AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಲೆ ಕೇಸ್​​ನಲ್ಲಿ ನಟ ದರ್ಶನ್​ ಅರೆಸ್ಟ್; ಬೆಂಗಳೂರಿನ ಮನೆ ಬಳಿ ಪೊಲೀಸ್ ಭದ್ರತೆ

ಕೊಲೆ ಕೇಸ್​​ನಲ್ಲಿ ಸ್ಯಾಂಡಲ್​​ವುಡ್​​​​ ನಟ ದರ್ಶನ್​ ಅರೆಸ್ಟ್ ಆಗಿದ್ದು ಬೆಂಗಳೂರಿನ ದರ್ಶನ್​ ಮನೆ ಬಳಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ. ದರ್ಶನ್​ ಮನೆ ಬಳಿ ಬ್ಯಾರಿಕೇಡ್ ಹಾಕಿ 20ಕ್ಕೂ ಹೆಚ್ಚು ಪೊಲೀಸರ ನಿಯೋಜನೆ ಮಾಡಲಾಗಿದೆ. ಫ್ಯಾನ್ಸ್​ಗಳಿಂದ ಏನಾದ್ರು ತೊಂದರೆ ಆಗಬಹುದು ಎಂಬ ಕಾರಣಕ್ಕೆ ಪೊಲೀಸರು ಎಚ್ಚರಿಕೆ ವಹಿಸಿದ್ದಾರೆ.

ಕೊಲೆ ಕೇಸ್​​ನಲ್ಲಿ ನಟ ದರ್ಶನ್​ ಅರೆಸ್ಟ್; ಬೆಂಗಳೂರಿನ ಮನೆ ಬಳಿ ಪೊಲೀಸ್ ಭದ್ರತೆ
ರೇಣುಕಾ ಸ್ವಾಮಿ, ನಟ ದರ್ಶನ್
ಮಂಗಳ ರಾಜಗೋಪಾಲ್​
| Edited By: ಆಯೇಷಾ ಬಾನು|

Updated on:Jun 11, 2024 | 11:15 AM

Share

ಬೆಂಗಳೂರು, ಜೂನ್.11: ಆಪ್ತೆ ಪವಿತ್ರಗೌಡಗೆ ಅಶ್ಲೀಲವಾಗಿ ಮೆಸೇಜ್ ಮಾಡಿದ್ದಕ್ಕೆ ರೇಣುಕಾ ಸ್ವಾಮಿ ಎಂಬುವವರನ್ನು ಕೊಲೆ (Murder) ಮಾಡಲು ಸುಪಾರಿ ನೀಡಿದ್ದರು ಎಂಬ ಕಾರಣಕ್ಕೆ ಚಾಲೆಂಜಿಂಗ್ ಸ್ಟಾರ್, ನಟ ದರ್ಶನ್ (Darshan Thoogudeepa) ಅವರನ್ನು ಅರೆಸ್ಟ್ ಮಾಡಲಾಗಿದೆ. ವಿಜಯನಗರ ಎಸಿಪಿ ಚಂದನ್​ ತಂಡ ಮೈಸೂರಿನ ಫಾರ್ಮ್​​ಹೌಸ್​ನಲ್ಲಿ ನಟ ದರ್ಶನ್​ ಅರೆಸ್ಟ್ ಮಾಡಿದ್ದಾರೆ. ಈ ಘಟನೆ ಬೆನ್ನಲ್ಲೇ ಬೆಂಗಳೂರಿನ ನಟ ದರ್ಶನ್​ ಮನೆ ಬಳಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ. ದರ್ಶನ್​ ಮನೆ ಬಳಿ ಬ್ಯಾರಿಕೇಡ್ ಹಾಕಿ 20ಕ್ಕೂ ಹೆಚ್ಚು ಪೊಲೀಸರ ನಿಯೋಜನೆ ಮಾಡಲಾಗಿದೆ.

ಫ್ಯಾನ್ಸ್​ಗಳಿಂದ ಏನಾದ್ರು ತೊಂದರೆ ಆಗಬಹುದು ಎಂಬ ಕಾರಣಕ್ಕೆ ಪೊಲೀಸರು ಎಚ್ಚರಿಕೆ ವಹಿಸಿದ್ದಾರೆ. ಸದ್ಯ ದರ್ಶನ್ ಮನೆ ಬಳಿ ಯಾರು ಕೂಡ ಇಲ್ಲ ಎಂದು ತಿಳಿದುಬಂದಿದೆ. ಚಿತ್ರದುರ್ಗದ ರೇಣುಕಾಸ್ವಾಮಿ ಎಂಬಾತ ದರ್ಶನ್ ಆಪ್ತೆ ಪವಿತ್ರಾ ಗೌಡಗೆ ಅಶ್ಲೀಲವಾಗಿ ಮೆಸೇಜ್ ಮಾಡಿದ್ದ. ಈ ಹಿನ್ನೆಲೆ ನಟ ದರ್ಶನ್, ಚಿತ್ರದುರ್ಗದ ದರ್ಶನ್ ಫ್ಯಾನ್ ಸಂಘಟನೆ ಅಧ್ಯಕ್ಷನಿಗೆ ಫೋನ್ ಕಾಲ್ ಮಾಡಿ ಚಿತ್ರದುರ್ಗದಿಂದ ರೇಣುಕಾ ಸ್ವಾಮಿಯನ್ನ ಕರೆತರುವಂತೆ ಹೇಳಿದ್ದರು.

ಇದನ್ನೂ ಓದಿ: ದರ್ಶನ್ ವಿವಾದಗಳು ಒಂದೆರಡಲ್ಲ, ಇಲ್ಲಿವೆ ಹಳೆ ಪ್ರಕರಣಗಳ ವಿವರ

ಬೆಂಗಳೂರಿಗೆ ರೇಣುಕಾಸ್ವಾಮಿ ಕರೆದುಕೊಂಡು ಬಂದು ವಿನಯ್ ಎನ್ನುವವರಿಗೆ ಸೇರಿದ ಶೆಡ್​ನಲ್ಲಿ ಇರಿಸಿದ್ದರು. ರೇಣುಕಾಸ್ವಾಮಿಗೆ ದರ್ಶನ್ ಸೇರಿ 4 ಜನರು ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಹಲ್ಲೆ ಬಳಿಕ ರೇಣುಕಾಸ್ವಾಮಿಗೆ ಬಲವಾದ ಆಯುಧದಿಂದ ಶೆಡ್​ನಲ್ಲೇ ಹಲ್ಲೆ ಮಾಡಿ ಜೂನ್​ 8ರ ಶನಿವಾರ ರಾತ್ರಿ ಕೊಲೆ ಮಾಡಲಾಗಿದೆ. ನಂತರ ಕಾಮಾಕ್ಷಿ ಪಾಳ್ಯದ ಮೋರಿಯಲ್ಲಿ ಮೃತದೇಹ ಎಸೆಯಲಾಗಿದೆ. ಭಾನುವಾರ ಬೆಳಗಿನ ಜಾವ ರೇಣುಕಾಸ್ವಾಮಿ ಮೃತದೇಹ ಪತ್ತೆಯಾಗಿತ್ತು.

ರೇಣುಕಾಸ್ವಾಮಿ ಶವವನ್ನ ನಾಯಿಗಳು ಎಳೆಯುತ್ತಿದ್ದಾಗ ಮೃತದೇಹ ಪತ್ತೆಯಾಗಿತ್ತು. ಸದ್ಯ ಕಾಮಾಕ್ಷಿ ಪಾಳ್ಯ ಸ್ಟೇಷನ್​ಗೆ ರೇಣುಕಾಸ್ವಾಮಿ ಪೋಷಕರು ಆಗಮಿಸಿದ್ದು ಕಣ್ಣೀರಿಟ್ಟಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 11:14 am, Tue, 11 June 24

Follow Us
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ