AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಿಮ್ಮ ಪಯಣ ನರಕವಾಗಲಿ’: ಇಂದ್ರಜಿತ್​ ಫೋಟೋ ಇಟ್ಟು ಶ್ರದ್ಧಾಂಜಲಿ ಕೋರಿದ ದರ್ಶನ್​ ಅಭಿಮಾನಿಗಳು

ಮೈಸೂರಿನಲ್ಲಿರುವ ‘ಸಂದೇಶ್​ ದಿ ಪ್ರಿನ್ಸ್​’ ಹೋಟೆಲ್ ಸಿಬ್ಬಂದಿ ಗಂಗಾಧರ್ ಅವರ ಮೇಲೆ ದರ್ಶನ್​ ಹಲ್ಲೆ ನಡೆಸಿದ್ದಾರೆ. ಇದರಿಂದ ಗಂಗಾಧರ್​ ಕಣ್ಣಿಗೆ ಗಾಯವಾಗಿದೆ ಎಂಬಿತ್ಯಾದಿ ಗಂಭೀರ ಆರೋಪ ಇಂದ್ರಜಿತ್​ ಕಡೆಯಿಂದ ಬಂದಿತ್ತು.

‘ನಿಮ್ಮ ಪಯಣ ನರಕವಾಗಲಿ’: ಇಂದ್ರಜಿತ್​ ಫೋಟೋ ಇಟ್ಟು ಶ್ರದ್ಧಾಂಜಲಿ ಕೋರಿದ ದರ್ಶನ್​ ಅಭಿಮಾನಿಗಳು
TV9 Web
| Edited By: |

Updated on:Jul 17, 2021 | 4:11 PM

Share

ನಟ ದರ್ಶನ್​ ಅಭಿಮಾನಿ ಬಳಗದ ಬಗ್ಗೆ ಮತ್ತೆ ಹೊಸದಾಗಿ ಹೇಳಬೇಕಿಲ್ಲ. ದರ್ಶನ್​ ಬಗ್ಗೆ ಯಾರೇ ಆರೋಪ ಮಾಡಿದರೂ ಅದನ್ನು ಅಭಿಮಾನಿಗಳು ಸಹಿಸುವುದೇ ಇಲ್ಲ. ಈ ಮೊದಲು ಈ ರೀತಿಯ ಸಾಕಷ್ಟು ಘಟನೆಗಳು ನಡೆದಿವೆ. ಈಗ ದರ್ಶನ್​ ಬಗ್ಗೆ ಗಂಭೀರ ಆರೋಪ ಮಾಡಿದ ನಿರ್ದೇಶಕ/ಪತ್ರಕರ್ತ ಇಂದ್ರಜಿತ್ ಲಂಕೇಶ್​ ಬಗ್ಗೆ ದಚ್ಚು ಅಭಿಮಾನಿಗಳು ತಿರುಗಿ ಬಿದ್ದಿದ್ದಾರೆ.

ಮೈಸೂರಿನಲ್ಲಿರುವ ‘ಸಂದೇಶ್​ ದಿ ಪ್ರಿನ್ಸ್​’ ಹೋಟೆಲ್ ಸಿಬ್ಬಂದಿ ಗಂಗಾಧರ್ ಅವರ ಮೇಲೆ ದರ್ಶನ್​ ಹಲ್ಲೆ ನಡೆಸಿದ್ದಾರೆ. ಇದರಿಂದ ಗಂಗಾಧರ್​ ಕಣ್ಣಿಗೆ ಗಾಯವಾಗಿದೆ ಎಂಬಿತ್ಯಾದಿ ಗಂಭೀರ ಆರೋಪ ಇಂದ್ರಜಿತ್​ ಕಡೆಯಿಂದ ಬಂದಿತ್ತು. ಆದರೆ, ದರ್ಶನ್​, ಹೋಟೆಲ್​ ಮಾಲೀಕ ಸಂದೇಶ್​ ಇದನ್ನು ಅಲ್ಲಗಳೆದಿದ್ದರು. ಶುಕ್ರವಾರ (ಜುಲೈ 16) ಹೇಳಿಕೆ ನೀಡಿದ್ದ ಗಂಗಾಧರ್​ ಅವರು ಸ್ವತಃ ಈ ಆರೋಪವನ್ನು ಅಲ್ಲಗಳೆದಿದ್ದರು.

ಇಷ್ಟೆಲ್ಲ ಬೆಳವಣಿಗೆ ನಂತರವೂ ಇಂದ್ರಜಿತ್​ ಸುಮ್ಮನೆ ಕೂತಿಲ್ಲ. ಒಂದಾದ ಮೇಲೆ ಒಂದರಂತೆ ಪ್ರೆಸ್​ಮೀಟ್​ ನಡೆಸಿದ್ದಾರೆ. ಗಂಗಾಧರ್​ ಬಡವ. ಇದೆಲ್ಲವನ್ನು ಎದುರಿಸುವ ಶಕ್ತಿ ಅವರಲ್ಲಿ ಇಲ್ಲ. ಈ ಕಾರಣಕ್ಕೆ ಅವರು ಮುಂದೆ ಬರೋಕೆ ಹೆದರುತ್ತಿದ್ದಾರೆ. ಇಂಥವರಿಗೆ ನಾವು ಧ್ವನಿಯಾಗಬೇಕು ಎಂದು ಇಂದ್ರಜಿತ್​ ಕರೆ ನೀಡಿದ್ದರು. ಜತೆಗೆ ಮೇರು ನಟ ಹೇಗಿರಬೇಕು ಎಂಬುದನ್ನು ರಾಜ್​ಕುಮಾರ್​ ಅವರನ್ನು ನೋಡಿ ದರ್ಶನ್​ ಕಲಿಯಲಿ ಎಂದು ಕಿವಿಮಾತು ಹೇಳಿದ್ದರು.

ಈ ಎಲ್ಲಾ ಬೆಳವಣಿಗೆಯಿಂದ ದರ್ಶನ್​ ಅಭಿಮಾನಿಗಳು ಸಿಟ್ಟಿಗೆದ್ದಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಇಂದ್ರಜಿತ್​ ವಿರುದ್ಧ ಆಕ್ರೋಶ ಹೊರ ಹಾಕುತ್ತಿದ್ದಾರೆ. ಈಗ ಒಂದು ಹೆಜ್ಜೆ ಮುಂದೆಹೋಗಿ, ಅವರ ಫೋಟೋಗೆ ಹಾರ ಹಾಕಿ ಶ್ರದ್ಧಾಂಜಲಿ ಅರ್ಪಿಸಿದ್ದಾರೆ ದರ್ಶನ್​ ಅಭಿಮಾನಿಗಳು. ‘ನಿಮ್ಮ ಪ್ರಯಾಣ ನರಕವಾಗಿರಲಿ. ಮರಳಿ ಬಾರದೂರಿಗೆ ನಿನ್ನ ಪಯಣ’ ಎಂದು ಬರೆದುಕೊಂಡಿದ್ದಾರೆ.

ಈ ಮೊದಲು ದರ್ಶನ್ ಬಗ್ಗೆ ನಟ ಜಗ್ಗೇಶ್​ ಮಾತನಾಡಿದ್ದರು. ಇದು ಡಿ ಬಾಸ್​ ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿತ್ತು. ಅಲ್ಲದೆ, ಶೂಟಿಂಗ್​ ಸಂದರ್ಭದಲ್ಲಿ ಜಗ್ಗೇಶ್​ ಅವರನ್ನು ಅಭಿಮಾನಿಗಳು ಮುತ್ತಿಗೆ ಹಾಕಿದ್ದರು.

ಇದನ್ನೂ ಓದಿ: ಇಂದ್ರಜಿತ್​ ಲಂಕೇಶ್​ ಸುದ್ದಿಗೋಷ್ಠಿ: ಮೇರುನಟ ಹೇಗಿರಬೇಕು ಎಂದು ರಾಜ್​ಕುಮಾರ್​ ನೋಡಿ ಕಲಿಯಲಿ; ದರ್ಶನ್​ಗೆ ಇಂದ್ರಜಿತ್​ ಬುದ್ಧಿವಾದ

ದರ್ಶನ್​ ಮತ್ತು ನನ್ನ ನಡುವೆ ಯಾವುದೇ ವೈರತ್ವ ಇಲ್ಲ: ನಿರ್ಮಾಪಕ ಉಮಾಪತಿ ಸ್ಪಷ್ಟನೆ

Published On - 4:09 pm, Sat, 17 July 21

Follow Us
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಫಿಲಿಪೈನ್ಸ್ ದೋಣಿ ಬೆಂಕಿ ದುರಂತ; ಮೃತರ ಸಂಖ್ಯೆ 35ಕ್ಕೆ ಏರಿಕೆ
ಫಿಲಿಪೈನ್ಸ್ ದೋಣಿ ಬೆಂಕಿ ದುರಂತ; ಮೃತರ ಸಂಖ್ಯೆ 35ಕ್ಕೆ ಏರಿಕೆ