AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Darshan: ಸಿನಿಮಾ ಥಿಯೇಟರ್​ಗೆ ಭವಿಷ್ಯ ಇಲ್ಲವೇ?; ಉದಾಹರಣೆ ಸಹಿತ ವಿವರಿಸಿದ ದರ್ಶನ್

ಸಿನಿಮಾ ಥಿಯೇಟರ್​ಗೆ ಭವಿಷ್ಯ ಇಲ್ಲ ಎನ್ನುವ ಮಾತು ಕೂಡ ಕೇಳಿ ಬಂದಿದೆ. ಆದರೆ, ಚಾಲೆಂಜಿಂಗ್​ ಸ್ಟಾರ್​ ದರ್ಶನ್​ ಇದನ್ನು ಒಪ್ಪಿಲ್ಲ. ಅವರು ಉದಾಹರಣೆ ಸಹಿತ ಇದನ್ನು ವಿವರಿಸಿದ್ದಾರೆ.

Darshan: ಸಿನಿಮಾ ಥಿಯೇಟರ್​ಗೆ ಭವಿಷ್ಯ ಇಲ್ಲವೇ?; ಉದಾಹರಣೆ ಸಹಿತ ವಿವರಿಸಿದ ದರ್ಶನ್
ರಾಬರ್ಟ್ ಸಿನಿಮಾದಲ್ಲಿ ದರ್ಶನ್​
ರಾಜೇಶ್ ದುಗ್ಗುಮನೆ
| Edited By: |

Updated on: Jun 18, 2021 | 7:20 AM

Share

ಕೊವಿಡ್​ ಒಂದಾದಮೇಲೆ ಒಂದು ಅಲೆಗಳನ್ನು ಹೊತ್ತು ತರುತ್ತಿದೆ. ಕೊರೊನಾ ಎರಡನೇ ಅಲೆ ಕಡಿಮೆ ಆಗುತ್ತಿದೆ ಎನ್ನುವಾಗಲೇ ಮೂರನೇ ಅಲೆ ಬಗ್ಗೆ ಆತಂಕ ಕಾಡಿದೆ. ಈ ಮಧ್ಯೆ ಒಟಿಟಿ ಹೆಚ್ಚು ಜನಪ್ರಿಯತೆ ಪಡೆದುಕೊಳ್ಳುತ್ತಿದ್ದು, ಇದರಿಂದ ಸಿನಿಮಾ ಥಿಯೇಟರ್​ಗೆ ಭವಿಷ್ಯ ಇಲ್ಲ ಎನ್ನುವ ಮಾತು ಕೂಡ ಕೇಳಿ ಬಂದಿದೆ. ಆದರೆ, ಚಾಲೆಂಜಿಂಗ್​ ಸ್ಟಾರ್​ ದರ್ಶನ್​ ಇದನ್ನು ಒಪ್ಪಿಲ್ಲ. ಅವರು ಉದಾಹರಣೆ ಸಹಿತ ಇದನ್ನು ವಿವರಿಸಿದ್ದಾರೆ.

ಖಾಸಗಿ ಸುದ್ದಿ ವೆಬ್​ಸೈಟ್​ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿರುವ ದರ್ಶನ್​, ‘ಕಿರುತೆರೆ ಎಂಬುದು ಯಾವಾಗಲೂ ಕಿರುತೆರೆಯಾಗೇ ಉಳಿಯಲಿದೆ. ಇದಕ್ಕೆ ನಾನು ಒಳ್ಳೆಯ ಉದಾಹರಣೆ ಕೊಡುತ್ತೇನೆ. ರಾಬರ್ಟ್​ ಟ್ರೇಲರ್​ ರಿಲೀಸ್​ ಆದ ಸಂದರ್ಭದಲ್ಲಿ ನಾನು ನಿರ್ಮಾಪಕ ರಾಕ್​ಲೈನ್ ವೆಂಕಟೇಶ್​ ಮಗ ಯತಿರಾಜ್​​ನನ್ನು ಭೇಟಿ ಮಾಡಿದ್ದೆ. ಅವರು ರಾಬರ್ಟ್​ ಟ್ರೇಲರ್ ಚೆನ್ನಾಗಿಲ್ಲ ಎಂದಿದ್ದರು. ಇದು ನನಗೆ ಅಚ್ಚರಿ ಮೂಡಿಸಿತ್ತು’ ಎಂದು ಮಾತು ಆರಂಭಿಸಿದ್ದಾರೆ.

‘ಯತಿರಾಜ್​ ಚಿತ್ರಮಂದಿರಕ್ಕೆ ತೆರಳಿ ಸಿನಿಮಾ ನೋಡಿದರು. ಆಗ ಅದ್ಭುತವಾಗಿದೆ ಎನ್ನುವ ಉತ್ತರ ಅವರಿಂದ ಬಂತು. ಮೊಬೈಲ್​ನಲ್ಲಿ ನೋಡಿದಾಗ ಅಷ್ಟು ಪರಿಣಾಮಕಾರಿ ಆಗಿ ಇರದೇ ಇರುವುದು ಚಿತ್ರಮಂದಿರದಲ್ಲಿ ಇಷ್ಟವಾಗುತ್ತದೆ. ಇದುವೇ ವ್ಯತ್ಯಾಸ. ದೊಡ್ಡ ಪರದೆ ಮೇಲೆ ನೋಡಿದರೆ ಸಿಗುವ ಫೀಲ್​ ಬೇರೆ. ಹೀಗಾಗಿ, ಸಿನಿಮಾ ಮಂದಿರಗಳು ಕೊನೆಯವರೆಗೂ ಉಳಿದುಕೊಳ್ಳುತ್ತವೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಲಾಕ್‌ಡೌನ್‌ನಿಂದಾಗಿ ರಾಜ್ಯದ 9 ಮೃಗಾಲಯಗಳೂ ಆರ್ಥಿಕ ಸಂಕಷ್ಟಕ್ಕೆ ತುತ್ತಾಗಿವೆ. ಇದರಿಂದಾಗಿ ಪ್ರಾಣಿಗಳ ಆಹಾರಕ್ಕೂ ಹಣವಿಲ್ಲದೆ ಪರದಾಡುತ್ತಿರುವ ಸ್ಥಿತಿ ಕರ್ನಾಟಕ ಮೃಗಾಲಯ ಪ್ರಾಧಿಕಾರಕ್ಕೆ ಬಂದೊದಗಿದೆ. ಹೀಗಾಗಿ ಮೃಗಾಲಯದ ಸಂಕಷ್ಟಕ್ಕೆ ನೆರವಾಗಿ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ನಟ ದರ್ಶನ್ ಅವರಿಗೆ ಮನವಿ ಮಾಡಿದ್ದರು. ನಟ ದರ್ಶನ್ ಅವರು ಮನವಿ‌ ಮಾಡಿದ ಆರು ದಿನಗಳಲ್ಲೇ ಒಂದು‌ ಕೋಟಿಯಷ್ಟು ಹಣ ಮೃಗಾಲಯ ಪ್ರಾಧಿಕಾರದ ಖಾತೆಗೆ ಸಂದಾಯವಾಗಿದೆ.

ಇದನ್ನೂ ಓದಿ:

ಮಣ್ಣಿನಲ್ಲಿ ಸ್ನಾನ ಮಾಡಿದ ದರ್ಶನ್​ ಸಿನಿಮಾ ಹೀರೋಯಿನ್​; ಇವರು ಯಾರೆಂದು ಗುರುತಿಸಬಲ್ಲಿರಾ?

ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು