದ 10ಕ್ಕೂ ಹೆಚ್ಚು ಕಾಡಾನೆಗಳ ಹಿಂಡು!
ರಸ್ತೆ ಮಧ್ಯೆ ಕಬ್ಬಿನ ಲಾರಿ ಅಡ್ಡಗಟ್ಟಿದ 10ಕ್ಕೂ ಹೆಚ್ಚು ಕಾಡಾನೆಗಳ ಹಿಂಡು!
PSI ಮೇಲೆ ಶಾಸಕ ಸುರೇಶ್‌ಗೌಡ ಪುತ್ರಿ ಕಪಾಳಮೋಕ್ಷ ಪ್ರಕರಣ; ವೀಡಿಯೋ ವೈರಲ್
PSI ಮೇಲೆ ಶಾಸಕ ಸುರೇಶ್‌ಗೌಡ ಪುತ್ರಿ ಕಪಾಳಮೋಕ್ಷ ಪ್ರಕರಣ; ವೀಡಿಯೋ ವೈರಲ್
ಟಾಕ್ಸಿಕ್ ರಿಲೀಸ್​ಗೂ ಮುನ್ನ ವಿಶೇಷ ಪೂಜೆ ಸಲ್ಲಿಸಲು ಧರ್ಮಸ್ಥಳಕ್ಕೆ ಬಂದ ಯಶ್
ಟಾಕ್ಸಿಕ್ ರಿಲೀಸ್​ಗೂ ಮುನ್ನ ವಿಶೇಷ ಪೂಜೆ ಸಲ್ಲಿಸಲು ಧರ್ಮಸ್ಥಳಕ್ಕೆ ಬಂದ ಯಶ್