AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Darshan: ಪೈರಸಿ ತಡೆಯೋಕೆ ದರ್ಶನ್​ ಹೊಸ ತಂತ್ರ!; ಇದು ಜಾರಿಗೆ ಬಂದ್ರೆ ಕಳ್ಳರು ಸಿಕ್ಕಿ ಬೀಳೋದು ಪಕ್ಕಾ

ದರ್ಶನ್​ ನಟನೆಯ ರಾಬರ್ಟ್​ ಸಿನಿಮಾ ದೊಡ್ಡ ಗಳಿಕೆ ಮಾಡಿದೆ. ಈ ಮಧ್ಯೆ ಅವರ ಸಿನಿಮಾ ಪೈರಸಿಗೆ ತುತ್ತಾಗಿದೆ. ಇದನ್ನು ತಡೆಯೋಕೆ ದರ್ಶನ್​ ಹೊಸ ಐಡಿಯಾ ಹುಟ್ಟುಹಾಕಿದ್ದಾರೆ.

Darshan: ಪೈರಸಿ ತಡೆಯೋಕೆ ದರ್ಶನ್​ ಹೊಸ ತಂತ್ರ!; ಇದು ಜಾರಿಗೆ ಬಂದ್ರೆ ಕಳ್ಳರು ಸಿಕ್ಕಿ ಬೀಳೋದು ಪಕ್ಕಾ
ದರ್ಶನ್​
ರಾಜೇಶ್ ದುಗ್ಗುಮನೆ
| Edited By: |

Updated on: Mar 17, 2021 | 4:09 PM

Share

ಡಿ ಬಾಸ್​ ದರ್ಶನ್​ ನಟನೆಯ ರಾಬರ್ಟ್​ ಸಿನಿಮಾ ರಿಲೀಸ್​ ಆದ ಒಂದು ವಾರದೊಳಗೆ 60 ಕೋಟಿ ರೂಪಾಯಿಗೂ ಅಧಿಕ ಹಣವನ್ನು ಬಾಚಿಕೊಂಡು ಮುನ್ನುಗ್ಗುತ್ತಿದೆ. ಈ ಮಧ್ಯೆ ಸಿನಿಮಾ ಪೈರಸಿ ಕೂಡ ಆಗಿದೆ. ಇದನ್ನು ತಡೆಯೋಕೆ ಸಿನಿಮಾ ತಂಡ ಹಲವು ಪ್ರಯತ್ನಗಳನ್ನು ಮಾಡುತ್ತಿದ್ದು, ನೂರಾರು ಪೈರಸಿ ಲಿಂಕ್​ಗಳನ್ನು ಚಿತ್ರತಂಡ ತೆಗೆದು ಹಾಕಿದೆ. ಕೆಲವರನ್ನು ಬಂಧಿಸಿ ಬುದ್ಧಿ ಕೂಡ ಹೇಳಿದೆ. ಈ ಮಧ್ಯೆ ಪೈರಸಿಯನ್ನು ಸಂಪೂರ್ಣವಾಗಿ ತಡೆಯೋಕೆ ದರ್ಶನ್​ ಹೊಸ ಐಡಿಯಾ ಒಂದನ್ನು ನೀಡಿದ್ದಾರೆ. ‘ರಾಬರ್ಟ್’​ ಯಶಸ್ಸಿನ ಖುಷಿ ಹಂಚಿಕೊಳ್ಳಲು ಖಾಸಗಿ ಹೋಟೆಲ್​ನಲ್ಲಿ ಚಿತ್ರತಂಡ ಸಮಾರಂಭ ಹಮ್ಮಿಕೊಂಡಿತ್ತು. ಈ ಸಮಾರಂಭದಲ್ಲಿ ಡಿ ಬಾಸ್​ ದರ್ಶನ್​​ ಮಾತನಾಡಿದ್ದಾರೆ. ಈ ವೇಳೆ ಅವರು ಈ ತಮ್ಮ ಆಲೋಚನೆ ಹಂಚಿಕೊಂಡಿದ್ದಾರೆ. ಸಿನಿಮಾ ಚೆನ್ನಾಗಿದ್ದರೆ ಎಲ್ಲರೂ ಚಿತ್ರಮಂದಿರಕ್ಕೆ ಬಂದು ನೋಡುತ್ತಾರೆ. ಆಗ ನಾನು ಉಚಿತವಾಗಿ ಮೊಬೈಲ್​ಗೆ ಹಾಕಿ ಕೊಡುತ್ತೇನೆ ಎಂದರೂ ಜನರು ಸಿನಿಮಾ ನೋಡಲ್ಲ. ಉತ್ತಮ ಸಿನಿಮಾ ಯಾವಾಗಲೂ ಗೆದ್ದೇ ಗೆಲ್ಲುತ್ತದೆ ಎಂದರು ದರ್ಶನ್​.

ಪೈರಸಿ ತಡೆಯೋ ಬಗ್ಗೆ ಮಾತನಾಡಿದ ದರ್ಶನ್​, ಪೈರಸಿಯನ್ನು ಎಲ್ಲಿ ಮಾಡುತ್ತಿದ್ದಾರೆ ಎನ್ನುವುದು ಗೊತ್ತಾಗುವುದಿಲ್ಲ. ಇದನ್ನು ತಡೆಯೋಕೆ ಸಿನಿಮಾ ಪ್ರದರ್ಶಕರಾದ ಯುಎಫ್​ಒ ಹಾಗೂ ಕ್ಯೂಬ್​ನವರು ಒಂದು ತಂತ್ರ ಬಳಕೆ ಮಾಡಬಹುದು. ಮನೆಯಲ್ಲಿ ಕೇಬಲ್​ ಹಾಕಿಕೊಂಡರೆ ಟಿವಿಯಲ್ಲಿ ಒಂದು ಸಂಖ್ಯೆ ಓಡುತ್ತಿರುತ್ತದೆ. ಅದೇ ರೀತಿ ಪ್ರತಿ ಚಿತ್ರಮಂದಿರಕ್ಕೆ ಒಂದು ನಂಬರ್​ ನೀಡಬೇಕು. ಆಗ ಯಾವ ಚಿತ್ರಮಂದಿರದಲ್ಲಿ ರೆಕಾರ್ಡ್​ ಮಾಡಲಾಗಿದೆ ಎಂಬುದು ಗೊತ್ತಾಗುತ್ತದೆ. ಇದು ನನ್ನ ಆಲೋಚನೆ ಅಷ್ಟೆ. ಇದನ್ನು ಬೇಕಿದ್ದರೆ ಇಂಪ್ಲಿಮೆಂಟ್​ ಮಾಡಬಹುದು ಎಂದರು.

ಈ ಹಿಂದೆ ತರುಣ್​ ಸುಧೀರ್​ ನಿರ್ದೇಶನ ಮಾಡಿದ್ದ ‘ಚೌಕ’ ಸಿನಿಮಾದಲ್ಲಿ ದರ್ಶನ್​ ಅವರು ರಾಬರ್ಟ್​ ಎಂಬ ಅತಿಥಿ ಪಾತ್ರವನ್ನು ಮಾಡಿದ್ದರು. ಅದೇ ಪಾತ್ರವನ್ನು ಮುಖ್ಯವಾಗಿ ಇಟ್ಟುಕೊಂಡು ತರುಣ್​ ಅವರು ಹೊಸ ಕಥೆ ಬರೆದು ‘ರಾಬರ್ಟ್​’ ಸಿನಿಮಾ ಮಾಡಿದ್ದರು. ಆಶಾ ಭಟ್​ ಸಿನಿಮಾದ ನಾಯಕಿ. ತೆಲುಗಿನ ಖಳ ಜಗಪತಿ ಬಾಬು ಈ ಸಿನಿಮಾದಲ್ಲಿ ಪ್ರಮುಖ ವಿಲನ್​ ಆಗಿ ಕಾಣಿಸಿಕೊಂಡಿದ್ದಾರೆ. ವಿನೋದ್​​ ಪ್ರಭಾಕರ್​, ರವಿಶಂಕರ್​, ಸೋನಲ್​ ಮೊಂಥೆರೋ, ಚಿಕ್ಕಣ್ಣ, ಅವಿನಾಶ್​, ದೇವರಾಜ್​, ಶಿವರಾಜ್​ ಕೆ.ಆರ್​. ಪೇಟೆ, ಐಶ್ವರ್ಯಾ ಪ್ರಸಾದ್​ ಮುಂತಾದವರು ಸಿನಿಮಾದಲ್ಲಿ ನಟಿಸಿದ್ದಾರೆ.

ಇದನ್ನೂ ಓದಿ: ದರ್ಶನ್ ಅಭಿನಯದ ರಾಬರ್ಟ್ ಸಿನಿಮಾದ ಸಕ್ಸಸ್: ನಿರ್ದೇಶಕ ತರುಣ್ ಸುಧೀರ್ ಏನ್ ಹೇಳಿದ್ದಾರೆ?

Follow Us
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್