ಕೊಲೆ ಕೇಸ್​​ನಲ್ಲಿ ನಟ ದರ್ಶನ್​ ಅರೆಸ್ಟ್; ಬೆಂಗಳೂರಿನ ಮನೆ ಬಳಿ ಪೊಲೀಸ್ ಭದ್ರತೆ

ಕೊಲೆ ಕೇಸ್​​ನಲ್ಲಿ ಸ್ಯಾಂಡಲ್​​ವುಡ್​​​​ ನಟ ದರ್ಶನ್​ ಅರೆಸ್ಟ್ ಆಗಿದ್ದು ಬೆಂಗಳೂರಿನ ದರ್ಶನ್​ ಮನೆ ಬಳಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ. ದರ್ಶನ್​ ಮನೆ ಬಳಿ ಬ್ಯಾರಿಕೇಡ್ ಹಾಕಿ 20ಕ್ಕೂ ಹೆಚ್ಚು ಪೊಲೀಸರ ನಿಯೋಜನೆ ಮಾಡಲಾಗಿದೆ. ಫ್ಯಾನ್ಸ್​ಗಳಿಂದ ಏನಾದ್ರು ತೊಂದರೆ ಆಗಬಹುದು ಎಂಬ ಕಾರಣಕ್ಕೆ ಪೊಲೀಸರು ಎಚ್ಚರಿಕೆ ವಹಿಸಿದ್ದಾರೆ.

ಕೊಲೆ ಕೇಸ್​​ನಲ್ಲಿ ನಟ ದರ್ಶನ್​ ಅರೆಸ್ಟ್; ಬೆಂಗಳೂರಿನ ಮನೆ ಬಳಿ ಪೊಲೀಸ್ ಭದ್ರತೆ
ರೇಣುಕಾ ಸ್ವಾಮಿ, ನಟ ದರ್ಶನ್
Follow us
| Updated By: ಆಯೇಷಾ ಬಾನು

Updated on:Jun 11, 2024 | 11:15 AM

ಬೆಂಗಳೂರು, ಜೂನ್.11: ಆಪ್ತೆ ಪವಿತ್ರಗೌಡಗೆ ಅಶ್ಲೀಲವಾಗಿ ಮೆಸೇಜ್ ಮಾಡಿದ್ದಕ್ಕೆ ರೇಣುಕಾ ಸ್ವಾಮಿ ಎಂಬುವವರನ್ನು ಕೊಲೆ (Murder) ಮಾಡಲು ಸುಪಾರಿ ನೀಡಿದ್ದರು ಎಂಬ ಕಾರಣಕ್ಕೆ ಚಾಲೆಂಜಿಂಗ್ ಸ್ಟಾರ್, ನಟ ದರ್ಶನ್ (Darshan Thoogudeepa) ಅವರನ್ನು ಅರೆಸ್ಟ್ ಮಾಡಲಾಗಿದೆ. ವಿಜಯನಗರ ಎಸಿಪಿ ಚಂದನ್​ ತಂಡ ಮೈಸೂರಿನ ಫಾರ್ಮ್​​ಹೌಸ್​ನಲ್ಲಿ ನಟ ದರ್ಶನ್​ ಅರೆಸ್ಟ್ ಮಾಡಿದ್ದಾರೆ. ಈ ಘಟನೆ ಬೆನ್ನಲ್ಲೇ ಬೆಂಗಳೂರಿನ ನಟ ದರ್ಶನ್​ ಮನೆ ಬಳಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ. ದರ್ಶನ್​ ಮನೆ ಬಳಿ ಬ್ಯಾರಿಕೇಡ್ ಹಾಕಿ 20ಕ್ಕೂ ಹೆಚ್ಚು ಪೊಲೀಸರ ನಿಯೋಜನೆ ಮಾಡಲಾಗಿದೆ.

ಫ್ಯಾನ್ಸ್​ಗಳಿಂದ ಏನಾದ್ರು ತೊಂದರೆ ಆಗಬಹುದು ಎಂಬ ಕಾರಣಕ್ಕೆ ಪೊಲೀಸರು ಎಚ್ಚರಿಕೆ ವಹಿಸಿದ್ದಾರೆ. ಸದ್ಯ ದರ್ಶನ್ ಮನೆ ಬಳಿ ಯಾರು ಕೂಡ ಇಲ್ಲ ಎಂದು ತಿಳಿದುಬಂದಿದೆ. ಚಿತ್ರದುರ್ಗದ ರೇಣುಕಾಸ್ವಾಮಿ ಎಂಬಾತ ದರ್ಶನ್ ಆಪ್ತೆ ಪವಿತ್ರಾ ಗೌಡಗೆ ಅಶ್ಲೀಲವಾಗಿ ಮೆಸೇಜ್ ಮಾಡಿದ್ದ. ಈ ಹಿನ್ನೆಲೆ ನಟ ದರ್ಶನ್, ಚಿತ್ರದುರ್ಗದ ದರ್ಶನ್ ಫ್ಯಾನ್ ಸಂಘಟನೆ ಅಧ್ಯಕ್ಷನಿಗೆ ಫೋನ್ ಕಾಲ್ ಮಾಡಿ ಚಿತ್ರದುರ್ಗದಿಂದ ರೇಣುಕಾ ಸ್ವಾಮಿಯನ್ನ ಕರೆತರುವಂತೆ ಹೇಳಿದ್ದರು.

ಇದನ್ನೂ ಓದಿ: ದರ್ಶನ್ ವಿವಾದಗಳು ಒಂದೆರಡಲ್ಲ, ಇಲ್ಲಿವೆ ಹಳೆ ಪ್ರಕರಣಗಳ ವಿವರ

ಬೆಂಗಳೂರಿಗೆ ರೇಣುಕಾಸ್ವಾಮಿ ಕರೆದುಕೊಂಡು ಬಂದು ವಿನಯ್ ಎನ್ನುವವರಿಗೆ ಸೇರಿದ ಶೆಡ್​ನಲ್ಲಿ ಇರಿಸಿದ್ದರು. ರೇಣುಕಾಸ್ವಾಮಿಗೆ ದರ್ಶನ್ ಸೇರಿ 4 ಜನರು ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಹಲ್ಲೆ ಬಳಿಕ ರೇಣುಕಾಸ್ವಾಮಿಗೆ ಬಲವಾದ ಆಯುಧದಿಂದ ಶೆಡ್​ನಲ್ಲೇ ಹಲ್ಲೆ ಮಾಡಿ ಜೂನ್​ 8ರ ಶನಿವಾರ ರಾತ್ರಿ ಕೊಲೆ ಮಾಡಲಾಗಿದೆ. ನಂತರ ಕಾಮಾಕ್ಷಿ ಪಾಳ್ಯದ ಮೋರಿಯಲ್ಲಿ ಮೃತದೇಹ ಎಸೆಯಲಾಗಿದೆ. ಭಾನುವಾರ ಬೆಳಗಿನ ಜಾವ ರೇಣುಕಾಸ್ವಾಮಿ ಮೃತದೇಹ ಪತ್ತೆಯಾಗಿತ್ತು.

ರೇಣುಕಾಸ್ವಾಮಿ ಶವವನ್ನ ನಾಯಿಗಳು ಎಳೆಯುತ್ತಿದ್ದಾಗ ಮೃತದೇಹ ಪತ್ತೆಯಾಗಿತ್ತು. ಸದ್ಯ ಕಾಮಾಕ್ಷಿ ಪಾಳ್ಯ ಸ್ಟೇಷನ್​ಗೆ ರೇಣುಕಾಸ್ವಾಮಿ ಪೋಷಕರು ಆಗಮಿಸಿದ್ದು ಕಣ್ಣೀರಿಟ್ಟಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 11:14 am, Tue, 11 June 24

ತಾಜಾ ಸುದ್ದಿ
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!