AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಲೆಂಜಿಂಗ್ ಸ್ಟಾರ್ ದರ್ಶನ್ ನೀಡಿದ ಆ ಒಂದು ಕರೆಗೆ ಪವಾಡವೇ ನಡೆದು ಹೋಯ್ತು

ಕರ್ನಾಟಕ ಸರ್ಕಾರ ಹೇರಿದ್ದ ಲಾಕ್‌ಡೌನ್‌ನಿಂದಾಗಿ ರಾಜ್ಯದ 9 ಮೃಗಾಲಯಗಳೂ ಆರ್ಥಿಕ ಸಂಕಷ್ಟಕ್ಕೆ ತುತ್ತಾಗಿವೆ. ಇದರಿಂದಾಗಿ ಪ್ರಾಣಿಗಳ ಆಹಾರಕ್ಕೂ ಹಣವಿಲ್ಲದೆ ಪರದಾಡುತ್ತಿರುವ ಸ್ಥಿತಿ ಕರ್ನಾಟಕ ಮೃಗಾಲಯ ಪ್ರಾಧಿಕಾರಕ್ಕೆ ಬಂದೊದಗಿತ್ತು.

ಚಾಲೆಂಜಿಂಗ್ ಸ್ಟಾರ್ ದರ್ಶನ್ ನೀಡಿದ ಆ ಒಂದು ಕರೆಗೆ ಪವಾಡವೇ ನಡೆದು ಹೋಯ್ತು
ದರ್ಶನ್​
ರಾಜೇಶ್ ದುಗ್ಗುಮನೆ
|

Updated on:Jun 23, 2021 | 5:31 PM

Share

ಚಾಲೆಂಜಿಂಗ್​ ಸ್ಟಾರ್​ ದರ್ಶನ್​ ಅಭಿಮಾನಿ ಬಳಗ ತುಂಬಾನೇ ದೊಡ್ಡದಿದೆ. ಅವರು ಏನೇ ಮನವಿ ಮಾಡಿದರೂ ಅದಕ್ಕೆ ಉತ್ತಮ ರೀತಿಯಲ್ಲಿ ಸ್ಪಂದನೆ ಸಿಗುತ್ತದೆ. ಇದು ಈಗ ಮತ್ತೊಮ್ಮೆ ಸಾಬೀತಾಗಿದೆ. ದರ್ಶನ್​ ಪ್ರಾಣಿಗಳನ್ನು ದತ್ತು ತೆಗೆದುಕೊಳ್ಳುವಂತೆ ನೀಡಿದ ಕರೆಗೆ ಪವಾಡವೇ ನಡೆದು ಹೋಗಿದೆ.

ಕರ್ನಾಟಕ ಸರ್ಕಾರ ಹೇರಿದ್ದ ಲಾಕ್‌ಡೌನ್‌ನಿಂದಾಗಿ ರಾಜ್ಯದ 9 ಮೃಗಾಲಯಗಳೂ ಆರ್ಥಿಕ ಸಂಕಷ್ಟಕ್ಕೆ ತುತ್ತಾಗಿವೆ. ಇದರಿಂದಾಗಿ ಪ್ರಾಣಿಗಳ ಆಹಾರಕ್ಕೂ ಹಣವಿಲ್ಲದೆ ಪರದಾಡುತ್ತಿರುವ ಸ್ಥಿತಿ ಕರ್ನಾಟಕ ಮೃಗಾಲಯ ಪ್ರಾಧಿಕಾರಕ್ಕೆ ಬಂದೊದಗಿತ್ತು. ಹೀಗಾಗಿ ಮೃಗಾಲಯದ ಸಂಕಷ್ಟಕ್ಕೆ ನೆರವಾಗಿ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ನಟ ದರ್ಶನ್ ಅವರಿಗೆ ಮನವಿ ಮಾಡಿದ್ದರು. ಅರಣ್ಯ ಇಲಾಖೆಯ ರಾಯಭಾರಿಯಾಗಿರುವ ನಟ ದರ್ಶನ್ ವಿಡಿಯೋ ಮೂಲಕ ಜನರಲ್ಲಿ ನೆರವು ನೀಡುವಂತೆ ತಿಂಗಳ ಹಿಂದೆ ಕೋರಿದ್ದರು. ಇದಕ್ಕೆ ಅದ್ಭುತ ಪ್ರತಿಕ್ರಿಯೆ ದೊರೆತಿದೆ.

ದರ್ಶನ್​ ಕರೆ ನೀಡಿದ ನಂತರದಲ್ಲಿ ಕೆಲವರು ಲವ್​ ಬರ್ಡ್​ ದತ್ತು ಪಡೆದರೆ, ಇನ್ನೂ ಕೆಲವರು ಕಾಳಿಂಗ ಸರ್ಪ ತೆಗೆದುಕೊಂಡಿದ್ದಾರೆ. ಉಪೇಂದ್ರ ಅವರು ಆನೆಯನ್ನು ದತ್ತು ಪಡೆದರೆ, ನಿರ್ಮಾಪಕಿ ಶೈಲಜಾ ನಾಗ್​ ಒಂದು ಹುಲಿಯ ನಿರ್ವಹಣೆ ಖರ್ಚನ್ನು ಭರಿಸಿದ್ದಾರೆ. ಇವರೆಲ್ಲರಿಗೂ ಧನ್ಯವಾದ ಅರ್ಪಿಸುವ ಕೆಲಸವನ್ನು ದರ್ಶನ್​ ಮಾಡುತ್ತಿದ್ದಾರೆ.

ಅಂದಹಾಗೆ, ಮೃಗಾಲಯಗಳಿಗೆ ಈವರಗೆ 2 ಕೋಟಿ ರೂಪಾಯಿ ದೇಣಿಗೆ ಸಂದಾಯವಾಗಿದೆ. 6 ಸಾವಿರಕ್ಕೂ ಹೆಚ್ಚು ಜನರು ಪ್ರಾಣಿ ದತ್ತು ಸ್ವೀಕಾರ ಮಾಡಿದ್ದಾರೆ. ಇದರಿಂದ ಮೃಗಾಲಯ ನಿರ್ವಹಣೆಯ ಹೊರೆ ಕೊಂಚ ಕಡಿಮೆ ಆದಂತಾಗಿದೆ. ಇಂದಿನಿಂದ ಬೆಳಗಾವಿ, ಗದಗ ಹಂಪಿ ಮೃಗಾಲಯ ಓಪನ್ ಆಗುತ್ತಿದೆ. ಮುಂದಿನ ದಿನಗಳಲ್ಲಿ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಬರುವ ನಿರೀಕ್ಷೆ ಇದೆ.

ಇದನ್ನೂ ಓದಿ: Darshan: ದರ್ಶನ್​ ಹೇಳಿದ ಒಂದೇ ಮಾತಿಗೆ 6 ದಿನದಲ್ಲಿ ಹರಿದು ಬಂತು 1 ಕೋಟಿ ರೂ.! ಯಾವ ಮೃಗಾಲಯಕ್ಕೆ ಎಷ್ಟು ಲಕ್ಷ?

Darshan: ಸಿನಿಮಾ ಥಿಯೇಟರ್​ಗೆ ಭವಿಷ್ಯ ಇಲ್ಲವೇ?; ಉದಾಹರಣೆ ಸಹಿತ ವಿವರಿಸಿದ ದರ್ಶನ್

Published On - 2:32 pm, Wed, 23 June 21

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ