AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Darshan: ದರ್ಶನ್​ ಹೇಳಿದ ಒಂದೇ ಮಾತಿಗೆ 6 ದಿನದಲ್ಲಿ ಹರಿದು ಬಂತು 1 ಕೋಟಿ ರೂ.! ಯಾವ ಮೃಗಾಲಯಕ್ಕೆ ಎಷ್ಟು ಲಕ್ಷ?

ಮೃಗಾಲಯಗಳಿಗೆ ನೆರವು ನೀಡಲು ದರ್ಶನ್​ ಅವರು ಮಾಡಿದ ಮನವಿಗೆ ಅದ್ಭುತ ಸ್ಪಂದನೆ ಸಿಕ್ಕಿದೆ. ಕರ್ನಾಟಕದ ಎಲ್ಲ 9 ಮೃಗಾಲಯಗಳಿಗೂ ದೇಣಿಗೆ ಹರಿದು ಬಂದಿದೆ.

Darshan: ದರ್ಶನ್​ ಹೇಳಿದ ಒಂದೇ ಮಾತಿಗೆ 6 ದಿನದಲ್ಲಿ ಹರಿದು ಬಂತು 1 ಕೋಟಿ ರೂ.! ಯಾವ ಮೃಗಾಲಯಕ್ಕೆ ಎಷ್ಟು ಲಕ್ಷ?
ಮೃಗಾಲಯಕ್ಕೆ ನೆರವಾಗಲು ದರ್ಶನ್​ ನೀಡಿದ ಕರೆಗೆ ಉತ್ತಮ ಸ್ಪಂದನೆ
ಮದನ್​ ಕುಮಾರ್​
|

Updated on: Jun 11, 2021 | 9:42 AM

Share

ನಟ ದರ್ಶನ್​ ಅವರ ಪ್ರಾಣಿಪ್ರೀತಿಯ ಬಗ್ಗೆ ಹೊಸದಾಗಿ ಹೇಳಬೇಕಾದ್ದಿಲ್ಲ. ಲಾಕ್​ಡೌನ್​ ಕಾರಣದಿಂದ ಮೃಗಾಲಯಗಳ ಪ್ರಾಣಿ-ಪಕ್ಷಿಗಳಿಗೆ ಸಂಕಷ್ಟ ಎದುರಾಗಿತ್ತು. ಪ್ರವಾಸಿಗರು ಬಾರದೇ ಇರುವುದರಿಂದ ಹಣ ಸಂಗ್ರಹ ಆಗುತ್ತಿರಲಿಲ್ಲ. ಆದ್ದರಿಂದ ಪ್ರಾಣಿಗಳ ದಿನನಿತ್ಯದ ಆಹಾರ ಮತ್ತು ನಿರ್ವಹಣೆಗೆ ತೊಂದರೆ ಆಗುತ್ತಿದೆ ಎಂಬುದನ್ನು ಗಮನಿಸಿದ ನಟ ದರ್ಶನ್​ ಅವರು ತಮ್ಮ ಅಭಿಮಾನಿಗಳಿಗೆ ಕರೆ ಕೊಟ್ಟಿದ್ದರು. ಕೈಲಾದಷ್ಟು ಸಹಾಯ ಮಾಡಿ, ಪ್ರಾಣಿಗಳನ್ನು ದತ್ತು ತೆಗೆದುಕೊಳ್ಳುವಂತೆ ಅವರು ಮನವಿ ಮಾಡಿಕೊಂಡಿದ್ದರು. ಅವರ ಮಾತಿಗೆ ಅದ್ಭುತ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕೇವಲ ಒಂದು ವಾರದಲ್ಲಿ ಬರೋಬ್ಬರಿ 1 ಕೋಟಿ ರೂ. ಸಂಗ್ರಹ ಆಗಿದೆ.

‘ಚಾಲೆಂಜಿಂಗ್​ ಸ್ಟಾರ್’ ಅವರ ಅಭಿಮಾನಿ ಬಳಗ ದೊಡ್ಡದು. ಅವರು ಏನೇ ಹೇಳಿದರೂ ಜನರು ಗೌರವದಿಂದ ಪಾಲಿಸುತ್ತಾರೆ. ಮೃಗಾಲಯಗಳಿಗೆ ನೆರವು ನೀಡಲು ಅವರು ಮಾಡಿದ ಮನವಿಗೆ ಅದ್ಭುತ ಸ್ಪಂದನೆ ಸಿಕ್ಕಿದೆ ಕರ್ನಾಟಕದ ಎಲ್ಲ 9 ಮೃಗಾಲಯಗಳಿಗೂ ದೇಣಿಗೆ ಹರಿದು ಬಂದಿದೆ. ಎಲ್ಲ ಸೇರಿದರೆ ಕೇವಲ ಆರು ದಿನಗಳಲ್ಲಿ ಒಂದು ಕೋಟಿ ರೂ. ಸಂಗ್ರಹ ಆಗಿದೆ. ಇನ್ನೂ ಕೂಡ ದೇಣಿಗೆ ಹರಿದುಬರುತ್ತಿರುವುದು ಖುಷಿಯ ವಿಚಾರ.

ಈ ಬಗ್ಗೆ ಕರ್ನಾಟಕ ಮೃಗಾಲಯ ಪ್ರಾಧಿಕಾರವೇ ಅಧಿಕೃತವಾಗಿ ಟ್ವಿಟರ್​ ಖಾತೆ ಮೂಲಕ ಮಾಹಿತಿ ಹಂಚಿಕೊಂಡಿದೆ. ಅಲ್ಲದೆ, ಇದಕ್ಕೆ ಕಾರಣರಾದ ದರ್ಶನ್​ ಅವರಿಗೆ ಧನ್ಯವಾದ ತಿಳಿಸಲಾಗಿದೆ. ಯಾವ ಮೃಗಾಲಯಕ್ಕೆ ಎಷ್ಟು ಹಣ ಬಂದಿದೆ ಎಂಬುದರ ವಿವರವನ್ನೂ ನೀಡಲಾಗಿದೆ.

ಮೈಸೂರು: 51,75,700

ಬನ್ನೇರುಘಟ್ಟ: 29,83,000

ಶಿವಮೊಗ್ಗ: 7,24,800

ಗದಗ: 2,66,400

ಹಂಪಿ: 2,42,200

ಬೆಳಗಾವಿ: 2,22,300

ದಾವಣಗೆರೆ: 1,94,900

ಚಿತ್ರದುರ್ಗ: 1,49,300

ಕಲಬುರಗಿ: 89,300

ಒಟ್ಟು: 1,00,47,900

ದರ್ಶನ್​ ಅಭಿಮಾನಿಗಳು ಮಾತ್ರವಲ್ಲದೆ ಅನೇಕ ಸೆಲೆಬ್ರಿಟಿಗಳು ಕೂಡ ಪ್ರಾಣಿಗಳನ್ನು ದತ್ತು ಪಡೆಯುತ್ತಿದ್ದಾರೆ. ಇತ್ತೀಚೆಗೆ ಉಪೇಂದ್ರ ಅವರು ಒಂದು ಆಫ್ರಿಕನ್​ ಆನೆಯನ್ನು ದತ್ತು ಪಡೆದು ಎಲ್ಲರಿಗೂ ಮಾದರಿ ಆಗಿದ್ದಾರೆ. ಅವರಿಗೆ ದರ್ಶನ್​ ಧನ್ಯವಾದ ತಿಳಿಸಿದ್ದಾರೆ.

ಇದನ್ನೂ ಓದಿ:

ದರ್ಶನ್​ ಮನವಿಗೆ ಓಗೊಟ್ಟು ಆನೆ ದತ್ತು ಪಡೆದ ಉಪೇಂದ್ರ; ಒಂದು ವರ್ಷಕ್ಕೆ ಆಗುವ ಖರ್ಚು ಎಷ್ಟು?

Darshan: ದರ್ಶನ್​ ಕೊಟ್ಟ ಆ ಒಂದು ಕರೆಗೆ ಅಭಿಮಾನಿಗಳಿಂದ ಬಂತು ಅಭೂತಪೂರ್ವ ಪ್ರತಿಕ್ರಿಯೆ; ಸಾಕ್ಷಿ ತೋರಿಸಿದ ಡಿ ಬಾಸ್

Follow Us
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ
ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ
ಎಸ್​​. ಜಾನಕಿ ಅಂತಿಮ ದರ್ಶನದ ನೇರಪ್ರಸಾರ
ಎಸ್​​. ಜಾನಕಿ ಅಂತಿಮ ದರ್ಶನದ ನೇರಪ್ರಸಾರ