AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುಗಾದಿಗೆ ದರ್ಶನ್​ ಹೊಸ ಸಿನಿಮಾ ಘೋಷಣೆ; ಡೈರೆಕ್ಟರ್​ ಯಾರು?

ಶಿವರಾತ್ರಿ ಪ್ರಯುಕ್ತ ಮಾರ್ಷ್​ 11ರಂದು ರಾಬರ್ಟ್​ ತೆರೆಗೆ ಬಂದಿತ್ತು. ಸಿನಿ ಪ್ರಿಯರಿಂದ ಚಿತ್ರ ಅದ್ಭುತ ಪ್ರತಿಕ್ರಿಯೆ ಕೂಡ ಗಳಿಸಿತ್ತು. ಹೀಗಾಗಿ, ದರ್ಶನ್​ ಮುಂದಿನ ಚಿತ್ರದ ಬಗ್ಗೆ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ.

ಯುಗಾದಿಗೆ ದರ್ಶನ್​ ಹೊಸ ಸಿನಿಮಾ ಘೋಷಣೆ; ಡೈರೆಕ್ಟರ್​ ಯಾರು?
ನಟ ದರ್ಶನ್
ರಾಜೇಶ್ ದುಗ್ಗುಮನೆ
|

Updated on:Apr 10, 2021 | 6:53 PM

Share

ನಟ ದರ್ಶನ್​ ರಾಬರ್ಟ್​ ಸಿನಿಮಾ ಯಶಸ್ಸಿನ ಅಲೆಯಲ್ಲಿ ತೇಲುತ್ತಿದ್ದಾರೆ. ಇತ್ತಿಚೆಗಷ್ಟೇ ಸಿನಿಮಾ 100 ಕೋಟಿ ಕ್ಲಬ್ ಸೇರಿದ್ದು ಚಿತ್ರತಂಡದ ಖುಷಿಯನ್ನು ದುಪ್ಪಟ್ಟು ಮಾಡಿದೆ. ದರ್ಶನ್​ ಮುಂದಿನ ಸಿನಿಮಾ ಯಾವುದು ಎಂಬುದು ಸದ್ಯದ ಕುತೂಹಲ. ಈ ಬಗ್ಗೆ ಟ್ವಿಟರ್​ನಲ್ಲಿ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಅಷ್ಟೇ ಅಲ್ಲ, ಈ ಬಗ್ಗೆ ಹೊಸ ಅಪ್​ಡೇಟ್​ ಸಿಗೋಕೆ ದಿನಾಂಕ ನಿಗದಿ ಆಗಿದೆ. ಶಿವರಾತ್ರಿ ಪ್ರಯುಕ್ತ ಮಾರ್ಷ್​ 11ರಂದು ರಾಬರ್ಟ್​ ತೆರೆಗೆ ಬಂದಿತ್ತು. ಸಿನಿ ಪ್ರಿಯರಿಂದ ಚಿತ್ರ ಅದ್ಭುತ ಪ್ರತಿಕ್ರಿಯೆ ಕೂಡ ಗಳಿಸಿತ್ತು. ಹೀಗಾಗಿ, ದರ್ಶನ್​ ಮುಂದಿನ ಚಿತ್ರದ ಬಗ್ಗೆ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಈ ಎಲ್ಲಾ ಪ್ರಶ್ನೆಗಳಿಗೆ ಯುಗಾದಿಯಂದು ಉತ್ತರ ಸಿಗಲಿದೆ.

ರಾಬರ್ಟ್ ಯಶಸ್ಸಿನ ನಂತರದಲ್ಲಿ ದರ್ಶನ್​ಗೆ ಬೇಡಿಕೆ ಹೆಚ್ಚಿದೆ. ಖ್ಯಾತ ನಿರ್ಮಾಪಕರು ಹಾಗೂ ನಿರ್ದೇಶಕರು ದರ್ಶನ್ ಕಾಲ್​ಶೀಟ್​​ಗಾಗಿ ಸಾಲುಗಟ್ಟಿ ನಿಂತಿದ್ದಾರೆ. ರಾಕ್​ಲೈನ್​ ವೆಂಕಟೇಶ್​ ನಿರ್ಮಾಣದ ರಾಜವೀರ ಮದಕರಿ ನಾಯಕ ಸಿನಿಮಾದಲ್ಲಿ ದರ್ಶನ್​ ಈಗಾಗಲೇ ನಟಿಸುತ್ತಿದ್ದಾರೆ. ಆದರೆ, ಕೊರೊನಾ ಕಾರಣದಿಂದ ಸಿನಿಮಾ ಮುಂದೂಡಲ್ಪಟ್ಟಿದೆ ಎನ್ನಲಾಗುತ್ತಿದೆ. ಹೀಗಾಗಿ ದರ್ಶನ್​ ಬೇರೆ ಸಿನಿಮಾ ಘೋಷಣೆ ಮಾಡುತ್ತಿದ್ದಾರಂತೆ.

ನಿರ್ಮಾಪಕರಾದ ಮಿಲನ ಪ್ರಕಾಶ್​, ಶೈಲಜಾ ನಾಗ್​ ಬಳಿ ದರ್ಶನ್​ ಕಾಲ್​ಶೀಟ್​ ಇದೆ. ಇದರಲ್ಲಿ ಯಾವ ಸಿನಿಮಾ ಘೋಷಣೆ ಆಗುತ್ತದೆ ಎನ್ನುವುದನ್ನು ಕಾದು ನೋಡಬೇಕಿದೆ. ಅವರ ಮುಂದಿನ ಸಿನಿಮಾದ ಅಪ್​ಡೇಟ್​ ತಿಳಿದುಕೊಳ್ಳೋಕೆ ಅಭಿಮಾನಿಗಳು ತುದಿಗಾಲಿನಲ್ಲಿ ನಿಂತಿದ್ದಾರೆ.

ರಾಬರ್ಟ್​ ಸಿನಿಮಾ ಕೇವಲ 20 ದಿನಕ್ಕೆ 100 ಕೋಟಿ ಕಲೆಕ್ಷನ್ ಮಾಡಿತ್ತು. ಈ ಸಿನಿಮಾ ಮೂಲಕ ತರುಣ್​ ಸುಧೀರ್​ ಮತ್ತೊಮ್ಮೆ ಗೆದ್ದು ಬೀಗಿದ್ದರು. ದರ್ಶನ್​ ವೃತ್ತಿ ಜೀವನದಲ್ಲಿ ಇದು ಅದ್ಭುತ ಹಿಟ್​ ಆಗಿದೆ. ರಾಬರ್ಟ್​ ಸಿನಿಮಾ ಮೂಲಕ ನಟಿ ಆಶಾ ಭಟ್​ ಗೆಲುವಿನ ನಗೆ ಬೀರಿದ್ದಾರೆ. ಹೀಗಾಗಿ ಅವರ ಮುಂದಿನ ಚಿತ್ರದ ಬಗ್ಗೆ ಹೆಚ್ಚಿನ ನಿರೀಕ್ಷೆ ಇದೆ.

ಇದನ್ನೂ ಓದಿ: Darshan: ಆರ್​ಸಿಬಿ ಮ್ಯಾಚ್​ಗೂ ಮುನ್ನ ದರ್ಶನ್​ ವಿಡಿಯೋ ವೈರಲ್​; ನೀವು ಇದನ್ನು ನೋಡಲೇಬೇಕು

Published On - 6:49 pm, Sat, 10 April 21

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ