ಕ್ರಿಕೆಟ್​ ಆಡುವಾಗ ಮೈದಾನದಲ್ಲೇ ಕಿತ್ತಾಡಿಕೊಂಡ ದರ್ಶನ್​-ಅಭಿಷೇಕ್​; ಅಸಲಿಗೆ ಅಲ್ಲಿ ನಡೆದಿದ್ದೇನು?

ದರ್ಶನ್​ಅವರಿಗೆ ಕ್ರಿಕೆಟ್​ ಆಡುವುದು ಎಂದರೆ ತುಂಬಾನೇ ಪ್ರೀತಿ. ಸಮಯ ಸಿಕ್ಕಾಗೆಲ್ಲ, ಗೆಳೆಯರ ಜತೆ ಅವರು ಕ್ರಿಕೆಟ್​ ಆಡುತ್ತಾರೆ.

ಕ್ರಿಕೆಟ್​ ಆಡುವಾಗ ಮೈದಾನದಲ್ಲೇ ಕಿತ್ತಾಡಿಕೊಂಡ ದರ್ಶನ್​-ಅಭಿಷೇಕ್​; ಅಸಲಿಗೆ ಅಲ್ಲಿ ನಡೆದಿದ್ದೇನು?
ಕ್ಯೂಟ್​ ಕ್ಯೂಟ್​ ಆಗಿ ಕಿತ್ತಾಡಿಕೊಂಡ ದರ್ಶನ್​-ಅಭಿಷೇಕ್​
Follow us
|

Updated on:Mar 27, 2021 | 4:56 PM

ನಟ ಅಭಿಷೇಕ್​ ಅಂಬರೀಷ್​​ ಹಾಗೂ ಚಾಲೆಂಜಿಂಗ್ ಸ್ಟಾರ್​ ದರ್ಶನ್​ ಈ ಮೊದಲಿನಿಂದಲೂ ಗೆಳೆಯರು. ಅಂಬರೀಷ್​ ಜತೆ ದರ್ಶನ್​ ಒಳ್ಳೆಯ ಒಡನಾಟ ಹೊಂದಿದ್ದರು. ಹೀಗಾಗಿ, ಅಭಿಷೇಕ್​-ದರ್ಶನ್​ ನಡುವಿನ ಬಾಂಧವ್ಯ ಮತ್ತಷ್ಟು ಗಟ್ಟಿ ಆಗಿದೆ. ಅನೇಕ ಬಾರಿ ಅಭಿಷೇಕ್​ ನನ್ನ ತಮ್ಮ ಎಂದೇ ಹೇಳಿಕೊಂಡಿದ್ದಾರೆ ದರ್ಶನ್​. ಈಗ ಇದು ಮತ್ತೊಮ್ಮೆ ಸಾಬೀತಾಗಿದೆ. ಕ್ರಿಕೆಟ್​ ಮೈದಾನದಲ್ಲಿ ದರ್ಶನ್​-ಅಭಿಷೇಕ್​ ಅಣ್ಣ ತಮ್ಮಂದಿರಂತೆ ಜಗಳವಾಡಿದ್ದಾರೆ. ಈ ವಿಡಿಯೋ ಈಗ ಸಾಕಷ್ಟು ವೈರಲ್​ ಆಗಿದೆ. ದರ್ಶನ್​ ಆಗಾಗ ಗೆಳೆಯರ ಜತೆ ಕೂಡಿ ಟ್ರಿಪ್​ ಹೋಗುತ್ತಿರುತ್ತಾರೆ. ಫೋಟೋಗ್ರಫಿ ಬಗ್ಗೆ ಪ್ರೀತಿ ಹೆಚ್ಚಿರುವುದರಿಂದ ಕಾಡಿಗೆ ಹೋಗಿ ಛಾಯಾಗ್ರಾಹಣ ಮಾಡುತ್ತಾರೆ. ಇದರ ಜತೆಗೆ ದರ್ಶನ್​ಗೆ ಕ್ರಿಕೆಟ್​ ಆಡುವುದು ಎಂದರೆ ತುಂಬಾನೇ ಪ್ರೀತಿ. ಸಮಯ ಸಿಕ್ಕಾಗೆಲ್ಲ, ಗೆಳೆಯರ ಜತೆ ಅವರು ಕ್ರಿಕೆಟ್​ ಆಡುತ್ತಾರೆ.

ಇತ್ತೀಚೆಗೆ ಕೂಡ ದರ್ಶನ್​-ಅಭಿಷೇಕ್​ ಕ್ರಿಕೆಟ್​ ಆಡೋಕೆ ತೆರಳಿದ್ದಾರೆ. ಕ್ರಿಕೆಟ್​ ಆಡುವ ವೇಳೆ ಇಬ್ಬರೂ ಸಣ್ಣ ವಿಚಾರಕ್ಕೆ ಪರಸ್ಪರ ಕಾಲೆಳೆದುಕೊಂಡಿದ್ದಾರೆ. ಮೋಸ ಮಾಡ್ತಾ ಇರ್ತಾರೆ. ಆದರೂ ಗೆಲ್ಲಬೇಕು. ಇಟ್ಸ್​ ಒಕೆ ಎಂದು ಅಭಿಷೇಕ್​ ಗೆಳೆಯರನ್ನು ಕರೆದುಕೊಂಡು ಹೊರಟಿದ್ದಾರೆ. ಈ ವೇಳೆ ಅಭಿಷೇಕ್​ ಹಿಂಭಾಗಕ್ಕೆ ಒದೆಯೋಕೆ ಹೋಗಿದ್ದಾರೆ ದರ್ಶನ್​. ಆಗ ಅಭಿಷೇಕ್​ ನಗುತ್ತಲೇ ತಪ್ಪಿಸಿಕೊಂಡಿದ್ದಾರೆ.

ಸದ್ಯ, ಈ ಕ್ಯೂಟ್​ ಫೈಟ್​ ವಿಡಿಯೋ ಸಾಕಷ್ಟು ವೈರಲ್​ ಆಗಿದೆ. ದರ್ಶನ್​-ಅಭಿಷೇಕ್​ ಸ್ವಂಥ ಅಣ್ಣ ತಮ್ಮರಂತೆ ನಡೆದುಕೊಳ್ಳುತ್ತಿರುವುದನ್ನು ನೋಡಿ ಅವರ ಅಭಿಮಾನಿಗಳು ಖುಷಿಯಾಗಿದ್ದಾರೆ.

ಸಿನಿಮಾ ವಿಚಾರಕ್ಕೆ ಬರುವುದಾದರೆ, ದರ್ಶನ್​ ನಟನೆಯ ರಾಬರ್ಟ್​ ಸಿನಿಮಾ ಬಾಕ್ಸ್​ ಆಫೀಸ್​ನಲ್ಲಿ ಒಳ್ಳೆಯ ಕಲೆಕ್ಷನ್​ ಮಾಡುತ್ತಿದೆ. ಶೀಘ್ರವೇ ಸಿನಿಮಾ 100 ಕೋಟಿ ಕ್ಲಬ್​ ಸೇರುವ ಎಲ್ಲಾ ಲಕ್ಷಣವಿದೆ. ಅಭಿಷೇಕ್​ ಅಂಬರೀಷ್​, ಬ್ಯಾಡ್​ಮ್ಯಾನರ್ಸ್​ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ರಚಿತಾ ರಾಮ್​ ಚಿತ್ರದ ನಾಯಕಿ. ದುನಿಯಾ ಸೂರಿ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ.

ಇದನ್ನೂ ಓದಿ: Roberrt: ರಾಜ್ಯಾದ್ಯಂತ ಇನ್ಮೇಲೆ ಡಿ ಬಾಸ್​ ಜಾತ್ರೆ! ಫ್ಯಾನ್ಸ್​ಗೆ ಧನ್ಯವಾದ ಹೇಳಲು ದರ್ಶನ್​ ದೊಡ್ಡ ನಿರ್ಧಾರ!

ದರ್ಶನ್​-ಸುದೀಪ್​ ಒಂದಾಗಿಸಲು ಪಣ ತೊಟ್ಟ ಫ್ಯಾನ್ಸ್​! ಈ ಮನವಿಗೆ ಒಪ್ಪಿಕೊಳ್ತಾರಾ ಕಿಚ್ಚ-ದಚ್ಚು?

Published On - 4:56 pm, Sat, 27 March 21

ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ