AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಂಚನೆ ಯತ್ನ ಪ್ರಕರಣದ ಸುದ್ದಿಯಿಂದ ಬೇಸತ್ತಿದ್ದ ಅಭಿಮಾನಿಗಳಿಗೆ ದರ್ಶನ್​ ಕಡೆಯಿಂದ ಗುಡ್​ನ್ಯೂಸ್​

Darshan Thoogudeep 55th Movie: ದರ್ಶನ್​ ಮುಂದಿನ ಚಿತ್ರದ ಬಗ್ಗೆ ಭಾರೀ ನಿರೀಕ್ಷೆ ಇದೆ. ದರ್ಶನ್​ 55ನೇ ಸಿನಿಮಾ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಚರ್ಚೆಗಳು ನಡೆಯುತ್ತಿದ್ದವು. ಈಗ ಈ ವಿಚಾರ ಅಧಿಕೃತವಾಗಿದೆ.

ವಂಚನೆ ಯತ್ನ ಪ್ರಕರಣದ ಸುದ್ದಿಯಿಂದ ಬೇಸತ್ತಿದ್ದ ಅಭಿಮಾನಿಗಳಿಗೆ ದರ್ಶನ್​ ಕಡೆಯಿಂದ ಗುಡ್​ನ್ಯೂಸ್​
ವಂಚನೆ ಯತ್ನ ಪ್ರಕರಣದ ಸುದ್ದಿಯಿಂದ ಬೇಸತ್ತಿದ್ದ ಅಭಿಮಾನಿಗಳಿಗೆ ದರ್ಶನ್​ ಕಡೆಯಿಂದ ಗುಡ್​ನ್ಯೂಸ್​
TV9 Web
| Edited By: |

Updated on:Jul 14, 2021 | 5:39 PM

Share

‘ರಾಬರ್ಟ್’​ ಸಿನಿಮಾ ಯಶಸ್ಸು ಕಂಡ ನಂತರದಲ್ಲಿ ದರ್ಶನ್​ (Darshan) ಯಾವುದೇ ಸಿನಿಮಾ ಘೋಷಣೆ ಮಾಡಿರಲಿಲ್ಲ. ಅವರ 55ನೇ ಸಿನಿಮಾಗೆ (Darshan Thoogudeep 55th Movie) ಯಾರು ಬಂಡವಾಳ ಹೂಡಲಿದ್ದಾರೆ, ಈ ಸಿನಿಮಾಗೆ ಡೈರೆಕ್ಷನ್​ ಮಾಡೋದು ಯಾರು ಎಂಬಿತ್ಯಾದಿ ವಿಚಾರಗಳ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಚರ್ಚೆ ಜೋರಾಗಿತ್ತು. ಇದಕ್ಕೆ ಕೊನೆಗೂ ಉತ್ತರ ಸಿಕ್ಕಿದೆ. ಖ್ಯಾತ ನಿರ್ಮಾಪಕಿ ಶೈಲಜಾ ನಾಗ್  (Shylaja Nag) ಅವರು ದರ್ಶನ್​ ನಟನೆಯ 55ನೇ ಸಿನಿಮಾದ ನಿರ್ಮಾಣದ ಜವಾಬ್ದಾರಿ ಹೊತ್ತಿದ್ದಾರೆ. ಈ ಬಗ್ಗೆ ಇಂದು ಅಧಿಕೃತ ಘೋಷಣೆ ಆಗಿದೆ.

ಶಿವರಾತ್ರಿ ಪ್ರಯುಕ್ತ ಮಾರ್ಚ್​ 11ರಂದು ‘ರಾಬರ್ಟ್​’ ತೆರೆಗೆ ಬಂದಿತ್ತು. ಸಿನಿ ಪ್ರಿಯರಿಂದ ಚಿತ್ರ ಅದ್ಭುತ ಪ್ರತಿಕ್ರಿಯೆ ಗಳಿಸಿದ್ದಲ್ಲದೆ, ಬಾಕ್ಸ್​ ಆಫೀಸ್​ನಲ್ಲಿ 100 ಕೋಟಿ ಕ್ಲಬ್​ ಸೇರಿತ್ತು. ಹೀಗಾಗಿ, ದರ್ಶನ್​ ಮುಂದಿನ ಚಿತ್ರದ ಬಗ್ಗೆ ಭಾರೀ ನಿರೀಕ್ಷೆ ಇದೆ. ದರ್ಶನ್​ 55ನೇ ಸಿನಿಮಾ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಚರ್ಚೆಗಳು ನಡೆಯುತ್ತಿದ್ದವು. ಈಗ ಈ ವಿಚಾರ ಅಧಿಕೃತವಾಗಿದೆ.

ನಿರ್ಮಾಪಕಿ ಶೈಲಜಾ ನಾಗ್​ ಅವರು ಈ ಬಗ್ಗೆ ಟ್ವಿಟರ್​ನಲ್ಲಿ ಅಧಿಕೃತ ಘೋಷಣೆ ಮಾಡಿದ್ದಾರೆ. ದರ್ಶನ್​ ಜತೆಗೆ ಇರುವ ಫೋಟೋ ಹಂಚಿಕೊಂಡಿರುವ ಶೈಲಜಾ ನಾಗ್​, ‘ದರ್ಶನ್​ ಜತೆಗಿನ 55ನೇ ಸಿನಿಮಾಗೆ ನಾನು ಹಾಗೂ ಬಿ. ಸುರೇಶ್​ ಬಂಡವಾಳ ಹೂಡುತ್ತಿದ್ದೇವೆ. ಹರಿಕೃಷ್ಣ ಸಿನಿಮಾದ ನಿರ್ದೇಶನದ ಜವಾಬ್ದಾರಿ ಹೊತ್ತಿದ್ದಾರೆ’ ಎಂದಿದ್ದಾರೆ. ಈ ಮೂಲಕ ಹಲವು ತಿಂಗಳ ಕಾಯುವಿಕೆಗೆ ಕೊನೆ ಬಿದ್ದಿದೆ.

2019ರಲ್ಲಿ ತೆರೆಗೆ ಬಂದ ದರ್ಶನ್​ ನಟನೆಯ ‘ಯಜಮಾನ’ ಸಿನಿಮಾಗೆ ಶೈಲಜಾ ನಾಗ್​ ಬಂಡವಾಳ ಹೂಡಿದ್ದರು. ವಿ. ಹರಿಕೃಷ್ಣ ಈ ಸಿನಿಮಾವನ್ನು ನಿರ್ದೇಶನ ಮಾಡಿದ್ದರು. ಈಗ ಇದೇ ಕಾಂಬಿನೇಷನ್​ ಮತ್ತೆ ಒಂದಾಗಿದ್ದು, ಅಭಿಮಾನಿಗಳು ಹೆಚ್ಚಿನದ್ದನ್ನು ನಿರೀಕ್ಷೆ ಮಾಡುತ್ತಿದ್ದಾರೆ.

25 ಕೋಟಿ ರೂಪಾಯಿ ವಂಚನೆ ಯತ್ನ ಪ್ರಕರಣದಲ್ಲಿ ದರ್ಶನ್​ ಅವರ ಹೆಸರು ಸಿಲುಕಿಕೊಂಡಿತ್ತು. ಕಳೆದ ಎರಡು-ಮೂರು ದಿನಗಳಿಂದ ಈ ಬಗ್ಗೆ ಚರ್ಚೆ ಆಗುತ್ತಲೇ ಇದೆ. ಅರುಣಾ ಕುಮಾರಿ ಎಂಬುವವರು ಈ ವಂಚನೆ ಪ್ರಯತ್ನದ ಪ್ರಮುಖ ರುವಾರಿ. ರಾಬರ್ಟ್​ ನಿರ್ಮಾಪಕ ಉಮಾಪತಿ ಶ್ರೀನಿವಾಸ್​ ಗೌಡ ಅವರು ಅರುಣಾ ಕುಮಾರಿಗೆ ಕುಮ್ಮಕ್ಕು ಕೊಟ್ಟಿದ್ದಾರೆ ಎನ್ನಲಾಗಿತ್ತು.

‘ನಾನು ಮತ್ತು ದರ್ಶನ್ ಅವರು ಮೊದಲಿನಿಂದಲೂ ಚೆನ್ನಾಗಿಯೇ ಇದ್ದೇವೆ. ಸ್ನೇಹಿತರ ವಿಷಯದಲ್ಲಿ ಇದ್ದ ಗೊಂದಲಗಳು ಪರಿಹಾರವಾಗಿವೆ. ಆ ವಿಷಯದಲ್ಲಿ ರಾಜಿಯಾಗಿದ್ದೇನೆ ಎಂದು ಉಮಾಪತಿ ಶ್ರೀನಿವಾಸ ಗೌಡ ಬುಧವಾರ (ಜುಲೈ 14) ತಿಳಿಸಿದ್ದಾರೆ. ‘ಸ್ನೇಹದ ವಿಚಾರದಲ್ಲಿ ರಾಜಿಯಾಗಿದ್ದೇವೆ, ನಿಜ. ಆದರೆ ವಂಚನೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಾನೂನು ಹೋರಾಟ ಮುಂದುವರೆಯಲಿದೆ. ಆ ಪ್ರಕರಣದ ಸತ್ಯಾಸತ್ಯತೆ ತನಿಖೆಯ ನಂತರ ಹೊರಬರಲಿದೆ’ ಎಂದು ಶ್ರೀನಿವಾಸ ಗೌಡ ಅವರು ಹೇಳಿದ್ದರು. ಇವುಗಳ ಮಧ್ಯೆಯೇ ದರ್ಶನ್​ ಹೊಸ ಸಿನಿಮಾ ಘೋಷಣೆ ಮಾಡಿದ್ದಾರೆ.

ಇದನ್ನೂ ಓದಿ: ದರ್ಶನ್ ಹೆಸರಿನಲ್ಲಿ ವಂಚನೆಗೆ ಯತ್ನ ಪ್ರಕರಣ: ಆರೋಪಿ ಅರುಣಾ ಕುಮಾರಿಯಿಂದ ಇಂದು ಮಹತ್ವದ ಸುದ್ದಿಗೋಷ್ಠಿ

Published On - 5:31 pm, Wed, 14 July 21

Follow Us
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್