AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಂಚನೆ ಯತ್ನ ಪ್ರಕರಣದ ಸುದ್ದಿಯಿಂದ ಬೇಸತ್ತಿದ್ದ ಅಭಿಮಾನಿಗಳಿಗೆ ದರ್ಶನ್​ ಕಡೆಯಿಂದ ಗುಡ್​ನ್ಯೂಸ್​

Darshan Thoogudeep 55th Movie: ದರ್ಶನ್​ ಮುಂದಿನ ಚಿತ್ರದ ಬಗ್ಗೆ ಭಾರೀ ನಿರೀಕ್ಷೆ ಇದೆ. ದರ್ಶನ್​ 55ನೇ ಸಿನಿಮಾ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಚರ್ಚೆಗಳು ನಡೆಯುತ್ತಿದ್ದವು. ಈಗ ಈ ವಿಚಾರ ಅಧಿಕೃತವಾಗಿದೆ.

ವಂಚನೆ ಯತ್ನ ಪ್ರಕರಣದ ಸುದ್ದಿಯಿಂದ ಬೇಸತ್ತಿದ್ದ ಅಭಿಮಾನಿಗಳಿಗೆ ದರ್ಶನ್​ ಕಡೆಯಿಂದ ಗುಡ್​ನ್ಯೂಸ್​
ವಂಚನೆ ಯತ್ನ ಪ್ರಕರಣದ ಸುದ್ದಿಯಿಂದ ಬೇಸತ್ತಿದ್ದ ಅಭಿಮಾನಿಗಳಿಗೆ ದರ್ಶನ್​ ಕಡೆಯಿಂದ ಗುಡ್​ನ್ಯೂಸ್​
TV9 Web
| Edited By: |

Updated on:Jul 14, 2021 | 5:39 PM

Share

‘ರಾಬರ್ಟ್’​ ಸಿನಿಮಾ ಯಶಸ್ಸು ಕಂಡ ನಂತರದಲ್ಲಿ ದರ್ಶನ್​ (Darshan) ಯಾವುದೇ ಸಿನಿಮಾ ಘೋಷಣೆ ಮಾಡಿರಲಿಲ್ಲ. ಅವರ 55ನೇ ಸಿನಿಮಾಗೆ (Darshan Thoogudeep 55th Movie) ಯಾರು ಬಂಡವಾಳ ಹೂಡಲಿದ್ದಾರೆ, ಈ ಸಿನಿಮಾಗೆ ಡೈರೆಕ್ಷನ್​ ಮಾಡೋದು ಯಾರು ಎಂಬಿತ್ಯಾದಿ ವಿಚಾರಗಳ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಚರ್ಚೆ ಜೋರಾಗಿತ್ತು. ಇದಕ್ಕೆ ಕೊನೆಗೂ ಉತ್ತರ ಸಿಕ್ಕಿದೆ. ಖ್ಯಾತ ನಿರ್ಮಾಪಕಿ ಶೈಲಜಾ ನಾಗ್  (Shylaja Nag) ಅವರು ದರ್ಶನ್​ ನಟನೆಯ 55ನೇ ಸಿನಿಮಾದ ನಿರ್ಮಾಣದ ಜವಾಬ್ದಾರಿ ಹೊತ್ತಿದ್ದಾರೆ. ಈ ಬಗ್ಗೆ ಇಂದು ಅಧಿಕೃತ ಘೋಷಣೆ ಆಗಿದೆ.

ಶಿವರಾತ್ರಿ ಪ್ರಯುಕ್ತ ಮಾರ್ಚ್​ 11ರಂದು ‘ರಾಬರ್ಟ್​’ ತೆರೆಗೆ ಬಂದಿತ್ತು. ಸಿನಿ ಪ್ರಿಯರಿಂದ ಚಿತ್ರ ಅದ್ಭುತ ಪ್ರತಿಕ್ರಿಯೆ ಗಳಿಸಿದ್ದಲ್ಲದೆ, ಬಾಕ್ಸ್​ ಆಫೀಸ್​ನಲ್ಲಿ 100 ಕೋಟಿ ಕ್ಲಬ್​ ಸೇರಿತ್ತು. ಹೀಗಾಗಿ, ದರ್ಶನ್​ ಮುಂದಿನ ಚಿತ್ರದ ಬಗ್ಗೆ ಭಾರೀ ನಿರೀಕ್ಷೆ ಇದೆ. ದರ್ಶನ್​ 55ನೇ ಸಿನಿಮಾ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಚರ್ಚೆಗಳು ನಡೆಯುತ್ತಿದ್ದವು. ಈಗ ಈ ವಿಚಾರ ಅಧಿಕೃತವಾಗಿದೆ.

ನಿರ್ಮಾಪಕಿ ಶೈಲಜಾ ನಾಗ್​ ಅವರು ಈ ಬಗ್ಗೆ ಟ್ವಿಟರ್​ನಲ್ಲಿ ಅಧಿಕೃತ ಘೋಷಣೆ ಮಾಡಿದ್ದಾರೆ. ದರ್ಶನ್​ ಜತೆಗೆ ಇರುವ ಫೋಟೋ ಹಂಚಿಕೊಂಡಿರುವ ಶೈಲಜಾ ನಾಗ್​, ‘ದರ್ಶನ್​ ಜತೆಗಿನ 55ನೇ ಸಿನಿಮಾಗೆ ನಾನು ಹಾಗೂ ಬಿ. ಸುರೇಶ್​ ಬಂಡವಾಳ ಹೂಡುತ್ತಿದ್ದೇವೆ. ಹರಿಕೃಷ್ಣ ಸಿನಿಮಾದ ನಿರ್ದೇಶನದ ಜವಾಬ್ದಾರಿ ಹೊತ್ತಿದ್ದಾರೆ’ ಎಂದಿದ್ದಾರೆ. ಈ ಮೂಲಕ ಹಲವು ತಿಂಗಳ ಕಾಯುವಿಕೆಗೆ ಕೊನೆ ಬಿದ್ದಿದೆ.

2019ರಲ್ಲಿ ತೆರೆಗೆ ಬಂದ ದರ್ಶನ್​ ನಟನೆಯ ‘ಯಜಮಾನ’ ಸಿನಿಮಾಗೆ ಶೈಲಜಾ ನಾಗ್​ ಬಂಡವಾಳ ಹೂಡಿದ್ದರು. ವಿ. ಹರಿಕೃಷ್ಣ ಈ ಸಿನಿಮಾವನ್ನು ನಿರ್ದೇಶನ ಮಾಡಿದ್ದರು. ಈಗ ಇದೇ ಕಾಂಬಿನೇಷನ್​ ಮತ್ತೆ ಒಂದಾಗಿದ್ದು, ಅಭಿಮಾನಿಗಳು ಹೆಚ್ಚಿನದ್ದನ್ನು ನಿರೀಕ್ಷೆ ಮಾಡುತ್ತಿದ್ದಾರೆ.

25 ಕೋಟಿ ರೂಪಾಯಿ ವಂಚನೆ ಯತ್ನ ಪ್ರಕರಣದಲ್ಲಿ ದರ್ಶನ್​ ಅವರ ಹೆಸರು ಸಿಲುಕಿಕೊಂಡಿತ್ತು. ಕಳೆದ ಎರಡು-ಮೂರು ದಿನಗಳಿಂದ ಈ ಬಗ್ಗೆ ಚರ್ಚೆ ಆಗುತ್ತಲೇ ಇದೆ. ಅರುಣಾ ಕುಮಾರಿ ಎಂಬುವವರು ಈ ವಂಚನೆ ಪ್ರಯತ್ನದ ಪ್ರಮುಖ ರುವಾರಿ. ರಾಬರ್ಟ್​ ನಿರ್ಮಾಪಕ ಉಮಾಪತಿ ಶ್ರೀನಿವಾಸ್​ ಗೌಡ ಅವರು ಅರುಣಾ ಕುಮಾರಿಗೆ ಕುಮ್ಮಕ್ಕು ಕೊಟ್ಟಿದ್ದಾರೆ ಎನ್ನಲಾಗಿತ್ತು.

‘ನಾನು ಮತ್ತು ದರ್ಶನ್ ಅವರು ಮೊದಲಿನಿಂದಲೂ ಚೆನ್ನಾಗಿಯೇ ಇದ್ದೇವೆ. ಸ್ನೇಹಿತರ ವಿಷಯದಲ್ಲಿ ಇದ್ದ ಗೊಂದಲಗಳು ಪರಿಹಾರವಾಗಿವೆ. ಆ ವಿಷಯದಲ್ಲಿ ರಾಜಿಯಾಗಿದ್ದೇನೆ ಎಂದು ಉಮಾಪತಿ ಶ್ರೀನಿವಾಸ ಗೌಡ ಬುಧವಾರ (ಜುಲೈ 14) ತಿಳಿಸಿದ್ದಾರೆ. ‘ಸ್ನೇಹದ ವಿಚಾರದಲ್ಲಿ ರಾಜಿಯಾಗಿದ್ದೇವೆ, ನಿಜ. ಆದರೆ ವಂಚನೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಾನೂನು ಹೋರಾಟ ಮುಂದುವರೆಯಲಿದೆ. ಆ ಪ್ರಕರಣದ ಸತ್ಯಾಸತ್ಯತೆ ತನಿಖೆಯ ನಂತರ ಹೊರಬರಲಿದೆ’ ಎಂದು ಶ್ರೀನಿವಾಸ ಗೌಡ ಅವರು ಹೇಳಿದ್ದರು. ಇವುಗಳ ಮಧ್ಯೆಯೇ ದರ್ಶನ್​ ಹೊಸ ಸಿನಿಮಾ ಘೋಷಣೆ ಮಾಡಿದ್ದಾರೆ.

ಇದನ್ನೂ ಓದಿ: ದರ್ಶನ್ ಹೆಸರಿನಲ್ಲಿ ವಂಚನೆಗೆ ಯತ್ನ ಪ್ರಕರಣ: ಆರೋಪಿ ಅರುಣಾ ಕುಮಾರಿಯಿಂದ ಇಂದು ಮಹತ್ವದ ಸುದ್ದಿಗೋಷ್ಠಿ

Published On - 5:31 pm, Wed, 14 July 21

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್