AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Darshan: ದರ್ಶನ್​ ಹೇಳಿದ ಒಂದೇ ಮಾತಿಗೆ 6 ದಿನದಲ್ಲಿ ಹರಿದು ಬಂತು 1 ಕೋಟಿ ರೂ.! ಯಾವ ಮೃಗಾಲಯಕ್ಕೆ ಎಷ್ಟು ಲಕ್ಷ?

ಮೃಗಾಲಯಗಳಿಗೆ ನೆರವು ನೀಡಲು ದರ್ಶನ್​ ಅವರು ಮಾಡಿದ ಮನವಿಗೆ ಅದ್ಭುತ ಸ್ಪಂದನೆ ಸಿಕ್ಕಿದೆ. ಕರ್ನಾಟಕದ ಎಲ್ಲ 9 ಮೃಗಾಲಯಗಳಿಗೂ ದೇಣಿಗೆ ಹರಿದು ಬಂದಿದೆ.

Darshan: ದರ್ಶನ್​ ಹೇಳಿದ ಒಂದೇ ಮಾತಿಗೆ 6 ದಿನದಲ್ಲಿ ಹರಿದು ಬಂತು 1 ಕೋಟಿ ರೂ.! ಯಾವ ಮೃಗಾಲಯಕ್ಕೆ ಎಷ್ಟು ಲಕ್ಷ?
ಮೃಗಾಲಯಕ್ಕೆ ನೆರವಾಗಲು ದರ್ಶನ್​ ನೀಡಿದ ಕರೆಗೆ ಉತ್ತಮ ಸ್ಪಂದನೆ
ಮದನ್​ ಕುಮಾರ್​
|

Updated on: Jun 11, 2021 | 9:42 AM

Share

ನಟ ದರ್ಶನ್​ ಅವರ ಪ್ರಾಣಿಪ್ರೀತಿಯ ಬಗ್ಗೆ ಹೊಸದಾಗಿ ಹೇಳಬೇಕಾದ್ದಿಲ್ಲ. ಲಾಕ್​ಡೌನ್​ ಕಾರಣದಿಂದ ಮೃಗಾಲಯಗಳ ಪ್ರಾಣಿ-ಪಕ್ಷಿಗಳಿಗೆ ಸಂಕಷ್ಟ ಎದುರಾಗಿತ್ತು. ಪ್ರವಾಸಿಗರು ಬಾರದೇ ಇರುವುದರಿಂದ ಹಣ ಸಂಗ್ರಹ ಆಗುತ್ತಿರಲಿಲ್ಲ. ಆದ್ದರಿಂದ ಪ್ರಾಣಿಗಳ ದಿನನಿತ್ಯದ ಆಹಾರ ಮತ್ತು ನಿರ್ವಹಣೆಗೆ ತೊಂದರೆ ಆಗುತ್ತಿದೆ ಎಂಬುದನ್ನು ಗಮನಿಸಿದ ನಟ ದರ್ಶನ್​ ಅವರು ತಮ್ಮ ಅಭಿಮಾನಿಗಳಿಗೆ ಕರೆ ಕೊಟ್ಟಿದ್ದರು. ಕೈಲಾದಷ್ಟು ಸಹಾಯ ಮಾಡಿ, ಪ್ರಾಣಿಗಳನ್ನು ದತ್ತು ತೆಗೆದುಕೊಳ್ಳುವಂತೆ ಅವರು ಮನವಿ ಮಾಡಿಕೊಂಡಿದ್ದರು. ಅವರ ಮಾತಿಗೆ ಅದ್ಭುತ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕೇವಲ ಒಂದು ವಾರದಲ್ಲಿ ಬರೋಬ್ಬರಿ 1 ಕೋಟಿ ರೂ. ಸಂಗ್ರಹ ಆಗಿದೆ.

‘ಚಾಲೆಂಜಿಂಗ್​ ಸ್ಟಾರ್’ ಅವರ ಅಭಿಮಾನಿ ಬಳಗ ದೊಡ್ಡದು. ಅವರು ಏನೇ ಹೇಳಿದರೂ ಜನರು ಗೌರವದಿಂದ ಪಾಲಿಸುತ್ತಾರೆ. ಮೃಗಾಲಯಗಳಿಗೆ ನೆರವು ನೀಡಲು ಅವರು ಮಾಡಿದ ಮನವಿಗೆ ಅದ್ಭುತ ಸ್ಪಂದನೆ ಸಿಕ್ಕಿದೆ ಕರ್ನಾಟಕದ ಎಲ್ಲ 9 ಮೃಗಾಲಯಗಳಿಗೂ ದೇಣಿಗೆ ಹರಿದು ಬಂದಿದೆ. ಎಲ್ಲ ಸೇರಿದರೆ ಕೇವಲ ಆರು ದಿನಗಳಲ್ಲಿ ಒಂದು ಕೋಟಿ ರೂ. ಸಂಗ್ರಹ ಆಗಿದೆ. ಇನ್ನೂ ಕೂಡ ದೇಣಿಗೆ ಹರಿದುಬರುತ್ತಿರುವುದು ಖುಷಿಯ ವಿಚಾರ.

ಈ ಬಗ್ಗೆ ಕರ್ನಾಟಕ ಮೃಗಾಲಯ ಪ್ರಾಧಿಕಾರವೇ ಅಧಿಕೃತವಾಗಿ ಟ್ವಿಟರ್​ ಖಾತೆ ಮೂಲಕ ಮಾಹಿತಿ ಹಂಚಿಕೊಂಡಿದೆ. ಅಲ್ಲದೆ, ಇದಕ್ಕೆ ಕಾರಣರಾದ ದರ್ಶನ್​ ಅವರಿಗೆ ಧನ್ಯವಾದ ತಿಳಿಸಲಾಗಿದೆ. ಯಾವ ಮೃಗಾಲಯಕ್ಕೆ ಎಷ್ಟು ಹಣ ಬಂದಿದೆ ಎಂಬುದರ ವಿವರವನ್ನೂ ನೀಡಲಾಗಿದೆ.

ಮೈಸೂರು: 51,75,700

ಬನ್ನೇರುಘಟ್ಟ: 29,83,000

ಶಿವಮೊಗ್ಗ: 7,24,800

ಗದಗ: 2,66,400

ಹಂಪಿ: 2,42,200

ಬೆಳಗಾವಿ: 2,22,300

ದಾವಣಗೆರೆ: 1,94,900

ಚಿತ್ರದುರ್ಗ: 1,49,300

ಕಲಬುರಗಿ: 89,300

ಒಟ್ಟು: 1,00,47,900

ದರ್ಶನ್​ ಅಭಿಮಾನಿಗಳು ಮಾತ್ರವಲ್ಲದೆ ಅನೇಕ ಸೆಲೆಬ್ರಿಟಿಗಳು ಕೂಡ ಪ್ರಾಣಿಗಳನ್ನು ದತ್ತು ಪಡೆಯುತ್ತಿದ್ದಾರೆ. ಇತ್ತೀಚೆಗೆ ಉಪೇಂದ್ರ ಅವರು ಒಂದು ಆಫ್ರಿಕನ್​ ಆನೆಯನ್ನು ದತ್ತು ಪಡೆದು ಎಲ್ಲರಿಗೂ ಮಾದರಿ ಆಗಿದ್ದಾರೆ. ಅವರಿಗೆ ದರ್ಶನ್​ ಧನ್ಯವಾದ ತಿಳಿಸಿದ್ದಾರೆ.

ಇದನ್ನೂ ಓದಿ:

ದರ್ಶನ್​ ಮನವಿಗೆ ಓಗೊಟ್ಟು ಆನೆ ದತ್ತು ಪಡೆದ ಉಪೇಂದ್ರ; ಒಂದು ವರ್ಷಕ್ಕೆ ಆಗುವ ಖರ್ಚು ಎಷ್ಟು?

Darshan: ದರ್ಶನ್​ ಕೊಟ್ಟ ಆ ಒಂದು ಕರೆಗೆ ಅಭಿಮಾನಿಗಳಿಂದ ಬಂತು ಅಭೂತಪೂರ್ವ ಪ್ರತಿಕ್ರಿಯೆ; ಸಾಕ್ಷಿ ತೋರಿಸಿದ ಡಿ ಬಾಸ್

Follow Us
'ಶ್ರಮ ವ್ಯರ್ಥವಾಯಿತು': ನೀಟ್ ಪರೀಕ್ಷೆ ರದ್ದತಿಗೆ ವಿದ್ಯಾರ್ಥಿನಿ ಬೇಸರ
'ಶ್ರಮ ವ್ಯರ್ಥವಾಯಿತು': ನೀಟ್ ಪರೀಕ್ಷೆ ರದ್ದತಿಗೆ ವಿದ್ಯಾರ್ಥಿನಿ ಬೇಸರ
ಕಾಂಗ್ರೆಸ್​​​ಗೆ​ ಮೇ ಅಂತ್ಯಕ್ಕೆ ಶುಭಕಾಲ?
ಕಾಂಗ್ರೆಸ್​​​ಗೆ​ ಮೇ ಅಂತ್ಯಕ್ಕೆ ಶುಭಕಾಲ?
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ