AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಿಮ್ಮ ಕ್ಷಮೆ ಯಾರಿಗೆ ಬೇಕು?’; ಕ್ಷಮೆಗೆ ಸ್ಪಂದಿಸದ ಚೈತ್ರಾಗೆ ಜೀವನ ಪರ್ಯಂತ ನೆನಪಿಟ್ಟುಕೊಳ್ಳುವ ಪಾಠ ಹೇಳಿದ ಸುದೀಪ್

ಸುದೀಪ್ ಅವರು ಪ್ರತಿ ಶನಿವಾರ ಒಂದಷ್ಟು ಜನರಿಗೆ ಕ್ಲಾಸ್ ತೆಗೆದುಕೊಳ್ಳುತ್ತಾರೆ. ಅವರು ಲಿಮಿಟ್ ದಾಟಿ ಹೋಗಿದ್ದು ಕಡಿಮೆ. ಆದರೆ, ಈ ವಾರ ಮಾತ್ರ ಅವರು ಮಿತಿ ಮೀರಿ ಕ್ಲಾಸ್ ತೆಗೆದುಕೊಂಡಿದ್ದಾರೆ. ಇದಕ್ಕೆ ಚೈತ್ರಾ ಶಾಕ್ ಆಗಿದ್ದಾರೆ. ಅವರಿಗೆ ಏನು ಹೇಳಬೇಕು ಎಂದೇ ಗೊತ್ತಾಗಲೇ ಇಲ್ಲ.

‘ನಿಮ್ಮ ಕ್ಷಮೆ ಯಾರಿಗೆ ಬೇಕು?’; ಕ್ಷಮೆಗೆ ಸ್ಪಂದಿಸದ ಚೈತ್ರಾಗೆ ಜೀವನ ಪರ್ಯಂತ ನೆನಪಿಟ್ಟುಕೊಳ್ಳುವ ಪಾಠ ಹೇಳಿದ ಸುದೀಪ್
ಬಿಗ್ ಬಾಸ್
 ಶ್ರೀಲಕ್ಷ್ಮೀ ಎಚ್
| Updated By: ರಾಜೇಶ್ ದುಗ್ಗುಮನೆ|

Updated on:Nov 28, 2024 | 1:33 PM

Share

ಚೈತ್ರಾ ಕುಂದಾಪುರ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಮಾತಿನ ಮೂಲಕ ಎಲ್ಲರ ಗಮನ ಸೆಳೆಯುವ ಪ್ರಯತ್ನ ಮಾಡಿದ್ದರು. ಇತ್ತೀಚೆಗೆ ಅವರಿಗೆ ಅನಾರೋಗ್ಯ ಆಗಿದ್ದರಿಂದ ಅವರು ಆಸ್ಪತ್ರೆಗೆ ಹೋಗಿ ಬಂದಿದ್ದರು. ಹೊರಹೋಗಿ ಬಂದ ಅವರು ಎಲ್ಲಾ ಸ್ಪರ್ಧಿಗಳಿಗೆ ಯಾವ ರೀತಿಯಲ್ಲಿ ಆಡಬೇಕು ಎಂಬುದರ ಹಿಂಟ್ ಕೊಟ್ಟಿದ್ದರು. ಇದು ಹೊರಗಿನ ಅಭಿಪ್ರಾಯ ಎಂದು ಕೂಡ ಹೇಳಿದ್ದರು. ಇದರಿಂದ ಸುದೀಪ್ ಸಖತ್ ಸಿಟ್ಟಾಗಿದ್ದಾರೆ. ಅಲ್ಲದೆ ಖಡಕ್ ಆಗಿ ಕ್ಲಾಸ್ ತೆಗೆದುಕೊಂಡಿದ್ದಾರೆ. ನಂತರ ಚೈತ್ರಾ ಕ್ಷಮೆ ಕೇಳಿದರು. ಈ ಕ್ಷಮೆಯನ್ನು ಸುದೀಪ್ ಅವರು ಒಪ್ಪಿಲ್ಲ. ‘ನಾನು ತಲೆಕೆಟ್​ ನನ್​ಮಗ’ ಎಂದಿದ್ದಾರೆ ಸುದೀಪ್.

ಸುದೀಪ್ ಅವರು ಪ್ರತಿ ಶನಿವಾರ ಒಂದಷ್ಟು ಜನರಿಗೆ ಕ್ಲಾಸ್ ತೆಗೆದುಕೊಳ್ಳುತ್ತಾರೆ. ಅವರು ಲಿಮಿಟ್ ದಾಟಿ ಹೋಗಿದ್ದು ಕಡಿಮೆ. ಆದರೆ, ಈ ವಾರ ಮಾತ್ರ ಅವರು ಮಿತಿ ಮೀರಿ ಕ್ಲಾಸ್ ತೆಗೆದುಕೊಂಡಿದ್ದಾರೆ. ಇದಕ್ಕೆ ಚೈತ್ರಾ ಶಾಕ್ ಆಗಿದ್ದಾರೆ. ಅವರಿಗೆ ಏನು ಹೇಳಬೇಕು ಎಂದೇ ಗೊತ್ತಾಗಲೇ ಇಲ್ಲ. ಕಣ್ಣಿನ ತುಂಬ ನೀರು ತುಂಬಿಕೊಂಡು ಮಾತನಾಡಲು ತಡಬಡಿಸಿದ್ದಾರೆ.

ತಾವು ಗಟ್ಟಿ ಧ್ವನಿಯಲ್ಲಿ ಮಾತನಾಡಿದ್ದಕ್ಕೆ ಸುದೀಪ್ ಅವರಿಗೇ ಬೇಸರ ಆಯಿತು. ಈ ಕಾರಣಕ್ಕೆ ಅವರು ಚೈತ್ರಾ ಬಳಿ ಕ್ಷಮೆ ಕೇಳಿದರು. ಆದರೆ, ಈ ಕ್ಷಮೆಗೆ ಚೈತ್ರಾ ಅವರು ಸ್ವಲ್ಪವೂ ಗಮನ ಕೊಡಲೇ ಇಲ್ಲ. ಇದಕ್ಕೆ ಸುದೀಪ್ ಬೇಸರ ಮಾಡಿಕೊಂಡರು. ಈ ಬಗ್ಗೆ ನೇರವಾಗಿ ಹೇಳಿದರು.

ತಪ್ಪಿನ ಅರಿವಾದ ಬಳಿಕ ಚೈತ್ರಾ ಅವರ ಕಡೆಯಿಂದಲೇ ಕ್ಷಮೆ ಬಂತು. ‘ನಾನು ಕ್ಷಮೆ ಕೇಳಿದಾಗ ನೀವು ಸ್ಪಂದಿಸಿಲ್ಲ. ಹೀಗಿರುವಾಗ ನಿಮ್ಮ ಕ್ಷಮೆಗೆ ನಾನೇಕೆ ಸ್ಪಂದಿಸಲಿ? ಅಯ್ಯೋ ನಾನು ತಲೆ ಕೆಟ್ ನನ್ನ ಮಗ. ಹುಚ್ಚ ಇಂದ ಕರಿಯರ್ ಶುರು ಮಾಡಿದವನು ನಾನು. 28 ವರ್ಷ ಅದರಲ್ಲೇ ಬದುಕಿದೀನಿ. ನಾನು ಕ್ಷಮೆ ಕೇಳಿದಾಗ ಸ್ಪಂದಿಸಿದರೆ ಒಳ್ಳೆ ಮನುಷ್ಯ. ಇಲ್ಲ ಎಂದರೆ ನನ್ನಂತ ತಲೆಕೆಟ್ಟವರು ಯಾರೂ ಇಲ್ಲ’ ಎಂದಿದ್ದಾರೆ ಸುದೀಪ್.

ಇದನ್ನೂ ಓದಿ:  ಸುದೀಪ್ ‘ಬಿಗ್ ಬಾಸ್’ ಕಂಬ್ಯಾಕ್​ಗೆ ಸಿಕ್ತು ಭರ್ಜರಿ ಟಿಆರ್​ಪಿ; ಎರಡಂಕಿ ದಾಟಿದ ‘ಪುಟ್ಟಕ್ಕನ ಮಕ್ಕಳು’ ಟಿವಿಆರ್

ನಂತರ ಚೈತ್ರಾ ಅವರು ಕ್ಯಾಮೆರಾ ಬಳಿ ಹೋಗಿ ‘ವಾತಾವರಣ ಉಸಿರುಗಟ್ಟಿಸುತ್ತಿದೆ. ನಾನು ಮನೆಯಿಂದ ಹೊರ ಹೋಗಬೇಕು. ನನ್ನ ಕಳುಹಿಸಿ’ ಎಂದು ಅವರು ಹೇಳಿದರು. ಇದಕ್ಕೆ ಬಿಗ್ ಬಾಸ್ ಯಾವ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ಕಾದು ನೋಡಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 11:01 pm, Sat, 16 November 24

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ