AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

96 ದಿನ ಜೈಲಿಗೆ ಹೋಗಿ ಬಂದಿದ್ದರಂತೆ ವೈಲ್ಡ್​ ಕಾರ್ಡ್​ ಸ್ಪರ್ಧಿ ಚಕ್ರವರ್ತಿ ಚಂದ್ರಚೂಡ! ಕಾರಣ?

ಪತ್ರಿಕೋದ್ಯಮದಿಂದ ತಮ್ಮ ವೃತ್ತಿ ಆರಂಭಿಸಿದ ಚಂದ್ರಚೂಡ ನಂತರ ಕಾಲಿಟ್ಟಿದ್ದು ಚಿತ್ರರಂಗಕ್ಕೆ. ಇವರು ಸಿನಿಮಾ ನಿರ್ದೇಶನಕ್ಕೆ ಇಳಿದರು. ಈಗ ನೇರವಾಗಿ ಬಿಗ್​ ಬಾಸ್​ ಮನೆಗೆ ಪ್ರವೇಶ ಪಡೆದುಕೊಂಡಿದ್ದಾರೆ.

96 ದಿನ ಜೈಲಿಗೆ ಹೋಗಿ ಬಂದಿದ್ದರಂತೆ ವೈಲ್ಡ್​ ಕಾರ್ಡ್​ ಸ್ಪರ್ಧಿ ಚಕ್ರವರ್ತಿ ಚಂದ್ರಚೂಡ! ಕಾರಣ?
ಚಕ್ರವರ್ತಿ ಚಂದ್ರಚೂಡ
Follow us
ರಾಜೇಶ್ ದುಗ್ಗುಮನೆ
| Updated By: ಆಯೇಷಾ ಬಾನು

Updated on: Apr 02, 2021 | 7:03 AM

ಬಿಗ್​ ಬಾಸ್​ ಐದನೇ ವಾರದಲ್ಲಿ ವೈಲ್ಡ್​ ಕಾರ್ಡ್​ ಎಂಟ್ರಿ ಆಗಿದೆ. ಪ್ರಶಾಂತ್​ ಸಂಬರಗಿ ಆಪ್ತ ಚಕ್ರವರ್ತಿ ಚಂದ್ರಚೂಡ ಅನ್ನೋದು ವಿಶೇಷ. ಬಂದ ದಿನವೇ ಮನೆಯಲ್ಲಿ ತುಂಬಾನೇ ವಿಚಿತ್ರವಾಗಿ ನಡೆದುಕೊಂಡಿದ್ದಾರೆ. ಅಷ್ಟೇ ಅಲ್ಲ, ತುಂಬಾನೇ ಚರ್ಚೆಗೂ ಕಾರಣವಾಗಿದ್ದಾರೆ. ಪತ್ರಿಕೋದ್ಯಮದಿಂದ ತಮ್ಮ ವೃತ್ತಿ ಆರಂಭಿಸಿದ ಚಕ್ರವರ್ತಿ ಚಂದ್ರಚೂಡ ನಂತರ ಕಾಲಿಟ್ಟಿದ್ದು ಚಿತ್ರರಂಗಕ್ಕೆ. ಇವರು ಸಿನಿಮಾ ನಿರ್ದೇಶನಕ್ಕೆ ಇಳಿದರು. ಈಗ ನೇರವಾಗಿ ಬಿಗ್​ ಬಾಸ್​ ಮನೆಗೆ ಪ್ರವೇಶ ಪಡೆದುಕೊಂಡಿದ್ದಾರೆ. ಕವಿತೆ ಬರೆಯುವುದರ ಜತೆಗೆ ಸಾಮಾಜಿಕ ಕಾರ್ಯಕರ್ತರಾಗಿಯೂ ಸೇವೆ ಸಲ್ಲಿಸಿದ್ದಾರೆ.

ಈಗಾಗಲೇ ಬಿಗ್​ ಬಾಸ್​ ಮನೆಯಲ್ಲಿ ಪ್ರಶಾಂತ್​ ಸಂಬರಗಿ ಮಾತು ಕೇಳಿ ಎಲ್ಲರಿಗೂ ಶಾಕಾಗಿದೆ. ಅವರು ನಡೆದುಕೊಳ್ಳುವ ರೀತಿ ಸಾಕಷ್ಟು ಜನರಿಗೆ ಇಷ್ಟವಾಗುತ್ತಿಲ್ಲ. ಮಾತಿನಲ್ಲಿ ಚಕ್ರವರ್ತಿ ಚಂದ್ರಚೂಡ​ ಕೂಡ ನಿಪುಣರು. ಅಲ್ಲದೆ, ಪ್ರಶಾಂತ್​-ಚಂದ್ರಚೂಡ ಇಬ್ಬರೂ ಆಪ್ತರು. ಹೀಗಾಗಿ, ಇಬ್ಬರಿಗೂ ಪರಸ್ಪರ ಧ್ವನಿ ಸಿಕ್ಕಂತೆ ಆಗಿದೆ.

ಚಂದ್ರಚೂಡ ಮನೆಗೆ ಬರುತ್ತಿದ್ದಂತೆ ಎಲ್ಲರನ್ನೂ ತಮ್ಮಡೊನೆ ಸೆಳೆದುಕೊಳ್ಳುವ ಪ್ರಯತ್ನ ಮಾಡಿದ್ದಾರೆ. ಬಿಗ್​ ಬಾಸ್​ ಪ್ರವೇಶಿಸಿದ ಅವರು ದೊಡ್ಡ ಧ್ವನಿಯಲ್ಲಿ ಮಾತನಾಡಿದ್ದಾರೆ. ನಾನು ಅನೇಕ ಚಳುವಳಿಗೆ ಭಾಗವಹಿಸಿದ್ದೆ. ಮೊದಲು ಆಂಧ್ರಪ್ರದೇಶದ ಪವಾಡ ಪುರಷರ ಬಗ್ಗೆ ನಾನು ಒಂದು ಪುಸ್ತಕ ಬರೆದೆ. ಅವರು ನಕಲಿ ಎಂದು ಹೇಳಿದ್ದೆ. ಅದು ನಿಜವೂ ಆಗಿತ್ತು. ಆದರೆ, ನನ್ನನ್ನು ತೆಗೆದುಕೊಂಡು ಹೋಗಿ 96 ದಿನ ಜೈಲಿನಲ್ಲಿಟ್ಟರು ಎಂದು ತಮ್ಮ ಇತಿಹಾಸ ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: ದಿವ್ಯಾ ಉರುಡುಗ ಸೆಳೆತದಲ್ಲಿ ಬಿಗ್​ ಬಾಸ್​ ಮನೆಗೆ ಬಂದ ಉದ್ದೇಶವನ್ನೇ ಮರೆತರಾ ಅರವಿಂದ್?

ದಿವ್ಯಾ ಉರುಡುಗ ಸೆಳೆತದಲ್ಲಿ ಬಿಗ್​ ಬಾಸ್​ ಮನೆಗೆ ಬಂದ ಉದ್ದೇಶವನ್ನೇ ಮರೆತರಾ ಅರವಿಂದ್?

ಬುಮ್ರಾ ಬೌಲಿಂಗ್​ನಲ್ಲಿ ಸಿಕ್ಸರ್ ಬಾರಿಸಿದ ರವಿ ಬಿಷ್ಣೋಯ್; ವಿಡಿಯೋ
ಬುಮ್ರಾ ಬೌಲಿಂಗ್​ನಲ್ಲಿ ಸಿಕ್ಸರ್ ಬಾರಿಸಿದ ರವಿ ಬಿಷ್ಣೋಯ್; ವಿಡಿಯೋ
ಭಾರತ-ಪಾಕ್​ ಗಡಿಯಿಂದ Tv9 ಗ್ರೌಂಡ್​ ರಿಪೋರ್ಟ್​: ಸನ್ನದ್ಧವಾಗಿರುವ BSF ಯೋಧ
ಭಾರತ-ಪಾಕ್​ ಗಡಿಯಿಂದ Tv9 ಗ್ರೌಂಡ್​ ರಿಪೋರ್ಟ್​: ಸನ್ನದ್ಧವಾಗಿರುವ BSF ಯೋಧ
ಐಪಿಎಲ್​ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ
ಐಪಿಎಲ್​ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ
ಡಾ.ರಾಜ್ ಕುಟುಂಬದ ಜೊತೆ ನಾವು ಸದಾ ಇರುತ್ತೇವೆ: ಡಿಕೆ ಶಿವಕುಮಾರ್
ಡಾ.ರಾಜ್ ಕುಟುಂಬದ ಜೊತೆ ನಾವು ಸದಾ ಇರುತ್ತೇವೆ: ಡಿಕೆ ಶಿವಕುಮಾರ್
ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್​ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ
ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್​ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ
ಕರ್ನಾಟಕದಲ್ಲಿ ನೆಲೆಸಿರುವ ಪಾಕ್​ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ
ಕರ್ನಾಟಕದಲ್ಲಿ ನೆಲೆಸಿರುವ ಪಾಕ್​ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ
ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ
ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ
ಕೆಲವರು ಚಿಲ್ಲರೆ ಹೇಳಿಕೆ ಕೊಡುತ್ತಿದ್ದಾರೆ: ಮತ್ತೆ ಗುಡುಗಿದ ಡಿಕೆಶಿ
ಕೆಲವರು ಚಿಲ್ಲರೆ ಹೇಳಿಕೆ ಕೊಡುತ್ತಿದ್ದಾರೆ: ಮತ್ತೆ ಗುಡುಗಿದ ಡಿಕೆಶಿ