AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Darshan: ಪೈರಸಿ ತಡೆಯೋಕೆ ದರ್ಶನ್​ ಹೊಸ ತಂತ್ರ!; ಇದು ಜಾರಿಗೆ ಬಂದ್ರೆ ಕಳ್ಳರು ಸಿಕ್ಕಿ ಬೀಳೋದು ಪಕ್ಕಾ

ದರ್ಶನ್​ ನಟನೆಯ ರಾಬರ್ಟ್​ ಸಿನಿಮಾ ದೊಡ್ಡ ಗಳಿಕೆ ಮಾಡಿದೆ. ಈ ಮಧ್ಯೆ ಅವರ ಸಿನಿಮಾ ಪೈರಸಿಗೆ ತುತ್ತಾಗಿದೆ. ಇದನ್ನು ತಡೆಯೋಕೆ ದರ್ಶನ್​ ಹೊಸ ಐಡಿಯಾ ಹುಟ್ಟುಹಾಕಿದ್ದಾರೆ.

Darshan: ಪೈರಸಿ ತಡೆಯೋಕೆ ದರ್ಶನ್​ ಹೊಸ ತಂತ್ರ!; ಇದು ಜಾರಿಗೆ ಬಂದ್ರೆ ಕಳ್ಳರು ಸಿಕ್ಕಿ ಬೀಳೋದು ಪಕ್ಕಾ
ದರ್ಶನ್​
ರಾಜೇಶ್ ದುಗ್ಗುಮನೆ
| Updated By: ಮದನ್​ ಕುಮಾರ್​|

Updated on: Mar 17, 2021 | 4:09 PM

Share

ಡಿ ಬಾಸ್​ ದರ್ಶನ್​ ನಟನೆಯ ರಾಬರ್ಟ್​ ಸಿನಿಮಾ ರಿಲೀಸ್​ ಆದ ಒಂದು ವಾರದೊಳಗೆ 60 ಕೋಟಿ ರೂಪಾಯಿಗೂ ಅಧಿಕ ಹಣವನ್ನು ಬಾಚಿಕೊಂಡು ಮುನ್ನುಗ್ಗುತ್ತಿದೆ. ಈ ಮಧ್ಯೆ ಸಿನಿಮಾ ಪೈರಸಿ ಕೂಡ ಆಗಿದೆ. ಇದನ್ನು ತಡೆಯೋಕೆ ಸಿನಿಮಾ ತಂಡ ಹಲವು ಪ್ರಯತ್ನಗಳನ್ನು ಮಾಡುತ್ತಿದ್ದು, ನೂರಾರು ಪೈರಸಿ ಲಿಂಕ್​ಗಳನ್ನು ಚಿತ್ರತಂಡ ತೆಗೆದು ಹಾಕಿದೆ. ಕೆಲವರನ್ನು ಬಂಧಿಸಿ ಬುದ್ಧಿ ಕೂಡ ಹೇಳಿದೆ. ಈ ಮಧ್ಯೆ ಪೈರಸಿಯನ್ನು ಸಂಪೂರ್ಣವಾಗಿ ತಡೆಯೋಕೆ ದರ್ಶನ್​ ಹೊಸ ಐಡಿಯಾ ಒಂದನ್ನು ನೀಡಿದ್ದಾರೆ. ‘ರಾಬರ್ಟ್’​ ಯಶಸ್ಸಿನ ಖುಷಿ ಹಂಚಿಕೊಳ್ಳಲು ಖಾಸಗಿ ಹೋಟೆಲ್​ನಲ್ಲಿ ಚಿತ್ರತಂಡ ಸಮಾರಂಭ ಹಮ್ಮಿಕೊಂಡಿತ್ತು. ಈ ಸಮಾರಂಭದಲ್ಲಿ ಡಿ ಬಾಸ್​ ದರ್ಶನ್​​ ಮಾತನಾಡಿದ್ದಾರೆ. ಈ ವೇಳೆ ಅವರು ಈ ತಮ್ಮ ಆಲೋಚನೆ ಹಂಚಿಕೊಂಡಿದ್ದಾರೆ. ಸಿನಿಮಾ ಚೆನ್ನಾಗಿದ್ದರೆ ಎಲ್ಲರೂ ಚಿತ್ರಮಂದಿರಕ್ಕೆ ಬಂದು ನೋಡುತ್ತಾರೆ. ಆಗ ನಾನು ಉಚಿತವಾಗಿ ಮೊಬೈಲ್​ಗೆ ಹಾಕಿ ಕೊಡುತ್ತೇನೆ ಎಂದರೂ ಜನರು ಸಿನಿಮಾ ನೋಡಲ್ಲ. ಉತ್ತಮ ಸಿನಿಮಾ ಯಾವಾಗಲೂ ಗೆದ್ದೇ ಗೆಲ್ಲುತ್ತದೆ ಎಂದರು ದರ್ಶನ್​.

ಪೈರಸಿ ತಡೆಯೋ ಬಗ್ಗೆ ಮಾತನಾಡಿದ ದರ್ಶನ್​, ಪೈರಸಿಯನ್ನು ಎಲ್ಲಿ ಮಾಡುತ್ತಿದ್ದಾರೆ ಎನ್ನುವುದು ಗೊತ್ತಾಗುವುದಿಲ್ಲ. ಇದನ್ನು ತಡೆಯೋಕೆ ಸಿನಿಮಾ ಪ್ರದರ್ಶಕರಾದ ಯುಎಫ್​ಒ ಹಾಗೂ ಕ್ಯೂಬ್​ನವರು ಒಂದು ತಂತ್ರ ಬಳಕೆ ಮಾಡಬಹುದು. ಮನೆಯಲ್ಲಿ ಕೇಬಲ್​ ಹಾಕಿಕೊಂಡರೆ ಟಿವಿಯಲ್ಲಿ ಒಂದು ಸಂಖ್ಯೆ ಓಡುತ್ತಿರುತ್ತದೆ. ಅದೇ ರೀತಿ ಪ್ರತಿ ಚಿತ್ರಮಂದಿರಕ್ಕೆ ಒಂದು ನಂಬರ್​ ನೀಡಬೇಕು. ಆಗ ಯಾವ ಚಿತ್ರಮಂದಿರದಲ್ಲಿ ರೆಕಾರ್ಡ್​ ಮಾಡಲಾಗಿದೆ ಎಂಬುದು ಗೊತ್ತಾಗುತ್ತದೆ. ಇದು ನನ್ನ ಆಲೋಚನೆ ಅಷ್ಟೆ. ಇದನ್ನು ಬೇಕಿದ್ದರೆ ಇಂಪ್ಲಿಮೆಂಟ್​ ಮಾಡಬಹುದು ಎಂದರು.

ಈ ಹಿಂದೆ ತರುಣ್​ ಸುಧೀರ್​ ನಿರ್ದೇಶನ ಮಾಡಿದ್ದ ‘ಚೌಕ’ ಸಿನಿಮಾದಲ್ಲಿ ದರ್ಶನ್​ ಅವರು ರಾಬರ್ಟ್​ ಎಂಬ ಅತಿಥಿ ಪಾತ್ರವನ್ನು ಮಾಡಿದ್ದರು. ಅದೇ ಪಾತ್ರವನ್ನು ಮುಖ್ಯವಾಗಿ ಇಟ್ಟುಕೊಂಡು ತರುಣ್​ ಅವರು ಹೊಸ ಕಥೆ ಬರೆದು ‘ರಾಬರ್ಟ್​’ ಸಿನಿಮಾ ಮಾಡಿದ್ದರು. ಆಶಾ ಭಟ್​ ಸಿನಿಮಾದ ನಾಯಕಿ. ತೆಲುಗಿನ ಖಳ ಜಗಪತಿ ಬಾಬು ಈ ಸಿನಿಮಾದಲ್ಲಿ ಪ್ರಮುಖ ವಿಲನ್​ ಆಗಿ ಕಾಣಿಸಿಕೊಂಡಿದ್ದಾರೆ. ವಿನೋದ್​​ ಪ್ರಭಾಕರ್​, ರವಿಶಂಕರ್​, ಸೋನಲ್​ ಮೊಂಥೆರೋ, ಚಿಕ್ಕಣ್ಣ, ಅವಿನಾಶ್​, ದೇವರಾಜ್​, ಶಿವರಾಜ್​ ಕೆ.ಆರ್​. ಪೇಟೆ, ಐಶ್ವರ್ಯಾ ಪ್ರಸಾದ್​ ಮುಂತಾದವರು ಸಿನಿಮಾದಲ್ಲಿ ನಟಿಸಿದ್ದಾರೆ.

ಇದನ್ನೂ ಓದಿ: ದರ್ಶನ್ ಅಭಿನಯದ ರಾಬರ್ಟ್ ಸಿನಿಮಾದ ಸಕ್ಸಸ್: ನಿರ್ದೇಶಕ ತರುಣ್ ಸುಧೀರ್ ಏನ್ ಹೇಳಿದ್ದಾರೆ?

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ