ಡಿಕೆ ರವಿ ಪಾತ್ರದಲ್ಲಿ ನಟಿಸೋಕೆ ಚಕ್ರವರ್ತಿ ಚಂದ್ರಚೂಡ್​ಗೆ ಆಫರ್​; ಆದರೆ 2 ಕಂಡೀಷನ್​

ಸಿನಿಮಾ ರಂಗದ ಜೊತೆ ಒಡನಾಟ ಹೊಂದಿರುವ ಚಕ್ರವರ್ತಿ ಚಂದ್ರಚೂಡ್​ ಅವರಿಗೆ ಈಗ ಡಿಕೆ ರವಿ ಪಾತ್ರದ ಆಫರ್​ ಸಿಕ್ಕಿದೆ. ಆದರೆ ನಟಿಸಬೇಕೋ ಬೇಡವೋ ಎಂಬ ಬಗ್ಗೆ ಅವರಿನ್ನೂ ತೀರ್ಮಾನ ತೆಗೆದುಕೊಂಡಿಲ್ಲ.

ಡಿಕೆ ರವಿ ಪಾತ್ರದಲ್ಲಿ ನಟಿಸೋಕೆ ಚಕ್ರವರ್ತಿ ಚಂದ್ರಚೂಡ್​ಗೆ ಆಫರ್​; ಆದರೆ 2 ಕಂಡೀಷನ್​
ಚಕ್ರವರ್ತಿ ಚಂದ್ರಚೂಡ್​, ಡಿಕೆ ರವಿ

Updated on: Jun 10, 2021 | 1:47 PM

ಕಳೆದ ಕೆಲವು ದಿನಗಳಿಂದ ರೋಹಿಣಿ ಸಿಂಧೂರಿ ಅವರ ಹೆಸರು ದೊಡ್ಡ ಮಟ್ಟದಲ್ಲಿ ಸುದ್ದಿ ಆಗುತ್ತಿದೆ. ಮೈಸೂರಿನಲ್ಲಿ ರಾಜಕೀಯ ಜಟಾಪಟಿ ಜೋರಾಗುತ್ತಿದ್ದಂತೆಯೇ ಗಾಂಧಿನಗರದಲ್ಲಿ ರೋಹಿಣಿ ಸಿಂಧೂರಿ ಅವರ ಕುರಿತು ಸಿನಿಮಾ ಮಾಡುವ ಬಗ್ಗೆ ಚರ್ಚೆ ನಡೆಯುತ್ತಿದೆ. ರೋಹಿಣಿ ಪಾತ್ರದಲ್ಲಿ ನಟಿ ಅಕ್ಷತಾ ಪಾಂಡಪುರ ನಟಿಸುತ್ತಾರೆ ಎಂಬ ಸುದ್ದಿ ಕೇಳಿಬಂದಿದೆ. ಈ ನಡುವೆ ಡಿಕೆ ರವಿ ಅವರ ಜೀವನಾಧಾರಿತ ಸಿನಿಮಾ ಬಗ್ಗೆಯೂ ಮಾತುಕತೆ ನಡೆಯುತ್ತಿದೆ. ಡಿವಿ ರವಿ ಪಾತ್ರದಲ್ಲಿ ಬಣ್ಣ ಹಚ್ಚುವಂತೆ ಚಕ್ರವರ್ತಿ ಚಂದ್ರಚೂಡ್​ ಅವರಿಗೆ ಆಫರ್​ ನೀಡಲಾಗಿದೆ.

ಈ ಬಗ್ಗೆ ಚಕ್ರವರ್ತಿ ಚಂದ್ರಚೂಡ್​ ಅವರು ಫೇಸ್​ಬುಕ್​ನಲ್ಲಿ ಬರೆದುಕೊಂಡಿದ್ದಾರೆ. ಪತ್ರಕರ್ತನಾಗಿ, ಬರಹಗಾರನಾಗಿ ಗುರುತಿಸಿಕೊಂಡಿದ್ದ ಚಕ್ರವರ್ತಿ ಚಂದ್ರಚೂಡ್​ ಅವರಿಗೆ ‘ಬಿಗ್​ ಬಾಸ್ ಕನ್ನಡ ಸೀಸನ್​ 8’ ಮೂಲಕ ಇನ್ನಷ್ಟು ಜನಪ್ರಿಯತೆ ಸಿಕ್ಕಿದೆ. ಸಿನಿಮಾ ರಂಗದ ಜೊತೆಗೂ ಹೆಚ್ಚು ಒಡನಾಟ ಹೊಂದಿರುವ ಅವರಿಗೆ ಈಗ ಡಿಕೆ ರವಿ ಪಾತ್ರದ ಆಫರ್​ ಸಿಕ್ಕಿದೆ. ಆದರೆ ನಟಿಸಬೇಕೋ ಬೇಡವೋ ಎಂಬ ಬಗ್ಗೆ ಅವರಿನ್ನೂ ತೀರ್ಮಾನ ತೆಗೆದುಕೊಂಡಿಲ್ಲ.

‘ಸಾ ರಾ ಮಹೇಶೂ ಡಿಕೆ ರವಿ ಪಿಕ್ಚರ್ ತಗೀತಾರಂತೆ. ಇತ್ತ ರೋಹಿಣಿ ಸಿಂಧೂರಿ ಸಿನಿಮಾ ಘೋಷಣೆಯಾಗಿದೆ. ನಿನ್ನೆ ಹೊಸ ಡೈರೆಕ್ಟರೊಬ್ಬರು ಡಿ.ಕೆ. ರವಿ ಪಾತ್ರ ಮಾಡ್ತೀರಾ ಅಂತ ಕೇಳಿದ್ರು. ಎರಡು ಕಂಡಿಷನ್ ಹಾಕಿದೀನಿ. ಆ 37 ಮೆಸೇಜ್ ತೋರಿಸ್ತೀರಾ ಸಿನಿಮಾದಲ್ಲಿ? ಇನ್ನೊಂದು bxjwoaabxಹೊಝಖಿಧಟಿ#*%833 (ದುಡ್ಡಲ್ಲ). ನೋಡಣ.. ಮುಂದಾ…’ ಎಂದು ಚಕ್ರವರ್ತಿ ಚಂದ್ರಚೂಡ್​ ಅವರು ಫೇಸ್​ಬುಕ್​ನಲ್ಲಿ ಬರೆದುಕೊಂಡಿದ್ದಾರೆ. ಆ ಎರಡನೇ ಕಂಡೀಷನ್​ ಏನು ಎಂಬುದನ್ನು ಅವರು ನಿಗೂಢವಾಗಿ ಇಟ್ಟಿದ್ದಾರೆ. ಸಿನಿಮಾ ಒಪ್ಪಿಕೊಳ್ಳುತ್ತಾರೋ ಇಲ್ಲವೋ ಎಂಬ ಕುತೂಹಲ ಕೂಡ ಜನರಲ್ಲಿ ಮೂಡಿದೆ.

ಚಕ್ರವರ್ತಿ ಚಂದ್ರಚೂಡ್​ ಅವರ ಈ ಪೋಸ್ಟ್ ಕಂಡು ನೆಟ್ಟಿಗರು ಹಲವು ಬಗೆಯಲ್ಲಿ ಪ್ರತಿಕ್ರಿಯಿಸಿದ್ದಾರೆ. ಇದು ಸೂಕ್ತ ಆಯ್ಕೆ ಎಂದು ಕೆಲವರು ಹೇಳಿದ್ದಾರೆ. ಆದರೆ ಕೆಲವರು ವಿರೋಧ ವ್ಯಕ್ತಪಡಿಸಿದ್ದಾರೆ. ‘ಈ ಸಿನಿಮಾ ಮಾಡಬೇಡಿ. ರಾಜಕೀಯ ಕೆಸರೆರೆಚಾಟದಲ್ಲಿ ನಿಮ್ಮ ಹೆಸರು ಬೇಡ. ಒಳ್ಳೆಯ ಸಂದೇಶ ಇರುವ ಪಾತ್ರಗಳನ್ನು ಮಾಡಿ. ಆದಷ್ಟು ಜಾಗ್ರತೆ ಇರಲಿ. ಪರಿಸ್ಥಿತಿ ಸರಿಯಿಲ್ಲ’ ಎಂಬಿತ್ಯಾದಿ ಕಮೆಂಟ್​ಗಳು ಬಂದಿವೆ.

ಇದನ್ನೂ ಓದಿ:

Akshatha Pandavapura : ರೋಹಿಣಿ ಸಿಂಧೂರಿ ಬಯೋಪಿಕ್ ಬಗ್ಗೆ ಅಕ್ಷತಾ ಪಾಂಡವರಪುರ ಮಾತು

ರೋಹಿಣಿ ಸಿಂಧೂರಿ ಬಯೋಪಿಕ್​ ಬಗ್ಗೆ ಚರ್ಚೆ; ಅಕ್ಷತಾ ಪಾಂಡವಪುರ ಹೆಸರನ್ನು ಸೂಚಿಸಿದ ಹಿರಿಯ ಬರಹಗಾರ್ತಿ

Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us