AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಿಮ್ಮ ಪಯಣ ನರಕವಾಗಲಿ’: ಇಂದ್ರಜಿತ್​ ಫೋಟೋ ಇಟ್ಟು ಶ್ರದ್ಧಾಂಜಲಿ ಕೋರಿದ ದರ್ಶನ್​ ಅಭಿಮಾನಿಗಳು

ಮೈಸೂರಿನಲ್ಲಿರುವ ‘ಸಂದೇಶ್​ ದಿ ಪ್ರಿನ್ಸ್​’ ಹೋಟೆಲ್ ಸಿಬ್ಬಂದಿ ಗಂಗಾಧರ್ ಅವರ ಮೇಲೆ ದರ್ಶನ್​ ಹಲ್ಲೆ ನಡೆಸಿದ್ದಾರೆ. ಇದರಿಂದ ಗಂಗಾಧರ್​ ಕಣ್ಣಿಗೆ ಗಾಯವಾಗಿದೆ ಎಂಬಿತ್ಯಾದಿ ಗಂಭೀರ ಆರೋಪ ಇಂದ್ರಜಿತ್​ ಕಡೆಯಿಂದ ಬಂದಿತ್ತು.

‘ನಿಮ್ಮ ಪಯಣ ನರಕವಾಗಲಿ’: ಇಂದ್ರಜಿತ್​ ಫೋಟೋ ಇಟ್ಟು ಶ್ರದ್ಧಾಂಜಲಿ ಕೋರಿದ ದರ್ಶನ್​ ಅಭಿಮಾನಿಗಳು
TV9 Web
| Edited By: |

Updated on:Jul 17, 2021 | 4:11 PM

Share

ನಟ ದರ್ಶನ್​ ಅಭಿಮಾನಿ ಬಳಗದ ಬಗ್ಗೆ ಮತ್ತೆ ಹೊಸದಾಗಿ ಹೇಳಬೇಕಿಲ್ಲ. ದರ್ಶನ್​ ಬಗ್ಗೆ ಯಾರೇ ಆರೋಪ ಮಾಡಿದರೂ ಅದನ್ನು ಅಭಿಮಾನಿಗಳು ಸಹಿಸುವುದೇ ಇಲ್ಲ. ಈ ಮೊದಲು ಈ ರೀತಿಯ ಸಾಕಷ್ಟು ಘಟನೆಗಳು ನಡೆದಿವೆ. ಈಗ ದರ್ಶನ್​ ಬಗ್ಗೆ ಗಂಭೀರ ಆರೋಪ ಮಾಡಿದ ನಿರ್ದೇಶಕ/ಪತ್ರಕರ್ತ ಇಂದ್ರಜಿತ್ ಲಂಕೇಶ್​ ಬಗ್ಗೆ ದಚ್ಚು ಅಭಿಮಾನಿಗಳು ತಿರುಗಿ ಬಿದ್ದಿದ್ದಾರೆ.

ಮೈಸೂರಿನಲ್ಲಿರುವ ‘ಸಂದೇಶ್​ ದಿ ಪ್ರಿನ್ಸ್​’ ಹೋಟೆಲ್ ಸಿಬ್ಬಂದಿ ಗಂಗಾಧರ್ ಅವರ ಮೇಲೆ ದರ್ಶನ್​ ಹಲ್ಲೆ ನಡೆಸಿದ್ದಾರೆ. ಇದರಿಂದ ಗಂಗಾಧರ್​ ಕಣ್ಣಿಗೆ ಗಾಯವಾಗಿದೆ ಎಂಬಿತ್ಯಾದಿ ಗಂಭೀರ ಆರೋಪ ಇಂದ್ರಜಿತ್​ ಕಡೆಯಿಂದ ಬಂದಿತ್ತು. ಆದರೆ, ದರ್ಶನ್​, ಹೋಟೆಲ್​ ಮಾಲೀಕ ಸಂದೇಶ್​ ಇದನ್ನು ಅಲ್ಲಗಳೆದಿದ್ದರು. ಶುಕ್ರವಾರ (ಜುಲೈ 16) ಹೇಳಿಕೆ ನೀಡಿದ್ದ ಗಂಗಾಧರ್​ ಅವರು ಸ್ವತಃ ಈ ಆರೋಪವನ್ನು ಅಲ್ಲಗಳೆದಿದ್ದರು.

ಇಷ್ಟೆಲ್ಲ ಬೆಳವಣಿಗೆ ನಂತರವೂ ಇಂದ್ರಜಿತ್​ ಸುಮ್ಮನೆ ಕೂತಿಲ್ಲ. ಒಂದಾದ ಮೇಲೆ ಒಂದರಂತೆ ಪ್ರೆಸ್​ಮೀಟ್​ ನಡೆಸಿದ್ದಾರೆ. ಗಂಗಾಧರ್​ ಬಡವ. ಇದೆಲ್ಲವನ್ನು ಎದುರಿಸುವ ಶಕ್ತಿ ಅವರಲ್ಲಿ ಇಲ್ಲ. ಈ ಕಾರಣಕ್ಕೆ ಅವರು ಮುಂದೆ ಬರೋಕೆ ಹೆದರುತ್ತಿದ್ದಾರೆ. ಇಂಥವರಿಗೆ ನಾವು ಧ್ವನಿಯಾಗಬೇಕು ಎಂದು ಇಂದ್ರಜಿತ್​ ಕರೆ ನೀಡಿದ್ದರು. ಜತೆಗೆ ಮೇರು ನಟ ಹೇಗಿರಬೇಕು ಎಂಬುದನ್ನು ರಾಜ್​ಕುಮಾರ್​ ಅವರನ್ನು ನೋಡಿ ದರ್ಶನ್​ ಕಲಿಯಲಿ ಎಂದು ಕಿವಿಮಾತು ಹೇಳಿದ್ದರು.

ಈ ಎಲ್ಲಾ ಬೆಳವಣಿಗೆಯಿಂದ ದರ್ಶನ್​ ಅಭಿಮಾನಿಗಳು ಸಿಟ್ಟಿಗೆದ್ದಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಇಂದ್ರಜಿತ್​ ವಿರುದ್ಧ ಆಕ್ರೋಶ ಹೊರ ಹಾಕುತ್ತಿದ್ದಾರೆ. ಈಗ ಒಂದು ಹೆಜ್ಜೆ ಮುಂದೆಹೋಗಿ, ಅವರ ಫೋಟೋಗೆ ಹಾರ ಹಾಕಿ ಶ್ರದ್ಧಾಂಜಲಿ ಅರ್ಪಿಸಿದ್ದಾರೆ ದರ್ಶನ್​ ಅಭಿಮಾನಿಗಳು. ‘ನಿಮ್ಮ ಪ್ರಯಾಣ ನರಕವಾಗಿರಲಿ. ಮರಳಿ ಬಾರದೂರಿಗೆ ನಿನ್ನ ಪಯಣ’ ಎಂದು ಬರೆದುಕೊಂಡಿದ್ದಾರೆ.

ಈ ಮೊದಲು ದರ್ಶನ್ ಬಗ್ಗೆ ನಟ ಜಗ್ಗೇಶ್​ ಮಾತನಾಡಿದ್ದರು. ಇದು ಡಿ ಬಾಸ್​ ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿತ್ತು. ಅಲ್ಲದೆ, ಶೂಟಿಂಗ್​ ಸಂದರ್ಭದಲ್ಲಿ ಜಗ್ಗೇಶ್​ ಅವರನ್ನು ಅಭಿಮಾನಿಗಳು ಮುತ್ತಿಗೆ ಹಾಕಿದ್ದರು.

ಇದನ್ನೂ ಓದಿ: ಇಂದ್ರಜಿತ್​ ಲಂಕೇಶ್​ ಸುದ್ದಿಗೋಷ್ಠಿ: ಮೇರುನಟ ಹೇಗಿರಬೇಕು ಎಂದು ರಾಜ್​ಕುಮಾರ್​ ನೋಡಿ ಕಲಿಯಲಿ; ದರ್ಶನ್​ಗೆ ಇಂದ್ರಜಿತ್​ ಬುದ್ಧಿವಾದ

ದರ್ಶನ್​ ಮತ್ತು ನನ್ನ ನಡುವೆ ಯಾವುದೇ ವೈರತ್ವ ಇಲ್ಲ: ನಿರ್ಮಾಪಕ ಉಮಾಪತಿ ಸ್ಪಷ್ಟನೆ

Published On - 4:09 pm, Sat, 17 July 21

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?