AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುಗಾದಿಗೆ ದರ್ಶನ್​ ಹೊಸ ಸಿನಿಮಾ ಘೋಷಣೆ; ಡೈರೆಕ್ಟರ್​ ಯಾರು?

ಶಿವರಾತ್ರಿ ಪ್ರಯುಕ್ತ ಮಾರ್ಷ್​ 11ರಂದು ರಾಬರ್ಟ್​ ತೆರೆಗೆ ಬಂದಿತ್ತು. ಸಿನಿ ಪ್ರಿಯರಿಂದ ಚಿತ್ರ ಅದ್ಭುತ ಪ್ರತಿಕ್ರಿಯೆ ಕೂಡ ಗಳಿಸಿತ್ತು. ಹೀಗಾಗಿ, ದರ್ಶನ್​ ಮುಂದಿನ ಚಿತ್ರದ ಬಗ್ಗೆ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ.

ಯುಗಾದಿಗೆ ದರ್ಶನ್​ ಹೊಸ ಸಿನಿಮಾ ಘೋಷಣೆ; ಡೈರೆಕ್ಟರ್​ ಯಾರು?
ನಟ ದರ್ಶನ್
ರಾಜೇಶ್ ದುಗ್ಗುಮನೆ
|

Updated on:Apr 10, 2021 | 6:53 PM

Share

ನಟ ದರ್ಶನ್​ ರಾಬರ್ಟ್​ ಸಿನಿಮಾ ಯಶಸ್ಸಿನ ಅಲೆಯಲ್ಲಿ ತೇಲುತ್ತಿದ್ದಾರೆ. ಇತ್ತಿಚೆಗಷ್ಟೇ ಸಿನಿಮಾ 100 ಕೋಟಿ ಕ್ಲಬ್ ಸೇರಿದ್ದು ಚಿತ್ರತಂಡದ ಖುಷಿಯನ್ನು ದುಪ್ಪಟ್ಟು ಮಾಡಿದೆ. ದರ್ಶನ್​ ಮುಂದಿನ ಸಿನಿಮಾ ಯಾವುದು ಎಂಬುದು ಸದ್ಯದ ಕುತೂಹಲ. ಈ ಬಗ್ಗೆ ಟ್ವಿಟರ್​ನಲ್ಲಿ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಅಷ್ಟೇ ಅಲ್ಲ, ಈ ಬಗ್ಗೆ ಹೊಸ ಅಪ್​ಡೇಟ್​ ಸಿಗೋಕೆ ದಿನಾಂಕ ನಿಗದಿ ಆಗಿದೆ. ಶಿವರಾತ್ರಿ ಪ್ರಯುಕ್ತ ಮಾರ್ಷ್​ 11ರಂದು ರಾಬರ್ಟ್​ ತೆರೆಗೆ ಬಂದಿತ್ತು. ಸಿನಿ ಪ್ರಿಯರಿಂದ ಚಿತ್ರ ಅದ್ಭುತ ಪ್ರತಿಕ್ರಿಯೆ ಕೂಡ ಗಳಿಸಿತ್ತು. ಹೀಗಾಗಿ, ದರ್ಶನ್​ ಮುಂದಿನ ಚಿತ್ರದ ಬಗ್ಗೆ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಈ ಎಲ್ಲಾ ಪ್ರಶ್ನೆಗಳಿಗೆ ಯುಗಾದಿಯಂದು ಉತ್ತರ ಸಿಗಲಿದೆ.

ರಾಬರ್ಟ್ ಯಶಸ್ಸಿನ ನಂತರದಲ್ಲಿ ದರ್ಶನ್​ಗೆ ಬೇಡಿಕೆ ಹೆಚ್ಚಿದೆ. ಖ್ಯಾತ ನಿರ್ಮಾಪಕರು ಹಾಗೂ ನಿರ್ದೇಶಕರು ದರ್ಶನ್ ಕಾಲ್​ಶೀಟ್​​ಗಾಗಿ ಸಾಲುಗಟ್ಟಿ ನಿಂತಿದ್ದಾರೆ. ರಾಕ್​ಲೈನ್​ ವೆಂಕಟೇಶ್​ ನಿರ್ಮಾಣದ ರಾಜವೀರ ಮದಕರಿ ನಾಯಕ ಸಿನಿಮಾದಲ್ಲಿ ದರ್ಶನ್​ ಈಗಾಗಲೇ ನಟಿಸುತ್ತಿದ್ದಾರೆ. ಆದರೆ, ಕೊರೊನಾ ಕಾರಣದಿಂದ ಸಿನಿಮಾ ಮುಂದೂಡಲ್ಪಟ್ಟಿದೆ ಎನ್ನಲಾಗುತ್ತಿದೆ. ಹೀಗಾಗಿ ದರ್ಶನ್​ ಬೇರೆ ಸಿನಿಮಾ ಘೋಷಣೆ ಮಾಡುತ್ತಿದ್ದಾರಂತೆ.

ನಿರ್ಮಾಪಕರಾದ ಮಿಲನ ಪ್ರಕಾಶ್​, ಶೈಲಜಾ ನಾಗ್​ ಬಳಿ ದರ್ಶನ್​ ಕಾಲ್​ಶೀಟ್​ ಇದೆ. ಇದರಲ್ಲಿ ಯಾವ ಸಿನಿಮಾ ಘೋಷಣೆ ಆಗುತ್ತದೆ ಎನ್ನುವುದನ್ನು ಕಾದು ನೋಡಬೇಕಿದೆ. ಅವರ ಮುಂದಿನ ಸಿನಿಮಾದ ಅಪ್​ಡೇಟ್​ ತಿಳಿದುಕೊಳ್ಳೋಕೆ ಅಭಿಮಾನಿಗಳು ತುದಿಗಾಲಿನಲ್ಲಿ ನಿಂತಿದ್ದಾರೆ.

ರಾಬರ್ಟ್​ ಸಿನಿಮಾ ಕೇವಲ 20 ದಿನಕ್ಕೆ 100 ಕೋಟಿ ಕಲೆಕ್ಷನ್ ಮಾಡಿತ್ತು. ಈ ಸಿನಿಮಾ ಮೂಲಕ ತರುಣ್​ ಸುಧೀರ್​ ಮತ್ತೊಮ್ಮೆ ಗೆದ್ದು ಬೀಗಿದ್ದರು. ದರ್ಶನ್​ ವೃತ್ತಿ ಜೀವನದಲ್ಲಿ ಇದು ಅದ್ಭುತ ಹಿಟ್​ ಆಗಿದೆ. ರಾಬರ್ಟ್​ ಸಿನಿಮಾ ಮೂಲಕ ನಟಿ ಆಶಾ ಭಟ್​ ಗೆಲುವಿನ ನಗೆ ಬೀರಿದ್ದಾರೆ. ಹೀಗಾಗಿ ಅವರ ಮುಂದಿನ ಚಿತ್ರದ ಬಗ್ಗೆ ಹೆಚ್ಚಿನ ನಿರೀಕ್ಷೆ ಇದೆ.

ಇದನ್ನೂ ಓದಿ: Darshan: ಆರ್​ಸಿಬಿ ಮ್ಯಾಚ್​ಗೂ ಮುನ್ನ ದರ್ಶನ್​ ವಿಡಿಯೋ ವೈರಲ್​; ನೀವು ಇದನ್ನು ನೋಡಲೇಬೇಕು

Published On - 6:49 pm, Sat, 10 April 21

Follow Us
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ