AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ರಿಕೆಟ್​ ಆಡುವಾಗ ಮೈದಾನದಲ್ಲೇ ಕಿತ್ತಾಡಿಕೊಂಡ ದರ್ಶನ್​-ಅಭಿಷೇಕ್​; ಅಸಲಿಗೆ ಅಲ್ಲಿ ನಡೆದಿದ್ದೇನು?

ದರ್ಶನ್​ಅವರಿಗೆ ಕ್ರಿಕೆಟ್​ ಆಡುವುದು ಎಂದರೆ ತುಂಬಾನೇ ಪ್ರೀತಿ. ಸಮಯ ಸಿಕ್ಕಾಗೆಲ್ಲ, ಗೆಳೆಯರ ಜತೆ ಅವರು ಕ್ರಿಕೆಟ್​ ಆಡುತ್ತಾರೆ.

ಕ್ರಿಕೆಟ್​ ಆಡುವಾಗ ಮೈದಾನದಲ್ಲೇ ಕಿತ್ತಾಡಿಕೊಂಡ ದರ್ಶನ್​-ಅಭಿಷೇಕ್​; ಅಸಲಿಗೆ ಅಲ್ಲಿ ನಡೆದಿದ್ದೇನು?
ಕ್ಯೂಟ್​ ಕ್ಯೂಟ್​ ಆಗಿ ಕಿತ್ತಾಡಿಕೊಂಡ ದರ್ಶನ್​-ಅಭಿಷೇಕ್​
ರಾಜೇಶ್ ದುಗ್ಗುಮನೆ
|

Updated on:Mar 27, 2021 | 4:56 PM

Share

ನಟ ಅಭಿಷೇಕ್​ ಅಂಬರೀಷ್​​ ಹಾಗೂ ಚಾಲೆಂಜಿಂಗ್ ಸ್ಟಾರ್​ ದರ್ಶನ್​ ಈ ಮೊದಲಿನಿಂದಲೂ ಗೆಳೆಯರು. ಅಂಬರೀಷ್​ ಜತೆ ದರ್ಶನ್​ ಒಳ್ಳೆಯ ಒಡನಾಟ ಹೊಂದಿದ್ದರು. ಹೀಗಾಗಿ, ಅಭಿಷೇಕ್​-ದರ್ಶನ್​ ನಡುವಿನ ಬಾಂಧವ್ಯ ಮತ್ತಷ್ಟು ಗಟ್ಟಿ ಆಗಿದೆ. ಅನೇಕ ಬಾರಿ ಅಭಿಷೇಕ್​ ನನ್ನ ತಮ್ಮ ಎಂದೇ ಹೇಳಿಕೊಂಡಿದ್ದಾರೆ ದರ್ಶನ್​. ಈಗ ಇದು ಮತ್ತೊಮ್ಮೆ ಸಾಬೀತಾಗಿದೆ. ಕ್ರಿಕೆಟ್​ ಮೈದಾನದಲ್ಲಿ ದರ್ಶನ್​-ಅಭಿಷೇಕ್​ ಅಣ್ಣ ತಮ್ಮಂದಿರಂತೆ ಜಗಳವಾಡಿದ್ದಾರೆ. ಈ ವಿಡಿಯೋ ಈಗ ಸಾಕಷ್ಟು ವೈರಲ್​ ಆಗಿದೆ. ದರ್ಶನ್​ ಆಗಾಗ ಗೆಳೆಯರ ಜತೆ ಕೂಡಿ ಟ್ರಿಪ್​ ಹೋಗುತ್ತಿರುತ್ತಾರೆ. ಫೋಟೋಗ್ರಫಿ ಬಗ್ಗೆ ಪ್ರೀತಿ ಹೆಚ್ಚಿರುವುದರಿಂದ ಕಾಡಿಗೆ ಹೋಗಿ ಛಾಯಾಗ್ರಾಹಣ ಮಾಡುತ್ತಾರೆ. ಇದರ ಜತೆಗೆ ದರ್ಶನ್​ಗೆ ಕ್ರಿಕೆಟ್​ ಆಡುವುದು ಎಂದರೆ ತುಂಬಾನೇ ಪ್ರೀತಿ. ಸಮಯ ಸಿಕ್ಕಾಗೆಲ್ಲ, ಗೆಳೆಯರ ಜತೆ ಅವರು ಕ್ರಿಕೆಟ್​ ಆಡುತ್ತಾರೆ.

ಇತ್ತೀಚೆಗೆ ಕೂಡ ದರ್ಶನ್​-ಅಭಿಷೇಕ್​ ಕ್ರಿಕೆಟ್​ ಆಡೋಕೆ ತೆರಳಿದ್ದಾರೆ. ಕ್ರಿಕೆಟ್​ ಆಡುವ ವೇಳೆ ಇಬ್ಬರೂ ಸಣ್ಣ ವಿಚಾರಕ್ಕೆ ಪರಸ್ಪರ ಕಾಲೆಳೆದುಕೊಂಡಿದ್ದಾರೆ. ಮೋಸ ಮಾಡ್ತಾ ಇರ್ತಾರೆ. ಆದರೂ ಗೆಲ್ಲಬೇಕು. ಇಟ್ಸ್​ ಒಕೆ ಎಂದು ಅಭಿಷೇಕ್​ ಗೆಳೆಯರನ್ನು ಕರೆದುಕೊಂಡು ಹೊರಟಿದ್ದಾರೆ. ಈ ವೇಳೆ ಅಭಿಷೇಕ್​ ಹಿಂಭಾಗಕ್ಕೆ ಒದೆಯೋಕೆ ಹೋಗಿದ್ದಾರೆ ದರ್ಶನ್​. ಆಗ ಅಭಿಷೇಕ್​ ನಗುತ್ತಲೇ ತಪ್ಪಿಸಿಕೊಂಡಿದ್ದಾರೆ.

ಸದ್ಯ, ಈ ಕ್ಯೂಟ್​ ಫೈಟ್​ ವಿಡಿಯೋ ಸಾಕಷ್ಟು ವೈರಲ್​ ಆಗಿದೆ. ದರ್ಶನ್​-ಅಭಿಷೇಕ್​ ಸ್ವಂಥ ಅಣ್ಣ ತಮ್ಮರಂತೆ ನಡೆದುಕೊಳ್ಳುತ್ತಿರುವುದನ್ನು ನೋಡಿ ಅವರ ಅಭಿಮಾನಿಗಳು ಖುಷಿಯಾಗಿದ್ದಾರೆ.

ಸಿನಿಮಾ ವಿಚಾರಕ್ಕೆ ಬರುವುದಾದರೆ, ದರ್ಶನ್​ ನಟನೆಯ ರಾಬರ್ಟ್​ ಸಿನಿಮಾ ಬಾಕ್ಸ್​ ಆಫೀಸ್​ನಲ್ಲಿ ಒಳ್ಳೆಯ ಕಲೆಕ್ಷನ್​ ಮಾಡುತ್ತಿದೆ. ಶೀಘ್ರವೇ ಸಿನಿಮಾ 100 ಕೋಟಿ ಕ್ಲಬ್​ ಸೇರುವ ಎಲ್ಲಾ ಲಕ್ಷಣವಿದೆ. ಅಭಿಷೇಕ್​ ಅಂಬರೀಷ್​, ಬ್ಯಾಡ್​ಮ್ಯಾನರ್ಸ್​ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ರಚಿತಾ ರಾಮ್​ ಚಿತ್ರದ ನಾಯಕಿ. ದುನಿಯಾ ಸೂರಿ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ.

ಇದನ್ನೂ ಓದಿ: Roberrt: ರಾಜ್ಯಾದ್ಯಂತ ಇನ್ಮೇಲೆ ಡಿ ಬಾಸ್​ ಜಾತ್ರೆ! ಫ್ಯಾನ್ಸ್​ಗೆ ಧನ್ಯವಾದ ಹೇಳಲು ದರ್ಶನ್​ ದೊಡ್ಡ ನಿರ್ಧಾರ!

ದರ್ಶನ್​-ಸುದೀಪ್​ ಒಂದಾಗಿಸಲು ಪಣ ತೊಟ್ಟ ಫ್ಯಾನ್ಸ್​! ಈ ಮನವಿಗೆ ಒಪ್ಪಿಕೊಳ್ತಾರಾ ಕಿಚ್ಚ-ದಚ್ಚು?

Published On - 4:56 pm, Sat, 27 March 21

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ