AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಲೆ ಕೇಸ್​​ನಲ್ಲಿ ನಟ ದರ್ಶನ್​ ಅರೆಸ್ಟ್; ಬೆಂಗಳೂರಿನ ಮನೆ ಬಳಿ ಪೊಲೀಸ್ ಭದ್ರತೆ

ಕೊಲೆ ಕೇಸ್​​ನಲ್ಲಿ ಸ್ಯಾಂಡಲ್​​ವುಡ್​​​​ ನಟ ದರ್ಶನ್​ ಅರೆಸ್ಟ್ ಆಗಿದ್ದು ಬೆಂಗಳೂರಿನ ದರ್ಶನ್​ ಮನೆ ಬಳಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ. ದರ್ಶನ್​ ಮನೆ ಬಳಿ ಬ್ಯಾರಿಕೇಡ್ ಹಾಕಿ 20ಕ್ಕೂ ಹೆಚ್ಚು ಪೊಲೀಸರ ನಿಯೋಜನೆ ಮಾಡಲಾಗಿದೆ. ಫ್ಯಾನ್ಸ್​ಗಳಿಂದ ಏನಾದ್ರು ತೊಂದರೆ ಆಗಬಹುದು ಎಂಬ ಕಾರಣಕ್ಕೆ ಪೊಲೀಸರು ಎಚ್ಚರಿಕೆ ವಹಿಸಿದ್ದಾರೆ.

ಕೊಲೆ ಕೇಸ್​​ನಲ್ಲಿ ನಟ ದರ್ಶನ್​ ಅರೆಸ್ಟ್; ಬೆಂಗಳೂರಿನ ಮನೆ ಬಳಿ ಪೊಲೀಸ್ ಭದ್ರತೆ
ರೇಣುಕಾ ಸ್ವಾಮಿ, ನಟ ದರ್ಶನ್
ಮಂಗಳ ರಾಜಗೋಪಾಲ್​
| Edited By: ಆಯೇಷಾ ಬಾನು|

Updated on:Jun 11, 2024 | 11:15 AM

Share

ಬೆಂಗಳೂರು, ಜೂನ್.11: ಆಪ್ತೆ ಪವಿತ್ರಗೌಡಗೆ ಅಶ್ಲೀಲವಾಗಿ ಮೆಸೇಜ್ ಮಾಡಿದ್ದಕ್ಕೆ ರೇಣುಕಾ ಸ್ವಾಮಿ ಎಂಬುವವರನ್ನು ಕೊಲೆ (Murder) ಮಾಡಲು ಸುಪಾರಿ ನೀಡಿದ್ದರು ಎಂಬ ಕಾರಣಕ್ಕೆ ಚಾಲೆಂಜಿಂಗ್ ಸ್ಟಾರ್, ನಟ ದರ್ಶನ್ (Darshan Thoogudeepa) ಅವರನ್ನು ಅರೆಸ್ಟ್ ಮಾಡಲಾಗಿದೆ. ವಿಜಯನಗರ ಎಸಿಪಿ ಚಂದನ್​ ತಂಡ ಮೈಸೂರಿನ ಫಾರ್ಮ್​​ಹೌಸ್​ನಲ್ಲಿ ನಟ ದರ್ಶನ್​ ಅರೆಸ್ಟ್ ಮಾಡಿದ್ದಾರೆ. ಈ ಘಟನೆ ಬೆನ್ನಲ್ಲೇ ಬೆಂಗಳೂರಿನ ನಟ ದರ್ಶನ್​ ಮನೆ ಬಳಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ. ದರ್ಶನ್​ ಮನೆ ಬಳಿ ಬ್ಯಾರಿಕೇಡ್ ಹಾಕಿ 20ಕ್ಕೂ ಹೆಚ್ಚು ಪೊಲೀಸರ ನಿಯೋಜನೆ ಮಾಡಲಾಗಿದೆ.

ಫ್ಯಾನ್ಸ್​ಗಳಿಂದ ಏನಾದ್ರು ತೊಂದರೆ ಆಗಬಹುದು ಎಂಬ ಕಾರಣಕ್ಕೆ ಪೊಲೀಸರು ಎಚ್ಚರಿಕೆ ವಹಿಸಿದ್ದಾರೆ. ಸದ್ಯ ದರ್ಶನ್ ಮನೆ ಬಳಿ ಯಾರು ಕೂಡ ಇಲ್ಲ ಎಂದು ತಿಳಿದುಬಂದಿದೆ. ಚಿತ್ರದುರ್ಗದ ರೇಣುಕಾಸ್ವಾಮಿ ಎಂಬಾತ ದರ್ಶನ್ ಆಪ್ತೆ ಪವಿತ್ರಾ ಗೌಡಗೆ ಅಶ್ಲೀಲವಾಗಿ ಮೆಸೇಜ್ ಮಾಡಿದ್ದ. ಈ ಹಿನ್ನೆಲೆ ನಟ ದರ್ಶನ್, ಚಿತ್ರದುರ್ಗದ ದರ್ಶನ್ ಫ್ಯಾನ್ ಸಂಘಟನೆ ಅಧ್ಯಕ್ಷನಿಗೆ ಫೋನ್ ಕಾಲ್ ಮಾಡಿ ಚಿತ್ರದುರ್ಗದಿಂದ ರೇಣುಕಾ ಸ್ವಾಮಿಯನ್ನ ಕರೆತರುವಂತೆ ಹೇಳಿದ್ದರು.

ಇದನ್ನೂ ಓದಿ: ದರ್ಶನ್ ವಿವಾದಗಳು ಒಂದೆರಡಲ್ಲ, ಇಲ್ಲಿವೆ ಹಳೆ ಪ್ರಕರಣಗಳ ವಿವರ

ಬೆಂಗಳೂರಿಗೆ ರೇಣುಕಾಸ್ವಾಮಿ ಕರೆದುಕೊಂಡು ಬಂದು ವಿನಯ್ ಎನ್ನುವವರಿಗೆ ಸೇರಿದ ಶೆಡ್​ನಲ್ಲಿ ಇರಿಸಿದ್ದರು. ರೇಣುಕಾಸ್ವಾಮಿಗೆ ದರ್ಶನ್ ಸೇರಿ 4 ಜನರು ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಹಲ್ಲೆ ಬಳಿಕ ರೇಣುಕಾಸ್ವಾಮಿಗೆ ಬಲವಾದ ಆಯುಧದಿಂದ ಶೆಡ್​ನಲ್ಲೇ ಹಲ್ಲೆ ಮಾಡಿ ಜೂನ್​ 8ರ ಶನಿವಾರ ರಾತ್ರಿ ಕೊಲೆ ಮಾಡಲಾಗಿದೆ. ನಂತರ ಕಾಮಾಕ್ಷಿ ಪಾಳ್ಯದ ಮೋರಿಯಲ್ಲಿ ಮೃತದೇಹ ಎಸೆಯಲಾಗಿದೆ. ಭಾನುವಾರ ಬೆಳಗಿನ ಜಾವ ರೇಣುಕಾಸ್ವಾಮಿ ಮೃತದೇಹ ಪತ್ತೆಯಾಗಿತ್ತು.

ರೇಣುಕಾಸ್ವಾಮಿ ಶವವನ್ನ ನಾಯಿಗಳು ಎಳೆಯುತ್ತಿದ್ದಾಗ ಮೃತದೇಹ ಪತ್ತೆಯಾಗಿತ್ತು. ಸದ್ಯ ಕಾಮಾಕ್ಷಿ ಪಾಳ್ಯ ಸ್ಟೇಷನ್​ಗೆ ರೇಣುಕಾಸ್ವಾಮಿ ಪೋಷಕರು ಆಗಮಿಸಿದ್ದು ಕಣ್ಣೀರಿಟ್ಟಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 11:14 am, Tue, 11 June 24

Follow Us
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​