AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ರಿಕೆಟ್​ ಆಡುವಾಗ ಮೈದಾನದಲ್ಲೇ ಕಿತ್ತಾಡಿಕೊಂಡ ದರ್ಶನ್​-ಅಭಿಷೇಕ್​; ಅಸಲಿಗೆ ಅಲ್ಲಿ ನಡೆದಿದ್ದೇನು?

ದರ್ಶನ್​ಅವರಿಗೆ ಕ್ರಿಕೆಟ್​ ಆಡುವುದು ಎಂದರೆ ತುಂಬಾನೇ ಪ್ರೀತಿ. ಸಮಯ ಸಿಕ್ಕಾಗೆಲ್ಲ, ಗೆಳೆಯರ ಜತೆ ಅವರು ಕ್ರಿಕೆಟ್​ ಆಡುತ್ತಾರೆ.

ಕ್ರಿಕೆಟ್​ ಆಡುವಾಗ ಮೈದಾನದಲ್ಲೇ ಕಿತ್ತಾಡಿಕೊಂಡ ದರ್ಶನ್​-ಅಭಿಷೇಕ್​; ಅಸಲಿಗೆ ಅಲ್ಲಿ ನಡೆದಿದ್ದೇನು?
ಕ್ಯೂಟ್​ ಕ್ಯೂಟ್​ ಆಗಿ ಕಿತ್ತಾಡಿಕೊಂಡ ದರ್ಶನ್​-ಅಭಿಷೇಕ್​
ರಾಜೇಶ್ ದುಗ್ಗುಮನೆ
|

Updated on:Mar 27, 2021 | 4:56 PM

Share

ನಟ ಅಭಿಷೇಕ್​ ಅಂಬರೀಷ್​​ ಹಾಗೂ ಚಾಲೆಂಜಿಂಗ್ ಸ್ಟಾರ್​ ದರ್ಶನ್​ ಈ ಮೊದಲಿನಿಂದಲೂ ಗೆಳೆಯರು. ಅಂಬರೀಷ್​ ಜತೆ ದರ್ಶನ್​ ಒಳ್ಳೆಯ ಒಡನಾಟ ಹೊಂದಿದ್ದರು. ಹೀಗಾಗಿ, ಅಭಿಷೇಕ್​-ದರ್ಶನ್​ ನಡುವಿನ ಬಾಂಧವ್ಯ ಮತ್ತಷ್ಟು ಗಟ್ಟಿ ಆಗಿದೆ. ಅನೇಕ ಬಾರಿ ಅಭಿಷೇಕ್​ ನನ್ನ ತಮ್ಮ ಎಂದೇ ಹೇಳಿಕೊಂಡಿದ್ದಾರೆ ದರ್ಶನ್​. ಈಗ ಇದು ಮತ್ತೊಮ್ಮೆ ಸಾಬೀತಾಗಿದೆ. ಕ್ರಿಕೆಟ್​ ಮೈದಾನದಲ್ಲಿ ದರ್ಶನ್​-ಅಭಿಷೇಕ್​ ಅಣ್ಣ ತಮ್ಮಂದಿರಂತೆ ಜಗಳವಾಡಿದ್ದಾರೆ. ಈ ವಿಡಿಯೋ ಈಗ ಸಾಕಷ್ಟು ವೈರಲ್​ ಆಗಿದೆ. ದರ್ಶನ್​ ಆಗಾಗ ಗೆಳೆಯರ ಜತೆ ಕೂಡಿ ಟ್ರಿಪ್​ ಹೋಗುತ್ತಿರುತ್ತಾರೆ. ಫೋಟೋಗ್ರಫಿ ಬಗ್ಗೆ ಪ್ರೀತಿ ಹೆಚ್ಚಿರುವುದರಿಂದ ಕಾಡಿಗೆ ಹೋಗಿ ಛಾಯಾಗ್ರಾಹಣ ಮಾಡುತ್ತಾರೆ. ಇದರ ಜತೆಗೆ ದರ್ಶನ್​ಗೆ ಕ್ರಿಕೆಟ್​ ಆಡುವುದು ಎಂದರೆ ತುಂಬಾನೇ ಪ್ರೀತಿ. ಸಮಯ ಸಿಕ್ಕಾಗೆಲ್ಲ, ಗೆಳೆಯರ ಜತೆ ಅವರು ಕ್ರಿಕೆಟ್​ ಆಡುತ್ತಾರೆ.

ಇತ್ತೀಚೆಗೆ ಕೂಡ ದರ್ಶನ್​-ಅಭಿಷೇಕ್​ ಕ್ರಿಕೆಟ್​ ಆಡೋಕೆ ತೆರಳಿದ್ದಾರೆ. ಕ್ರಿಕೆಟ್​ ಆಡುವ ವೇಳೆ ಇಬ್ಬರೂ ಸಣ್ಣ ವಿಚಾರಕ್ಕೆ ಪರಸ್ಪರ ಕಾಲೆಳೆದುಕೊಂಡಿದ್ದಾರೆ. ಮೋಸ ಮಾಡ್ತಾ ಇರ್ತಾರೆ. ಆದರೂ ಗೆಲ್ಲಬೇಕು. ಇಟ್ಸ್​ ಒಕೆ ಎಂದು ಅಭಿಷೇಕ್​ ಗೆಳೆಯರನ್ನು ಕರೆದುಕೊಂಡು ಹೊರಟಿದ್ದಾರೆ. ಈ ವೇಳೆ ಅಭಿಷೇಕ್​ ಹಿಂಭಾಗಕ್ಕೆ ಒದೆಯೋಕೆ ಹೋಗಿದ್ದಾರೆ ದರ್ಶನ್​. ಆಗ ಅಭಿಷೇಕ್​ ನಗುತ್ತಲೇ ತಪ್ಪಿಸಿಕೊಂಡಿದ್ದಾರೆ.

ಸದ್ಯ, ಈ ಕ್ಯೂಟ್​ ಫೈಟ್​ ವಿಡಿಯೋ ಸಾಕಷ್ಟು ವೈರಲ್​ ಆಗಿದೆ. ದರ್ಶನ್​-ಅಭಿಷೇಕ್​ ಸ್ವಂಥ ಅಣ್ಣ ತಮ್ಮರಂತೆ ನಡೆದುಕೊಳ್ಳುತ್ತಿರುವುದನ್ನು ನೋಡಿ ಅವರ ಅಭಿಮಾನಿಗಳು ಖುಷಿಯಾಗಿದ್ದಾರೆ.

ಸಿನಿಮಾ ವಿಚಾರಕ್ಕೆ ಬರುವುದಾದರೆ, ದರ್ಶನ್​ ನಟನೆಯ ರಾಬರ್ಟ್​ ಸಿನಿಮಾ ಬಾಕ್ಸ್​ ಆಫೀಸ್​ನಲ್ಲಿ ಒಳ್ಳೆಯ ಕಲೆಕ್ಷನ್​ ಮಾಡುತ್ತಿದೆ. ಶೀಘ್ರವೇ ಸಿನಿಮಾ 100 ಕೋಟಿ ಕ್ಲಬ್​ ಸೇರುವ ಎಲ್ಲಾ ಲಕ್ಷಣವಿದೆ. ಅಭಿಷೇಕ್​ ಅಂಬರೀಷ್​, ಬ್ಯಾಡ್​ಮ್ಯಾನರ್ಸ್​ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ರಚಿತಾ ರಾಮ್​ ಚಿತ್ರದ ನಾಯಕಿ. ದುನಿಯಾ ಸೂರಿ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ.

ಇದನ್ನೂ ಓದಿ: Roberrt: ರಾಜ್ಯಾದ್ಯಂತ ಇನ್ಮೇಲೆ ಡಿ ಬಾಸ್​ ಜಾತ್ರೆ! ಫ್ಯಾನ್ಸ್​ಗೆ ಧನ್ಯವಾದ ಹೇಳಲು ದರ್ಶನ್​ ದೊಡ್ಡ ನಿರ್ಧಾರ!

ದರ್ಶನ್​-ಸುದೀಪ್​ ಒಂದಾಗಿಸಲು ಪಣ ತೊಟ್ಟ ಫ್ಯಾನ್ಸ್​! ಈ ಮನವಿಗೆ ಒಪ್ಪಿಕೊಳ್ತಾರಾ ಕಿಚ್ಚ-ದಚ್ಚು?

Published On - 4:56 pm, Sat, 27 March 21

ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!