AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುಗಾದಿಗೆ ದರ್ಶನ್​ ಹೊಸ ಸಿನಿಮಾ ಘೋಷಣೆ; ಡೈರೆಕ್ಟರ್​ ಯಾರು?

ಶಿವರಾತ್ರಿ ಪ್ರಯುಕ್ತ ಮಾರ್ಷ್​ 11ರಂದು ರಾಬರ್ಟ್​ ತೆರೆಗೆ ಬಂದಿತ್ತು. ಸಿನಿ ಪ್ರಿಯರಿಂದ ಚಿತ್ರ ಅದ್ಭುತ ಪ್ರತಿಕ್ರಿಯೆ ಕೂಡ ಗಳಿಸಿತ್ತು. ಹೀಗಾಗಿ, ದರ್ಶನ್​ ಮುಂದಿನ ಚಿತ್ರದ ಬಗ್ಗೆ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ.

ಯುಗಾದಿಗೆ ದರ್ಶನ್​ ಹೊಸ ಸಿನಿಮಾ ಘೋಷಣೆ; ಡೈರೆಕ್ಟರ್​ ಯಾರು?
ನಟ ದರ್ಶನ್
ರಾಜೇಶ್ ದುಗ್ಗುಮನೆ
|

Updated on:Apr 10, 2021 | 6:53 PM

Share

ನಟ ದರ್ಶನ್​ ರಾಬರ್ಟ್​ ಸಿನಿಮಾ ಯಶಸ್ಸಿನ ಅಲೆಯಲ್ಲಿ ತೇಲುತ್ತಿದ್ದಾರೆ. ಇತ್ತಿಚೆಗಷ್ಟೇ ಸಿನಿಮಾ 100 ಕೋಟಿ ಕ್ಲಬ್ ಸೇರಿದ್ದು ಚಿತ್ರತಂಡದ ಖುಷಿಯನ್ನು ದುಪ್ಪಟ್ಟು ಮಾಡಿದೆ. ದರ್ಶನ್​ ಮುಂದಿನ ಸಿನಿಮಾ ಯಾವುದು ಎಂಬುದು ಸದ್ಯದ ಕುತೂಹಲ. ಈ ಬಗ್ಗೆ ಟ್ವಿಟರ್​ನಲ್ಲಿ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಅಷ್ಟೇ ಅಲ್ಲ, ಈ ಬಗ್ಗೆ ಹೊಸ ಅಪ್​ಡೇಟ್​ ಸಿಗೋಕೆ ದಿನಾಂಕ ನಿಗದಿ ಆಗಿದೆ. ಶಿವರಾತ್ರಿ ಪ್ರಯುಕ್ತ ಮಾರ್ಷ್​ 11ರಂದು ರಾಬರ್ಟ್​ ತೆರೆಗೆ ಬಂದಿತ್ತು. ಸಿನಿ ಪ್ರಿಯರಿಂದ ಚಿತ್ರ ಅದ್ಭುತ ಪ್ರತಿಕ್ರಿಯೆ ಕೂಡ ಗಳಿಸಿತ್ತು. ಹೀಗಾಗಿ, ದರ್ಶನ್​ ಮುಂದಿನ ಚಿತ್ರದ ಬಗ್ಗೆ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಈ ಎಲ್ಲಾ ಪ್ರಶ್ನೆಗಳಿಗೆ ಯುಗಾದಿಯಂದು ಉತ್ತರ ಸಿಗಲಿದೆ.

ರಾಬರ್ಟ್ ಯಶಸ್ಸಿನ ನಂತರದಲ್ಲಿ ದರ್ಶನ್​ಗೆ ಬೇಡಿಕೆ ಹೆಚ್ಚಿದೆ. ಖ್ಯಾತ ನಿರ್ಮಾಪಕರು ಹಾಗೂ ನಿರ್ದೇಶಕರು ದರ್ಶನ್ ಕಾಲ್​ಶೀಟ್​​ಗಾಗಿ ಸಾಲುಗಟ್ಟಿ ನಿಂತಿದ್ದಾರೆ. ರಾಕ್​ಲೈನ್​ ವೆಂಕಟೇಶ್​ ನಿರ್ಮಾಣದ ರಾಜವೀರ ಮದಕರಿ ನಾಯಕ ಸಿನಿಮಾದಲ್ಲಿ ದರ್ಶನ್​ ಈಗಾಗಲೇ ನಟಿಸುತ್ತಿದ್ದಾರೆ. ಆದರೆ, ಕೊರೊನಾ ಕಾರಣದಿಂದ ಸಿನಿಮಾ ಮುಂದೂಡಲ್ಪಟ್ಟಿದೆ ಎನ್ನಲಾಗುತ್ತಿದೆ. ಹೀಗಾಗಿ ದರ್ಶನ್​ ಬೇರೆ ಸಿನಿಮಾ ಘೋಷಣೆ ಮಾಡುತ್ತಿದ್ದಾರಂತೆ.

ನಿರ್ಮಾಪಕರಾದ ಮಿಲನ ಪ್ರಕಾಶ್​, ಶೈಲಜಾ ನಾಗ್​ ಬಳಿ ದರ್ಶನ್​ ಕಾಲ್​ಶೀಟ್​ ಇದೆ. ಇದರಲ್ಲಿ ಯಾವ ಸಿನಿಮಾ ಘೋಷಣೆ ಆಗುತ್ತದೆ ಎನ್ನುವುದನ್ನು ಕಾದು ನೋಡಬೇಕಿದೆ. ಅವರ ಮುಂದಿನ ಸಿನಿಮಾದ ಅಪ್​ಡೇಟ್​ ತಿಳಿದುಕೊಳ್ಳೋಕೆ ಅಭಿಮಾನಿಗಳು ತುದಿಗಾಲಿನಲ್ಲಿ ನಿಂತಿದ್ದಾರೆ.

ರಾಬರ್ಟ್​ ಸಿನಿಮಾ ಕೇವಲ 20 ದಿನಕ್ಕೆ 100 ಕೋಟಿ ಕಲೆಕ್ಷನ್ ಮಾಡಿತ್ತು. ಈ ಸಿನಿಮಾ ಮೂಲಕ ತರುಣ್​ ಸುಧೀರ್​ ಮತ್ತೊಮ್ಮೆ ಗೆದ್ದು ಬೀಗಿದ್ದರು. ದರ್ಶನ್​ ವೃತ್ತಿ ಜೀವನದಲ್ಲಿ ಇದು ಅದ್ಭುತ ಹಿಟ್​ ಆಗಿದೆ. ರಾಬರ್ಟ್​ ಸಿನಿಮಾ ಮೂಲಕ ನಟಿ ಆಶಾ ಭಟ್​ ಗೆಲುವಿನ ನಗೆ ಬೀರಿದ್ದಾರೆ. ಹೀಗಾಗಿ ಅವರ ಮುಂದಿನ ಚಿತ್ರದ ಬಗ್ಗೆ ಹೆಚ್ಚಿನ ನಿರೀಕ್ಷೆ ಇದೆ.

ಇದನ್ನೂ ಓದಿ: Darshan: ಆರ್​ಸಿಬಿ ಮ್ಯಾಚ್​ಗೂ ಮುನ್ನ ದರ್ಶನ್​ ವಿಡಿಯೋ ವೈರಲ್​; ನೀವು ಇದನ್ನು ನೋಡಲೇಬೇಕು

Published On - 6:49 pm, Sat, 10 April 21

ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ